Homeಮುಖಪುಟಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

ಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

- Advertisement -
- Advertisement -

ಬ್ರಿಟನ್‌ನಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದಿದ್ದ’ಸಂತೋಷ್’ ಚಿತ್ರವನ್ನು ಭಾರತೀಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ನಿರ್ಬಂಧ ವಿಧಿಸಿದೆ ಎಂದು ವರದಿಯಾಗಿದೆ.

ಸಂಧ್ಯಾ ಸೂರಿ ನಿರ್ದೇಶನದ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಈ ಚಿತ್ರದಲ್ಲಿ ಶಹಾನಾ ಗೋಸ್ವಾಮಿ ಸಾಂಸ್ಥಿಕ ಭ್ರಷ್ಟಾಚಾರವನ್ನು ತೋರಿಸುವ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ.

ವಿವಿಧ ಸುದ್ದಿ ವರದಿಗಳ ಪ್ರಕಾರ, ಸಿಬಿಎಫ್‌ಸಿ ಭಾರತದಲ್ಲಿ ಚಿತ್ರಕ್ಕೆ ಬಿಡುಗಡೆ ಪ್ರಮಾಣಪತ್ರ ನೀಡುವ ಮೊದಲು ‘ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ’ ಸೂಚಿಸಿದೆ. ಪೊಲೀಸ್ ದೌರ್ಜನ್ಯವನ್ನು ಚಿತ್ರಿಸುವ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಬೇಕೆಂದು ಕೇಳಲಾದ ದೃಶ್ಯಗಳ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಇದು ಚಲನಚಿತ್ರ ನಿರ್ಮಾಪಕರು ಮತ್ತು ಸೆನ್ಸಾರ್ ಮಂಡಳಿಯ ನಡುವೆ ಬಿಕ್ಕಟ್ಟಿಗೆ ಕಾರಣವಾಗಿದೆ.

ಸಿಬಿಎಫ್‌ಸಿಯ ಸೂಚನೆ ಅಥವಾ ಬೇಡಿಕೆ ಬಗ್ಗೆ ದಿ ಗಾರ್ಡಿಯನ್‌ಗೆ ನೀಡಿದ ಸಂದರ್ಶನದಲ್ಲಿ ಪ್ರತಿಕ್ರಿಯಿಸಿದ ಚಿತ್ರದ ನಿರ್ದೇಶಕಿ ಸಂಧ್ಯಾ ಸೂರಿ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದು, ಈ ಪರಿಸ್ಥಿತಿಯನ್ನು ‘ಹೃದಯವಿದ್ರಾವಕ’ ಎಂದಿದ್ದಾರೆ.

“ಸಿಬಿಎಫ್‌ಸಿಯ ಬೇಡಿಕೆ ನಮಗೆ ಆಶ್ಚರ್ಯ ತಂದಿದೆ. ಆದರೆ, ಇದು ಭಾರತೀಯ ಚಿತ್ರಗಳಿಗೆ ಹೊಸತಲ್ಲ ಅಥವಾ ಇದುವರೆಗೆ ಯಾವುದೇ ಸಿನಿಮಾಗಳನ್ನು ಈ ರೀತಿಯ ಪರಿಸ್ಥಿತಿ ಎದುರಿಸಿಲ್ಲ ಎಂದು ನನಗೆ ಅನಿಸಿಲ್ಲ. ಸಿಬಿಎಫ್‌ಸಿ, ಚಿತ್ರದಲ್ಲಿ ಪೊಲೀಸ್ ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಹಲವಾರು ದೃಶ್ಯಗಳಿಗೆ ಕತ್ತರಿ ಹಾಕುವಂತೆ ನಮಗೆ ಸೂಚಿಸಿದೆ” ಎಂದು ಹೇಳಿದ್ದಾರೆ.

ಸಿಬಿಎಫ್‌ಸಿಯ ಬೇಡಿಕೆಗಳನ್ನು ಈಡೇರಿಸುವ ಬದಲು ಕಾನೂನು ಮಾರ್ಗದ ಮೂಲಕ ಹೋಗಿ ನ್ಯಾಯಾಲಯದಲ್ಲಿ ನಿರ್ಧಾರವನ್ನು ಪ್ರಶ್ನಿಸಲು ಸಿದ್ಧಳಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಚಿತ್ರದ ನಟಿ ಶಹಾನಾ ಗೋಸ್ವಾಮಿ ತಮ್ಮ ನಿರ್ದೇಶಕರು ಮತ್ತು ಚಿತ್ರ ತಂಡದ ನಿರ್ಧಾರವನ್ನು ಬೆಂಬಲಿಸಿದ್ದು, ಇಂಡಿಯಾ ಟುಡೇಗೆ ನೀಡಿದ ಹೇಳಿಕೆಯಲ್ಲಿ, “ನಾವು ಒಂದು ತಂಡವಾಗಿ ಸಿಬಿಎಫ್‌ಸಿ ಸೂಚಿಸಿದ ದೃಶ್ಯಗಳ ಕಡಿತ ಒಪ್ಪುವುದಿಲ್ಲ. ಏಕೆಂದರೆ ಅವು ಚಿತ್ರವನ್ನು ತುಂಬಾ ಬದಲಾಯಿಸುತ್ತವೆ. ಆದ್ದರಿಂದ ಭಾರತದಲ್ಲಿ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗದಿರುವ ಬಿಕ್ಕಟ್ಟಿನಲ್ಲಿದೆ” ಎಂದು ಹೇಳಿದ್ದಾರೆ.

“ಸೆನ್ಸಾರ್ ಮಟ್ಟದಲ್ಲಿ ಅನುಮೋದನೆ ಪಡೆದಿರುವ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಇಷ್ಟೊಂದು ಕಡಿತ ಮತ್ತು ಬದಲಾವಣೆಗಳ ಅಗತ್ಯವಿರುವುದು ದುಃಖಕರ” ಎಂದು ಅವರು ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ, ದೇವ್ ಪಟೇಲ್ ಅವರ ಚಿತ್ರ ‘ಮಂಕಿ ಮ್ಯಾನ್’ ಕೂಡ ಸಿಬಿಎಫ್‌ಸಿಯಿಂದ ಇದೇ ರೀತಿಯ ನಿರ್ಬಂಧಗಳನ್ನು ಎದುರಿಸಿತ್ತು. ಹಾಗಾಗಿ, ಅವರು ಕೂಡ ಭಾರತದಲ್ಲಿ ಥಿಯೇಟ್ರಿಕಲ್ ಬಿಡುಗಡೆಯ ಅವಕಾಶ ಪಡೆದಿರಲಿಲ್ಲ.

ಬ್ರಿಟಿಷ್-ಭಾರತೀಯ ನಿರ್ಮಾಪಕಿ ಸಂಧ್ಯಾ ಸೂರಿ ಅವರ ಕಥೆ ಮತ್ತು ನಿರ್ದೇಶನವನ್ನು ಹೊಂದಿರುವ ‘ಸಂತೋಷ್’ ಚಿತ್ರ ಉತ್ತರ ಭಾರತದ ಹಿನ್ನೆಲೆಯನ್ನು ಹೊಂದಿದ್ದು, ಪೋಲಿಸ್ ಪಡೆಗೆ ಸೇರ್ಪಡೆಗೊಂಡು ದಲಿತ ಯುವತಿಯ ಕೊಲೆ ಪ್ರಕರಣದ ತನಿಖೆ ನಡೆಸುವ ಯುವ ವಿಧವೆಯ ಪಾತ್ರಕ್ಕಾಗಿ ಅಂತಾರಾಷ್ಟ್ರೀಯ ಪ್ರಶಂಸೆಯನ್ನು ಗಳಿಸಿದೆ.

ಚಿತ್ರವು ಭಾರತೀಯ ಪೋಲಿಸ್ ಪಡೆಯಲ್ಲಿನ ಅತ್ಯಂತ ಹೀನ ಅಂಶಗಳ ಆಳವಾದ ಕಾಲ್ಪನಿಕ ಚಿತ್ರಣವಾಗಿದ್ದು,‌ ಆಳವಾಗಿ ಬೇರೂರಿರುವ ಸ್ತ್ರೀದ್ವೇಷ, ದಲಿತರ ವಿರುದ್ಧದ ತಾರತಮ್ಯ ಹಾಗೂ ಪೋಲಿಸ್ ಅಧಿಕಾರಿಗಳಿಂದ ಸಾಮಾನ್ಯವಾಗಿ ನಡೆಯುವ ದೌರ್ಜನ್ಯ ಮತ್ತು ಹಿಂಸೆಯನ್ನು ಬಿಂಬಿಸಿದೆ. ಚಿತ್ರವು ಭಾರತದ, ವಿಶೇಷವಾಗಿ ದುರ್ಬಲ ವರ್ಗದ ಮಹಿಳೆಯರ ವಿರುದ್ಧ ಲೈಂಗಿಕ ಹಿಂಸಾಚಾರ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಮ್ ವಿರೋಧಿ ಪೂರ್ವಾಗ್ರಹವನ್ನು ಮುನ್ನೆಲೆಗೆ ತಂದಿದೆ.

ಯುಕೆಯಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶದ ಜೊತೆಗೆ, ಈ ವರ್ಷದ ಅತ್ಯುತ್ತಮ ಚೊಚ್ಚಲ ನಿರ್ದೇಶನದ ಚಿತ್ರವಾಗಿ ಬಾಫ್ಟಾ ಪ್ರಶಸ್ತಿಗೆ ಸಂತೋಷ್ ನಿರ್ದೇಶನಗೊಂಡಿತ್ತು. ‘ಅಬ್ಸರ್ವರ್’ನಲ್ಲಿ ಫೈವ್ ಸ್ಟಾರ್ ರೇಟಿಂಗ್ ಒಳಗೊಂಡಂತೆ ಅತ್ಯುತ್ತಮ ವಿಮರ್ಶೆಗಳಿಗೆ ಪಾತ್ರವಾಗಿತ್ತು. ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿರುವ ಶಹನಾ ಗೋಸ್ವಾಮಿ ಇತ್ತಿಚಿಗೆ ಏಷ್ಯನ್‌ ಫಿಲ್ಮ್ ಅವಾರ್ಡ್ಸ್‌ಗಳ ಅತ್ತುತ್ತಮ ನಟಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

IIFA 2025 | ವಿವಿಧ ವಿಭಾಗಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರಕ್ಕೆ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...

‘ದೆಹಲಿ ಖಾಲಿಸ್ತಾನವಾಗಲಿದೆ’: 10 ಶಾಲೆಗಳು, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ವಿದ್ಯಾರ್ಥಿಗಳ ಸ್ಥಳಾಂತರ

ಸೋಮವಾರ ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿನ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭಾರಿ ಭದ್ರತಾ ಪ್ರತಿಕ್ರಿಯೆ ನೀಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ತಿಳಿಸಿವೆ. ಡಿಎಫ್‌ಎಸ್ ಪ್ರಕಾರ, ಬೆಳಿಗ್ಗೆ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...

ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ. 20 ರ ಹರೆಯದ...

ಮಣಿಪುರದ ಉಖ್ರುಲ್‌ನಲ್ಲಿ ಬುಡಕಟ್ಟು ಸಮುದಾಯಗಳ ನಡುವೆ ಉದ್ವಿಗ್ನತೆ: ಸಶಸ್ತ್ರ ಗುಂಪುಗಳಿಂದ ನಾಗಾ, ಕುಕಿ ಮನೆಗಳಿಗೆ ಬೆಂಕಿ

ಮಣಿಪುರದ ತಂಗ್ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಸೋಮವಾರ ಉಖ್ರುಲ್ ಜಿಲ್ಲೆಯಲ್ಲಿ ಹಲವಾರು ಸಶಸ್ತ್ರ ಉಗ್ರಗಾಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಲಿಟಾನ್ ಸರೈಖಾಂಗ್ ಗ್ರಾಮದಲ್ಲಿ ಎರಡೂ...

ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಕೇಂದ್ರ ತನಿಖಾ ದಳ (ಸಿಬಿಐ)...

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...