Homeಕರ್ನಾಟಕಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸಲ್ಲ: ಮೃತ ಸಂತೋಷ್‌ ಸಹೋದರ ಪ್ರತಿಜ್ಞೆ

ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸಲ್ಲ: ಮೃತ ಸಂತೋಷ್‌ ಸಹೋದರ ಪ್ರತಿಜ್ಞೆ

- Advertisement -
- Advertisement -

ಉಡುಪಿಯ ಲಾಡ್ಜ್‌‌ನಲ್ಲಿ ಜೀವ ಕಳೆದುಕೊಂಡಿರುವ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹವನ್ನು, ಸಚಿವ ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಅವರ ಸಹೋದರ ಪ್ರಶಾಂತ್‌ ಪಾಟೀಲ್‌‌ ಮಂಗಳವಾರ ಪ್ರತಿಜ್ಞೆ ಮಾಡಿದ್ದಾರೆ.

“ನನ್ನ ತಮ್ಮ ಸಂತೋಷ್‌ ಗುತ್ತಿಗೆದಾರನಾಗಿದ್ದ, ಅವರ ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ನೇರ ಕಾರಣ. 4 ಕೋಟಿ ರೂ. ಮೊತ್ತದ ಕೆಲಸ ಮಾಡಿದ್ದೇನೆ. ಹಣ ಬಂದಿಲ್ಲ, ಬಹಳ ಕಷ್ಟವಾಗಿದೆ ಎಂದು ಹೇಳಿದ್ದ. ಅವರ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು. ನಮ್ಮ ಸಮುದಾಯದವರೇ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರು ನಮಗೆ ನ್ಯಾಯ ದೊರಕಿಸಿಕೊಡಬೇಕು” ಎಂದು‌ ಪ್ರಶಾಂತ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂತೋಷ್ ಅವರು ಸಚಿವ ಈಶ್ವರಪ್ಪ ಜೊತೆ ಚೆನ್ನಾಗಿದ್ದರು.‌ ಸಂತೋಷ್ ಪರಿಚಯವೇ ಇಲ್ಲ ಎಂದು ಈಶ್ವರಪ್ಪ ಸುಳ್ಳು ಹೇಳುತ್ತಿದ್ದಾರೆ. ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಮೃತದೇಹವನ್ನು ನಾವು ಅಂತ್ಯಕ್ರಿಯೆ ನಡೆಸುವುದಿಲ್ಲ” ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ.

ಇದನ್ನೂ ಓದಿ: ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆ

ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್  ಅವರು ಸಚಿವ ಕೆ.ಎಸ್. ಈಶ್ವರಪ್ಪ ಅವರು 40% ಕಮೀಷನ್‌‌‌ಗೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇದೀಗ ಸಂತೋಷ್‌ ಅವರು ಉಡುಪಿಯ ಲಾಡ್ಜ್‌ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ನಿನ್ನೆ ತಡರಾತ್ರಿಯೆ ಅವರು ಆತ್ಮಹತ್ಯೆ ನೋಟ್ ಬರೆದು ಅದನ್ನು ಮಾಧ್ಯಮ ಪತ್ರಿನಿಧಿಗಳಿಗೆ ಕಳುಹಿಸಿದ್ದರು ಎಂದು ವರದಿಯಾಗಿದ್ದು, ಈ ಡೆತ್‌ ನೋ‌ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಪತ್ರದಲ್ಲಿ ಅವರು ನೇರವಾಗಿಯೆ, “ನನ್ನ ಸಾವಿಗೆ ಈಶ್ವರಪ್ಪ ಕಾರಣ” ಎಂದು ಬರೆದಿದ್ದಾರೆ.

ಸಂತೋಷ್ ಸಾವಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, “ಡೆತ್ ನೋಟ್ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಡೆತ್‌ ನೋಟ್‌ ಇದೆಯೋ ಇಲ್ಲವೊ ಮಾಹಿತಿ ಪಡೆದುಕೊಳ್ಳುತ್ತೇನೆ. ಬಹುಶಃ ಅದು ಡೆತ್​ನೋಟ್ ಅಲ್ಲ ಎನ್ನಿಸುತ್ತದೆ” ಎಂದು ಹೇಳಿದ್ದಾರೆ.

“ಆರೋಪ ಮಾಡೋದು, ಸಾಬೀತು ಮಾಡೋದು, ಎಲ್ಲದಕ್ಕೂ ವಿಧಾನಗಳಿವೆ. ಆತ್ಮಹತ್ಯೆಗೆ ಕಾರಣವೇನು ಎನ್ನುವ ವಿವರ ಮೊದಲು ಪಡೆದುಕೊಳ್ಳುತ್ತೇನೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತದೆ” ಎಂದು ಆರಗ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂತೋಷ್‌ ಸಾವು ಪ್ರಕರಣ; ಡೆತ್‌ನೋಟ್‌‌ ಕುರಿತು ಯಾವುದೆ ಮಾಹಿತಿ ಇಲ್ಲ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

ಸಂತೋಷ್‌ ಪಾಟಿಲ್‌‌ ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಪತ್ರದಲ್ಲಿ, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆಯಲಾಗಿದೆ.

“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...