Homeಮುಖಪುಟಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

ಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

- Advertisement -
- Advertisement -

ಬ್ರಿಟನ್‌ನಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದಿದ್ದ’ಸಂತೋಷ್’ ಚಿತ್ರವನ್ನು ಭಾರತೀಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ನಿರ್ಬಂಧ ವಿಧಿಸಿದೆ ಎಂದು ವರದಿಯಾಗಿದೆ.

ಸಂಧ್ಯಾ ಸೂರಿ ನಿರ್ದೇಶನದ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಈ ಚಿತ್ರದಲ್ಲಿ ಶಹಾನಾ ಗೋಸ್ವಾಮಿ ಸಾಂಸ್ಥಿಕ ಭ್ರಷ್ಟಾಚಾರವನ್ನು ತೋರಿಸುವ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ.

ವಿವಿಧ ಸುದ್ದಿ ವರದಿಗಳ ಪ್ರಕಾರ, ಸಿಬಿಎಫ್‌ಸಿ ಭಾರತದಲ್ಲಿ ಚಿತ್ರಕ್ಕೆ ಬಿಡುಗಡೆ ಪ್ರಮಾಣಪತ್ರ ನೀಡುವ ಮೊದಲು ‘ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ’ ಸೂಚಿಸಿದೆ. ಪೊಲೀಸ್ ದೌರ್ಜನ್ಯವನ್ನು ಚಿತ್ರಿಸುವ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಬೇಕೆಂದು ಕೇಳಲಾದ ದೃಶ್ಯಗಳ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಇದು ಚಲನಚಿತ್ರ ನಿರ್ಮಾಪಕರು ಮತ್ತು ಸೆನ್ಸಾರ್ ಮಂಡಳಿಯ ನಡುವೆ ಬಿಕ್ಕಟ್ಟಿಗೆ ಕಾರಣವಾಗಿದೆ.

ಸಿಬಿಎಫ್‌ಸಿಯ ಸೂಚನೆ ಅಥವಾ ಬೇಡಿಕೆ ಬಗ್ಗೆ ದಿ ಗಾರ್ಡಿಯನ್‌ಗೆ ನೀಡಿದ ಸಂದರ್ಶನದಲ್ಲಿ ಪ್ರತಿಕ್ರಿಯಿಸಿದ ಚಿತ್ರದ ನಿರ್ದೇಶಕಿ ಸಂಧ್ಯಾ ಸೂರಿ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದು, ಈ ಪರಿಸ್ಥಿತಿಯನ್ನು ‘ಹೃದಯವಿದ್ರಾವಕ’ ಎಂದಿದ್ದಾರೆ.

“ಸಿಬಿಎಫ್‌ಸಿಯ ಬೇಡಿಕೆ ನಮಗೆ ಆಶ್ಚರ್ಯ ತಂದಿದೆ. ಆದರೆ, ಇದು ಭಾರತೀಯ ಚಿತ್ರಗಳಿಗೆ ಹೊಸತಲ್ಲ ಅಥವಾ ಇದುವರೆಗೆ ಯಾವುದೇ ಸಿನಿಮಾಗಳನ್ನು ಈ ರೀತಿಯ ಪರಿಸ್ಥಿತಿ ಎದುರಿಸಿಲ್ಲ ಎಂದು ನನಗೆ ಅನಿಸಿಲ್ಲ. ಸಿಬಿಎಫ್‌ಸಿ, ಚಿತ್ರದಲ್ಲಿ ಪೊಲೀಸ್ ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಹಲವಾರು ದೃಶ್ಯಗಳಿಗೆ ಕತ್ತರಿ ಹಾಕುವಂತೆ ನಮಗೆ ಸೂಚಿಸಿದೆ” ಎಂದು ಹೇಳಿದ್ದಾರೆ.

ಸಿಬಿಎಫ್‌ಸಿಯ ಬೇಡಿಕೆಗಳನ್ನು ಈಡೇರಿಸುವ ಬದಲು ಕಾನೂನು ಮಾರ್ಗದ ಮೂಲಕ ಹೋಗಿ ನ್ಯಾಯಾಲಯದಲ್ಲಿ ನಿರ್ಧಾರವನ್ನು ಪ್ರಶ್ನಿಸಲು ಸಿದ್ಧಳಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಚಿತ್ರದ ನಟಿ ಶಹಾನಾ ಗೋಸ್ವಾಮಿ ತಮ್ಮ ನಿರ್ದೇಶಕರು ಮತ್ತು ಚಿತ್ರ ತಂಡದ ನಿರ್ಧಾರವನ್ನು ಬೆಂಬಲಿಸಿದ್ದು, ಇಂಡಿಯಾ ಟುಡೇಗೆ ನೀಡಿದ ಹೇಳಿಕೆಯಲ್ಲಿ, “ನಾವು ಒಂದು ತಂಡವಾಗಿ ಸಿಬಿಎಫ್‌ಸಿ ಸೂಚಿಸಿದ ದೃಶ್ಯಗಳ ಕಡಿತ ಒಪ್ಪುವುದಿಲ್ಲ. ಏಕೆಂದರೆ ಅವು ಚಿತ್ರವನ್ನು ತುಂಬಾ ಬದಲಾಯಿಸುತ್ತವೆ. ಆದ್ದರಿಂದ ಭಾರತದಲ್ಲಿ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗದಿರುವ ಬಿಕ್ಕಟ್ಟಿನಲ್ಲಿದೆ” ಎಂದು ಹೇಳಿದ್ದಾರೆ.

“ಸೆನ್ಸಾರ್ ಮಟ್ಟದಲ್ಲಿ ಅನುಮೋದನೆ ಪಡೆದಿರುವ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಇಷ್ಟೊಂದು ಕಡಿತ ಮತ್ತು ಬದಲಾವಣೆಗಳ ಅಗತ್ಯವಿರುವುದು ದುಃಖಕರ” ಎಂದು ಅವರು ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ, ದೇವ್ ಪಟೇಲ್ ಅವರ ಚಿತ್ರ ‘ಮಂಕಿ ಮ್ಯಾನ್’ ಕೂಡ ಸಿಬಿಎಫ್‌ಸಿಯಿಂದ ಇದೇ ರೀತಿಯ ನಿರ್ಬಂಧಗಳನ್ನು ಎದುರಿಸಿತ್ತು. ಹಾಗಾಗಿ, ಅವರು ಕೂಡ ಭಾರತದಲ್ಲಿ ಥಿಯೇಟ್ರಿಕಲ್ ಬಿಡುಗಡೆಯ ಅವಕಾಶ ಪಡೆದಿರಲಿಲ್ಲ.

ಬ್ರಿಟಿಷ್-ಭಾರತೀಯ ನಿರ್ಮಾಪಕಿ ಸಂಧ್ಯಾ ಸೂರಿ ಅವರ ಕಥೆ ಮತ್ತು ನಿರ್ದೇಶನವನ್ನು ಹೊಂದಿರುವ ‘ಸಂತೋಷ್’ ಚಿತ್ರ ಉತ್ತರ ಭಾರತದ ಹಿನ್ನೆಲೆಯನ್ನು ಹೊಂದಿದ್ದು, ಪೋಲಿಸ್ ಪಡೆಗೆ ಸೇರ್ಪಡೆಗೊಂಡು ದಲಿತ ಯುವತಿಯ ಕೊಲೆ ಪ್ರಕರಣದ ತನಿಖೆ ನಡೆಸುವ ಯುವ ವಿಧವೆಯ ಪಾತ್ರಕ್ಕಾಗಿ ಅಂತಾರಾಷ್ಟ್ರೀಯ ಪ್ರಶಂಸೆಯನ್ನು ಗಳಿಸಿದೆ.

ಚಿತ್ರವು ಭಾರತೀಯ ಪೋಲಿಸ್ ಪಡೆಯಲ್ಲಿನ ಅತ್ಯಂತ ಹೀನ ಅಂಶಗಳ ಆಳವಾದ ಕಾಲ್ಪನಿಕ ಚಿತ್ರಣವಾಗಿದ್ದು,‌ ಆಳವಾಗಿ ಬೇರೂರಿರುವ ಸ್ತ್ರೀದ್ವೇಷ, ದಲಿತರ ವಿರುದ್ಧದ ತಾರತಮ್ಯ ಹಾಗೂ ಪೋಲಿಸ್ ಅಧಿಕಾರಿಗಳಿಂದ ಸಾಮಾನ್ಯವಾಗಿ ನಡೆಯುವ ದೌರ್ಜನ್ಯ ಮತ್ತು ಹಿಂಸೆಯನ್ನು ಬಿಂಬಿಸಿದೆ. ಚಿತ್ರವು ಭಾರತದ, ವಿಶೇಷವಾಗಿ ದುರ್ಬಲ ವರ್ಗದ ಮಹಿಳೆಯರ ವಿರುದ್ಧ ಲೈಂಗಿಕ ಹಿಂಸಾಚಾರ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಮ್ ವಿರೋಧಿ ಪೂರ್ವಾಗ್ರಹವನ್ನು ಮುನ್ನೆಲೆಗೆ ತಂದಿದೆ.

ಯುಕೆಯಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶದ ಜೊತೆಗೆ, ಈ ವರ್ಷದ ಅತ್ಯುತ್ತಮ ಚೊಚ್ಚಲ ನಿರ್ದೇಶನದ ಚಿತ್ರವಾಗಿ ಬಾಫ್ಟಾ ಪ್ರಶಸ್ತಿಗೆ ಸಂತೋಷ್ ನಿರ್ದೇಶನಗೊಂಡಿತ್ತು. ‘ಅಬ್ಸರ್ವರ್’ನಲ್ಲಿ ಫೈವ್ ಸ್ಟಾರ್ ರೇಟಿಂಗ್ ಒಳಗೊಂಡಂತೆ ಅತ್ಯುತ್ತಮ ವಿಮರ್ಶೆಗಳಿಗೆ ಪಾತ್ರವಾಗಿತ್ತು. ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿರುವ ಶಹನಾ ಗೋಸ್ವಾಮಿ ಇತ್ತಿಚಿಗೆ ಏಷ್ಯನ್‌ ಫಿಲ್ಮ್ ಅವಾರ್ಡ್ಸ್‌ಗಳ ಅತ್ತುತ್ತಮ ನಟಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

IIFA 2025 | ವಿವಿಧ ವಿಭಾಗಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರಕ್ಕೆ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...