Homeಕರ್ನಾಟಕಸಂತೋಷ್‌ ಸಾವು ಪ್ರಕರಣ; ಡೆತ್‌ನೋಟ್‌‌ ಕುರಿತು ಯಾವುದೆ ಮಾಹಿತಿ ಇಲ್ಲ ಎಂದ ಗೃಹ ಸಚಿವ ಆರಗ...

ಸಂತೋಷ್‌ ಸಾವು ಪ್ರಕರಣ; ಡೆತ್‌ನೋಟ್‌‌ ಕುರಿತು ಯಾವುದೆ ಮಾಹಿತಿ ಇಲ್ಲ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

- Advertisement -
- Advertisement -

ಸಚಿವ ಈಶ್ವರಪ್ಪ ವಿರುದ್ದ ಲಂಚ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್‌ ಪಾಟೀಲ್ ಸಾವಿನ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, “ಮೃತ ಸಂತೋಷ್ ಬರೆದಿರುವ ಡೆತ್‌ನೋಟ್‌ ಕುರಿತು ನನಗೆ ಯಾವುದೆ ಮಾಹಿತಿ ಇಲ್ಲ. ಬಹುಷಃ ಅದು ಡೆತ್‌ನೋಟ್‌ ಅಲ್ಲ ಎಂದೆನಿಸುತ್ತದೆ” ಎಂದು ಹೇಳಿದ್ದಾರೆ.

ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್  ಅವರು ಸಚಿವ ಕೆ.ಎಸ್. ಈಶ್ವರಪ್ಪ ಅವರು 40% ಕಮೀಷನ್‌‌‌ಗೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇದೀಗ ಸಂತೋಷ್‌ ಅವರು ಉಡುಪಿಯ ಲಾಡ್ಜ್‌ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿನ್ನೆ ತಡರಾತ್ರಿಯೆ ಅವರು ಆತ್ಮಹತ್ಯೆ ನೋಟ್ ಬರೆದು ಅದನ್ನು ಮಾಧ್ಯಮ ಪತ್ರಿನಿಧಿಗಳಿಗೆ ಕಳುಹಿಸಿದ್ದರು ಎಂದು ವರದಿಯಾಗಿದ್ದು, ಈ ಡೆತ್‌ ನೋ‌ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಪತ್ರದಲ್ಲಿ ಅವರು ನೇರವಾಗಿಯೆ, “ನನ್ನ ಸಾವಿಗೆ ಈಶ್ವರಪ್ಪ ಕಾರಣ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: 40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

ಇದರ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ, “ಡೆತ್ ನೋಟ್ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಡೆತ್‌ ನೋಟ್‌ ಇದೆಯೋ ಇಲ್ಲವೊ ಮಾಹಿತಿ ಪಡೆದುಕೊಳ್ಳುತ್ತೇನೆ. ಬಹುಶಃ ಅದು ಡೆತ್​ನೋಟ್ ಅಲ್ಲ ಎನ್ನಿಸುತ್ತದೆ” ಎಂದು ಹೇಳಿದ್ದಾರೆ.

“ಆರೋಪ ಮಾಡೋದು, ಸಾಬೀತು ಮಾಡೋದು, ಎಲ್ಲದಕ್ಕೂ ವಿಧಾನಗಳಿವೆ. ಆತ್ಮಹತ್ಯೆಗೆ ಕಾರಣವೇನು ಎನ್ನುವ ವಿವರ ಮೊದಲು ಪಡೆದುಕೊಳ್ಳುತ್ತೇನೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತದೆ” ಎಂದು ಆರಗ ಅವರು ಹೇಳಿದ್ದಾರೆ.

ಸಂತೋಷ್‌ ಪಾಟಿಲ್‌‌ ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಪತ್ರದಲ್ಲಿ, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆಯಲಾಗಿದೆ.

“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...