Homeಕರ್ನಾಟಕಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಸಂತೋಷ್ ಯಾರು ಅಂತ ಗೊತ್ತಿಲ್ವಂತೆ?”

- Advertisement -
- Advertisement -

‘‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಟಿ.ವಿ.9 ಕನ್ನಡ ಮಾಧ್ಯಮದೊಂದಿಗೆ ಅಳುತ್ತಾ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ಜಯಶ್ರೀ.

40 ಪರ್ಸೆಂಟ್‌ ಕಮಿಷನ್‌ಗಾಗಿ ಸಚಿವ ಕೆ.ಎಸ್.ಈಶ್ವರಪ್ಪನವರು ಪೀಡಿಸುತ್ತಿದ್ದರು ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಈಶ್ವರಪ್ಪನವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘ಸಂತೋಷ್ ಪಾಟೀಲ್‌ ಯಾರೆಂದೇ ಗೊತ್ತಿಲ್ಲ’ ಎಂದಿರುವುದು ನೋವಿನ ಕಡಲಲ್ಲಿರುವ ಕುಟುಂಬಕ್ಕೆ ಮತ್ತಷ್ಟು ಆಘಾತ ತಂದಿದೆ. ಮುಡುಗಟ್ಟಿದ ಶೋಕದಲ್ಲೇ ಮಾಧ್ಯಮದೊಂದಿಗೆ ಮಾತನಾಡಿರುವ ಸಂತೋಷ್‌ ಪತ್ನಿ ಜಯಶ್ರೀಯವರು ಈಶ್ವರಪ್ಪ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಯಾರು ಅಂತ ಗೊತ್ತಿಲ್ವಂತೆ? ಗೊತ್ತಿಲ್ಲ ಅಂದ್ರೆ ಫೋಟೋದಲ್ಲಿ ಇರುತ್ತಿದ್ದರಾ?” ಎಂದು ಪ್ರಶ್ನಿಸಿದ್ದಾರೆ.

“ನಾನು ಪ್ರಗ್ನೆಂಟ್‌ ಇದ್ದಾಗ ಬಿಪಿ ಇತ್ತು. ನಾನು ಟೆನ್ಷನ್‌ ಮಾಡಿಕೊಳ್ಳುತ್ತೇನೆ ಅಂತ ನನ್ನ ಗಂಡ ನನ್ನೊಂದಿಗೆ ಏನನ್ನೂ ಹೇಳಿಕೊಳ್ಳುತ್ತಿರಲಿಲ್ಲ. 40 ಪರ್ಸೆಂಟ್‌ ಲಂಚ ಕೇಳ್ತಾರೆ ಅನ್ನೋ ವಿಷಯ ಮಾತ್ರ ಹೇಳುತ್ತಿದ್ದರು” ಎಂದು ತಿಳಿಸಿದ್ದಾರೆ.

“ಕಾಮಗಾರಿ ಮಾಡುತ್ತಿದ್ದನ್ನು ನಾವೇ ನಮ್ಮ ಕಣ್ಣಾರೆ ನೋಡಿದ್ದೇವೆ. ನನ್ನ ಗಂಡ ಸರಿಯಾಗಿ ಊಟ ಕೂಡ ಮಾಡುತ್ತಿರಲಿಲ್ಲ. ಮಧ್ಯಾಹ್ನ ಊಟ ಮಾಡದೆ ರಾತ್ರಿ ಮಾತ್ರ ಮಾಡುತ್ತಿದ್ದರು. ಅಷ್ಟು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಅದಕ್ಕೆ ಪ್ರತಿಫಲ ಸಿಗದಿದ್ದರೆ? ಯಾರು ಅಂತ ಗೊತ್ತೇ ಇರಲಿಲ್ಲವಂತೆ ಇವರಿಗೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಕೆಲಸ ಎಲ್ಲ ಮಾಡೋಕೆ ನಮಗೇನು ದುಡ್ಡು ಹೆಚ್ಚಾಗಿತ್ತಾ? ಸಾಲ ತಂದು ಕೆಲಸ ಮಾಡಿದ್ದಾರೆ. ನಮಗೆ ಗೊತ್ತಿಲ್ಲ ಅಂದ್ರೆ ಏನು ಹೇಳೋದು? ಇಂಥವರು ರಾಜಕಾರಣ ಮಾಡಬೇಕಾ? ಮಾಡಿದ ಕೆಲಸಕ್ಕೆ ಪ್ರತಿಫಲ ಕೊಡಲಿಲ್ಲ ಅಂದ್ರೆ ಏನ್‌ ಸಾರ್‌? ಇಂಥವರು ಅಧಿಕಾರದಲ್ಲಿದ್ದರೆ ಮುಗಿಯಿತು, ದೇಶ ಸಮಾಧಿನೇ. ನಮ್ಮ ಸಂಸಾರನಂತೂ ಸಮಾಧಿ ಮಾಡಿದ್ರು. ಇನ್ನು ದೇಶದ ಕಥೆ ಏನಿದೆಯೋ ಯಾರಿಗೆ ಗೊತ್ತು?” ಎಂದು ಪ್ರಶ್ನಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಈ ಹಿಂದೆ ಸಚಿವ ಈಶ್ವರಪ್ಪನವರನ್ನು ಭೇಟಿಯಾಗಿದ್ದರೆಂದು ಹೇಳಲಾಗುತ್ತಿರುವ ಈ ಫೋಟೋ ವೈರಲ್ ಆಗುತ್ತಿದೆ.

“ಕೆಲಸಕ್ಕೆ ಹೋಗುವಾಗ ಖುಷಿಯಿಂದ ಹೋಗುತ್ತಿದ್ದರು. ಟಿಫನ್‌ ಸಹಿತ ಬೇಡ, ಅಲ್ಲೇ ಎಲ್ಲಾದರೂ ತಿಂತೀನಿ ಅನ್ನುತ್ತಿದ್ದರು. ಅಷ್ಟು ಅವಸರ. ಬೆಳಿಗ್ಗೆ 6 ಗಂಟೆಗೆ ಎದ್ದು ಕೆಲಸಕ್ಕೆಂದು ಹೋದರೆ ರಾತ್ರಿ 11 ಗಂಟೆಯವರೆಗೂ ಬರುತ್ತಿರಲಿಲ್ಲ. ಕೆಲಸ ಚೆನ್ನಾಗಿ ನಡೆಯುತ್ತಿದೆ. ಸ್ವಲ್ಪ ರೆಸ್ಟ್ ತಗೊಳ್ಳಿ ಅನ್ನುತ್ತಿದ್ದೆ. ಎಲ್ಲಾ ಕಾಮಗಾರಿ ಪೂರ್ತಿ ಮಾಡಬೇಕು ಅನ್ನುತ್ತಿದ್ದರು. ಅಂಥವರು ಯಾರೆಂದು ಇವರಿಗೆ ಗೊತ್ತಿಲ್ಲವಂತೆ. ಅವರದ್ದು ಒಂದು ಜನ್ಮನಾ? ನಾಯಿ ಜನ್ಮ” ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಜಯಶ್ರೀ.

“ಆರ್ಡರ್‌ ಪಾಸ್ ಮಾಡಿ ಅಂತ ಶಿವಮೊಗ್ಗಕ್ಕೆ ನನ್ನ ಗಂಡ ಹೋಗಿದ್ದರು. ಆರು ದಿನ ಅಲ್ಲೇ ಇದ್ದರು. ಬೆಳಿಗ್ಗೆ ಹೋದ್ರೆ ಸಾಯಂಕಾಲ ಬಾ, ಸಾಯಂಕಾಲ ಹೋದರೆ ಬೆಳಿಗ್ಗೆ ಬಾ ಎಂದು ಸಚಿವರು ಹೇಳುತ್ತಿದ್ದರು ಎಂದು ನನಗೆ ಕರೆ ಮಾಡಿ ತಿಳಿಸಿದ್ದರು. ಬರೀ ಆಟ ಆಡಿಸೋದೆ ಆಯ್ತು” ಎಂದು ನೋವು ತೋಡಿಕೊಂಡಿದ್ದಾರೆ.

“ಎಲ್ಲ ಕೆಲಸ ಮಾಡಿಸಿ, ನಾನಿದ್ದೀನಿ ಅಂದ್ರು. ಮಿನಿಸ್ಟರ್ ಹೇಳಿದ ಮೇಲೆ ಯಾರಾದರೂ ನಂಬುತ್ತಾರೆ ಅಲ್ವಾ ಸರ್‌? ಅವರ ಕೈಯಲ್ಲೇ ಆಡಳಿತ ಇರುತ್ತೆ. ನಂಬಿಕೆ ಇಟ್ಟು ಕೆಲಸ ಮಾಡಿದರೆ ನಂಬಿಕೆ ದ್ರೋಹ ಮಾಡೋದಾ? ನನ್ನ ಸಂಸಾರವಂತೂ ಸಮಾಧೀನೆ. ಮದುವೆಯಾಗಿ ಮೂರು ವರ್ಷ ಆಗಿಲ್ಲ. ಎರಡು ವರ್ಷದ ಮಗು ಇದೆ. ಹೇಗೆ ಸಮಾಧಾನ ಮಾಡಿಕೊಳ್ಳಲಿ ನಾನು?” ಎಂದು ಪ್ರಶ್ನಿಸಿದ್ದಾರೆ.

“ಕೈ ಸಾಲ ಎಲ್ಲ ಮಾಡಿಕೊಂಡಿದ್ದಾರೆ. ನನ್ನ ಎರಡು ಸರ, ಬಳೆ ಎಲ್ಲ ಒತ್ತೆ ಇಟ್ಟಿದ್ದಾರೆ. ಇಲ್ಲೇ ಹೋಗಿ ಬರ್ತೀನಿ ಅಂತ ಉಡುಪಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶ್ರೀಮಾನ್ ನರೇಂದ್ರ ಮೋದಿಯವರು… ನ ಖಾಯೇಗಾ… ನ ಖಿಲಾಯೆಗಾ ಅಂದಿದ್ದು ಬರೀ ಜನಗಳನ್ನ ಮೆಚ್ಚಿಸಗೊಸ್ಕರ್…. ಅಕ್ಕ ಪಕ್ಕದಲ್ಲಿರೋರಿಗೆ ತಿನ್ನಲು ಅವಕಾಶ ಮಾಡಿಕೊಟ್ಟಿದ್ದರು…..

LEAVE A REPLY

Please enter your comment!
Please enter your name here

- Advertisment -

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...

‘ದೆಹಲಿ ಖಾಲಿಸ್ತಾನವಾಗಲಿದೆ’: 10 ಶಾಲೆಗಳು, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ವಿದ್ಯಾರ್ಥಿಗಳ ಸ್ಥಳಾಂತರ

ಸೋಮವಾರ ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿನ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭಾರಿ ಭದ್ರತಾ ಪ್ರತಿಕ್ರಿಯೆ ನೀಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ತಿಳಿಸಿವೆ. ಡಿಎಫ್‌ಎಸ್ ಪ್ರಕಾರ, ಬೆಳಿಗ್ಗೆ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...