Homeಕರ್ನಾಟಕಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಸಂತೋಷ್ ಯಾರು ಅಂತ ಗೊತ್ತಿಲ್ವಂತೆ?”

- Advertisement -
- Advertisement -

‘‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಟಿ.ವಿ.9 ಕನ್ನಡ ಮಾಧ್ಯಮದೊಂದಿಗೆ ಅಳುತ್ತಾ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ಜಯಶ್ರೀ.

40 ಪರ್ಸೆಂಟ್‌ ಕಮಿಷನ್‌ಗಾಗಿ ಸಚಿವ ಕೆ.ಎಸ್.ಈಶ್ವರಪ್ಪನವರು ಪೀಡಿಸುತ್ತಿದ್ದರು ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಈಶ್ವರಪ್ಪನವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘ಸಂತೋಷ್ ಪಾಟೀಲ್‌ ಯಾರೆಂದೇ ಗೊತ್ತಿಲ್ಲ’ ಎಂದಿರುವುದು ನೋವಿನ ಕಡಲಲ್ಲಿರುವ ಕುಟುಂಬಕ್ಕೆ ಮತ್ತಷ್ಟು ಆಘಾತ ತಂದಿದೆ. ಮುಡುಗಟ್ಟಿದ ಶೋಕದಲ್ಲೇ ಮಾಧ್ಯಮದೊಂದಿಗೆ ಮಾತನಾಡಿರುವ ಸಂತೋಷ್‌ ಪತ್ನಿ ಜಯಶ್ರೀಯವರು ಈಶ್ವರಪ್ಪ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ಸಂಸಾರವನ್ನೇ ಹಾಳು ಮಾಡಿಬಿಟ್ಟರು ಇವರು. ಮದುವೆಯಾಗಿ ಮೂರು ವರ್ಷ ಆಗಿದೆ ಸಾರ್‌. ಎರಡು ವರ್ಷದ ಮಗು ಇದೆ. ನನ್ನ ಗತಿ ಏನಿವಾಗ? ಯಾರು ಅಂತ ಗೊತ್ತಿಲ್ವಂತೆ? ಗೊತ್ತಿಲ್ಲ ಅಂದ್ರೆ ಫೋಟೋದಲ್ಲಿ ಇರುತ್ತಿದ್ದರಾ?” ಎಂದು ಪ್ರಶ್ನಿಸಿದ್ದಾರೆ.

“ನಾನು ಪ್ರಗ್ನೆಂಟ್‌ ಇದ್ದಾಗ ಬಿಪಿ ಇತ್ತು. ನಾನು ಟೆನ್ಷನ್‌ ಮಾಡಿಕೊಳ್ಳುತ್ತೇನೆ ಅಂತ ನನ್ನ ಗಂಡ ನನ್ನೊಂದಿಗೆ ಏನನ್ನೂ ಹೇಳಿಕೊಳ್ಳುತ್ತಿರಲಿಲ್ಲ. 40 ಪರ್ಸೆಂಟ್‌ ಲಂಚ ಕೇಳ್ತಾರೆ ಅನ್ನೋ ವಿಷಯ ಮಾತ್ರ ಹೇಳುತ್ತಿದ್ದರು” ಎಂದು ತಿಳಿಸಿದ್ದಾರೆ.

“ಕಾಮಗಾರಿ ಮಾಡುತ್ತಿದ್ದನ್ನು ನಾವೇ ನಮ್ಮ ಕಣ್ಣಾರೆ ನೋಡಿದ್ದೇವೆ. ನನ್ನ ಗಂಡ ಸರಿಯಾಗಿ ಊಟ ಕೂಡ ಮಾಡುತ್ತಿರಲಿಲ್ಲ. ಮಧ್ಯಾಹ್ನ ಊಟ ಮಾಡದೆ ರಾತ್ರಿ ಮಾತ್ರ ಮಾಡುತ್ತಿದ್ದರು. ಅಷ್ಟು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಅದಕ್ಕೆ ಪ್ರತಿಫಲ ಸಿಗದಿದ್ದರೆ? ಯಾರು ಅಂತ ಗೊತ್ತೇ ಇರಲಿಲ್ಲವಂತೆ ಇವರಿಗೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಕೆಲಸ ಎಲ್ಲ ಮಾಡೋಕೆ ನಮಗೇನು ದುಡ್ಡು ಹೆಚ್ಚಾಗಿತ್ತಾ? ಸಾಲ ತಂದು ಕೆಲಸ ಮಾಡಿದ್ದಾರೆ. ನಮಗೆ ಗೊತ್ತಿಲ್ಲ ಅಂದ್ರೆ ಏನು ಹೇಳೋದು? ಇಂಥವರು ರಾಜಕಾರಣ ಮಾಡಬೇಕಾ? ಮಾಡಿದ ಕೆಲಸಕ್ಕೆ ಪ್ರತಿಫಲ ಕೊಡಲಿಲ್ಲ ಅಂದ್ರೆ ಏನ್‌ ಸಾರ್‌? ಇಂಥವರು ಅಧಿಕಾರದಲ್ಲಿದ್ದರೆ ಮುಗಿಯಿತು, ದೇಶ ಸಮಾಧಿನೇ. ನಮ್ಮ ಸಂಸಾರನಂತೂ ಸಮಾಧಿ ಮಾಡಿದ್ರು. ಇನ್ನು ದೇಶದ ಕಥೆ ಏನಿದೆಯೋ ಯಾರಿಗೆ ಗೊತ್ತು?” ಎಂದು ಪ್ರಶ್ನಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಈ ಹಿಂದೆ ಸಚಿವ ಈಶ್ವರಪ್ಪನವರನ್ನು ಭೇಟಿಯಾಗಿದ್ದರೆಂದು ಹೇಳಲಾಗುತ್ತಿರುವ ಈ ಫೋಟೋ ವೈರಲ್ ಆಗುತ್ತಿದೆ.

“ಕೆಲಸಕ್ಕೆ ಹೋಗುವಾಗ ಖುಷಿಯಿಂದ ಹೋಗುತ್ತಿದ್ದರು. ಟಿಫನ್‌ ಸಹಿತ ಬೇಡ, ಅಲ್ಲೇ ಎಲ್ಲಾದರೂ ತಿಂತೀನಿ ಅನ್ನುತ್ತಿದ್ದರು. ಅಷ್ಟು ಅವಸರ. ಬೆಳಿಗ್ಗೆ 6 ಗಂಟೆಗೆ ಎದ್ದು ಕೆಲಸಕ್ಕೆಂದು ಹೋದರೆ ರಾತ್ರಿ 11 ಗಂಟೆಯವರೆಗೂ ಬರುತ್ತಿರಲಿಲ್ಲ. ಕೆಲಸ ಚೆನ್ನಾಗಿ ನಡೆಯುತ್ತಿದೆ. ಸ್ವಲ್ಪ ರೆಸ್ಟ್ ತಗೊಳ್ಳಿ ಅನ್ನುತ್ತಿದ್ದೆ. ಎಲ್ಲಾ ಕಾಮಗಾರಿ ಪೂರ್ತಿ ಮಾಡಬೇಕು ಅನ್ನುತ್ತಿದ್ದರು. ಅಂಥವರು ಯಾರೆಂದು ಇವರಿಗೆ ಗೊತ್ತಿಲ್ಲವಂತೆ. ಅವರದ್ದು ಒಂದು ಜನ್ಮನಾ? ನಾಯಿ ಜನ್ಮ” ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಜಯಶ್ರೀ.

“ಆರ್ಡರ್‌ ಪಾಸ್ ಮಾಡಿ ಅಂತ ಶಿವಮೊಗ್ಗಕ್ಕೆ ನನ್ನ ಗಂಡ ಹೋಗಿದ್ದರು. ಆರು ದಿನ ಅಲ್ಲೇ ಇದ್ದರು. ಬೆಳಿಗ್ಗೆ ಹೋದ್ರೆ ಸಾಯಂಕಾಲ ಬಾ, ಸಾಯಂಕಾಲ ಹೋದರೆ ಬೆಳಿಗ್ಗೆ ಬಾ ಎಂದು ಸಚಿವರು ಹೇಳುತ್ತಿದ್ದರು ಎಂದು ನನಗೆ ಕರೆ ಮಾಡಿ ತಿಳಿಸಿದ್ದರು. ಬರೀ ಆಟ ಆಡಿಸೋದೆ ಆಯ್ತು” ಎಂದು ನೋವು ತೋಡಿಕೊಂಡಿದ್ದಾರೆ.

“ಎಲ್ಲ ಕೆಲಸ ಮಾಡಿಸಿ, ನಾನಿದ್ದೀನಿ ಅಂದ್ರು. ಮಿನಿಸ್ಟರ್ ಹೇಳಿದ ಮೇಲೆ ಯಾರಾದರೂ ನಂಬುತ್ತಾರೆ ಅಲ್ವಾ ಸರ್‌? ಅವರ ಕೈಯಲ್ಲೇ ಆಡಳಿತ ಇರುತ್ತೆ. ನಂಬಿಕೆ ಇಟ್ಟು ಕೆಲಸ ಮಾಡಿದರೆ ನಂಬಿಕೆ ದ್ರೋಹ ಮಾಡೋದಾ? ನನ್ನ ಸಂಸಾರವಂತೂ ಸಮಾಧೀನೆ. ಮದುವೆಯಾಗಿ ಮೂರು ವರ್ಷ ಆಗಿಲ್ಲ. ಎರಡು ವರ್ಷದ ಮಗು ಇದೆ. ಹೇಗೆ ಸಮಾಧಾನ ಮಾಡಿಕೊಳ್ಳಲಿ ನಾನು?” ಎಂದು ಪ್ರಶ್ನಿಸಿದ್ದಾರೆ.

“ಕೈ ಸಾಲ ಎಲ್ಲ ಮಾಡಿಕೊಂಡಿದ್ದಾರೆ. ನನ್ನ ಎರಡು ಸರ, ಬಳೆ ಎಲ್ಲ ಒತ್ತೆ ಇಟ್ಟಿದ್ದಾರೆ. ಇಲ್ಲೇ ಹೋಗಿ ಬರ್ತೀನಿ ಅಂತ ಉಡುಪಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: 40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶ್ರೀಮಾನ್ ನರೇಂದ್ರ ಮೋದಿಯವರು… ನ ಖಾಯೇಗಾ… ನ ಖಿಲಾಯೆಗಾ ಅಂದಿದ್ದು ಬರೀ ಜನಗಳನ್ನ ಮೆಚ್ಚಿಸಗೊಸ್ಕರ್…. ಅಕ್ಕ ಪಕ್ಕದಲ್ಲಿರೋರಿಗೆ ತಿನ್ನಲು ಅವಕಾಶ ಮಾಡಿಕೊಟ್ಟಿದ್ದರು…..

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...