Homeಕರ್ನಾಟಕಸಂತೋಷ್‌ ಸಾವು ಪ್ರಕರಣ: ಇಂತಹ ನೂರು ಕೇಸ್‌ ನೋಡಿದ್ದೇನೆ; ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ: ಕೆ.ಎಸ್‌....

ಸಂತೋಷ್‌ ಸಾವು ಪ್ರಕರಣ: ಇಂತಹ ನೂರು ಕೇಸ್‌ ನೋಡಿದ್ದೇನೆ; ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ: ಕೆ.ಎಸ್‌. ಈಶ್ವರಪ್ಪ

- Advertisement -
- Advertisement -

ರಾಜ್ಯ ಬಿಜೆಪಿ ಹಿರಿಯ ನಾಯಕ, ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ ಎಂದು ಬುಧವಾರ ಮಧ್ಯಾಹ್ನ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಅವರ ಸಾವಿನ ಹಿನ್ನೆಲೆಯಲ್ಲಿ ಅವರು ಇಂದು ರಾಜೀನಾಮೆ ನೀಡಲು ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರಕರಣ ಹೈಕಮಾಂಡ್‌ ತನಕ ಹೋಗಿಲ್ಲ. ಇಂತಹ ನೂರು ಕೇಸ್‌ಗಳನ್ನು ನೋಡಿದ್ದೇನೆ. ಯಾವುದೇ ಕಾರಣಕ್ಕೆ ರಾಜೀನಾಮೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಅವರ ಸಾವಿನ ಹಿನ್ನೆಲೆಯಲ್ಲಿ ಬಿಜೆಪಿಯ ಹೈಕಮಾಂಡ್‌ ರಾಜೀನಾಮೆ ನೀಡುವಂತೆ ಈಶ್ವರಪ್ಪ ಅವರಿಗೆ ಹೇಳಲಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿತ್ತು. ಇಂದು ಬೆಳಿಗ್ಗೆಯೆ ಅವರು ತಮ್ಮ ಕಾರ್ಯಕ್ಷೇತ್ರವಾದ ಶಿವಮೊಗ್ಗಕ್ಕೆ ತೆರಳಿದ್ದರು. ಹೀಗಾಗಿ ಅವರ ಪತ್ರಿಕಾಗೋಷ್ಠಿ ಭಾರಿ ಮಹತ್ವವನ್ನು ಪಡೆದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂತೋಷ್ ಪಾಟೀಲ್ ಮುಖ ಕೂಡಾ ನೋಡಿಲ್ಲ. ಅಂತದ್ದರಲ್ಲಿ ಅವರು ನನ್ನನ್ನು 80 ಬಾರಿ ಭೇಟಿ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಅವರು ಡೆತ್‌ ನೋಟ್‌ ಬರೆದಿಲ್ಲ, ವಾಟ್ಸಪ್‌ನಲ್ಲಿ ಟೈಪ್‌ ಮಾಡಿದ್ದಾರೆ, ಅದು ಡೆತ್‌ ನೋಟ್‌ ಅಲ್ಲ. ಅವರು ಅವರಿಗೆ ದೆಹಲಿಗೆ ಫ್ಲೈಟ್‌ ಟಿಕೆಟ್‌ ಕೊಟ್ಟಿದ್ದು ಯಾರು. ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ತನಿಖೆ ಆಗಬೇಕು” ಎಂದು ಹೇಳಿದ್ದಾರೆ.

“ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಸಿಎಂ ದೂರು ನೀಡುತ್ತೇನೆ. ಮುಖ್ಯಮಂತ್ರಿಯನ್ನು ಭೇಟಿಯಾಗಿ ಎಲ್ಲಾ ಮಾಹಿತಿಯನ್ನು ನೀಡಲಿದ್ದೇನೆ. ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಅವರಿಗೆ ಈಗಾಗಲೆ ಎಲ್ಲಾ ಮಾಹಿತಿಯನ್ನು ನೀಡಿದ್ದೇನೆ. ಈ ವಿಚಾರ ಹೈಕಮಾಂಡ್‌ ತನಕ ಹೋಗಿಲ್ಲ. ಘಟನೆಯ ಬಗ್ಗೆ ತನಿಖೆಯಾದರೆ ಅಸಲಿ ಸತ್ಯ ಹೊರಬರುತ್ತದೆ” ಎಂದು ಈಶ್ವರಪ್ಪ ತಿಳಿಸಿದ್ದಾರೆ.

“ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಅವರು ಯಾವುದೆ ದಾಖಲೆಯಿಲ್ಲದೆ ಆರೋಪ ಮಾಡುತ್ತಿದ್ದಾರೆ. ಇಲ್ಲಿ ರಾಜೀನಾಮೆ ಪ್ರಶ್ನೆ ಉದ್ಭವ ಆಗುವುದಿಲ್ಲ. ಇಂತಹ ನೂರು ಕೇಸ್‌ಗಳನ್ನು ನೋಡಿದ್ದೇನೆ. ಯಾವುದೇ ಕಾರಣಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:  40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

ಈ ಹಿಂದೆಯೂ ಗುತ್ತಿಗೆದಾರರು ಪತ್ರ ಬರೆದಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಪತ್ರ ಬರೆದವರು ಯಾವ ಇಲಾಖೆಯ, ಯಾವ ಸಚಿವರು ಎಷ್ಟು ತೆಗೆದುಕೊಂಡಿದ್ದಾರೆ ಎಂಬ ದಾಖಲೆಯನ್ನು ಕೊಡಲಿ” ಎಂದು ಸವಾಲು ಹಾಕಿದರು. ಹಿಂಡಲಗ ಗ್ರಾಮ ಪಂಚಾಯಿತಿ ಅಧ್ಯಕ್ಷರು ಕಾಮಗಾರಿ ನಡೆದಿರುವ ಕುರಿತು ಪತ್ರ ಬರೆದಿರುವ ಕುರಿತು ಪ್ರಶ್ನೆಗೆ ಉತ್ತರಿಸಿ ಅವರು, “ಅಂತೆ, ಕಂತೆಗಳಿಗೆ ಆಧಾರವಿಲ್ಲ. ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಧಾನ ಮಂತ್ರಿಯಲ್ಲ” ಎಂದಿದ್ದಾರೆ.

ಈ ಮಧ್ಯೆ ಅವರ ವಿರುದ್ಧ ವಿರುದ್ದ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಸಂತೋಷ್‌ ಅವರ ಸಹೋದರ ಪ್ರಶಾಂತ್‌ ಪಾಟೀಲ್ ನೀಡಿದ ದೂರಿನ ಪ್ರಕಾರ ಪೊಲೀಸರು ಈಶ್ವರಪ್ಪ ಸೇರಿದಂತೆ ಅವರ ಆಪ್ತರಿಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆಗಾಗಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಸಚಿವ ಕೆ.ಎಸ್. ಈಶ್ವರಪ್ಪ ಅವರು 40% ಕಮೀಷನ್‌‌‌ಗೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇದರ ನಂತರ ಮಂಗಳವಾರದಂದು ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಅವರು ಶವವಾಗಿ ಪತ್ತೆಯಾಗಿದ್ದರು.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತ‌ ಸಂತೋಷ್‌ ಸಾವು: ಎಫ್‌ಐಆರ್‌‌ ದಾಖಲು; ಸಚಿವ ಈಶ್ವರಪ್ಪ ಆರೋಪಿ ನಂ. 1

ಸಾವಿಗೂ ಮುಂಚೆ ಮಾಧ್ಯಮಗಳಿಗೆ ಕಳುಹಿಸಿದ ಡೆತ್‌ ನೋಟ್‌ನಲ್ಲಿ ಅವರು, ‘‘ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ” ಎಂದು ನೇರವಾಗಿ ಆರೋಪಿಸಿದ್ದಾರೆ.

ಉಡುಪಿ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಒಂದನೇ ಆರೋಪಿಯಾಗಿ ಸಚಿವ ಕೆ.ಎಸ್. ಈಶ್ವರಪ್ಪ, ಎರಡನೇ ಆರೋಪಿಯಾಗಿ ಅವರ ಆಪ್ತ ಬಸವರಾಜ ಮತ್ತು ಮೂರನೇ ಆರೋಪಿಯಾಗಿ ಅವರ ಮತ್ತೊಬ್ಬ ಆಪ್ತ ರಮೇಶ್‌ ಸೇರಿದಂತೆ ಇತರರನ್ನು ಹೆಸರಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ತಾವು ಕೈಗೊಂಡಿರುವ 4 ಕೋಟಿ ರೂ.ಗಳ ಕಾಮಗಾರಿಯಲ್ಲಿ 40% ದಷ್ಟು ಕಮಿಷನ್ ನೀಡುವಂತೆ ಸಚಿವರ ಸಂಗಡಿಗರು ಒತ್ತಾಯಿಸಿದ್ದಾರೆ ಎಂದು ಪ್ರಶಾಂತ್‌ ಪಾಟೀಲ್‌ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಸಚಿವ ಈಶ್ವರಪ್ಪ ಅವರು, ಸಂತೋಷ್‌ ಯಾರೆಂದು ತನಗೆ ಗೊತ್ತಿಲ್ಲ ಎಂದು ನಿನ್ನೆಯೆ ಹೇಳಿದ್ದಾರೆ. ಜೊತೆಗೆ ಅವರ ಸಾವಿನ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಕೋರಿದ್ದ ಪ್ರತಿಪಕ್ಷ ಕಾಂಗ್ರೆಸ್‌‌ನ ಬೇಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ.

ಇದನ್ನೂ ಓದಿ:ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸಲ್ಲ: ಮೃತ ಸಂತೋಷ್‌ ಸಹೋದರ ಪ್ರತಿಜ್ಞೆ

ಸಂತೋಷ್‌ ಪಾಟಿಲ್‌‌ ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಪತ್ರದಲ್ಲಿ, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆಯಲಾಗಿದೆ.

“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....