Homeಮುಖಪುಟಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

ಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

- Advertisement -
- Advertisement -

ಬ್ರಿಟನ್‌ನಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದಿದ್ದ’ಸಂತೋಷ್’ ಚಿತ್ರವನ್ನು ಭಾರತೀಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ನಿರ್ಬಂಧ ವಿಧಿಸಿದೆ ಎಂದು ವರದಿಯಾಗಿದೆ.

ಸಂಧ್ಯಾ ಸೂರಿ ನಿರ್ದೇಶನದ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಈ ಚಿತ್ರದಲ್ಲಿ ಶಹಾನಾ ಗೋಸ್ವಾಮಿ ಸಾಂಸ್ಥಿಕ ಭ್ರಷ್ಟಾಚಾರವನ್ನು ತೋರಿಸುವ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ.

ವಿವಿಧ ಸುದ್ದಿ ವರದಿಗಳ ಪ್ರಕಾರ, ಸಿಬಿಎಫ್‌ಸಿ ಭಾರತದಲ್ಲಿ ಚಿತ್ರಕ್ಕೆ ಬಿಡುಗಡೆ ಪ್ರಮಾಣಪತ್ರ ನೀಡುವ ಮೊದಲು ‘ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ’ ಸೂಚಿಸಿದೆ. ಪೊಲೀಸ್ ದೌರ್ಜನ್ಯವನ್ನು ಚಿತ್ರಿಸುವ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಬೇಕೆಂದು ಕೇಳಲಾದ ದೃಶ್ಯಗಳ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಇದು ಚಲನಚಿತ್ರ ನಿರ್ಮಾಪಕರು ಮತ್ತು ಸೆನ್ಸಾರ್ ಮಂಡಳಿಯ ನಡುವೆ ಬಿಕ್ಕಟ್ಟಿಗೆ ಕಾರಣವಾಗಿದೆ.

ಸಿಬಿಎಫ್‌ಸಿಯ ಸೂಚನೆ ಅಥವಾ ಬೇಡಿಕೆ ಬಗ್ಗೆ ದಿ ಗಾರ್ಡಿಯನ್‌ಗೆ ನೀಡಿದ ಸಂದರ್ಶನದಲ್ಲಿ ಪ್ರತಿಕ್ರಿಯಿಸಿದ ಚಿತ್ರದ ನಿರ್ದೇಶಕಿ ಸಂಧ್ಯಾ ಸೂರಿ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದು, ಈ ಪರಿಸ್ಥಿತಿಯನ್ನು ‘ಹೃದಯವಿದ್ರಾವಕ’ ಎಂದಿದ್ದಾರೆ.

“ಸಿಬಿಎಫ್‌ಸಿಯ ಬೇಡಿಕೆ ನಮಗೆ ಆಶ್ಚರ್ಯ ತಂದಿದೆ. ಆದರೆ, ಇದು ಭಾರತೀಯ ಚಿತ್ರಗಳಿಗೆ ಹೊಸತಲ್ಲ ಅಥವಾ ಇದುವರೆಗೆ ಯಾವುದೇ ಸಿನಿಮಾಗಳನ್ನು ಈ ರೀತಿಯ ಪರಿಸ್ಥಿತಿ ಎದುರಿಸಿಲ್ಲ ಎಂದು ನನಗೆ ಅನಿಸಿಲ್ಲ. ಸಿಬಿಎಫ್‌ಸಿ, ಚಿತ್ರದಲ್ಲಿ ಪೊಲೀಸ್ ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಹಲವಾರು ದೃಶ್ಯಗಳಿಗೆ ಕತ್ತರಿ ಹಾಕುವಂತೆ ನಮಗೆ ಸೂಚಿಸಿದೆ” ಎಂದು ಹೇಳಿದ್ದಾರೆ.

ಸಿಬಿಎಫ್‌ಸಿಯ ಬೇಡಿಕೆಗಳನ್ನು ಈಡೇರಿಸುವ ಬದಲು ಕಾನೂನು ಮಾರ್ಗದ ಮೂಲಕ ಹೋಗಿ ನ್ಯಾಯಾಲಯದಲ್ಲಿ ನಿರ್ಧಾರವನ್ನು ಪ್ರಶ್ನಿಸಲು ಸಿದ್ಧಳಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಚಿತ್ರದ ನಟಿ ಶಹಾನಾ ಗೋಸ್ವಾಮಿ ತಮ್ಮ ನಿರ್ದೇಶಕರು ಮತ್ತು ಚಿತ್ರ ತಂಡದ ನಿರ್ಧಾರವನ್ನು ಬೆಂಬಲಿಸಿದ್ದು, ಇಂಡಿಯಾ ಟುಡೇಗೆ ನೀಡಿದ ಹೇಳಿಕೆಯಲ್ಲಿ, “ನಾವು ಒಂದು ತಂಡವಾಗಿ ಸಿಬಿಎಫ್‌ಸಿ ಸೂಚಿಸಿದ ದೃಶ್ಯಗಳ ಕಡಿತ ಒಪ್ಪುವುದಿಲ್ಲ. ಏಕೆಂದರೆ ಅವು ಚಿತ್ರವನ್ನು ತುಂಬಾ ಬದಲಾಯಿಸುತ್ತವೆ. ಆದ್ದರಿಂದ ಭಾರತದಲ್ಲಿ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗದಿರುವ ಬಿಕ್ಕಟ್ಟಿನಲ್ಲಿದೆ” ಎಂದು ಹೇಳಿದ್ದಾರೆ.

“ಸೆನ್ಸಾರ್ ಮಟ್ಟದಲ್ಲಿ ಅನುಮೋದನೆ ಪಡೆದಿರುವ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಇಷ್ಟೊಂದು ಕಡಿತ ಮತ್ತು ಬದಲಾವಣೆಗಳ ಅಗತ್ಯವಿರುವುದು ದುಃಖಕರ” ಎಂದು ಅವರು ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ, ದೇವ್ ಪಟೇಲ್ ಅವರ ಚಿತ್ರ ‘ಮಂಕಿ ಮ್ಯಾನ್’ ಕೂಡ ಸಿಬಿಎಫ್‌ಸಿಯಿಂದ ಇದೇ ರೀತಿಯ ನಿರ್ಬಂಧಗಳನ್ನು ಎದುರಿಸಿತ್ತು. ಹಾಗಾಗಿ, ಅವರು ಕೂಡ ಭಾರತದಲ್ಲಿ ಥಿಯೇಟ್ರಿಕಲ್ ಬಿಡುಗಡೆಯ ಅವಕಾಶ ಪಡೆದಿರಲಿಲ್ಲ.

ಬ್ರಿಟಿಷ್-ಭಾರತೀಯ ನಿರ್ಮಾಪಕಿ ಸಂಧ್ಯಾ ಸೂರಿ ಅವರ ಕಥೆ ಮತ್ತು ನಿರ್ದೇಶನವನ್ನು ಹೊಂದಿರುವ ‘ಸಂತೋಷ್’ ಚಿತ್ರ ಉತ್ತರ ಭಾರತದ ಹಿನ್ನೆಲೆಯನ್ನು ಹೊಂದಿದ್ದು, ಪೋಲಿಸ್ ಪಡೆಗೆ ಸೇರ್ಪಡೆಗೊಂಡು ದಲಿತ ಯುವತಿಯ ಕೊಲೆ ಪ್ರಕರಣದ ತನಿಖೆ ನಡೆಸುವ ಯುವ ವಿಧವೆಯ ಪಾತ್ರಕ್ಕಾಗಿ ಅಂತಾರಾಷ್ಟ್ರೀಯ ಪ್ರಶಂಸೆಯನ್ನು ಗಳಿಸಿದೆ.

ಚಿತ್ರವು ಭಾರತೀಯ ಪೋಲಿಸ್ ಪಡೆಯಲ್ಲಿನ ಅತ್ಯಂತ ಹೀನ ಅಂಶಗಳ ಆಳವಾದ ಕಾಲ್ಪನಿಕ ಚಿತ್ರಣವಾಗಿದ್ದು,‌ ಆಳವಾಗಿ ಬೇರೂರಿರುವ ಸ್ತ್ರೀದ್ವೇಷ, ದಲಿತರ ವಿರುದ್ಧದ ತಾರತಮ್ಯ ಹಾಗೂ ಪೋಲಿಸ್ ಅಧಿಕಾರಿಗಳಿಂದ ಸಾಮಾನ್ಯವಾಗಿ ನಡೆಯುವ ದೌರ್ಜನ್ಯ ಮತ್ತು ಹಿಂಸೆಯನ್ನು ಬಿಂಬಿಸಿದೆ. ಚಿತ್ರವು ಭಾರತದ, ವಿಶೇಷವಾಗಿ ದುರ್ಬಲ ವರ್ಗದ ಮಹಿಳೆಯರ ವಿರುದ್ಧ ಲೈಂಗಿಕ ಹಿಂಸಾಚಾರ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಮ್ ವಿರೋಧಿ ಪೂರ್ವಾಗ್ರಹವನ್ನು ಮುನ್ನೆಲೆಗೆ ತಂದಿದೆ.

ಯುಕೆಯಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶದ ಜೊತೆಗೆ, ಈ ವರ್ಷದ ಅತ್ಯುತ್ತಮ ಚೊಚ್ಚಲ ನಿರ್ದೇಶನದ ಚಿತ್ರವಾಗಿ ಬಾಫ್ಟಾ ಪ್ರಶಸ್ತಿಗೆ ಸಂತೋಷ್ ನಿರ್ದೇಶನಗೊಂಡಿತ್ತು. ‘ಅಬ್ಸರ್ವರ್’ನಲ್ಲಿ ಫೈವ್ ಸ್ಟಾರ್ ರೇಟಿಂಗ್ ಒಳಗೊಂಡಂತೆ ಅತ್ಯುತ್ತಮ ವಿಮರ್ಶೆಗಳಿಗೆ ಪಾತ್ರವಾಗಿತ್ತು. ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿರುವ ಶಹನಾ ಗೋಸ್ವಾಮಿ ಇತ್ತಿಚಿಗೆ ಏಷ್ಯನ್‌ ಫಿಲ್ಮ್ ಅವಾರ್ಡ್ಸ್‌ಗಳ ಅತ್ತುತ್ತಮ ನಟಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

IIFA 2025 | ವಿವಿಧ ವಿಭಾಗಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರಕ್ಕೆ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...