Homeಕರ್ನಾಟಕಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಸಂತೋಷ್ ಯಾರು ಅಂತ ಗೊತ್ತಿಲ್ವಂತೆ?”

- Advertisement -
- Advertisement -

‘‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಟಿ.ವಿ.9 ಕನ್ನಡ ಮಾಧ್ಯಮದೊಂದಿಗೆ ಅಳುತ್ತಾ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ಜಯಶ್ರೀ.

40 ಪರ್ಸೆಂಟ್‌ ಕಮಿಷನ್‌ಗಾಗಿ ಸಚಿವ ಕೆ.ಎಸ್.ಈಶ್ವರಪ್ಪನವರು ಪೀಡಿಸುತ್ತಿದ್ದರು ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಈಶ್ವರಪ್ಪನವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘ಸಂತೋಷ್ ಪಾಟೀಲ್‌ ಯಾರೆಂದೇ ಗೊತ್ತಿಲ್ಲ’ ಎಂದಿರುವುದು ನೋವಿನ ಕಡಲಲ್ಲಿರುವ ಕುಟುಂಬಕ್ಕೆ ಮತ್ತಷ್ಟು ಆಘಾತ ತಂದಿದೆ. ಮುಡುಗಟ್ಟಿದ ಶೋಕದಲ್ಲೇ ಮಾಧ್ಯಮದೊಂದಿಗೆ ಮಾತನಾಡಿರುವ ಸಂತೋಷ್‌ ಪತ್ನಿ ಜಯಶ್ರೀಯವರು ಈಶ್ವರಪ್ಪ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಯಾರು ಅಂತ ಗೊತ್ತಿಲ್ವಂತೆ? ಗೊತ್ತಿಲ್ಲ ಅಂದ್ರೆ ಫೋಟೋದಲ್ಲಿ ಇರುತ್ತಿದ್ದರಾ?” ಎಂದು ಪ್ರಶ್ನಿಸಿದ್ದಾರೆ.

“ನಾನು ಪ್ರಗ್ನೆಂಟ್‌ ಇದ್ದಾಗ ಬಿಪಿ ಇತ್ತು. ನಾನು ಟೆನ್ಷನ್‌ ಮಾಡಿಕೊಳ್ಳುತ್ತೇನೆ ಅಂತ ನನ್ನ ಗಂಡ ನನ್ನೊಂದಿಗೆ ಏನನ್ನೂ ಹೇಳಿಕೊಳ್ಳುತ್ತಿರಲಿಲ್ಲ. 40 ಪರ್ಸೆಂಟ್‌ ಲಂಚ ಕೇಳ್ತಾರೆ ಅನ್ನೋ ವಿಷಯ ಮಾತ್ರ ಹೇಳುತ್ತಿದ್ದರು” ಎಂದು ತಿಳಿಸಿದ್ದಾರೆ.

“ಕಾಮಗಾರಿ ಮಾಡುತ್ತಿದ್ದನ್ನು ನಾವೇ ನಮ್ಮ ಕಣ್ಣಾರೆ ನೋಡಿದ್ದೇವೆ. ನನ್ನ ಗಂಡ ಸರಿಯಾಗಿ ಊಟ ಕೂಡ ಮಾಡುತ್ತಿರಲಿಲ್ಲ. ಮಧ್ಯಾಹ್ನ ಊಟ ಮಾಡದೆ ರಾತ್ರಿ ಮಾತ್ರ ಮಾಡುತ್ತಿದ್ದರು. ಅಷ್ಟು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಅದಕ್ಕೆ ಪ್ರತಿಫಲ ಸಿಗದಿದ್ದರೆ? ಯಾರು ಅಂತ ಗೊತ್ತೇ ಇರಲಿಲ್ಲವಂತೆ ಇವರಿಗೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಕೆಲಸ ಎಲ್ಲ ಮಾಡೋಕೆ ನಮಗೇನು ದುಡ್ಡು ಹೆಚ್ಚಾಗಿತ್ತಾ? ಸಾಲ ತಂದು ಕೆಲಸ ಮಾಡಿದ್ದಾರೆ. ನಮಗೆ ಗೊತ್ತಿಲ್ಲ ಅಂದ್ರೆ ಏನು ಹೇಳೋದು? ಇಂಥವರು ರಾಜಕಾರಣ ಮಾಡಬೇಕಾ? ಮಾಡಿದ ಕೆಲಸಕ್ಕೆ ಪ್ರತಿಫಲ ಕೊಡಲಿಲ್ಲ ಅಂದ್ರೆ ಏನ್‌ ಸಾರ್‌? ಇಂಥವರು ಅಧಿಕಾರದಲ್ಲಿದ್ದರೆ ಮುಗಿಯಿತು, ದೇಶ ಸಮಾಧಿನೇ. ನಮ್ಮ ಸಂಸಾರನಂತೂ ಸಮಾಧಿ ಮಾಡಿದ್ರು. ಇನ್ನು ದೇಶದ ಕಥೆ ಏನಿದೆಯೋ ಯಾರಿಗೆ ಗೊತ್ತು?” ಎಂದು ಪ್ರಶ್ನಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಈ ಹಿಂದೆ ಸಚಿವ ಈಶ್ವರಪ್ಪನವರನ್ನು ಭೇಟಿಯಾಗಿದ್ದರೆಂದು ಹೇಳಲಾಗುತ್ತಿರುವ ಈ ಫೋಟೋ ವೈರಲ್ ಆಗುತ್ತಿದೆ.

“ಕೆಲಸಕ್ಕೆ ಹೋಗುವಾಗ ಖುಷಿಯಿಂದ ಹೋಗುತ್ತಿದ್ದರು. ಟಿಫನ್‌ ಸಹಿತ ಬೇಡ, ಅಲ್ಲೇ ಎಲ್ಲಾದರೂ ತಿಂತೀನಿ ಅನ್ನುತ್ತಿದ್ದರು. ಅಷ್ಟು ಅವಸರ. ಬೆಳಿಗ್ಗೆ 6 ಗಂಟೆಗೆ ಎದ್ದು ಕೆಲಸಕ್ಕೆಂದು ಹೋದರೆ ರಾತ್ರಿ 11 ಗಂಟೆಯವರೆಗೂ ಬರುತ್ತಿರಲಿಲ್ಲ. ಕೆಲಸ ಚೆನ್ನಾಗಿ ನಡೆಯುತ್ತಿದೆ. ಸ್ವಲ್ಪ ರೆಸ್ಟ್ ತಗೊಳ್ಳಿ ಅನ್ನುತ್ತಿದ್ದೆ. ಎಲ್ಲಾ ಕಾಮಗಾರಿ ಪೂರ್ತಿ ಮಾಡಬೇಕು ಅನ್ನುತ್ತಿದ್ದರು. ಅಂಥವರು ಯಾರೆಂದು ಇವರಿಗೆ ಗೊತ್ತಿಲ್ಲವಂತೆ. ಅವರದ್ದು ಒಂದು ಜನ್ಮನಾ? ನಾಯಿ ಜನ್ಮ” ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಜಯಶ್ರೀ.

“ಆರ್ಡರ್‌ ಪಾಸ್ ಮಾಡಿ ಅಂತ ಶಿವಮೊಗ್ಗಕ್ಕೆ ನನ್ನ ಗಂಡ ಹೋಗಿದ್ದರು. ಆರು ದಿನ ಅಲ್ಲೇ ಇದ್ದರು. ಬೆಳಿಗ್ಗೆ ಹೋದ್ರೆ ಸಾಯಂಕಾಲ ಬಾ, ಸಾಯಂಕಾಲ ಹೋದರೆ ಬೆಳಿಗ್ಗೆ ಬಾ ಎಂದು ಸಚಿವರು ಹೇಳುತ್ತಿದ್ದರು ಎಂದು ನನಗೆ ಕರೆ ಮಾಡಿ ತಿಳಿಸಿದ್ದರು. ಬರೀ ಆಟ ಆಡಿಸೋದೆ ಆಯ್ತು” ಎಂದು ನೋವು ತೋಡಿಕೊಂಡಿದ್ದಾರೆ.

“ಎಲ್ಲ ಕೆಲಸ ಮಾಡಿಸಿ, ನಾನಿದ್ದೀನಿ ಅಂದ್ರು. ಮಿನಿಸ್ಟರ್ ಹೇಳಿದ ಮೇಲೆ ಯಾರಾದರೂ ನಂಬುತ್ತಾರೆ ಅಲ್ವಾ ಸರ್‌? ಅವರ ಕೈಯಲ್ಲೇ ಆಡಳಿತ ಇರುತ್ತೆ. ನಂಬಿಕೆ ಇಟ್ಟು ಕೆಲಸ ಮಾಡಿದರೆ ನಂಬಿಕೆ ದ್ರೋಹ ಮಾಡೋದಾ? ನನ್ನ ಸಂಸಾರವಂತೂ ಸಮಾಧೀನೆ. ಮದುವೆಯಾಗಿ ಮೂರು ವರ್ಷ ಆಗಿಲ್ಲ. ಎರಡು ವರ್ಷದ ಮಗು ಇದೆ. ಹೇಗೆ ಸಮಾಧಾನ ಮಾಡಿಕೊಳ್ಳಲಿ ನಾನು?” ಎಂದು ಪ್ರಶ್ನಿಸಿದ್ದಾರೆ.

“ಕೈ ಸಾಲ ಎಲ್ಲ ಮಾಡಿಕೊಂಡಿದ್ದಾರೆ. ನನ್ನ ಎರಡು ಸರ, ಬಳೆ ಎಲ್ಲ ಒತ್ತೆ ಇಟ್ಟಿದ್ದಾರೆ. ಇಲ್ಲೇ ಹೋಗಿ ಬರ್ತೀನಿ ಅಂತ ಉಡುಪಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶ್ರೀಮಾನ್ ನರೇಂದ್ರ ಮೋದಿಯವರು… ನ ಖಾಯೇಗಾ… ನ ಖಿಲಾಯೆಗಾ ಅಂದಿದ್ದು ಬರೀ ಜನಗಳನ್ನ ಮೆಚ್ಚಿಸಗೊಸ್ಕರ್…. ಅಕ್ಕ ಪಕ್ಕದಲ್ಲಿರೋರಿಗೆ ತಿನ್ನಲು ಅವಕಾಶ ಮಾಡಿಕೊಟ್ಟಿದ್ದರು…..

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...