Homeಮುಖಪುಟಸರ್ದಾರ್ ಉದಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ಸರ್ದಾರ್ ಉದಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ಭಾರತವೆಂದರೇನು? ಭಾರತೀಯರೆಂದರೆ ಯಾರು ಎನ್ನುವ ಸಂಕೀರ್ಣತೆ ಎಲ್ಲಿಯೂ ಇತಿಹಾಸವಾಗದಂತೆ ಎಚ್ಚರ ವಹಿಸಿರುವ ಶೂಜಿತ್ ನಿಜಕ್ಕೂ ಅತ್ಯಂತ ಮಹತ್ವದ ಸಿನಿಮಾ ಕೊಟ್ಟಿದ್ದಾನೆ.

- Advertisement -
- Advertisement -

(ಈ ಲೇಖನ ಹೊಸ ಬರಹದಲ್ಲಿದೆ. ಮಹಾಪ್ರಾಣಗಳನ್ನು ನಿಯಮಿತವಾಗಿ ಬಳಸಲಾಗಿದೆ)

‘ಮದ್ರಾಸ್ ಕೆಫೆ’ಯಲ್ಲಿ ಸೋತಿದ್ದ ಶೂಜಿತ್ ಸರ್ಕಾರ್ ‘ಸರ್ದಾರ್ ಉದಮ್’ ನಲ್ಲಿ ಗೆದ್ದಿದ್ದಾನೆ.
ವಿಕಿ ಡೋನರ್, ಪಿಕು ನಂತಹ ಪಕ್ಕಾ ಮಧ್ಯಮವರ್ಗದ, ನಗರ ಪ್ರಜ್ಞೆಯ ಸಿನಿಮಾಗಳಲ್ಲಿ ತೇಲುತ್ತಿದ್ದ ಶೂಜಿತ್ ನಿಂದ ಇಂತಹ ರಾಜಕೀಯ ಸಿನಿಮಾ ಮಾಡುತ್ತಾನೆ ಎನ್ನುವ ನಿರೀಕ್ಷೆ ಇರಲಿಲ್ಲ.

ಮತ್ತು ‘ಉರಿ’ ಸಿನಿಮಾದ ಮೂಲಕ ಎಲ್ಲೋ ಒಂದೆಡೆ ಬಲಪಂಥೀಯನಂತೆ ವರ್ತಿಸುತ್ತಿದ್ದ ನಟ ವಿಕಿ ಕೌಸಲ್ ಇದರ ಪ್ರೊಟಗಾನಿಸ್ಟ್ ಆಗಿರುವುದೂ ಸಹ ನನಗೆ ಈ ಸಿನಿಮಾ ಅಂತಹ ಉತ್ಸಾಹ ಮೂಡಿಸಿರಲಿಲ್ಲ. ಆದರೆ ‘ಉದಮ್’ ಸಿನಿಮಾ ಚೆನ್ನಾಗಿದೆ.

ಚಿತ್ರಕತೆ ಬರೆದ ರಿತೇಶ್ ಶಾ ಮತ್ತು ಶುಬೇಂದು ಭಟ್ಟಾಚಾರ್ಯ ಈ ಸಿನಿಮಾದ ಗೆಲುವಿನ ಮುಖ್ಯ ರೂವಾರಿಗಳು. ಚಾರಿತ್ರಿಕ ಸಿನಿಮಾಗಳಿಗೆ ಒಂದು ಫಾರ್ಮ್, ನಿರಂತರ ಹರಿವು, ಕತೆಯ ಲಹರಿ ಮತ್ತು ಬಿಗಿಯಾದ ಬಂಧವನ್ನು ಕಟ್ಟಿಕೊಡಲು non – linear ಚಿತ್ರಕತೆ ಅಗತ್ಯ.

‘ಉದಮ್’ ನ ಆ non – linear ಚಿತ್ರಕತೆ ಇಡೀ ಸಿನಿಮಾವನ್ನು ಎಲ್ಲಿಯೂ ಜಾಳು ಜಾಳಾಗದಂತೆ ಪಾರು ಮಾಡಿದೆ. ಮತ್ತು ಈ ಸಿನಿಮಾದ ಬಹುಮುಖ್ಯ ಘಟ್ಟ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ದೃಶ್ಯಕ್ಕಾಗಿ ಪ್ರೇಕ್ಷಕ ಕಾತರಿಸುತ್ತಿದ್ದಾಗ ಅದನ್ನು ಕ್ಲೈಮ್ಯಾಕ್ಸ್ ನಲ್ಲಿ ತಂದು ದೀರ್ಘವಾದ ಶಾಟ್ ನ ಮೂಲಕ ಭಾವುಕತೆಯನ್ನು (ಚಾರಿತ್ರಿಕ ಸಿನಿಮಾಗಳಿಗೆ ಇದರಿಂದ ಮುಕ್ತಿಯಿಲ್ಲ) ತುಂಬಿರುವುದು ಸಹ ಚಿತ್ರಕತೆಯ ಯಶಸ್ಸು.

ಎರಡೂವರೆ ಗಂಟೆ ಗಾಢವಾದ ವಿಶಾದ ಮತ್ತು ನಿರ್ವಾತವನ್ನು ಮೀರುವ ತುಡಿತವನ್ನು ಉಂಟುಮಾಡುವ ಹಿನ್ನೆಲೆ ಸಂಗೀತ ಇಲ್ಲಿನ ಮುಖ್ಯ ಅಂಶ ಮತ್ತು ಬೆನ್ನೆಲುಬು.

ಮುಖ್ಯವಾಗಿ ಸ್ವಾತಂತ್ರ್ಯ ಹೋರಾಟಗಾರರನ್ನು, ಕ್ರಾಂತಿಕಾರಿಗಳನ್ನು ಮನುಶ್ಯರಂತೆ ನಿರೂಪಿಸದೆ ಬದಲಿಗೆ ಅತ್ಯುನ್ನತ ಹೀರೋ ಎನ್ನುವ ವೈಬವೀಕರಣದ ಮೂಲಕ ಒಂದು ಬಲಪಂಥೀಯ ಸಂಕೇತವನ್ನು ನಿರ್ಮಿಸಿ ಬಿಡುವ ಅಪಾಯದಿಂದ ‘ಉದಮ್’ ಸಿನಿಮಾ ಪಾರಾಗಿದೆ. ಇದು ಶೂಜಿತ್ ನ ಗೆಲುವು ಮತ್ತು ಆ ಮೂಲಕ ಪ್ರಜಾಪ್ರಬುತ್ವದ ಗೆಲುವು.

ತೋಳ್ಬಲದ ದೇಶಪ್ರೇಮದ ಮೂಲಕ ಹೀರೋನನ್ನು ವಿಜೃಂಬಿಸಿ ಮಧ್ಯಮವರ್ಗದ ಆ ದ್ವೇಶದ ತೃಶೆಯನ್ನು ಹಿಂಗಿಸುವ ನಿರೂಪಣೆಯನ್ನು ಶೂಜಿತ್ ತಿರಸ್ಕರಿಸಿ ಉದಮ್ ಎನ್ನುವ ವ್ಯಕ್ತಿ ಮತ್ತು ಆ ಕಾಲಘಟ್ಟದ ಯಥಾವತ್ತಾದ ನಿರ್ಲಿಪ್ತ ನಿರೂಪಣೆ ಈ ಸಿನಿಮಾವು ಮತ್ತೊಂದು ಎದೆತಟ್ಚಿಕೊಳ್ಳುವ ಹುಸಿ ದೇಶಪ್ರೇಮಿಗಳ ಸಿನಿಮಾವಾಗುವುದರಿಂದ ಬಚಾವ್ ಮಾಡಿದೆ. ಇಂದಿನ ಫ್ಯಾಸಿಸಂ ಸಂದರ್ಬದಲ್ಲಿ ಜನಪರ ಸಿನಿಮಾದ ನಿಜ ಮಾದರಿಯನ್ನು ತೋರಿಸಿಕೊಟ್ಟಿದೆ.
ಕ್ರಾಂತಿಕಾರಿ ಮತ್ತು ಅವನ /ಅವಳ ಸಿದ್ದಾಂತ, ಅವರ ಸಂಗಾತಿಗಳು, ಅವರ ಖಾಸಗಿ ಬದುಕು ಎಲ್ಲವನ್ನೂ ಒಂದು ಸ್ಥಿತಪ್ರಜ್ಞತೆಯಲ್ಲಿ ನಿರೂಪಿತವಾಗಿದೆ.

ಭಾವುಕತೆಯೂ ಹುಸಿಯಾಗದಂತೆ ಮತ್ತು ಮುಖ್ಯವಾಗಿ ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ ಎನ್ನುವ ತಾತ್ವಿಕತೆಗೆ ಬದ್ದರಾಗಿ non – linear ಚಿತ್ರಕತೆ ಬರೆದ ಶಾ ಮತ್ತು ಶುಬೇಂದು ಇಬ್ಬರಿಗೆ ಶರಣು. They done the job. ಮತ್ತು ಮುಖ್ಯವಾಗಿ ಇತಿಹಾಸದ ಗ್ರಹಿಕೆ, ನಿರ್ವಹಣೆ ಎರಡೂ ಹಳಿ ತಪ್ಪದಿರುವುದು ಈ ಸಿನಿಮಾದ ಶಕ್ತಿ.

ರೇಮಂಡ್ ವಿಲಿಯಮ್ ‘ವಿಚಾರಗಳಿಗೆ ಇತಿಹಾಸವಿದೆ ಎನ್ನುವುದು ಅಶ್ಟು ಸತ್ಯವಲ್ಲ. ಸಮಾಜಗಳಿಗೆ ಇತಿಹಾಸವಿದೆ. ಆಗ ವಿರುದ್ಧವಾಗಿರುವ ವಿಚಾರಗಳು ಕೊನೆಗೆ ಒಂದೇ ಸಾಮಾಜಿಕ ಪ್ರಕ್ರಿಯೆಯ ಬಾಗವಾಗುತ್ತವೆ’ ಎಂದು ಹೇಳುತ್ತಾನೆ. ‘ಉದಮ್’ ಸಿನಿಮಾದ ವಿಶಯದಲ್ಲಿಯೂ ಇದು ನಿಜವಾಗಿದೆ ಮತ್ತು ಇದು ಸಮಾಧಾನಕರ ಅಂಶ.

ಕ್ರಾಂತಿ ಎಂಬುದು ಅಂಹಿಸೆಯೂ ಅಥವಾ ಹಿಂಸೆಯೋ? ವೈರುದ್ಯಗಳಿವೆ. ಆದರೆ ಆ ವಿಚಾರಗಳು ಎಂದಿಗೂ ಇತಿಹಾಸವಲ್ಲ. ಭಗತ್ ಸಿಂಗ್, ಉದಮ್, ಗಾಂಧಿ, ನೆಹರೂ ಮುಂತಾದವರ ಆ ಸ್ವಾತಂತ್ರ್ಯ ಹೋರಾಟದ ಎಲ್ಲಾ ಪ್ರಕ್ರಿಯೆಗಳು ಮಾತ್ರ ಇತಿಹಾಸ. ಅವರ ವಿಚಾರಗಳಲ್ಲ.
ಆದರೆ ಬಲಪಂಥೀಯ ಮತಾಂದರು ವಿಚಾರಗಳನ್ನು ಇತಿಹಾಸ ಎಂದು ಬಿಂಬಿಸುವ ಆ ವಿನಾಶಕಾರಿ ಧೋರಣೆಯನ್ನು ತಬ್ಬಿಕೊಂಡಿದ್ದ ಬಾಲಿವುಡ್ ಸಿನಿಮಾಗಳಿಗಿಂತ ಸಂಪೂರ್ಣವಾಗಿ ಬಿನ್ನವಾಗಿ ನಿಲ್ಲುವ ‘ಸರ್ದಾರ್ ಉದಮ್’ ಈ ಕಾರಣಕ್ಕಾಗಿ ಮಹತ್ವದ ಸಿನಿಮಾ.

ಇತಿಹಾಸವನ್ನು ವ್ಯಕ್ತಿಯ ಮೂಲಕ ನೋಡದೆ ವ್ಯಕ್ತಿ ಮತ್ತು ಘಟನೆಗಳ ಕೊಲಾಜ್ ಮೂಲಕ ಗ್ರಹಿಸಿ ಶೂಜಿತ್ ನಮಗೆ ದೊಡ್ಡ ಉಪಕಾರ ಮಾಡಿದ್ದಾನೆ.

ವ್ಯಕ್ತಿಯನ್ನು iconicಗೊಳಿಸುವ, ದೇಶಪ್ರೇಮ ಭಾವುಕವಾಗುವ ದೃಶ್ಯಗಳಲ್ಲಿ ‘ಬ್ರೆಕ್ಟೇರಿಯನ್’ ತಂತ್ರ ಹೆಣೆದ ಶೂಜಿತ್ ಆ ಮೂಲಕ ಇಡೀ ಸಿನಿಮಾವನ್ನು ಎಲ್ಲರೂ ಒಂದಾಗಿ ಬಾಳುವ ದಡಕ್ಕೆ ತಂದಿದ್ದಾನೆ. ಇದೂ ಸಹ ಮುಖ್ಯ.

ಉದಾಹರಣೆಗೆ ಸ್ವಾತಂತ್ರ್ಯ ಬಂದ ನಂತರ ನೀನು ಏನು ಮಾಡುತ್ತೀ ಎಂದು ಪ್ರಶ್ನಿಸಿದಾಗ ಭಗತ್ ಸಿಂಗ್ ‘ನಾನು ಮೊದಲು ಚಾರ್ಲಿ ಚಾಪ್ಲಿನ್ ಸಿನಿಮಾ ನೋಡತೀನಿ, ವೈನ್ ಕುಡೀತೀನಿ, ಉಣತೀನಿ, ಮಲಗತೀನಿ’ ಅಂತಾನೆ. ಇದು ಬ್ರೆಕ್ಟೇರಿಯನ್ ತಂತ್ರ. ಒಬ್ಬ ಕ್ರಾಂತಿಕಾರಿ ನಮ್ಮಂತಿದ್ದಾನಲ್ಲ ಎನ್ನುವುದೇ ನಮಗೆ ಹೃದಯಂಗಮವಾಗಿ ತಟ್ಟುತ್ತದೆ. ಈ ಸಿನಿಮಾದಲ್ಲಿ ಇಂತಹ ಹಲವು ಬ್ರೆಕ್ಟೇರಿಯನ್ ದೃಶ್ಯಗಳಿವೆ.

ಇತಿಹಾಸವನ್ನು ಸಿನಿಮಾ ಚೌಕಟ್ಟಿಗೆ ಒಗ್ಗಿಸುವಾಗ ಅದರ ಸಂಕೀರ್ಣತೆ, ವೈರುದ್ಯಗಳು, ಮತ್ತು ಸಾಂದರ್ಭಿಕ ಸನ್ನಿವೇಶಗಳನ್ನು ವಸ್ತುನಿಶ್ಟವಾಗಿ ನಿರೂಪಿಸಿರುವ ಶೂಜಿತ್ ಅನೇಕ ಮಿತಿಗಳ ನಡುವೆಯೂ ಗೆದ್ದಿದ್ದಾನೆ. ಮತ್ತು ಬಲಪಂಥೀಯರಿಗೆ ಎದೆ ತಟ್ಟಿಕೊಳ್ಳುವ ಅಥವಾ ದಾಳಿ ಮಾಡುವ ಎರಡೂ ಅವಕಾಶಗಳನ್ನು ಕೊಟ್ಟಿಲ್ಲ. ಇದೇನು ಕಡಿಮೆ ಸಾದನೆಯಲ್ಲ.

ಭಾರತವೆಂದರೇನು? ಭಾರತೀಯರೆಂದರೆ ಯಾರು ಎನ್ನುವ ಸಂಕೀರ್ಣತೆ ಎಲ್ಲಿಯೂ ಇತಿಹಾಸವಾಗದಂತೆ ಎಚ್ಚರ ವಹಿಸಿರುವ ಶೂಜಿತ್ ನಿಜಕ್ಕೂ ಅತ್ಯಂತ ಮಹತ್ವದ ಸಿನಿಮಾ ಕೊಟ್ಟಿದ್ದಾನೆ. ಅವನಿಗೆ ಥ್ಯಾಂಕ್ಸ್.

(ಈ ಚಿತ್ರ ಅಮೆಜಾನ್ ಪ್ರೈಮ್ ನಲ್ಲಿದೆ)


ಇದನ್ನೂ ಓದಿ: ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...