Homeಕರ್ನಾಟಕಚಾನೆಲ್ ಚಿತ್ರಾನ್ನ : ಮೌಢ್ಯ ತುಂಬುವ ಚಾನೆಲ್ಲುಗಳು ಮತ್ತು ವಾಸ್ತು ಪೀಡೆ ಚಂದ್ರಶೇಖರ್

ಚಾನೆಲ್ ಚಿತ್ರಾನ್ನ : ಮೌಢ್ಯ ತುಂಬುವ ಚಾನೆಲ್ಲುಗಳು ಮತ್ತು ವಾಸ್ತು ಪೀಡೆ ಚಂದ್ರಶೇಖರ್

ಬಾಗಲಕೋಟೆಯ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದಿ ಕಂಟ್ರಾಕ್ಟರ್ ಆಗಿದ್ದ ಈ ಮನುಷ್ಯ, ಮನೆ ಕಟ್ಟಿಸುವಾಗ ಆ ಮೂಲೆ, ಈ ಮೂಲೆ ಎಂದು ಜನ ವಿಚಾರಿಸುವುದನ್ನು ನೋಡಿ, ಅದನ್ನೇ ಒಂದು ದಂಧೆ ಮಾಡಿಕೊಂಡಿದ್ದಾನೆ.

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಹಳೆ ವಂಚನೆ, ಹೊಸ ವೇಷ!

‘ಸರಳ ವಾಸ್ತು’ವಿನ ಹೆಸರಲ್ಲಿ ಜನರನ್ನು ಮೌಢ್ಯಕ್ಕೆ ತಳ್ಳಿ, ಮನೆಗಳನ್ನೆಲ್ಲ ಮೂರಾಬಟ್ಟೆ ಮಾಡಿದ ವಾಸ್ತು ವಂಚಕ ಚಂದ್ರಶೇಖರ್ ‘ಗುರೂಜಿ’ ಈಗ ಹೊಸ ವೇಷ ತೊಟ್ಟು ಬಂದಿದ್ದಾನೆ. ಈಗಾತ ‘ಮಾನವಾಭಿವೃದ್ಧಿ ಗುರು’ ಅಂತೆ. ವೇಷವಷ್ಟೇ ಬದಲು, ಮತ್ತದೇ ವಂಚನೆ! ಈ ಸಲ ಸುವರ್ಣ ನ್ಯೂಸ್ ಎಂಬ ರಾಜೀವ್ ಚಂದ್ರಶೇಖರನ ಚಾನೆಲ್ಲು ಈ ವಂಚಕನ ಸಂಸ್ಥೆಯ ಪಾರ್ಟನರ್ ಎಂಬಂತೆ ಬೊಗಳೆ ಬಿಡುತ್ತ ಜನರನ್ನು ಬೋಳಿಸುತ್ತಲಿದೆ.

ಇವತ್ತು ರವಿವಾರ ಮುಂಜ್‍ಮುಂಜಾನೆ ಸುವರ್ಣ ನ್ಯೂಸ್ ಚಾನೆಲ್ಲಿನಲ್ಲಿ ಭೋಂಗು ಬಿಡುತ್ತಿದ್ದ ಸರಳ ವಾಸ್ತುವಿನ ಚಂದ್ರಶೇಖರ್ ಎಂಬ ಹೈಟೆಕ್ ವಂಚಕನನ್ನು ಕಂಡಾಗ ಆಶ್ಚರ್ಯವೇನೂ ಆಗಲಿಲ್ಲ. ಆದರೆ ಕೊಂಚ ಗಾಬರಿಯಾಗಿದ್ದು ಈತ ಹುಡುಕಿಕೊಂಡಿರುವ ಹೊಸ ವ್ಯಾಪಾರೀ ಮಾರ್ಗವನ್ನು ನೋಡಿದಾಗ….

ಈ ಕಾರ್ಯಕ್ರಮದ ಹೆಸರೇ ‘ಮಾನವಾಭಿವೃದ್ಧಿ ಗುರು’! ವಾವ್, ಹುಮನ್ ಡೆವೆಲಪ್ ಮೆಂಟ್ ಗುರು! ಕಳ್ಳ ನನ್ಮಗ ಅಂತ ಪ್ರೊಗ್ರಾಂ ನೋಡಿದರೆ, ಚಾನೆಲ್ಲಿನ ನಿರೂಪಕಿ ಮತ್ತು ಈ ವಾಸ್ತು ವಿಷ ಚಂದ್ರಶೇಖರ್ ಇಬ್ಬರೂ ಸೇರಿ ಜನರನ್ನು ಬಣ್ಣದ ಮಾತುಗಳಿಂದ ಬುಟ್ಟಿಗೆ ಹಾಕಿಕೊಳ್ಳುತ್ತಿದ್ದರು.

3 ಸ್ಟೆಪ್ಪು, 180 ದಿನ, 22 ಸಾವಿರ ಮುಂಡಾಮೋಚಿಂಗ್!

19 ವರ್ಷಗಳ ಕಾಲ ವಾಸ್ತು, ಸರಳ ವಾಸ್ತು ಹೆಸರಲ್ಲಿ ಜನರ ಮನೆ, ಕಚೇರಿಗಳಿಗೆ ಗತಿ ಕಾಣಿಸಿರುವ, ಅವರ ದೌರ್ಬಲ್ಯಗಳನ್ನು ಬಳಸಿಕೊಂಡು ಅವರಿಂದ ವಸೂಲಿ ಮಾಡಿರುವ ಚಂದ್ರಶೇಖರ್ ಈಗ ಹೊಸ ದಾರಿ ಕಂಡುಹಿಡಿದಿದ್ದಾನೆ. ಅದರ ಹೆಸರು ಮಾನವಾಭಿವೃದ್ಧಿ! ಕೇವಲ ಮೂರೇ ಹಂತಗಳಲ್ಲಿ ಈತ ರೈತರ ಸಮಸ್ಯೆಗಳನ್ನು, ನೌಕರರ ಆರ್ಥಿಕ ಸಂಕಟಗಳನ್ನು ಅಷ್ಟೇ ಅಲ್ಲ ಕ್ಯಾನ್ಸರ್ ಸೇರಿದಂತೆ ಇತರೆಲ್ಲ ರೋಗಿಗಳ ಆರೋಗ್ಯದ ಸಮಸ್ಯೆಗಳನ್ನು ಬಗೆಹರಿಸುತ್ತಾನಂತೆ!
ಸ್ಟೆಪ್ 1: ಈ ‘ಗುರೂಜಿ’ಯನ್ನು ಸಂಪರ್ಕಿಸುವುದು.
ಸ್ಟೆಪ್ 2: ಈತ ಮತ್ತು ಈತನ ತಂಡ ಹೇಳಿದ ‘ಮಾರ್ಗ’ದಲ್ಲಿ ನಡೆಯುವುದು.
ಸ್ಟೆಪ್ 3: 7ರಿಂದ 180 ದಿನಗಳಲ್ಲಿ ಎಲ್ಲ ಸಮಸ್ಯೆ ಫಿನಿಷ್! ಅಲ್ಲಿಗೆ ಮಾನವಾಭಿವೃದ್ಧಿ ಸಕ್ಸಸ್!

ವಾಸ್ತು ವಸೂಲಿಯ ದರಪಟ್ಟಿ, ಬಲು ತುಟ್ಟಿ!

ಮನೆಯ ಸಮಸ್ಯೆ ಇದ್ದರೆ 14 ಸಾವಿರ, ಸಣ್ಣಪುಟ್ಟ ವ್ಯಾಪಾರದ ಸಮಸ್ಯೆ ಇದ್ದರೆ 22 ಸಾವಿರ, ಮನೆಯ ನಕ್ಷೆಯನ್ನೇ ರೆಡಿ ಮಾಡಿ ಪರಿಹಾರ ಪಡೆಯಲು 22 ಸಾವಿರ ರೂಪಾಯಿ! ವೈಯಾರದಿಂದ ನಿರೂಪಕಿ ಹೇಳುತ್ತಾಳೆ: ಬಡವರಿಗಾಗಿ ಮಾನವಾಭಿವೃದ್ಧಿ ಅಂತೆ! ಅಂದರೆ, ಎರಡು ಕಂತುಗಳಲ್ಲಿ ಪೇ ಮಾಡಬಹುದು ಅಂತೆ! ದರಪಟ್ಟಿಯನ್ನೇ ಹಾಗೆ ವಿನ್ಯಾಸ ಮಾಡಿಯೂ ಬಿಟ್ಟಿದ್ದಾರೆ ಖದೀಮರು.

ಪ್ರೊಗ್ರಾಂ ನಡುನಡುವೆ ಸಮಸ್ಯೆಗಳಲ್ಲಿರುವ ಜನರ ಫೋನ್ ಕಾಲ್‍ಗಳು. ಅವರು ಸಮಸ್ಯೆ ಹೇಳುವ ಮೊದಲೇ, ಈಗ ನೀವು ನನನ್ನು ಸಂಪರ್ಕಿಸಿದಿರಲ್ಲ, ನನ್ನ ಎನರ್ಜಿ ನಿಮಗೆ ಪಾಸ್ ಆಗಿತು, ನಮ್ಮ ಕಚೇರಿಯವರು ನಿಮ್ಮನ್ನು ಸಂಪರ್ಕಿಸಿ ‘ಎಲ್ಲ’ ಮಾಡುತ್ತಾರೆ, ಡೋಂಟ್ ವರಿ ಎನ್ನುತ್ತಾನೆ ಚಂದ್ರ!

ಜನರಿಗೆ ಈ ಮಾರ್ಗ ಗೊತ್ತಿಲ್ಲದ್ದರಿಂದ ಅದನ್ನು ಕಲಿಸಲು ದೇವರೇ ಈ ಕಳ್ ನನ್ಮಗನಿಗೆ ಆದೇಶ ನೀಡಿದ್ದಾನಂತೆ! ಪಾಪ, ಸಣ್ಣಪುಟ್ಟ ವ್ಯಾಪಾರದಲ್ಲಿ ನಷ್ಟ ಅನುಭವಿಸಿದವರು, ಮದುವೆ ಸಮಸ್ಯೆ ಆಗಿರುವ ಹೆಣ್ಣು ಮಕ್ಕಳು, ಗಂಭೀರ ಕಾಯಿಲೆ ಇರುವವರ ಸಂಬಂಧಿಕರು ಫೋನ್ ಮಾಡಿ ಈ ಮುಠ್ಠಾಳರ ಬಲೆಗೆ ಬೀಳುತ್ತಿದ್ದರು.

ಹೀಗೆ ಇಡೀ ಜಗತ್ತಿನ ಮಾನವರ ಅಭಿವೃದ್ಧಿ ಮಾಡುವುದೇ ಚಂದ್ರನ ವಂಚಕ ಟೀಮಿನ ಗುರಿಯಂತೆ! ಬಾಗಲಕೋಟೆಯ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದಿ ಕಂಟ್ರಾಕ್ಟರ್ ಆಗಿದ್ದ ಈ ಮನುಷ್ಯ, ಮನೆ ಕಟ್ಟಿಸುವಾಗ ಆ ಮೂಲೆ, ಈ ಮೂಲೆ ಎಂದು ಜನ ವಿಚಾರಿಸುವುದನ್ನು ನೋಡಿ, ಅದನ್ನೇ ಒಂದು ದಂಧೆ ಮಾಡಿಕೊಂಡಿದ್ದಾನೆ. ಇಷ್ಟು ದಿನ ಸರಳ ವಾಸ್ತು ಹೆಸರಲ್ಲಿ ಮೋಸ ಮಾಡಿದ್ದಾಯ್ತು, ಈಗ ಆ ಹಳೆ ಮೌಢ್ಯದ ಮದ್ಯವನ್ನು ‘ಮಾನವಾಭಿವೃದ್ಧಿ’ ಎಂಬ ಹೊಸ ಸೀಶೆಯಲ್ಲಿ ತುಂಬಿ ಮಾರ್ಕೆಟಿಂಗ್ ಮಾಡುತ್ತಿದ್ದಾನೆ!

ಈತ ಜನರಿಂದ ಯಾವ ಪರಿ ಕಿತ್ತಿದ್ದಾನೆಂದರೆ, ‘ಸರಳ ಜೀವನ’ ಎಂಬ ಚಾನೆಲ್ಲನ್ನೂ ಆರಂಭಿಸಿ, ಅದರ ಮೂಲಕವೂ ತನ್ನ ದಂಧೆಯನ್ನು ಪ್ರಮೋಟ್ ಮಾಡುತ್ತಾನೆ. ಜೊತೆಗೆ ರಾಜೀವ ಚಂದ್ರಶೇಖರನ ಸುವರ್ಣ ನ್ಯೂಸ್‍ನಂತಹ ಚಾನೆಲ್ಲುಗಳೂ ಈ ಜ್ಯೋತಿಷಿ, ವಾಸ್ತು ಪಂಡಿತರೊಂದಿಗೆ ಟೈಅಪ್ ಆಗಿವೆ!

ಇದನ್ನು ಓದಿ: ಮಾಧ್ಯಮ ಭಯೋತ್ಪಾನೆ

ಪಾಸಿಟಿವ್ ಎನರ್ಜಿ, ಕಾಸ್ಮೆಟಿಕ್ ಎನರ್ಜಿ ಅಂತೆಲ್ಲ ಮರುಳು ಮಾಡುವುದು ಇವರ ಟೆಕ್ನಿಕ್. ಇದಕ್ಕೆ ಮಾರು ಹೋಗುತ್ತಿರುವವರು ನಗರವಾಸಿ ವಿದ್ಯಾವಂತ ಜನರೇ ಎಂಬುದು ವಿಪರ್ಯಾಸ! ಮೋಡದ ಮರೆಯಲ್ಲಿ ರೇಡಾರ್‍ನಿಂದ ಬಚಾವ್ ಆಗಬಹುದು ಎನ್ನುವ ಪ್ರಧಾನಮಂತ್ರಿಯ ಮಾತನ್ನೂ ನಂಬುವ ಮೂಢ ಭಕ್ತರಲ್ಲಿ ಅದೇ ‘ಸುಶಿಕ್ಷಿತ’ರೇ ಜಾಸ್ತಿ ಇದ್ದಾರಲ್ಲ?

ನಮ್ಮ ಸಮಸ್ಯೆಗಳನ್ನು ಯಾವ ವಾಸ್ತುವೂ ಪರಿಹಾರ ಮಾಡದು. ಅದಕ್ಕೆ ನಾವೇ ಮಾರ್ಗ ಹುಡುಕಿಕೊಳ್ಳಬೇಕು. ಸತತ ಪ್ರಯತ್ನ ಮತ್ತು ಕಠಿಣ ಪರಿಶ್ರಮ ಇದಕ್ಕೆ ಅಗತ್ಯ. ನಿಮಗೆ ಪರಿಹರಿಸಲು ಸಾಧ್ಯವಾಗದಿದ್ದಲ್ಲಿ ಅದಕ್ಕೆ ಸಂಬಂಧಿಸಿದ ಜ್ಞಾನ ಇರುವವರ ಬಳಿ ಸಲಹೆ ಪಡೆದೋ, ಚಿಕಿತ್ಸೆ ಪಡೆದೋ ಪರಿಹಾರ ಕಂಡುಕೊಳ್ಳಬೇಕು. ಹಾಗಾಗಿ ಈ ಮೂಢ ಮಾಧ್ಯಮಗಳು ಬಿತ್ತರಿಸುವ ಇಂತಹ ಅವೈಜ್ಞಾನಿಕ ಪ್ರೊಗ್ರಾಂಗಳನ್ನು ನಂಬಬೇಡಿ. ಇದರಿಂದ ನಿಮ್ಮ ಸಮಸ್ಯೆ ಕಡಿಮೆಯಾಗುವ ಬದಲು ಹೆಚ್ಚಾಗುವುದರಲ್ಲಿ ಸಂದೇಹವೆ ಇಲ್ಲ. ಚಂದ್ರಶೇಖರರಂತಹ ವಂಚಕರಿಂದ ದೂರವಿರಿ. ಇಲ್ಲದಿದ್ದಲ್ಲಿ ನಿಮ್ಮ ಆರ್ಥಿಕ ಸಮಸ್ಯೆ ಮತ್ತು ಮಾನಸಿಕ ಮೌಢ್ಯ ಹೆಚ್ಚಾಗುತ್ತವೆ ಅಷ್ಟೇ!

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...