Homeಕರ್ನಾಟಕಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಸಂತೋಷ್ ಯಾರು ಅಂತ ಗೊತ್ತಿಲ್ವಂತೆ?”

- Advertisement -
- Advertisement -

‘‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಟಿ.ವಿ.9 ಕನ್ನಡ ಮಾಧ್ಯಮದೊಂದಿಗೆ ಅಳುತ್ತಾ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ಜಯಶ್ರೀ.

40 ಪರ್ಸೆಂಟ್‌ ಕಮಿಷನ್‌ಗಾಗಿ ಸಚಿವ ಕೆ.ಎಸ್.ಈಶ್ವರಪ್ಪನವರು ಪೀಡಿಸುತ್ತಿದ್ದರು ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಈಶ್ವರಪ್ಪನವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘ಸಂತೋಷ್ ಪಾಟೀಲ್‌ ಯಾರೆಂದೇ ಗೊತ್ತಿಲ್ಲ’ ಎಂದಿರುವುದು ನೋವಿನ ಕಡಲಲ್ಲಿರುವ ಕುಟುಂಬಕ್ಕೆ ಮತ್ತಷ್ಟು ಆಘಾತ ತಂದಿದೆ. ಮುಡುಗಟ್ಟಿದ ಶೋಕದಲ್ಲೇ ಮಾಧ್ಯಮದೊಂದಿಗೆ ಮಾತನಾಡಿರುವ ಸಂತೋಷ್‌ ಪತ್ನಿ ಜಯಶ್ರೀಯವರು ಈಶ್ವರಪ್ಪ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಯಾರು ಅಂತ ಗೊತ್ತಿಲ್ವಂತೆ? ಗೊತ್ತಿಲ್ಲ ಅಂದ್ರೆ ಫೋಟೋದಲ್ಲಿ ಇರುತ್ತಿದ್ದರಾ?” ಎಂದು ಪ್ರಶ್ನಿಸಿದ್ದಾರೆ.

“ನಾನು ಪ್ರಗ್ನೆಂಟ್‌ ಇದ್ದಾಗ ಬಿಪಿ ಇತ್ತು. ನಾನು ಟೆನ್ಷನ್‌ ಮಾಡಿಕೊಳ್ಳುತ್ತೇನೆ ಅಂತ ನನ್ನ ಗಂಡ ನನ್ನೊಂದಿಗೆ ಏನನ್ನೂ ಹೇಳಿಕೊಳ್ಳುತ್ತಿರಲಿಲ್ಲ. 40 ಪರ್ಸೆಂಟ್‌ ಲಂಚ ಕೇಳ್ತಾರೆ ಅನ್ನೋ ವಿಷಯ ಮಾತ್ರ ಹೇಳುತ್ತಿದ್ದರು” ಎಂದು ತಿಳಿಸಿದ್ದಾರೆ.

“ಕಾಮಗಾರಿ ಮಾಡುತ್ತಿದ್ದನ್ನು ನಾವೇ ನಮ್ಮ ಕಣ್ಣಾರೆ ನೋಡಿದ್ದೇವೆ. ನನ್ನ ಗಂಡ ಸರಿಯಾಗಿ ಊಟ ಕೂಡ ಮಾಡುತ್ತಿರಲಿಲ್ಲ. ಮಧ್ಯಾಹ್ನ ಊಟ ಮಾಡದೆ ರಾತ್ರಿ ಮಾತ್ರ ಮಾಡುತ್ತಿದ್ದರು. ಅಷ್ಟು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಅದಕ್ಕೆ ಪ್ರತಿಫಲ ಸಿಗದಿದ್ದರೆ? ಯಾರು ಅಂತ ಗೊತ್ತೇ ಇರಲಿಲ್ಲವಂತೆ ಇವರಿಗೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಕೆಲಸ ಎಲ್ಲ ಮಾಡೋಕೆ ನಮಗೇನು ದುಡ್ಡು ಹೆಚ್ಚಾಗಿತ್ತಾ? ಸಾಲ ತಂದು ಕೆಲಸ ಮಾಡಿದ್ದಾರೆ. ನಮಗೆ ಗೊತ್ತಿಲ್ಲ ಅಂದ್ರೆ ಏನು ಹೇಳೋದು? ಇಂಥವರು ರಾಜಕಾರಣ ಮಾಡಬೇಕಾ? ಮಾಡಿದ ಕೆಲಸಕ್ಕೆ ಪ್ರತಿಫಲ ಕೊಡಲಿಲ್ಲ ಅಂದ್ರೆ ಏನ್‌ ಸಾರ್‌? ಇಂಥವರು ಅಧಿಕಾರದಲ್ಲಿದ್ದರೆ ಮುಗಿಯಿತು, ದೇಶ ಸಮಾಧಿನೇ. ನಮ್ಮ ಸಂಸಾರನಂತೂ ಸಮಾಧಿ ಮಾಡಿದ್ರು. ಇನ್ನು ದೇಶದ ಕಥೆ ಏನಿದೆಯೋ ಯಾರಿಗೆ ಗೊತ್ತು?” ಎಂದು ಪ್ರಶ್ನಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಈ ಹಿಂದೆ ಸಚಿವ ಈಶ್ವರಪ್ಪನವರನ್ನು ಭೇಟಿಯಾಗಿದ್ದರೆಂದು ಹೇಳಲಾಗುತ್ತಿರುವ ಈ ಫೋಟೋ ವೈರಲ್ ಆಗುತ್ತಿದೆ.

“ಕೆಲಸಕ್ಕೆ ಹೋಗುವಾಗ ಖುಷಿಯಿಂದ ಹೋಗುತ್ತಿದ್ದರು. ಟಿಫನ್‌ ಸಹಿತ ಬೇಡ, ಅಲ್ಲೇ ಎಲ್ಲಾದರೂ ತಿಂತೀನಿ ಅನ್ನುತ್ತಿದ್ದರು. ಅಷ್ಟು ಅವಸರ. ಬೆಳಿಗ್ಗೆ 6 ಗಂಟೆಗೆ ಎದ್ದು ಕೆಲಸಕ್ಕೆಂದು ಹೋದರೆ ರಾತ್ರಿ 11 ಗಂಟೆಯವರೆಗೂ ಬರುತ್ತಿರಲಿಲ್ಲ. ಕೆಲಸ ಚೆನ್ನಾಗಿ ನಡೆಯುತ್ತಿದೆ. ಸ್ವಲ್ಪ ರೆಸ್ಟ್ ತಗೊಳ್ಳಿ ಅನ್ನುತ್ತಿದ್ದೆ. ಎಲ್ಲಾ ಕಾಮಗಾರಿ ಪೂರ್ತಿ ಮಾಡಬೇಕು ಅನ್ನುತ್ತಿದ್ದರು. ಅಂಥವರು ಯಾರೆಂದು ಇವರಿಗೆ ಗೊತ್ತಿಲ್ಲವಂತೆ. ಅವರದ್ದು ಒಂದು ಜನ್ಮನಾ? ನಾಯಿ ಜನ್ಮ” ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಜಯಶ್ರೀ.

“ಆರ್ಡರ್‌ ಪಾಸ್ ಮಾಡಿ ಅಂತ ಶಿವಮೊಗ್ಗಕ್ಕೆ ನನ್ನ ಗಂಡ ಹೋಗಿದ್ದರು. ಆರು ದಿನ ಅಲ್ಲೇ ಇದ್ದರು. ಬೆಳಿಗ್ಗೆ ಹೋದ್ರೆ ಸಾಯಂಕಾಲ ಬಾ, ಸಾಯಂಕಾಲ ಹೋದರೆ ಬೆಳಿಗ್ಗೆ ಬಾ ಎಂದು ಸಚಿವರು ಹೇಳುತ್ತಿದ್ದರು ಎಂದು ನನಗೆ ಕರೆ ಮಾಡಿ ತಿಳಿಸಿದ್ದರು. ಬರೀ ಆಟ ಆಡಿಸೋದೆ ಆಯ್ತು” ಎಂದು ನೋವು ತೋಡಿಕೊಂಡಿದ್ದಾರೆ.

“ಎಲ್ಲ ಕೆಲಸ ಮಾಡಿಸಿ, ನಾನಿದ್ದೀನಿ ಅಂದ್ರು. ಮಿನಿಸ್ಟರ್ ಹೇಳಿದ ಮೇಲೆ ಯಾರಾದರೂ ನಂಬುತ್ತಾರೆ ಅಲ್ವಾ ಸರ್‌? ಅವರ ಕೈಯಲ್ಲೇ ಆಡಳಿತ ಇರುತ್ತೆ. ನಂಬಿಕೆ ಇಟ್ಟು ಕೆಲಸ ಮಾಡಿದರೆ ನಂಬಿಕೆ ದ್ರೋಹ ಮಾಡೋದಾ? ನನ್ನ ಸಂಸಾರವಂತೂ ಸಮಾಧೀನೆ. ಮದುವೆಯಾಗಿ ಮೂರು ವರ್ಷ ಆಗಿಲ್ಲ. ಎರಡು ವರ್ಷದ ಮಗು ಇದೆ. ಹೇಗೆ ಸಮಾಧಾನ ಮಾಡಿಕೊಳ್ಳಲಿ ನಾನು?” ಎಂದು ಪ್ರಶ್ನಿಸಿದ್ದಾರೆ.

“ಕೈ ಸಾಲ ಎಲ್ಲ ಮಾಡಿಕೊಂಡಿದ್ದಾರೆ. ನನ್ನ ಎರಡು ಸರ, ಬಳೆ ಎಲ್ಲ ಒತ್ತೆ ಇಟ್ಟಿದ್ದಾರೆ. ಇಲ್ಲೇ ಹೋಗಿ ಬರ್ತೀನಿ ಅಂತ ಉಡುಪಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶ್ರೀಮಾನ್ ನರೇಂದ್ರ ಮೋದಿಯವರು… ನ ಖಾಯೇಗಾ… ನ ಖಿಲಾಯೆಗಾ ಅಂದಿದ್ದು ಬರೀ ಜನಗಳನ್ನ ಮೆಚ್ಚಿಸಗೊಸ್ಕರ್…. ಅಕ್ಕ ಪಕ್ಕದಲ್ಲಿರೋರಿಗೆ ತಿನ್ನಲು ಅವಕಾಶ ಮಾಡಿಕೊಟ್ಟಿದ್ದರು…..

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...