Homeಕರ್ನಾಟಕಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಸಂತೋಷ್ ಯಾರು ಅಂತ ಗೊತ್ತಿಲ್ವಂತೆ?”

- Advertisement -
- Advertisement -

‘‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಟಿ.ವಿ.9 ಕನ್ನಡ ಮಾಧ್ಯಮದೊಂದಿಗೆ ಅಳುತ್ತಾ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ಜಯಶ್ರೀ.

40 ಪರ್ಸೆಂಟ್‌ ಕಮಿಷನ್‌ಗಾಗಿ ಸಚಿವ ಕೆ.ಎಸ್.ಈಶ್ವರಪ್ಪನವರು ಪೀಡಿಸುತ್ತಿದ್ದರು ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಈಶ್ವರಪ್ಪನವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘ಸಂತೋಷ್ ಪಾಟೀಲ್‌ ಯಾರೆಂದೇ ಗೊತ್ತಿಲ್ಲ’ ಎಂದಿರುವುದು ನೋವಿನ ಕಡಲಲ್ಲಿರುವ ಕುಟುಂಬಕ್ಕೆ ಮತ್ತಷ್ಟು ಆಘಾತ ತಂದಿದೆ. ಮುಡುಗಟ್ಟಿದ ಶೋಕದಲ್ಲೇ ಮಾಧ್ಯಮದೊಂದಿಗೆ ಮಾತನಾಡಿರುವ ಸಂತೋಷ್‌ ಪತ್ನಿ ಜಯಶ್ರೀಯವರು ಈಶ್ವರಪ್ಪ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಯಾರು ಅಂತ ಗೊತ್ತಿಲ್ವಂತೆ? ಗೊತ್ತಿಲ್ಲ ಅಂದ್ರೆ ಫೋಟೋದಲ್ಲಿ ಇರುತ್ತಿದ್ದರಾ?” ಎಂದು ಪ್ರಶ್ನಿಸಿದ್ದಾರೆ.

“ನಾನು ಪ್ರಗ್ನೆಂಟ್‌ ಇದ್ದಾಗ ಬಿಪಿ ಇತ್ತು. ನಾನು ಟೆನ್ಷನ್‌ ಮಾಡಿಕೊಳ್ಳುತ್ತೇನೆ ಅಂತ ನನ್ನ ಗಂಡ ನನ್ನೊಂದಿಗೆ ಏನನ್ನೂ ಹೇಳಿಕೊಳ್ಳುತ್ತಿರಲಿಲ್ಲ. 40 ಪರ್ಸೆಂಟ್‌ ಲಂಚ ಕೇಳ್ತಾರೆ ಅನ್ನೋ ವಿಷಯ ಮಾತ್ರ ಹೇಳುತ್ತಿದ್ದರು” ಎಂದು ತಿಳಿಸಿದ್ದಾರೆ.

“ಕಾಮಗಾರಿ ಮಾಡುತ್ತಿದ್ದನ್ನು ನಾವೇ ನಮ್ಮ ಕಣ್ಣಾರೆ ನೋಡಿದ್ದೇವೆ. ನನ್ನ ಗಂಡ ಸರಿಯಾಗಿ ಊಟ ಕೂಡ ಮಾಡುತ್ತಿರಲಿಲ್ಲ. ಮಧ್ಯಾಹ್ನ ಊಟ ಮಾಡದೆ ರಾತ್ರಿ ಮಾತ್ರ ಮಾಡುತ್ತಿದ್ದರು. ಅಷ್ಟು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಅದಕ್ಕೆ ಪ್ರತಿಫಲ ಸಿಗದಿದ್ದರೆ? ಯಾರು ಅಂತ ಗೊತ್ತೇ ಇರಲಿಲ್ಲವಂತೆ ಇವರಿಗೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಕೆಲಸ ಎಲ್ಲ ಮಾಡೋಕೆ ನಮಗೇನು ದುಡ್ಡು ಹೆಚ್ಚಾಗಿತ್ತಾ? ಸಾಲ ತಂದು ಕೆಲಸ ಮಾಡಿದ್ದಾರೆ. ನಮಗೆ ಗೊತ್ತಿಲ್ಲ ಅಂದ್ರೆ ಏನು ಹೇಳೋದು? ಇಂಥವರು ರಾಜಕಾರಣ ಮಾಡಬೇಕಾ? ಮಾಡಿದ ಕೆಲಸಕ್ಕೆ ಪ್ರತಿಫಲ ಕೊಡಲಿಲ್ಲ ಅಂದ್ರೆ ಏನ್‌ ಸಾರ್‌? ಇಂಥವರು ಅಧಿಕಾರದಲ್ಲಿದ್ದರೆ ಮುಗಿಯಿತು, ದೇಶ ಸಮಾಧಿನೇ. ನಮ್ಮ ಸಂಸಾರನಂತೂ ಸಮಾಧಿ ಮಾಡಿದ್ರು. ಇನ್ನು ದೇಶದ ಕಥೆ ಏನಿದೆಯೋ ಯಾರಿಗೆ ಗೊತ್ತು?” ಎಂದು ಪ್ರಶ್ನಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಈ ಹಿಂದೆ ಸಚಿವ ಈಶ್ವರಪ್ಪನವರನ್ನು ಭೇಟಿಯಾಗಿದ್ದರೆಂದು ಹೇಳಲಾಗುತ್ತಿರುವ ಈ ಫೋಟೋ ವೈರಲ್ ಆಗುತ್ತಿದೆ.

“ಕೆಲಸಕ್ಕೆ ಹೋಗುವಾಗ ಖುಷಿಯಿಂದ ಹೋಗುತ್ತಿದ್ದರು. ಟಿಫನ್‌ ಸಹಿತ ಬೇಡ, ಅಲ್ಲೇ ಎಲ್ಲಾದರೂ ತಿಂತೀನಿ ಅನ್ನುತ್ತಿದ್ದರು. ಅಷ್ಟು ಅವಸರ. ಬೆಳಿಗ್ಗೆ 6 ಗಂಟೆಗೆ ಎದ್ದು ಕೆಲಸಕ್ಕೆಂದು ಹೋದರೆ ರಾತ್ರಿ 11 ಗಂಟೆಯವರೆಗೂ ಬರುತ್ತಿರಲಿಲ್ಲ. ಕೆಲಸ ಚೆನ್ನಾಗಿ ನಡೆಯುತ್ತಿದೆ. ಸ್ವಲ್ಪ ರೆಸ್ಟ್ ತಗೊಳ್ಳಿ ಅನ್ನುತ್ತಿದ್ದೆ. ಎಲ್ಲಾ ಕಾಮಗಾರಿ ಪೂರ್ತಿ ಮಾಡಬೇಕು ಅನ್ನುತ್ತಿದ್ದರು. ಅಂಥವರು ಯಾರೆಂದು ಇವರಿಗೆ ಗೊತ್ತಿಲ್ಲವಂತೆ. ಅವರದ್ದು ಒಂದು ಜನ್ಮನಾ? ನಾಯಿ ಜನ್ಮ” ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಜಯಶ್ರೀ.

“ಆರ್ಡರ್‌ ಪಾಸ್ ಮಾಡಿ ಅಂತ ಶಿವಮೊಗ್ಗಕ್ಕೆ ನನ್ನ ಗಂಡ ಹೋಗಿದ್ದರು. ಆರು ದಿನ ಅಲ್ಲೇ ಇದ್ದರು. ಬೆಳಿಗ್ಗೆ ಹೋದ್ರೆ ಸಾಯಂಕಾಲ ಬಾ, ಸಾಯಂಕಾಲ ಹೋದರೆ ಬೆಳಿಗ್ಗೆ ಬಾ ಎಂದು ಸಚಿವರು ಹೇಳುತ್ತಿದ್ದರು ಎಂದು ನನಗೆ ಕರೆ ಮಾಡಿ ತಿಳಿಸಿದ್ದರು. ಬರೀ ಆಟ ಆಡಿಸೋದೆ ಆಯ್ತು” ಎಂದು ನೋವು ತೋಡಿಕೊಂಡಿದ್ದಾರೆ.

“ಎಲ್ಲ ಕೆಲಸ ಮಾಡಿಸಿ, ನಾನಿದ್ದೀನಿ ಅಂದ್ರು. ಮಿನಿಸ್ಟರ್ ಹೇಳಿದ ಮೇಲೆ ಯಾರಾದರೂ ನಂಬುತ್ತಾರೆ ಅಲ್ವಾ ಸರ್‌? ಅವರ ಕೈಯಲ್ಲೇ ಆಡಳಿತ ಇರುತ್ತೆ. ನಂಬಿಕೆ ಇಟ್ಟು ಕೆಲಸ ಮಾಡಿದರೆ ನಂಬಿಕೆ ದ್ರೋಹ ಮಾಡೋದಾ? ನನ್ನ ಸಂಸಾರವಂತೂ ಸಮಾಧೀನೆ. ಮದುವೆಯಾಗಿ ಮೂರು ವರ್ಷ ಆಗಿಲ್ಲ. ಎರಡು ವರ್ಷದ ಮಗು ಇದೆ. ಹೇಗೆ ಸಮಾಧಾನ ಮಾಡಿಕೊಳ್ಳಲಿ ನಾನು?” ಎಂದು ಪ್ರಶ್ನಿಸಿದ್ದಾರೆ.

“ಕೈ ಸಾಲ ಎಲ್ಲ ಮಾಡಿಕೊಂಡಿದ್ದಾರೆ. ನನ್ನ ಎರಡು ಸರ, ಬಳೆ ಎಲ್ಲ ಒತ್ತೆ ಇಟ್ಟಿದ್ದಾರೆ. ಇಲ್ಲೇ ಹೋಗಿ ಬರ್ತೀನಿ ಅಂತ ಉಡುಪಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶ್ರೀಮಾನ್ ನರೇಂದ್ರ ಮೋದಿಯವರು… ನ ಖಾಯೇಗಾ… ನ ಖಿಲಾಯೆಗಾ ಅಂದಿದ್ದು ಬರೀ ಜನಗಳನ್ನ ಮೆಚ್ಚಿಸಗೊಸ್ಕರ್…. ಅಕ್ಕ ಪಕ್ಕದಲ್ಲಿರೋರಿಗೆ ತಿನ್ನಲು ಅವಕಾಶ ಮಾಡಿಕೊಟ್ಟಿದ್ದರು…..

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...