Homeಕರ್ನಾಟಕಚಾನೆಲ್ ಚಿತ್ರಾನ್ನ : ಮೌಢ್ಯ ತುಂಬುವ ಚಾನೆಲ್ಲುಗಳು ಮತ್ತು ವಾಸ್ತು ಪೀಡೆ ಚಂದ್ರಶೇಖರ್

ಚಾನೆಲ್ ಚಿತ್ರಾನ್ನ : ಮೌಢ್ಯ ತುಂಬುವ ಚಾನೆಲ್ಲುಗಳು ಮತ್ತು ವಾಸ್ತು ಪೀಡೆ ಚಂದ್ರಶೇಖರ್

ಬಾಗಲಕೋಟೆಯ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದಿ ಕಂಟ್ರಾಕ್ಟರ್ ಆಗಿದ್ದ ಈ ಮನುಷ್ಯ, ಮನೆ ಕಟ್ಟಿಸುವಾಗ ಆ ಮೂಲೆ, ಈ ಮೂಲೆ ಎಂದು ಜನ ವಿಚಾರಿಸುವುದನ್ನು ನೋಡಿ, ಅದನ್ನೇ ಒಂದು ದಂಧೆ ಮಾಡಿಕೊಂಡಿದ್ದಾನೆ.

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಹಳೆ ವಂಚನೆ, ಹೊಸ ವೇಷ!

‘ಸರಳ ವಾಸ್ತು’ವಿನ ಹೆಸರಲ್ಲಿ ಜನರನ್ನು ಮೌಢ್ಯಕ್ಕೆ ತಳ್ಳಿ, ಮನೆಗಳನ್ನೆಲ್ಲ ಮೂರಾಬಟ್ಟೆ ಮಾಡಿದ ವಾಸ್ತು ವಂಚಕ ಚಂದ್ರಶೇಖರ್ ‘ಗುರೂಜಿ’ ಈಗ ಹೊಸ ವೇಷ ತೊಟ್ಟು ಬಂದಿದ್ದಾನೆ. ಈಗಾತ ‘ಮಾನವಾಭಿವೃದ್ಧಿ ಗುರು’ ಅಂತೆ. ವೇಷವಷ್ಟೇ ಬದಲು, ಮತ್ತದೇ ವಂಚನೆ! ಈ ಸಲ ಸುವರ್ಣ ನ್ಯೂಸ್ ಎಂಬ ರಾಜೀವ್ ಚಂದ್ರಶೇಖರನ ಚಾನೆಲ್ಲು ಈ ವಂಚಕನ ಸಂಸ್ಥೆಯ ಪಾರ್ಟನರ್ ಎಂಬಂತೆ ಬೊಗಳೆ ಬಿಡುತ್ತ ಜನರನ್ನು ಬೋಳಿಸುತ್ತಲಿದೆ.

ಇವತ್ತು ರವಿವಾರ ಮುಂಜ್‍ಮುಂಜಾನೆ ಸುವರ್ಣ ನ್ಯೂಸ್ ಚಾನೆಲ್ಲಿನಲ್ಲಿ ಭೋಂಗು ಬಿಡುತ್ತಿದ್ದ ಸರಳ ವಾಸ್ತುವಿನ ಚಂದ್ರಶೇಖರ್ ಎಂಬ ಹೈಟೆಕ್ ವಂಚಕನನ್ನು ಕಂಡಾಗ ಆಶ್ಚರ್ಯವೇನೂ ಆಗಲಿಲ್ಲ. ಆದರೆ ಕೊಂಚ ಗಾಬರಿಯಾಗಿದ್ದು ಈತ ಹುಡುಕಿಕೊಂಡಿರುವ ಹೊಸ ವ್ಯಾಪಾರೀ ಮಾರ್ಗವನ್ನು ನೋಡಿದಾಗ….

ಈ ಕಾರ್ಯಕ್ರಮದ ಹೆಸರೇ ‘ಮಾನವಾಭಿವೃದ್ಧಿ ಗುರು’! ವಾವ್, ಹುಮನ್ ಡೆವೆಲಪ್ ಮೆಂಟ್ ಗುರು! ಕಳ್ಳ ನನ್ಮಗ ಅಂತ ಪ್ರೊಗ್ರಾಂ ನೋಡಿದರೆ, ಚಾನೆಲ್ಲಿನ ನಿರೂಪಕಿ ಮತ್ತು ಈ ವಾಸ್ತು ವಿಷ ಚಂದ್ರಶೇಖರ್ ಇಬ್ಬರೂ ಸೇರಿ ಜನರನ್ನು ಬಣ್ಣದ ಮಾತುಗಳಿಂದ ಬುಟ್ಟಿಗೆ ಹಾಕಿಕೊಳ್ಳುತ್ತಿದ್ದರು.

3 ಸ್ಟೆಪ್ಪು, 180 ದಿನ, 22 ಸಾವಿರ ಮುಂಡಾಮೋಚಿಂಗ್!

19 ವರ್ಷಗಳ ಕಾಲ ವಾಸ್ತು, ಸರಳ ವಾಸ್ತು ಹೆಸರಲ್ಲಿ ಜನರ ಮನೆ, ಕಚೇರಿಗಳಿಗೆ ಗತಿ ಕಾಣಿಸಿರುವ, ಅವರ ದೌರ್ಬಲ್ಯಗಳನ್ನು ಬಳಸಿಕೊಂಡು ಅವರಿಂದ ವಸೂಲಿ ಮಾಡಿರುವ ಚಂದ್ರಶೇಖರ್ ಈಗ ಹೊಸ ದಾರಿ ಕಂಡುಹಿಡಿದಿದ್ದಾನೆ. ಅದರ ಹೆಸರು ಮಾನವಾಭಿವೃದ್ಧಿ! ಕೇವಲ ಮೂರೇ ಹಂತಗಳಲ್ಲಿ ಈತ ರೈತರ ಸಮಸ್ಯೆಗಳನ್ನು, ನೌಕರರ ಆರ್ಥಿಕ ಸಂಕಟಗಳನ್ನು ಅಷ್ಟೇ ಅಲ್ಲ ಕ್ಯಾನ್ಸರ್ ಸೇರಿದಂತೆ ಇತರೆಲ್ಲ ರೋಗಿಗಳ ಆರೋಗ್ಯದ ಸಮಸ್ಯೆಗಳನ್ನು ಬಗೆಹರಿಸುತ್ತಾನಂತೆ!
ಸ್ಟೆಪ್ 1: ಈ ‘ಗುರೂಜಿ’ಯನ್ನು ಸಂಪರ್ಕಿಸುವುದು.
ಸ್ಟೆಪ್ 2: ಈತ ಮತ್ತು ಈತನ ತಂಡ ಹೇಳಿದ ‘ಮಾರ್ಗ’ದಲ್ಲಿ ನಡೆಯುವುದು.
ಸ್ಟೆಪ್ 3: 7ರಿಂದ 180 ದಿನಗಳಲ್ಲಿ ಎಲ್ಲ ಸಮಸ್ಯೆ ಫಿನಿಷ್! ಅಲ್ಲಿಗೆ ಮಾನವಾಭಿವೃದ್ಧಿ ಸಕ್ಸಸ್!

ವಾಸ್ತು ವಸೂಲಿಯ ದರಪಟ್ಟಿ, ಬಲು ತುಟ್ಟಿ!

ಮನೆಯ ಸಮಸ್ಯೆ ಇದ್ದರೆ 14 ಸಾವಿರ, ಸಣ್ಣಪುಟ್ಟ ವ್ಯಾಪಾರದ ಸಮಸ್ಯೆ ಇದ್ದರೆ 22 ಸಾವಿರ, ಮನೆಯ ನಕ್ಷೆಯನ್ನೇ ರೆಡಿ ಮಾಡಿ ಪರಿಹಾರ ಪಡೆಯಲು 22 ಸಾವಿರ ರೂಪಾಯಿ! ವೈಯಾರದಿಂದ ನಿರೂಪಕಿ ಹೇಳುತ್ತಾಳೆ: ಬಡವರಿಗಾಗಿ ಮಾನವಾಭಿವೃದ್ಧಿ ಅಂತೆ! ಅಂದರೆ, ಎರಡು ಕಂತುಗಳಲ್ಲಿ ಪೇ ಮಾಡಬಹುದು ಅಂತೆ! ದರಪಟ್ಟಿಯನ್ನೇ ಹಾಗೆ ವಿನ್ಯಾಸ ಮಾಡಿಯೂ ಬಿಟ್ಟಿದ್ದಾರೆ ಖದೀಮರು.

ಪ್ರೊಗ್ರಾಂ ನಡುನಡುವೆ ಸಮಸ್ಯೆಗಳಲ್ಲಿರುವ ಜನರ ಫೋನ್ ಕಾಲ್‍ಗಳು. ಅವರು ಸಮಸ್ಯೆ ಹೇಳುವ ಮೊದಲೇ, ಈಗ ನೀವು ನನನ್ನು ಸಂಪರ್ಕಿಸಿದಿರಲ್ಲ, ನನ್ನ ಎನರ್ಜಿ ನಿಮಗೆ ಪಾಸ್ ಆಗಿತು, ನಮ್ಮ ಕಚೇರಿಯವರು ನಿಮ್ಮನ್ನು ಸಂಪರ್ಕಿಸಿ ‘ಎಲ್ಲ’ ಮಾಡುತ್ತಾರೆ, ಡೋಂಟ್ ವರಿ ಎನ್ನುತ್ತಾನೆ ಚಂದ್ರ!

ಜನರಿಗೆ ಈ ಮಾರ್ಗ ಗೊತ್ತಿಲ್ಲದ್ದರಿಂದ ಅದನ್ನು ಕಲಿಸಲು ದೇವರೇ ಈ ಕಳ್ ನನ್ಮಗನಿಗೆ ಆದೇಶ ನೀಡಿದ್ದಾನಂತೆ! ಪಾಪ, ಸಣ್ಣಪುಟ್ಟ ವ್ಯಾಪಾರದಲ್ಲಿ ನಷ್ಟ ಅನುಭವಿಸಿದವರು, ಮದುವೆ ಸಮಸ್ಯೆ ಆಗಿರುವ ಹೆಣ್ಣು ಮಕ್ಕಳು, ಗಂಭೀರ ಕಾಯಿಲೆ ಇರುವವರ ಸಂಬಂಧಿಕರು ಫೋನ್ ಮಾಡಿ ಈ ಮುಠ್ಠಾಳರ ಬಲೆಗೆ ಬೀಳುತ್ತಿದ್ದರು.

ಹೀಗೆ ಇಡೀ ಜಗತ್ತಿನ ಮಾನವರ ಅಭಿವೃದ್ಧಿ ಮಾಡುವುದೇ ಚಂದ್ರನ ವಂಚಕ ಟೀಮಿನ ಗುರಿಯಂತೆ! ಬಾಗಲಕೋಟೆಯ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದಿ ಕಂಟ್ರಾಕ್ಟರ್ ಆಗಿದ್ದ ಈ ಮನುಷ್ಯ, ಮನೆ ಕಟ್ಟಿಸುವಾಗ ಆ ಮೂಲೆ, ಈ ಮೂಲೆ ಎಂದು ಜನ ವಿಚಾರಿಸುವುದನ್ನು ನೋಡಿ, ಅದನ್ನೇ ಒಂದು ದಂಧೆ ಮಾಡಿಕೊಂಡಿದ್ದಾನೆ. ಇಷ್ಟು ದಿನ ಸರಳ ವಾಸ್ತು ಹೆಸರಲ್ಲಿ ಮೋಸ ಮಾಡಿದ್ದಾಯ್ತು, ಈಗ ಆ ಹಳೆ ಮೌಢ್ಯದ ಮದ್ಯವನ್ನು ‘ಮಾನವಾಭಿವೃದ್ಧಿ’ ಎಂಬ ಹೊಸ ಸೀಶೆಯಲ್ಲಿ ತುಂಬಿ ಮಾರ್ಕೆಟಿಂಗ್ ಮಾಡುತ್ತಿದ್ದಾನೆ!

ಈತ ಜನರಿಂದ ಯಾವ ಪರಿ ಕಿತ್ತಿದ್ದಾನೆಂದರೆ, ‘ಸರಳ ಜೀವನ’ ಎಂಬ ಚಾನೆಲ್ಲನ್ನೂ ಆರಂಭಿಸಿ, ಅದರ ಮೂಲಕವೂ ತನ್ನ ದಂಧೆಯನ್ನು ಪ್ರಮೋಟ್ ಮಾಡುತ್ತಾನೆ. ಜೊತೆಗೆ ರಾಜೀವ ಚಂದ್ರಶೇಖರನ ಸುವರ್ಣ ನ್ಯೂಸ್‍ನಂತಹ ಚಾನೆಲ್ಲುಗಳೂ ಈ ಜ್ಯೋತಿಷಿ, ವಾಸ್ತು ಪಂಡಿತರೊಂದಿಗೆ ಟೈಅಪ್ ಆಗಿವೆ!

ಇದನ್ನು ಓದಿ: ಮಾಧ್ಯಮ ಭಯೋತ್ಪಾನೆ

ಪಾಸಿಟಿವ್ ಎನರ್ಜಿ, ಕಾಸ್ಮೆಟಿಕ್ ಎನರ್ಜಿ ಅಂತೆಲ್ಲ ಮರುಳು ಮಾಡುವುದು ಇವರ ಟೆಕ್ನಿಕ್. ಇದಕ್ಕೆ ಮಾರು ಹೋಗುತ್ತಿರುವವರು ನಗರವಾಸಿ ವಿದ್ಯಾವಂತ ಜನರೇ ಎಂಬುದು ವಿಪರ್ಯಾಸ! ಮೋಡದ ಮರೆಯಲ್ಲಿ ರೇಡಾರ್‍ನಿಂದ ಬಚಾವ್ ಆಗಬಹುದು ಎನ್ನುವ ಪ್ರಧಾನಮಂತ್ರಿಯ ಮಾತನ್ನೂ ನಂಬುವ ಮೂಢ ಭಕ್ತರಲ್ಲಿ ಅದೇ ‘ಸುಶಿಕ್ಷಿತ’ರೇ ಜಾಸ್ತಿ ಇದ್ದಾರಲ್ಲ?

ನಮ್ಮ ಸಮಸ್ಯೆಗಳನ್ನು ಯಾವ ವಾಸ್ತುವೂ ಪರಿಹಾರ ಮಾಡದು. ಅದಕ್ಕೆ ನಾವೇ ಮಾರ್ಗ ಹುಡುಕಿಕೊಳ್ಳಬೇಕು. ಸತತ ಪ್ರಯತ್ನ ಮತ್ತು ಕಠಿಣ ಪರಿಶ್ರಮ ಇದಕ್ಕೆ ಅಗತ್ಯ. ನಿಮಗೆ ಪರಿಹರಿಸಲು ಸಾಧ್ಯವಾಗದಿದ್ದಲ್ಲಿ ಅದಕ್ಕೆ ಸಂಬಂಧಿಸಿದ ಜ್ಞಾನ ಇರುವವರ ಬಳಿ ಸಲಹೆ ಪಡೆದೋ, ಚಿಕಿತ್ಸೆ ಪಡೆದೋ ಪರಿಹಾರ ಕಂಡುಕೊಳ್ಳಬೇಕು. ಹಾಗಾಗಿ ಈ ಮೂಢ ಮಾಧ್ಯಮಗಳು ಬಿತ್ತರಿಸುವ ಇಂತಹ ಅವೈಜ್ಞಾನಿಕ ಪ್ರೊಗ್ರಾಂಗಳನ್ನು ನಂಬಬೇಡಿ. ಇದರಿಂದ ನಿಮ್ಮ ಸಮಸ್ಯೆ ಕಡಿಮೆಯಾಗುವ ಬದಲು ಹೆಚ್ಚಾಗುವುದರಲ್ಲಿ ಸಂದೇಹವೆ ಇಲ್ಲ. ಚಂದ್ರಶೇಖರರಂತಹ ವಂಚಕರಿಂದ ದೂರವಿರಿ. ಇಲ್ಲದಿದ್ದಲ್ಲಿ ನಿಮ್ಮ ಆರ್ಥಿಕ ಸಮಸ್ಯೆ ಮತ್ತು ಮಾನಸಿಕ ಮೌಢ್ಯ ಹೆಚ್ಚಾಗುತ್ತವೆ ಅಷ್ಟೇ!

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...