Homeಮುಖಪುಟಮಧ್ಯ ಪ್ರದೇಶ: ಅಂಬೇಡ್ಕರ್-ಪಟೇಲ್ ಪ್ರತಿಮೆ ವಿವಾದ; ದಲಿತರು-ಪಾಟೀದಾರ್ ಸಮುದಾಯಗಳ ನಡುವೆ ಘರ್ಷಣೆ

ಮಧ್ಯ ಪ್ರದೇಶ: ಅಂಬೇಡ್ಕರ್-ಪಟೇಲ್ ಪ್ರತಿಮೆ ವಿವಾದ; ದಲಿತರು-ಪಾಟೀದಾರ್ ಸಮುದಾಯಗಳ ನಡುವೆ ಘರ್ಷಣೆ

- Advertisement -
- Advertisement -

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.

ವಿವಾದಿತ ಸ್ಥಳದಲ್ಲಿ ಪಾಟೀದಾರ್ ಸಮುದಾಯದ ಗುಂಪು ಕಳೆದ ಬುಧವಾರ ರಾತ್ರಿ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ಸ್ಥಾಪಿಸಿತ್ತು. ಗುರುವಾರ ಬೆಳಗ್ಗೆ ಇದು ಗಮನಕ್ಕೆ ಬರುತ್ತಿದ್ದಂತೆಯೇ ಸ್ಥಳದಲ್ಲಿ ಜಮಾಯಿಸಿದ ದಲಿತ ಸಮುದಾಯದವರು, ಟ್ರ್ಯಾಕ್ಟರ್‌ ಬಳಸಿ ಪ್ರತಿಮೆ ಉರುಳಿಸಿದ್ದಾರೆ. ಅದೇ ಸ್ಥಳದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವಂತೆ ಪಟ್ಟು ಹಿಡಿದಿದ್ದಾರೆ.

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಆಡಳಿತ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಪಾಟೀದಾರರು ಸರ್ದಾರ್ ಪಟೇಲ್ ಪ್ರತಿಮೆಯನ್ನು ನಿರ್ಮಿಸಲು ಬಯಸಿದ್ದರು. ದಲಿತ ಸಮುದಾಯದವರು ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವಂತೆ ಆಗ್ರಹಿಸಿದ್ದರು. ಈ ವಿವಾದದ ನಡುವೆಯೇ ಕೆಲವರು ರಾತ್ರೋರಾತ್ರಿ ಪಟೇಲ್ ಪ್ರತಿಮೆ ತಂದು ನಿಲ್ಲಿಸಿದ್ದಾರೆ. ಇದು ದಲಿತ ಸಮುದಾಯದವರ ಆಕ್ರೋಶಕ್ಕೆ ಕಾರಣವಾಗಿದೆ.

ಉಜ್ಜಯಿನಿ ನಗರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಮಾಕ್ರೋನ್‌ನಲ್ಲಿ ಈ ಘಟನೆ ನಡೆದಿದೆ. ಮಾಕ್ರೋನ್ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ತವರು ಕ್ಷೇತ್ರ. ಮಾಕ್ರೋನ್‌ ಪಟ್ಟಣದ ಬಸ್‌ ನಿಲ್ದಾಣದ ಬಳಿಯ ಪ್ರಮುಖ ವೃತ್ತದಲ್ಲಿ ಪಾಟೀದಾರ್ ಸಮುದಾಯ ಸರ್ದಾರ್ ಪಟೇಲ್ ಪ್ರತಿಮೆ ಸ್ಥಾಪಿಸಲು ಬಯಸಿದೆ. ದಲಿತ ಸಮುದಾಯವರು ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವಂತೆ ಒತ್ತಾಯಿಸಿದ್ದಾರೆ. ಪ್ರಸ್ತುತ ಈ ವಿಚಾರ ಅಲ್ಲಿನ ಪಟ್ಟಣ ಪಂಚಾಯತ್‌ನಲ್ಲಿದೆ, ಇನ್ನೂ ಯಾರ ಪ್ರತಿಮೆ ಸ್ಥಾಪಿಸಬೇಕೆಂದು ತೀರ್ಮಾನ ಆಗಿಲ್ಲ.

ಸರ್ದಾರ್ ಪಟೇಲ್ ಪ್ರತಿಮೆ ಉರುಳಿಸಿದ ಹಿನ್ನೆಲೆ ಮಾಕ್ರೋನ್ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಘಟನೆಯಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಧ್ವಂಸಗೊಂಡಿವೆ. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದು ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿ ಜೊತೆಗಿನ ಸೀಟು ಹಂಚಿಕೆ ಬಿಕ್ಕಟ್ಟು ಪರಿಹರಿಸಲು ಮುಂದಾದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...