Homeಕರ್ನಾಟಕಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ: ಗೃಹ ಸಚಿವರು ಹಣ ಪಡೆದಿದ್ದರು ಎಂಬ ಆರೋಪಕ್ಕೆ ಆಗರ ಜ್ಞಾನೇಂದ್ರ...

ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ: ಗೃಹ ಸಚಿವರು ಹಣ ಪಡೆದಿದ್ದರು ಎಂಬ ಆರೋಪಕ್ಕೆ ಆಗರ ಜ್ಞಾನೇಂದ್ರ ಪ್ರತಿಕ್ರಿಯೆ

- Advertisement -
- Advertisement -

“ಸ್ಯಾಂಟ್ರೋ ರವಿ ಜೊತೆಗೆ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಮೊದಲಿನಿಂದಲೂ ಸಂಪರ್ಕದಲ್ಲಿದ್ದರಂತೆ, ಆತ ಗುಜರಾತಿನಲ್ಲಿರುವ ಬಗ್ಗೆ ಮಾಹಿತಿ ಪಡೆದು ಆತನನ್ನು ಸೆರೆಂಡರ್ ಮಾಡಿಸಲು ಸಚಿವರು ಗುಜರಾತ್ ಗೆ ಹೋಗಿದ್ದರು. ಅದೇ ರೀತಿ ಆತನಿಂದ ಸಚಿವರು ಸಾಕಷ್ಟು ಹಣ ಪಡೆದಿದ್ದಾರೆ” ಎನ್ನುವ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆ ಸಚಿವರೇ ಸ್ಪಷ್ಟೀಕರಣ ನೀಡಿದ್ದಾರೆ.

ಬೆಂಗಳೂರಿನ ಮಲೆನಾಡು ಮಿತ್ರ ವೃಂದ ಭಾನುವಾರ ರಾತ್ರಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, “ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸಮಾಜದ್ರೋಹಿಗಳೂ ಮತ್ತು ಪೀಡಕರಿಂದ ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ, ಬದುಕಲು ಇಚ್ಛಿಸುವುದಿಲ್ಲ” ಎಂದರು.

ಇದನ್ನೂ ಓದಿ: ಸ್ಯಾಂಟ್ರೋ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳು: ಗೃಹ ಸಚಿವ ಆರಗ ಜ್ಞಾನೇಂದ್ರ

ಇದೇ ವೇಳೆ ತಮ್ಮ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ತಳುಕು ಹಾಕಿ ಮಾತನಾಡುತ್ತಿರುವ ಕೆಲವು ನಾಯಕರ ಬಗ್ಗೆ ಪ್ರಸ್ತಾಪಿಸಿದ ಸಚಿವರು, “ನನ್ನ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಮತ್ತು ಕಾರ್ಯಕ್ರಮಗಳು, ಪಾರದರ್ಶಕವಾಗಿವೆ” ಎಂದು ತಿಳಿಸಿದರು.

“ಗುಜರಾತ್ ಪ್ರವಾಸದ ಸಂದರ್ಭದಲ್ಲಿ, ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು, ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿಗಳು ಮತ್ತು ಇತರ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಇದರ ಮುಂದುವರಿದ ಭಾಗವಾಗಿ ಶೀಘ್ರದಲ್ಲಿಯೇ ವಿಶ್ವವಿದ್ಯಾಲಯದ ಶಂಕುಸ್ಥಾಪನಾ ಕಾರ್ಯಕ್ರಮವೂ ನಡೆಯಲಿದೆ” ಎಂದರು.

ಗುಜರಾತ್ ಮುಖ್ಯಮಂತ್ರಿ ಭೂಪೆಂಧ್ರ ಭಾಯಿ ಪಟೇಲ್ ಅವರನ್ನು ಭೇಟಿ ಮಾಡಿದ್ದೇನೆ. ಎಲ್ಲವೂ ತೆರದ ಪುಸ್ತಕದಂತೆ ಇದೆ. ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ವ್ಯಕ್ತಿಯೊಬ್ಬರು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಪರೋಕ್ಷವಾಗಿ ಎಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದರು.

ಸ್ಯಾಂಟ್ರೋ ರವಿ ವಿರುದ್ಧದ ಆರೋಪಗಳ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ‘ಸ್ಯಾಂಟ್ರೋ’ ರವಿ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಐಡಿಗೆ ಸರ್ಕಾರ ನಿರ್ದೇಶಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಈ ಹಿಂದೆ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. “ಸ್ಯಾಂಟ್ರೋ ರವಿ ಪೊಲೀಸ್ ಇಲಾಖೆಯ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದನು, ಆತ ಪೊಲೀಸ್ ಅಧಿಕಾರಿಗಳ ಮೇಲೆ ತಾನು ಹೇಳಿದಂತೆ ಕೇಳಬೇಕು ಎನ್ನುವ ದರ್ಪ ತೋರಿಸುತ್ತಿದ್ದನು. ಅದಕ್ಕೆ ಕಾರಣವೇ ಈ ಗೃಹ ಸಚಿವರು ಮತ್ತೆ ಈ ಸರ್ಕಾರ. ಏಕೆಂದರೆ ಈ ಸಕಾರವೇ ಆತನ ಬೆಂಬಲಕ್ಕೆ ಇರುವಾಗ ಪೊಲೀಸ್ ಅಧಿಕಾರಿಗಳು ಸಹಜವಾಗಿ ಆತನ ಮಾತಿಗೆ ತಲೆಬಾಗುತ್ತಿದ್ದರು. ಕುಮಾರ ಕೃಪಾದಲ್ಲಿ ಈ ರವಿಯ ಕೆಲಸವಾದ್ರೂ ಏನು? ಈತನ ವ್ಯವಹಾರಗಳೆಲ್ಲಾ ಅಲ್ಲಿಯೇ ನಡೆಯುತ್ತಿದ್ದವು. ಸ್ಯಾಂಟ್ರೋ ರವಿ, ಸಚಿವರಿಗೆ ಹಣ ನೀಡುತ್ತಾನೆ” ಎಂದು ಗಂಭೀರ ಆರೋಪ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...