Homeಕರ್ನಾಟಕಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಸಂತೋಷ್ ಯಾರು ಅಂತ ಗೊತ್ತಿಲ್ವಂತೆ?”

- Advertisement -
- Advertisement -

‘‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಟಿ.ವಿ.9 ಕನ್ನಡ ಮಾಧ್ಯಮದೊಂದಿಗೆ ಅಳುತ್ತಾ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ಜಯಶ್ರೀ.

40 ಪರ್ಸೆಂಟ್‌ ಕಮಿಷನ್‌ಗಾಗಿ ಸಚಿವ ಕೆ.ಎಸ್.ಈಶ್ವರಪ್ಪನವರು ಪೀಡಿಸುತ್ತಿದ್ದರು ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಈಶ್ವರಪ್ಪನವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘ಸಂತೋಷ್ ಪಾಟೀಲ್‌ ಯಾರೆಂದೇ ಗೊತ್ತಿಲ್ಲ’ ಎಂದಿರುವುದು ನೋವಿನ ಕಡಲಲ್ಲಿರುವ ಕುಟುಂಬಕ್ಕೆ ಮತ್ತಷ್ಟು ಆಘಾತ ತಂದಿದೆ. ಮುಡುಗಟ್ಟಿದ ಶೋಕದಲ್ಲೇ ಮಾಧ್ಯಮದೊಂದಿಗೆ ಮಾತನಾಡಿರುವ ಸಂತೋಷ್‌ ಪತ್ನಿ ಜಯಶ್ರೀಯವರು ಈಶ್ವರಪ್ಪ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಯಾರು ಅಂತ ಗೊತ್ತಿಲ್ವಂತೆ? ಗೊತ್ತಿಲ್ಲ ಅಂದ್ರೆ ಫೋಟೋದಲ್ಲಿ ಇರುತ್ತಿದ್ದರಾ?” ಎಂದು ಪ್ರಶ್ನಿಸಿದ್ದಾರೆ.

“ನಾನು ಪ್ರಗ್ನೆಂಟ್‌ ಇದ್ದಾಗ ಬಿಪಿ ಇತ್ತು. ನಾನು ಟೆನ್ಷನ್‌ ಮಾಡಿಕೊಳ್ಳುತ್ತೇನೆ ಅಂತ ನನ್ನ ಗಂಡ ನನ್ನೊಂದಿಗೆ ಏನನ್ನೂ ಹೇಳಿಕೊಳ್ಳುತ್ತಿರಲಿಲ್ಲ. 40 ಪರ್ಸೆಂಟ್‌ ಲಂಚ ಕೇಳ್ತಾರೆ ಅನ್ನೋ ವಿಷಯ ಮಾತ್ರ ಹೇಳುತ್ತಿದ್ದರು” ಎಂದು ತಿಳಿಸಿದ್ದಾರೆ.

“ಕಾಮಗಾರಿ ಮಾಡುತ್ತಿದ್ದನ್ನು ನಾವೇ ನಮ್ಮ ಕಣ್ಣಾರೆ ನೋಡಿದ್ದೇವೆ. ನನ್ನ ಗಂಡ ಸರಿಯಾಗಿ ಊಟ ಕೂಡ ಮಾಡುತ್ತಿರಲಿಲ್ಲ. ಮಧ್ಯಾಹ್ನ ಊಟ ಮಾಡದೆ ರಾತ್ರಿ ಮಾತ್ರ ಮಾಡುತ್ತಿದ್ದರು. ಅಷ್ಟು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಅದಕ್ಕೆ ಪ್ರತಿಫಲ ಸಿಗದಿದ್ದರೆ? ಯಾರು ಅಂತ ಗೊತ್ತೇ ಇರಲಿಲ್ಲವಂತೆ ಇವರಿಗೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಕೆಲಸ ಎಲ್ಲ ಮಾಡೋಕೆ ನಮಗೇನು ದುಡ್ಡು ಹೆಚ್ಚಾಗಿತ್ತಾ? ಸಾಲ ತಂದು ಕೆಲಸ ಮಾಡಿದ್ದಾರೆ. ನಮಗೆ ಗೊತ್ತಿಲ್ಲ ಅಂದ್ರೆ ಏನು ಹೇಳೋದು? ಇಂಥವರು ರಾಜಕಾರಣ ಮಾಡಬೇಕಾ? ಮಾಡಿದ ಕೆಲಸಕ್ಕೆ ಪ್ರತಿಫಲ ಕೊಡಲಿಲ್ಲ ಅಂದ್ರೆ ಏನ್‌ ಸಾರ್‌? ಇಂಥವರು ಅಧಿಕಾರದಲ್ಲಿದ್ದರೆ ಮುಗಿಯಿತು, ದೇಶ ಸಮಾಧಿನೇ. ನಮ್ಮ ಸಂಸಾರನಂತೂ ಸಮಾಧಿ ಮಾಡಿದ್ರು. ಇನ್ನು ದೇಶದ ಕಥೆ ಏನಿದೆಯೋ ಯಾರಿಗೆ ಗೊತ್ತು?” ಎಂದು ಪ್ರಶ್ನಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಈ ಹಿಂದೆ ಸಚಿವ ಈಶ್ವರಪ್ಪನವರನ್ನು ಭೇಟಿಯಾಗಿದ್ದರೆಂದು ಹೇಳಲಾಗುತ್ತಿರುವ ಈ ಫೋಟೋ ವೈರಲ್ ಆಗುತ್ತಿದೆ.

“ಕೆಲಸಕ್ಕೆ ಹೋಗುವಾಗ ಖುಷಿಯಿಂದ ಹೋಗುತ್ತಿದ್ದರು. ಟಿಫನ್‌ ಸಹಿತ ಬೇಡ, ಅಲ್ಲೇ ಎಲ್ಲಾದರೂ ತಿಂತೀನಿ ಅನ್ನುತ್ತಿದ್ದರು. ಅಷ್ಟು ಅವಸರ. ಬೆಳಿಗ್ಗೆ 6 ಗಂಟೆಗೆ ಎದ್ದು ಕೆಲಸಕ್ಕೆಂದು ಹೋದರೆ ರಾತ್ರಿ 11 ಗಂಟೆಯವರೆಗೂ ಬರುತ್ತಿರಲಿಲ್ಲ. ಕೆಲಸ ಚೆನ್ನಾಗಿ ನಡೆಯುತ್ತಿದೆ. ಸ್ವಲ್ಪ ರೆಸ್ಟ್ ತಗೊಳ್ಳಿ ಅನ್ನುತ್ತಿದ್ದೆ. ಎಲ್ಲಾ ಕಾಮಗಾರಿ ಪೂರ್ತಿ ಮಾಡಬೇಕು ಅನ್ನುತ್ತಿದ್ದರು. ಅಂಥವರು ಯಾರೆಂದು ಇವರಿಗೆ ಗೊತ್ತಿಲ್ಲವಂತೆ. ಅವರದ್ದು ಒಂದು ಜನ್ಮನಾ? ನಾಯಿ ಜನ್ಮ” ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಜಯಶ್ರೀ.

“ಆರ್ಡರ್‌ ಪಾಸ್ ಮಾಡಿ ಅಂತ ಶಿವಮೊಗ್ಗಕ್ಕೆ ನನ್ನ ಗಂಡ ಹೋಗಿದ್ದರು. ಆರು ದಿನ ಅಲ್ಲೇ ಇದ್ದರು. ಬೆಳಿಗ್ಗೆ ಹೋದ್ರೆ ಸಾಯಂಕಾಲ ಬಾ, ಸಾಯಂಕಾಲ ಹೋದರೆ ಬೆಳಿಗ್ಗೆ ಬಾ ಎಂದು ಸಚಿವರು ಹೇಳುತ್ತಿದ್ದರು ಎಂದು ನನಗೆ ಕರೆ ಮಾಡಿ ತಿಳಿಸಿದ್ದರು. ಬರೀ ಆಟ ಆಡಿಸೋದೆ ಆಯ್ತು” ಎಂದು ನೋವು ತೋಡಿಕೊಂಡಿದ್ದಾರೆ.

“ಎಲ್ಲ ಕೆಲಸ ಮಾಡಿಸಿ, ನಾನಿದ್ದೀನಿ ಅಂದ್ರು. ಮಿನಿಸ್ಟರ್ ಹೇಳಿದ ಮೇಲೆ ಯಾರಾದರೂ ನಂಬುತ್ತಾರೆ ಅಲ್ವಾ ಸರ್‌? ಅವರ ಕೈಯಲ್ಲೇ ಆಡಳಿತ ಇರುತ್ತೆ. ನಂಬಿಕೆ ಇಟ್ಟು ಕೆಲಸ ಮಾಡಿದರೆ ನಂಬಿಕೆ ದ್ರೋಹ ಮಾಡೋದಾ? ನನ್ನ ಸಂಸಾರವಂತೂ ಸಮಾಧೀನೆ. ಮದುವೆಯಾಗಿ ಮೂರು ವರ್ಷ ಆಗಿಲ್ಲ. ಎರಡು ವರ್ಷದ ಮಗು ಇದೆ. ಹೇಗೆ ಸಮಾಧಾನ ಮಾಡಿಕೊಳ್ಳಲಿ ನಾನು?” ಎಂದು ಪ್ರಶ್ನಿಸಿದ್ದಾರೆ.

“ಕೈ ಸಾಲ ಎಲ್ಲ ಮಾಡಿಕೊಂಡಿದ್ದಾರೆ. ನನ್ನ ಎರಡು ಸರ, ಬಳೆ ಎಲ್ಲ ಒತ್ತೆ ಇಟ್ಟಿದ್ದಾರೆ. ಇಲ್ಲೇ ಹೋಗಿ ಬರ್ತೀನಿ ಅಂತ ಉಡುಪಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶ್ರೀಮಾನ್ ನರೇಂದ್ರ ಮೋದಿಯವರು… ನ ಖಾಯೇಗಾ… ನ ಖಿಲಾಯೆಗಾ ಅಂದಿದ್ದು ಬರೀ ಜನಗಳನ್ನ ಮೆಚ್ಚಿಸಗೊಸ್ಕರ್…. ಅಕ್ಕ ಪಕ್ಕದಲ್ಲಿರೋರಿಗೆ ತಿನ್ನಲು ಅವಕಾಶ ಮಾಡಿಕೊಟ್ಟಿದ್ದರು…..

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....