Homeಮುಖಪುಟಸರ್ದಾರ್ ಉದಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ಸರ್ದಾರ್ ಉದಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ಭಾರತವೆಂದರೇನು? ಭಾರತೀಯರೆಂದರೆ ಯಾರು ಎನ್ನುವ ಸಂಕೀರ್ಣತೆ ಎಲ್ಲಿಯೂ ಇತಿಹಾಸವಾಗದಂತೆ ಎಚ್ಚರ ವಹಿಸಿರುವ ಶೂಜಿತ್ ನಿಜಕ್ಕೂ ಅತ್ಯಂತ ಮಹತ್ವದ ಸಿನಿಮಾ ಕೊಟ್ಟಿದ್ದಾನೆ.

- Advertisement -
- Advertisement -

(ಈ ಲೇಖನ ಹೊಸ ಬರಹದಲ್ಲಿದೆ. ಮಹಾಪ್ರಾಣಗಳನ್ನು ನಿಯಮಿತವಾಗಿ ಬಳಸಲಾಗಿದೆ)

‘ಮದ್ರಾಸ್ ಕೆಫೆ’ಯಲ್ಲಿ ಸೋತಿದ್ದ ಶೂಜಿತ್ ಸರ್ಕಾರ್ ‘ಸರ್ದಾರ್ ಉದಮ್’ ನಲ್ಲಿ ಗೆದ್ದಿದ್ದಾನೆ.
ವಿಕಿ ಡೋನರ್, ಪಿಕು ನಂತಹ ಪಕ್ಕಾ ಮಧ್ಯಮವರ್ಗದ, ನಗರ ಪ್ರಜ್ಞೆಯ ಸಿನಿಮಾಗಳಲ್ಲಿ ತೇಲುತ್ತಿದ್ದ ಶೂಜಿತ್ ನಿಂದ ಇಂತಹ ರಾಜಕೀಯ ಸಿನಿಮಾ ಮಾಡುತ್ತಾನೆ ಎನ್ನುವ ನಿರೀಕ್ಷೆ ಇರಲಿಲ್ಲ.

ಮತ್ತು ‘ಉರಿ’ ಸಿನಿಮಾದ ಮೂಲಕ ಎಲ್ಲೋ ಒಂದೆಡೆ ಬಲಪಂಥೀಯನಂತೆ ವರ್ತಿಸುತ್ತಿದ್ದ ನಟ ವಿಕಿ ಕೌಸಲ್ ಇದರ ಪ್ರೊಟಗಾನಿಸ್ಟ್ ಆಗಿರುವುದೂ ಸಹ ನನಗೆ ಈ ಸಿನಿಮಾ ಅಂತಹ ಉತ್ಸಾಹ ಮೂಡಿಸಿರಲಿಲ್ಲ. ಆದರೆ ‘ಉದಮ್’ ಸಿನಿಮಾ ಚೆನ್ನಾಗಿದೆ.

ಚಿತ್ರಕತೆ ಬರೆದ ರಿತೇಶ್ ಶಾ ಮತ್ತು ಶುಬೇಂದು ಭಟ್ಟಾಚಾರ್ಯ ಈ ಸಿನಿಮಾದ ಗೆಲುವಿನ ಮುಖ್ಯ ರೂವಾರಿಗಳು. ಚಾರಿತ್ರಿಕ ಸಿನಿಮಾಗಳಿಗೆ ಒಂದು ಫಾರ್ಮ್, ನಿರಂತರ ಹರಿವು, ಕತೆಯ ಲಹರಿ ಮತ್ತು ಬಿಗಿಯಾದ ಬಂಧವನ್ನು ಕಟ್ಟಿಕೊಡಲು non – linear ಚಿತ್ರಕತೆ ಅಗತ್ಯ.

‘ಉದಮ್’ ನ ಆ non – linear ಚಿತ್ರಕತೆ ಇಡೀ ಸಿನಿಮಾವನ್ನು ಎಲ್ಲಿಯೂ ಜಾಳು ಜಾಳಾಗದಂತೆ ಪಾರು ಮಾಡಿದೆ. ಮತ್ತು ಈ ಸಿನಿಮಾದ ಬಹುಮುಖ್ಯ ಘಟ್ಟ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ದೃಶ್ಯಕ್ಕಾಗಿ ಪ್ರೇಕ್ಷಕ ಕಾತರಿಸುತ್ತಿದ್ದಾಗ ಅದನ್ನು ಕ್ಲೈಮ್ಯಾಕ್ಸ್ ನಲ್ಲಿ ತಂದು ದೀರ್ಘವಾದ ಶಾಟ್ ನ ಮೂಲಕ ಭಾವುಕತೆಯನ್ನು (ಚಾರಿತ್ರಿಕ ಸಿನಿಮಾಗಳಿಗೆ ಇದರಿಂದ ಮುಕ್ತಿಯಿಲ್ಲ) ತುಂಬಿರುವುದು ಸಹ ಚಿತ್ರಕತೆಯ ಯಶಸ್ಸು.

ಎರಡೂವರೆ ಗಂಟೆ ಗಾಢವಾದ ವಿಶಾದ ಮತ್ತು ನಿರ್ವಾತವನ್ನು ಮೀರುವ ತುಡಿತವನ್ನು ಉಂಟುಮಾಡುವ ಹಿನ್ನೆಲೆ ಸಂಗೀತ ಇಲ್ಲಿನ ಮುಖ್ಯ ಅಂಶ ಮತ್ತು ಬೆನ್ನೆಲುಬು.

ಮುಖ್ಯವಾಗಿ ಸ್ವಾತಂತ್ರ್ಯ ಹೋರಾಟಗಾರರನ್ನು, ಕ್ರಾಂತಿಕಾರಿಗಳನ್ನು ಮನುಶ್ಯರಂತೆ ನಿರೂಪಿಸದೆ ಬದಲಿಗೆ ಅತ್ಯುನ್ನತ ಹೀರೋ ಎನ್ನುವ ವೈಬವೀಕರಣದ ಮೂಲಕ ಒಂದು ಬಲಪಂಥೀಯ ಸಂಕೇತವನ್ನು ನಿರ್ಮಿಸಿ ಬಿಡುವ ಅಪಾಯದಿಂದ ‘ಉದಮ್’ ಸಿನಿಮಾ ಪಾರಾಗಿದೆ. ಇದು ಶೂಜಿತ್ ನ ಗೆಲುವು ಮತ್ತು ಆ ಮೂಲಕ ಪ್ರಜಾಪ್ರಬುತ್ವದ ಗೆಲುವು.

ತೋಳ್ಬಲದ ದೇಶಪ್ರೇಮದ ಮೂಲಕ ಹೀರೋನನ್ನು ವಿಜೃಂಬಿಸಿ ಮಧ್ಯಮವರ್ಗದ ಆ ದ್ವೇಶದ ತೃಶೆಯನ್ನು ಹಿಂಗಿಸುವ ನಿರೂಪಣೆಯನ್ನು ಶೂಜಿತ್ ತಿರಸ್ಕರಿಸಿ ಉದಮ್ ಎನ್ನುವ ವ್ಯಕ್ತಿ ಮತ್ತು ಆ ಕಾಲಘಟ್ಟದ ಯಥಾವತ್ತಾದ ನಿರ್ಲಿಪ್ತ ನಿರೂಪಣೆ ಈ ಸಿನಿಮಾವು ಮತ್ತೊಂದು ಎದೆತಟ್ಚಿಕೊಳ್ಳುವ ಹುಸಿ ದೇಶಪ್ರೇಮಿಗಳ ಸಿನಿಮಾವಾಗುವುದರಿಂದ ಬಚಾವ್ ಮಾಡಿದೆ. ಇಂದಿನ ಫ್ಯಾಸಿಸಂ ಸಂದರ್ಬದಲ್ಲಿ ಜನಪರ ಸಿನಿಮಾದ ನಿಜ ಮಾದರಿಯನ್ನು ತೋರಿಸಿಕೊಟ್ಟಿದೆ.
ಕ್ರಾಂತಿಕಾರಿ ಮತ್ತು ಅವನ /ಅವಳ ಸಿದ್ದಾಂತ, ಅವರ ಸಂಗಾತಿಗಳು, ಅವರ ಖಾಸಗಿ ಬದುಕು ಎಲ್ಲವನ್ನೂ ಒಂದು ಸ್ಥಿತಪ್ರಜ್ಞತೆಯಲ್ಲಿ ನಿರೂಪಿತವಾಗಿದೆ.

ಭಾವುಕತೆಯೂ ಹುಸಿಯಾಗದಂತೆ ಮತ್ತು ಮುಖ್ಯವಾಗಿ ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ ಎನ್ನುವ ತಾತ್ವಿಕತೆಗೆ ಬದ್ದರಾಗಿ non – linear ಚಿತ್ರಕತೆ ಬರೆದ ಶಾ ಮತ್ತು ಶುಬೇಂದು ಇಬ್ಬರಿಗೆ ಶರಣು. They done the job. ಮತ್ತು ಮುಖ್ಯವಾಗಿ ಇತಿಹಾಸದ ಗ್ರಹಿಕೆ, ನಿರ್ವಹಣೆ ಎರಡೂ ಹಳಿ ತಪ್ಪದಿರುವುದು ಈ ಸಿನಿಮಾದ ಶಕ್ತಿ.

ರೇಮಂಡ್ ವಿಲಿಯಮ್ ‘ವಿಚಾರಗಳಿಗೆ ಇತಿಹಾಸವಿದೆ ಎನ್ನುವುದು ಅಶ್ಟು ಸತ್ಯವಲ್ಲ. ಸಮಾಜಗಳಿಗೆ ಇತಿಹಾಸವಿದೆ. ಆಗ ವಿರುದ್ಧವಾಗಿರುವ ವಿಚಾರಗಳು ಕೊನೆಗೆ ಒಂದೇ ಸಾಮಾಜಿಕ ಪ್ರಕ್ರಿಯೆಯ ಬಾಗವಾಗುತ್ತವೆ’ ಎಂದು ಹೇಳುತ್ತಾನೆ. ‘ಉದಮ್’ ಸಿನಿಮಾದ ವಿಶಯದಲ್ಲಿಯೂ ಇದು ನಿಜವಾಗಿದೆ ಮತ್ತು ಇದು ಸಮಾಧಾನಕರ ಅಂಶ.

ಕ್ರಾಂತಿ ಎಂಬುದು ಅಂಹಿಸೆಯೂ ಅಥವಾ ಹಿಂಸೆಯೋ? ವೈರುದ್ಯಗಳಿವೆ. ಆದರೆ ಆ ವಿಚಾರಗಳು ಎಂದಿಗೂ ಇತಿಹಾಸವಲ್ಲ. ಭಗತ್ ಸಿಂಗ್, ಉದಮ್, ಗಾಂಧಿ, ನೆಹರೂ ಮುಂತಾದವರ ಆ ಸ್ವಾತಂತ್ರ್ಯ ಹೋರಾಟದ ಎಲ್ಲಾ ಪ್ರಕ್ರಿಯೆಗಳು ಮಾತ್ರ ಇತಿಹಾಸ. ಅವರ ವಿಚಾರಗಳಲ್ಲ.
ಆದರೆ ಬಲಪಂಥೀಯ ಮತಾಂದರು ವಿಚಾರಗಳನ್ನು ಇತಿಹಾಸ ಎಂದು ಬಿಂಬಿಸುವ ಆ ವಿನಾಶಕಾರಿ ಧೋರಣೆಯನ್ನು ತಬ್ಬಿಕೊಂಡಿದ್ದ ಬಾಲಿವುಡ್ ಸಿನಿಮಾಗಳಿಗಿಂತ ಸಂಪೂರ್ಣವಾಗಿ ಬಿನ್ನವಾಗಿ ನಿಲ್ಲುವ ‘ಸರ್ದಾರ್ ಉದಮ್’ ಈ ಕಾರಣಕ್ಕಾಗಿ ಮಹತ್ವದ ಸಿನಿಮಾ.

ಇತಿಹಾಸವನ್ನು ವ್ಯಕ್ತಿಯ ಮೂಲಕ ನೋಡದೆ ವ್ಯಕ್ತಿ ಮತ್ತು ಘಟನೆಗಳ ಕೊಲಾಜ್ ಮೂಲಕ ಗ್ರಹಿಸಿ ಶೂಜಿತ್ ನಮಗೆ ದೊಡ್ಡ ಉಪಕಾರ ಮಾಡಿದ್ದಾನೆ.

ವ್ಯಕ್ತಿಯನ್ನು iconicಗೊಳಿಸುವ, ದೇಶಪ್ರೇಮ ಭಾವುಕವಾಗುವ ದೃಶ್ಯಗಳಲ್ಲಿ ‘ಬ್ರೆಕ್ಟೇರಿಯನ್’ ತಂತ್ರ ಹೆಣೆದ ಶೂಜಿತ್ ಆ ಮೂಲಕ ಇಡೀ ಸಿನಿಮಾವನ್ನು ಎಲ್ಲರೂ ಒಂದಾಗಿ ಬಾಳುವ ದಡಕ್ಕೆ ತಂದಿದ್ದಾನೆ. ಇದೂ ಸಹ ಮುಖ್ಯ.

ಉದಾಹರಣೆಗೆ ಸ್ವಾತಂತ್ರ್ಯ ಬಂದ ನಂತರ ನೀನು ಏನು ಮಾಡುತ್ತೀ ಎಂದು ಪ್ರಶ್ನಿಸಿದಾಗ ಭಗತ್ ಸಿಂಗ್ ‘ನಾನು ಮೊದಲು ಚಾರ್ಲಿ ಚಾಪ್ಲಿನ್ ಸಿನಿಮಾ ನೋಡತೀನಿ, ವೈನ್ ಕುಡೀತೀನಿ, ಉಣತೀನಿ, ಮಲಗತೀನಿ’ ಅಂತಾನೆ. ಇದು ಬ್ರೆಕ್ಟೇರಿಯನ್ ತಂತ್ರ. ಒಬ್ಬ ಕ್ರಾಂತಿಕಾರಿ ನಮ್ಮಂತಿದ್ದಾನಲ್ಲ ಎನ್ನುವುದೇ ನಮಗೆ ಹೃದಯಂಗಮವಾಗಿ ತಟ್ಟುತ್ತದೆ. ಈ ಸಿನಿಮಾದಲ್ಲಿ ಇಂತಹ ಹಲವು ಬ್ರೆಕ್ಟೇರಿಯನ್ ದೃಶ್ಯಗಳಿವೆ.

ಇತಿಹಾಸವನ್ನು ಸಿನಿಮಾ ಚೌಕಟ್ಟಿಗೆ ಒಗ್ಗಿಸುವಾಗ ಅದರ ಸಂಕೀರ್ಣತೆ, ವೈರುದ್ಯಗಳು, ಮತ್ತು ಸಾಂದರ್ಭಿಕ ಸನ್ನಿವೇಶಗಳನ್ನು ವಸ್ತುನಿಶ್ಟವಾಗಿ ನಿರೂಪಿಸಿರುವ ಶೂಜಿತ್ ಅನೇಕ ಮಿತಿಗಳ ನಡುವೆಯೂ ಗೆದ್ದಿದ್ದಾನೆ. ಮತ್ತು ಬಲಪಂಥೀಯರಿಗೆ ಎದೆ ತಟ್ಟಿಕೊಳ್ಳುವ ಅಥವಾ ದಾಳಿ ಮಾಡುವ ಎರಡೂ ಅವಕಾಶಗಳನ್ನು ಕೊಟ್ಟಿಲ್ಲ. ಇದೇನು ಕಡಿಮೆ ಸಾದನೆಯಲ್ಲ.

ಭಾರತವೆಂದರೇನು? ಭಾರತೀಯರೆಂದರೆ ಯಾರು ಎನ್ನುವ ಸಂಕೀರ್ಣತೆ ಎಲ್ಲಿಯೂ ಇತಿಹಾಸವಾಗದಂತೆ ಎಚ್ಚರ ವಹಿಸಿರುವ ಶೂಜಿತ್ ನಿಜಕ್ಕೂ ಅತ್ಯಂತ ಮಹತ್ವದ ಸಿನಿಮಾ ಕೊಟ್ಟಿದ್ದಾನೆ. ಅವನಿಗೆ ಥ್ಯಾಂಕ್ಸ್.

(ಈ ಚಿತ್ರ ಅಮೆಜಾನ್ ಪ್ರೈಮ್ ನಲ್ಲಿದೆ)


ಇದನ್ನೂ ಓದಿ: ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...