Homeಮುಖಪುಟಮಧ್ಯ ಪ್ರದೇಶ: ಅಂಬೇಡ್ಕರ್-ಪಟೇಲ್ ಪ್ರತಿಮೆ ವಿವಾದ; ದಲಿತರು-ಪಾಟೀದಾರ್ ಸಮುದಾಯಗಳ ನಡುವೆ ಘರ್ಷಣೆ

ಮಧ್ಯ ಪ್ರದೇಶ: ಅಂಬೇಡ್ಕರ್-ಪಟೇಲ್ ಪ್ರತಿಮೆ ವಿವಾದ; ದಲಿತರು-ಪಾಟೀದಾರ್ ಸಮುದಾಯಗಳ ನಡುವೆ ಘರ್ಷಣೆ

- Advertisement -
- Advertisement -

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.

ವಿವಾದಿತ ಸ್ಥಳದಲ್ಲಿ ಪಾಟೀದಾರ್ ಸಮುದಾಯದ ಗುಂಪು ಕಳೆದ ಬುಧವಾರ ರಾತ್ರಿ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ಸ್ಥಾಪಿಸಿತ್ತು. ಗುರುವಾರ ಬೆಳಗ್ಗೆ ಇದು ಗಮನಕ್ಕೆ ಬರುತ್ತಿದ್ದಂತೆಯೇ ಸ್ಥಳದಲ್ಲಿ ಜಮಾಯಿಸಿದ ದಲಿತ ಸಮುದಾಯದವರು, ಟ್ರ್ಯಾಕ್ಟರ್‌ ಬಳಸಿ ಪ್ರತಿಮೆ ಉರುಳಿಸಿದ್ದಾರೆ. ಅದೇ ಸ್ಥಳದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವಂತೆ ಪಟ್ಟು ಹಿಡಿದಿದ್ದಾರೆ.

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಆಡಳಿತ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಪಾಟೀದಾರರು ಸರ್ದಾರ್ ಪಟೇಲ್ ಪ್ರತಿಮೆಯನ್ನು ನಿರ್ಮಿಸಲು ಬಯಸಿದ್ದರು. ದಲಿತ ಸಮುದಾಯದವರು ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವಂತೆ ಆಗ್ರಹಿಸಿದ್ದರು. ಈ ವಿವಾದದ ನಡುವೆಯೇ ಕೆಲವರು ರಾತ್ರೋರಾತ್ರಿ ಪಟೇಲ್ ಪ್ರತಿಮೆ ತಂದು ನಿಲ್ಲಿಸಿದ್ದಾರೆ. ಇದು ದಲಿತ ಸಮುದಾಯದವರ ಆಕ್ರೋಶಕ್ಕೆ ಕಾರಣವಾಗಿದೆ.

ಉಜ್ಜಯಿನಿ ನಗರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಮಾಕ್ರೋನ್‌ನಲ್ಲಿ ಈ ಘಟನೆ ನಡೆದಿದೆ. ಮಾಕ್ರೋನ್ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ತವರು ಕ್ಷೇತ್ರ. ಮಾಕ್ರೋನ್‌ ಪಟ್ಟಣದ ಬಸ್‌ ನಿಲ್ದಾಣದ ಬಳಿಯ ಪ್ರಮುಖ ವೃತ್ತದಲ್ಲಿ ಪಾಟೀದಾರ್ ಸಮುದಾಯ ಸರ್ದಾರ್ ಪಟೇಲ್ ಪ್ರತಿಮೆ ಸ್ಥಾಪಿಸಲು ಬಯಸಿದೆ. ದಲಿತ ಸಮುದಾಯವರು ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವಂತೆ ಒತ್ತಾಯಿಸಿದ್ದಾರೆ. ಪ್ರಸ್ತುತ ಈ ವಿಚಾರ ಅಲ್ಲಿನ ಪಟ್ಟಣ ಪಂಚಾಯತ್‌ನಲ್ಲಿದೆ, ಇನ್ನೂ ಯಾರ ಪ್ರತಿಮೆ ಸ್ಥಾಪಿಸಬೇಕೆಂದು ತೀರ್ಮಾನ ಆಗಿಲ್ಲ.

ಸರ್ದಾರ್ ಪಟೇಲ್ ಪ್ರತಿಮೆ ಉರುಳಿಸಿದ ಹಿನ್ನೆಲೆ ಮಾಕ್ರೋನ್ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಘಟನೆಯಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಧ್ವಂಸಗೊಂಡಿವೆ. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದು ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿ ಜೊತೆಗಿನ ಸೀಟು ಹಂಚಿಕೆ ಬಿಕ್ಕಟ್ಟು ಪರಿಹರಿಸಲು ಮುಂದಾದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...