Homeಕರ್ನಾಟಕಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಸಂತೋಷ್ ಯಾರು ಅಂತ ಗೊತ್ತಿಲ್ವಂತೆ?”

- Advertisement -
- Advertisement -

‘‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಟಿ.ವಿ.9 ಕನ್ನಡ ಮಾಧ್ಯಮದೊಂದಿಗೆ ಅಳುತ್ತಾ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ಜಯಶ್ರೀ.

40 ಪರ್ಸೆಂಟ್‌ ಕಮಿಷನ್‌ಗಾಗಿ ಸಚಿವ ಕೆ.ಎಸ್.ಈಶ್ವರಪ್ಪನವರು ಪೀಡಿಸುತ್ತಿದ್ದರು ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಈಶ್ವರಪ್ಪನವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘ಸಂತೋಷ್ ಪಾಟೀಲ್‌ ಯಾರೆಂದೇ ಗೊತ್ತಿಲ್ಲ’ ಎಂದಿರುವುದು ನೋವಿನ ಕಡಲಲ್ಲಿರುವ ಕುಟುಂಬಕ್ಕೆ ಮತ್ತಷ್ಟು ಆಘಾತ ತಂದಿದೆ. ಮುಡುಗಟ್ಟಿದ ಶೋಕದಲ್ಲೇ ಮಾಧ್ಯಮದೊಂದಿಗೆ ಮಾತನಾಡಿರುವ ಸಂತೋಷ್‌ ಪತ್ನಿ ಜಯಶ್ರೀಯವರು ಈಶ್ವರಪ್ಪ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಯಾರು ಅಂತ ಗೊತ್ತಿಲ್ವಂತೆ? ಗೊತ್ತಿಲ್ಲ ಅಂದ್ರೆ ಫೋಟೋದಲ್ಲಿ ಇರುತ್ತಿದ್ದರಾ?” ಎಂದು ಪ್ರಶ್ನಿಸಿದ್ದಾರೆ.

“ನಾನು ಪ್ರಗ್ನೆಂಟ್‌ ಇದ್ದಾಗ ಬಿಪಿ ಇತ್ತು. ನಾನು ಟೆನ್ಷನ್‌ ಮಾಡಿಕೊಳ್ಳುತ್ತೇನೆ ಅಂತ ನನ್ನ ಗಂಡ ನನ್ನೊಂದಿಗೆ ಏನನ್ನೂ ಹೇಳಿಕೊಳ್ಳುತ್ತಿರಲಿಲ್ಲ. 40 ಪರ್ಸೆಂಟ್‌ ಲಂಚ ಕೇಳ್ತಾರೆ ಅನ್ನೋ ವಿಷಯ ಮಾತ್ರ ಹೇಳುತ್ತಿದ್ದರು” ಎಂದು ತಿಳಿಸಿದ್ದಾರೆ.

“ಕಾಮಗಾರಿ ಮಾಡುತ್ತಿದ್ದನ್ನು ನಾವೇ ನಮ್ಮ ಕಣ್ಣಾರೆ ನೋಡಿದ್ದೇವೆ. ನನ್ನ ಗಂಡ ಸರಿಯಾಗಿ ಊಟ ಕೂಡ ಮಾಡುತ್ತಿರಲಿಲ್ಲ. ಮಧ್ಯಾಹ್ನ ಊಟ ಮಾಡದೆ ರಾತ್ರಿ ಮಾತ್ರ ಮಾಡುತ್ತಿದ್ದರು. ಅಷ್ಟು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಅದಕ್ಕೆ ಪ್ರತಿಫಲ ಸಿಗದಿದ್ದರೆ? ಯಾರು ಅಂತ ಗೊತ್ತೇ ಇರಲಿಲ್ಲವಂತೆ ಇವರಿಗೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಕೆಲಸ ಎಲ್ಲ ಮಾಡೋಕೆ ನಮಗೇನು ದುಡ್ಡು ಹೆಚ್ಚಾಗಿತ್ತಾ? ಸಾಲ ತಂದು ಕೆಲಸ ಮಾಡಿದ್ದಾರೆ. ನಮಗೆ ಗೊತ್ತಿಲ್ಲ ಅಂದ್ರೆ ಏನು ಹೇಳೋದು? ಇಂಥವರು ರಾಜಕಾರಣ ಮಾಡಬೇಕಾ? ಮಾಡಿದ ಕೆಲಸಕ್ಕೆ ಪ್ರತಿಫಲ ಕೊಡಲಿಲ್ಲ ಅಂದ್ರೆ ಏನ್‌ ಸಾರ್‌? ಇಂಥವರು ಅಧಿಕಾರದಲ್ಲಿದ್ದರೆ ಮುಗಿಯಿತು, ದೇಶ ಸಮಾಧಿನೇ. ನಮ್ಮ ಸಂಸಾರನಂತೂ ಸಮಾಧಿ ಮಾಡಿದ್ರು. ಇನ್ನು ದೇಶದ ಕಥೆ ಏನಿದೆಯೋ ಯಾರಿಗೆ ಗೊತ್ತು?” ಎಂದು ಪ್ರಶ್ನಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಈ ಹಿಂದೆ ಸಚಿವ ಈಶ್ವರಪ್ಪನವರನ್ನು ಭೇಟಿಯಾಗಿದ್ದರೆಂದು ಹೇಳಲಾಗುತ್ತಿರುವ ಈ ಫೋಟೋ ವೈರಲ್ ಆಗುತ್ತಿದೆ.

“ಕೆಲಸಕ್ಕೆ ಹೋಗುವಾಗ ಖುಷಿಯಿಂದ ಹೋಗುತ್ತಿದ್ದರು. ಟಿಫನ್‌ ಸಹಿತ ಬೇಡ, ಅಲ್ಲೇ ಎಲ್ಲಾದರೂ ತಿಂತೀನಿ ಅನ್ನುತ್ತಿದ್ದರು. ಅಷ್ಟು ಅವಸರ. ಬೆಳಿಗ್ಗೆ 6 ಗಂಟೆಗೆ ಎದ್ದು ಕೆಲಸಕ್ಕೆಂದು ಹೋದರೆ ರಾತ್ರಿ 11 ಗಂಟೆಯವರೆಗೂ ಬರುತ್ತಿರಲಿಲ್ಲ. ಕೆಲಸ ಚೆನ್ನಾಗಿ ನಡೆಯುತ್ತಿದೆ. ಸ್ವಲ್ಪ ರೆಸ್ಟ್ ತಗೊಳ್ಳಿ ಅನ್ನುತ್ತಿದ್ದೆ. ಎಲ್ಲಾ ಕಾಮಗಾರಿ ಪೂರ್ತಿ ಮಾಡಬೇಕು ಅನ್ನುತ್ತಿದ್ದರು. ಅಂಥವರು ಯಾರೆಂದು ಇವರಿಗೆ ಗೊತ್ತಿಲ್ಲವಂತೆ. ಅವರದ್ದು ಒಂದು ಜನ್ಮನಾ? ನಾಯಿ ಜನ್ಮ” ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಜಯಶ್ರೀ.

“ಆರ್ಡರ್‌ ಪಾಸ್ ಮಾಡಿ ಅಂತ ಶಿವಮೊಗ್ಗಕ್ಕೆ ನನ್ನ ಗಂಡ ಹೋಗಿದ್ದರು. ಆರು ದಿನ ಅಲ್ಲೇ ಇದ್ದರು. ಬೆಳಿಗ್ಗೆ ಹೋದ್ರೆ ಸಾಯಂಕಾಲ ಬಾ, ಸಾಯಂಕಾಲ ಹೋದರೆ ಬೆಳಿಗ್ಗೆ ಬಾ ಎಂದು ಸಚಿವರು ಹೇಳುತ್ತಿದ್ದರು ಎಂದು ನನಗೆ ಕರೆ ಮಾಡಿ ತಿಳಿಸಿದ್ದರು. ಬರೀ ಆಟ ಆಡಿಸೋದೆ ಆಯ್ತು” ಎಂದು ನೋವು ತೋಡಿಕೊಂಡಿದ್ದಾರೆ.

“ಎಲ್ಲ ಕೆಲಸ ಮಾಡಿಸಿ, ನಾನಿದ್ದೀನಿ ಅಂದ್ರು. ಮಿನಿಸ್ಟರ್ ಹೇಳಿದ ಮೇಲೆ ಯಾರಾದರೂ ನಂಬುತ್ತಾರೆ ಅಲ್ವಾ ಸರ್‌? ಅವರ ಕೈಯಲ್ಲೇ ಆಡಳಿತ ಇರುತ್ತೆ. ನಂಬಿಕೆ ಇಟ್ಟು ಕೆಲಸ ಮಾಡಿದರೆ ನಂಬಿಕೆ ದ್ರೋಹ ಮಾಡೋದಾ? ನನ್ನ ಸಂಸಾರವಂತೂ ಸಮಾಧೀನೆ. ಮದುವೆಯಾಗಿ ಮೂರು ವರ್ಷ ಆಗಿಲ್ಲ. ಎರಡು ವರ್ಷದ ಮಗು ಇದೆ. ಹೇಗೆ ಸಮಾಧಾನ ಮಾಡಿಕೊಳ್ಳಲಿ ನಾನು?” ಎಂದು ಪ್ರಶ್ನಿಸಿದ್ದಾರೆ.

“ಕೈ ಸಾಲ ಎಲ್ಲ ಮಾಡಿಕೊಂಡಿದ್ದಾರೆ. ನನ್ನ ಎರಡು ಸರ, ಬಳೆ ಎಲ್ಲ ಒತ್ತೆ ಇಟ್ಟಿದ್ದಾರೆ. ಇಲ್ಲೇ ಹೋಗಿ ಬರ್ತೀನಿ ಅಂತ ಉಡುಪಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶ್ರೀಮಾನ್ ನರೇಂದ್ರ ಮೋದಿಯವರು… ನ ಖಾಯೇಗಾ… ನ ಖಿಲಾಯೆಗಾ ಅಂದಿದ್ದು ಬರೀ ಜನಗಳನ್ನ ಮೆಚ್ಚಿಸಗೊಸ್ಕರ್…. ಅಕ್ಕ ಪಕ್ಕದಲ್ಲಿರೋರಿಗೆ ತಿನ್ನಲು ಅವಕಾಶ ಮಾಡಿಕೊಟ್ಟಿದ್ದರು…..

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...