Homeಮುಖಪುಟಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

ಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

- Advertisement -
- Advertisement -

ಬ್ರಿಟನ್‌ನಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದಿದ್ದ’ಸಂತೋಷ್’ ಚಿತ್ರವನ್ನು ಭಾರತೀಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ನಿರ್ಬಂಧ ವಿಧಿಸಿದೆ ಎಂದು ವರದಿಯಾಗಿದೆ.

ಸಂಧ್ಯಾ ಸೂರಿ ನಿರ್ದೇಶನದ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಈ ಚಿತ್ರದಲ್ಲಿ ಶಹಾನಾ ಗೋಸ್ವಾಮಿ ಸಾಂಸ್ಥಿಕ ಭ್ರಷ್ಟಾಚಾರವನ್ನು ತೋರಿಸುವ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ.

ವಿವಿಧ ಸುದ್ದಿ ವರದಿಗಳ ಪ್ರಕಾರ, ಸಿಬಿಎಫ್‌ಸಿ ಭಾರತದಲ್ಲಿ ಚಿತ್ರಕ್ಕೆ ಬಿಡುಗಡೆ ಪ್ರಮಾಣಪತ್ರ ನೀಡುವ ಮೊದಲು ‘ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ’ ಸೂಚಿಸಿದೆ. ಪೊಲೀಸ್ ದೌರ್ಜನ್ಯವನ್ನು ಚಿತ್ರಿಸುವ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಬೇಕೆಂದು ಕೇಳಲಾದ ದೃಶ್ಯಗಳ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಇದು ಚಲನಚಿತ್ರ ನಿರ್ಮಾಪಕರು ಮತ್ತು ಸೆನ್ಸಾರ್ ಮಂಡಳಿಯ ನಡುವೆ ಬಿಕ್ಕಟ್ಟಿಗೆ ಕಾರಣವಾಗಿದೆ.

ಸಿಬಿಎಫ್‌ಸಿಯ ಸೂಚನೆ ಅಥವಾ ಬೇಡಿಕೆ ಬಗ್ಗೆ ದಿ ಗಾರ್ಡಿಯನ್‌ಗೆ ನೀಡಿದ ಸಂದರ್ಶನದಲ್ಲಿ ಪ್ರತಿಕ್ರಿಯಿಸಿದ ಚಿತ್ರದ ನಿರ್ದೇಶಕಿ ಸಂಧ್ಯಾ ಸೂರಿ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದು, ಈ ಪರಿಸ್ಥಿತಿಯನ್ನು ‘ಹೃದಯವಿದ್ರಾವಕ’ ಎಂದಿದ್ದಾರೆ.

“ಸಿಬಿಎಫ್‌ಸಿಯ ಬೇಡಿಕೆ ನಮಗೆ ಆಶ್ಚರ್ಯ ತಂದಿದೆ. ಆದರೆ, ಇದು ಭಾರತೀಯ ಚಿತ್ರಗಳಿಗೆ ಹೊಸತಲ್ಲ ಅಥವಾ ಇದುವರೆಗೆ ಯಾವುದೇ ಸಿನಿಮಾಗಳನ್ನು ಈ ರೀತಿಯ ಪರಿಸ್ಥಿತಿ ಎದುರಿಸಿಲ್ಲ ಎಂದು ನನಗೆ ಅನಿಸಿಲ್ಲ. ಸಿಬಿಎಫ್‌ಸಿ, ಚಿತ್ರದಲ್ಲಿ ಪೊಲೀಸ್ ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಹಲವಾರು ದೃಶ್ಯಗಳಿಗೆ ಕತ್ತರಿ ಹಾಕುವಂತೆ ನಮಗೆ ಸೂಚಿಸಿದೆ” ಎಂದು ಹೇಳಿದ್ದಾರೆ.

ಸಿಬಿಎಫ್‌ಸಿಯ ಬೇಡಿಕೆಗಳನ್ನು ಈಡೇರಿಸುವ ಬದಲು ಕಾನೂನು ಮಾರ್ಗದ ಮೂಲಕ ಹೋಗಿ ನ್ಯಾಯಾಲಯದಲ್ಲಿ ನಿರ್ಧಾರವನ್ನು ಪ್ರಶ್ನಿಸಲು ಸಿದ್ಧಳಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಚಿತ್ರದ ನಟಿ ಶಹಾನಾ ಗೋಸ್ವಾಮಿ ತಮ್ಮ ನಿರ್ದೇಶಕರು ಮತ್ತು ಚಿತ್ರ ತಂಡದ ನಿರ್ಧಾರವನ್ನು ಬೆಂಬಲಿಸಿದ್ದು, ಇಂಡಿಯಾ ಟುಡೇಗೆ ನೀಡಿದ ಹೇಳಿಕೆಯಲ್ಲಿ, “ನಾವು ಒಂದು ತಂಡವಾಗಿ ಸಿಬಿಎಫ್‌ಸಿ ಸೂಚಿಸಿದ ದೃಶ್ಯಗಳ ಕಡಿತ ಒಪ್ಪುವುದಿಲ್ಲ. ಏಕೆಂದರೆ ಅವು ಚಿತ್ರವನ್ನು ತುಂಬಾ ಬದಲಾಯಿಸುತ್ತವೆ. ಆದ್ದರಿಂದ ಭಾರತದಲ್ಲಿ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗದಿರುವ ಬಿಕ್ಕಟ್ಟಿನಲ್ಲಿದೆ” ಎಂದು ಹೇಳಿದ್ದಾರೆ.

“ಸೆನ್ಸಾರ್ ಮಟ್ಟದಲ್ಲಿ ಅನುಮೋದನೆ ಪಡೆದಿರುವ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಇಷ್ಟೊಂದು ಕಡಿತ ಮತ್ತು ಬದಲಾವಣೆಗಳ ಅಗತ್ಯವಿರುವುದು ದುಃಖಕರ” ಎಂದು ಅವರು ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ, ದೇವ್ ಪಟೇಲ್ ಅವರ ಚಿತ್ರ ‘ಮಂಕಿ ಮ್ಯಾನ್’ ಕೂಡ ಸಿಬಿಎಫ್‌ಸಿಯಿಂದ ಇದೇ ರೀತಿಯ ನಿರ್ಬಂಧಗಳನ್ನು ಎದುರಿಸಿತ್ತು. ಹಾಗಾಗಿ, ಅವರು ಕೂಡ ಭಾರತದಲ್ಲಿ ಥಿಯೇಟ್ರಿಕಲ್ ಬಿಡುಗಡೆಯ ಅವಕಾಶ ಪಡೆದಿರಲಿಲ್ಲ.

ಬ್ರಿಟಿಷ್-ಭಾರತೀಯ ನಿರ್ಮಾಪಕಿ ಸಂಧ್ಯಾ ಸೂರಿ ಅವರ ಕಥೆ ಮತ್ತು ನಿರ್ದೇಶನವನ್ನು ಹೊಂದಿರುವ ‘ಸಂತೋಷ್’ ಚಿತ್ರ ಉತ್ತರ ಭಾರತದ ಹಿನ್ನೆಲೆಯನ್ನು ಹೊಂದಿದ್ದು, ಪೋಲಿಸ್ ಪಡೆಗೆ ಸೇರ್ಪಡೆಗೊಂಡು ದಲಿತ ಯುವತಿಯ ಕೊಲೆ ಪ್ರಕರಣದ ತನಿಖೆ ನಡೆಸುವ ಯುವ ವಿಧವೆಯ ಪಾತ್ರಕ್ಕಾಗಿ ಅಂತಾರಾಷ್ಟ್ರೀಯ ಪ್ರಶಂಸೆಯನ್ನು ಗಳಿಸಿದೆ.

ಚಿತ್ರವು ಭಾರತೀಯ ಪೋಲಿಸ್ ಪಡೆಯಲ್ಲಿನ ಅತ್ಯಂತ ಹೀನ ಅಂಶಗಳ ಆಳವಾದ ಕಾಲ್ಪನಿಕ ಚಿತ್ರಣವಾಗಿದ್ದು,‌ ಆಳವಾಗಿ ಬೇರೂರಿರುವ ಸ್ತ್ರೀದ್ವೇಷ, ದಲಿತರ ವಿರುದ್ಧದ ತಾರತಮ್ಯ ಹಾಗೂ ಪೋಲಿಸ್ ಅಧಿಕಾರಿಗಳಿಂದ ಸಾಮಾನ್ಯವಾಗಿ ನಡೆಯುವ ದೌರ್ಜನ್ಯ ಮತ್ತು ಹಿಂಸೆಯನ್ನು ಬಿಂಬಿಸಿದೆ. ಚಿತ್ರವು ಭಾರತದ, ವಿಶೇಷವಾಗಿ ದುರ್ಬಲ ವರ್ಗದ ಮಹಿಳೆಯರ ವಿರುದ್ಧ ಲೈಂಗಿಕ ಹಿಂಸಾಚಾರ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಮ್ ವಿರೋಧಿ ಪೂರ್ವಾಗ್ರಹವನ್ನು ಮುನ್ನೆಲೆಗೆ ತಂದಿದೆ.

ಯುಕೆಯಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶದ ಜೊತೆಗೆ, ಈ ವರ್ಷದ ಅತ್ಯುತ್ತಮ ಚೊಚ್ಚಲ ನಿರ್ದೇಶನದ ಚಿತ್ರವಾಗಿ ಬಾಫ್ಟಾ ಪ್ರಶಸ್ತಿಗೆ ಸಂತೋಷ್ ನಿರ್ದೇಶನಗೊಂಡಿತ್ತು. ‘ಅಬ್ಸರ್ವರ್’ನಲ್ಲಿ ಫೈವ್ ಸ್ಟಾರ್ ರೇಟಿಂಗ್ ಒಳಗೊಂಡಂತೆ ಅತ್ಯುತ್ತಮ ವಿಮರ್ಶೆಗಳಿಗೆ ಪಾತ್ರವಾಗಿತ್ತು. ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿರುವ ಶಹನಾ ಗೋಸ್ವಾಮಿ ಇತ್ತಿಚಿಗೆ ಏಷ್ಯನ್‌ ಫಿಲ್ಮ್ ಅವಾರ್ಡ್ಸ್‌ಗಳ ಅತ್ತುತ್ತಮ ನಟಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

IIFA 2025 | ವಿವಿಧ ವಿಭಾಗಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರಕ್ಕೆ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ಜಿ ರಾಮ್‌ ಜಿ ಕಾಯ್ದೆ ವಿರುದ್ದ ತಮಿಳುನಾಡಿನಾದ್ಯಂತ ಬೃಹತ್ ಪ್ರತಿಭಟನೆ

ಕೇಂದ್ರದ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್) ಕಾಯ್ದೆ, 2025 (ವಿಬಿ-ಜಿ ರಾಮ್‌ ಜಿ) ವಿರುದ್ದ ತಮಿಳುನಾಡಿನ ಆಡಳಿತರೂಢ ಡಿಎಂಕೆ ಮೈತ್ರಿಕೂಟವು ಬುಧವಾರ (ಡಿ.24) ರಾಜ್ಯದಾದ್ಯಂತ ಬೃಹತ್...

ಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ಎನ್ನಲಾದ ನಾಝಿಯಾ ಇಲಾಹಿ (ನಾಝಿಯಾ ಇಲಾಹಿ ಖಾನ್) ಪದೇ ಪದೇ ಮುಸ್ಲಿಮರನ್ನು ತುಚ್ಛವಾಗಿ ನಿಂದಿಸಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರಾಜಾರೋಷವಾಗಿ ಹಂಚಿಕೊಳ್ಳುತ್ತಿದ್ದು, ಪೊಲೀಸರು ಯಾವುದೇ ಕ್ರಮ...

ತೆಲಂಗಾಣ: ಸರಪಂಚ್ ಚುನಾವಣೆಯಲ್ಲಿ ಬೆಂಬಲಿಸದ ದಲಿತ ಕುಟುಂಬದ ಮನೆ ಕೆಡವಿದ ಕಾಂಗ್ರೆಸ್ ಸದಸ್ಯರು

ಕಾಂಗ್ರೆಸ್ ಬೆಂಬಲಿತ ಸರಪಂಚ್ ಆಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ಪದ್ಮಾವತಿ ಮತ್ತು ಅವರ ಮಗ ಪ್ರಸಾದ್ ರೆಡ್ಡಿ ಎಂಬುವವರು ಸೋಮವಾರ ಕೊಹಿರ್ ಮಂಡಲದ ಸಜ್ಜಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ದಲಿತ ಕುಟುಂಬದ ಮನೆಯನ್ನು...

“ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

"ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ" ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮಂಗಳವಾರ (2025 ಡಿಸೆಂಬರ್ 24) ಸಂಜೆ ದೆಹಲಿಯ ಇಂಡಿಯಾ ಗೇಟ್ ಎದುರಿನ ಹುಲ್ಲುಹಾಸಿನ ಮೇಲೆ...

ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ಬಡ ಜನರ ಸುಮಾರು 150 ಮನೆಗಳನ್ನು ಏಕಾಏಕಿ ನೆಲಸಮಗೊಳಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕ್ರಮವನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ...

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ...

ಗುಂಪು ಹತ್ಯೆ ಪ್ರಕರಣ ಹಿಂಪಡೆಯಲು ಮುಂದಾದ ಯುಪಿ ಸರ್ಕಾರ : ಹೈಕೋರ್ಟ್ ಮೆಟ್ಟಿಲೇರಿದ ಅಖ್ಲಾಕ್ ಪತ್ನಿ

ದಾದ್ರಿ ಗುಂಪು ಹತ್ಯೆ ಪ್ರಕರಣದ ಬಲಿಪಶು ಮೊಹಮ್ಮದ್ ಅಖ್ಲಾಕ್ ಅವರ ಪತ್ನಿ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಮತ್ತು ಗೌತಮ್ ಬುದ್ಧ ನಗರದ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್ ಸಲ್ಲಿಸಿರುವ...

ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್...

ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು...

ಮಧ್ಯಪ್ರದೇಶ | ಅಂಧ ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ನಾಯಕಿ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಿಜೆಪಿ ನಾಯಕಿಯೊಬ್ಬರು ಅಂಧ ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ಅಂಧ ಮಹಿಳೆಯ ಅಂಗವೈಕಲ್ಯವದ ಕುರಿತು ಬಿಜೆಪಿ ನಾಯಕಿ ಅವಹೇಳನಕಾರಿ ಹೇಳಿಕೆ ನೀಡಿರುವುದು...