Homeಮುಖಪುಟಸರ್ದಾರ್ ಉದಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ಸರ್ದಾರ್ ಉದಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ಭಾರತವೆಂದರೇನು? ಭಾರತೀಯರೆಂದರೆ ಯಾರು ಎನ್ನುವ ಸಂಕೀರ್ಣತೆ ಎಲ್ಲಿಯೂ ಇತಿಹಾಸವಾಗದಂತೆ ಎಚ್ಚರ ವಹಿಸಿರುವ ಶೂಜಿತ್ ನಿಜಕ್ಕೂ ಅತ್ಯಂತ ಮಹತ್ವದ ಸಿನಿಮಾ ಕೊಟ್ಟಿದ್ದಾನೆ.

- Advertisement -
- Advertisement -

(ಈ ಲೇಖನ ಹೊಸ ಬರಹದಲ್ಲಿದೆ. ಮಹಾಪ್ರಾಣಗಳನ್ನು ನಿಯಮಿತವಾಗಿ ಬಳಸಲಾಗಿದೆ)

‘ಮದ್ರಾಸ್ ಕೆಫೆ’ಯಲ್ಲಿ ಸೋತಿದ್ದ ಶೂಜಿತ್ ಸರ್ಕಾರ್ ‘ಸರ್ದಾರ್ ಉದಮ್’ ನಲ್ಲಿ ಗೆದ್ದಿದ್ದಾನೆ.
ವಿಕಿ ಡೋನರ್, ಪಿಕು ನಂತಹ ಪಕ್ಕಾ ಮಧ್ಯಮವರ್ಗದ, ನಗರ ಪ್ರಜ್ಞೆಯ ಸಿನಿಮಾಗಳಲ್ಲಿ ತೇಲುತ್ತಿದ್ದ ಶೂಜಿತ್ ನಿಂದ ಇಂತಹ ರಾಜಕೀಯ ಸಿನಿಮಾ ಮಾಡುತ್ತಾನೆ ಎನ್ನುವ ನಿರೀಕ್ಷೆ ಇರಲಿಲ್ಲ.

ಮತ್ತು ‘ಉರಿ’ ಸಿನಿಮಾದ ಮೂಲಕ ಎಲ್ಲೋ ಒಂದೆಡೆ ಬಲಪಂಥೀಯನಂತೆ ವರ್ತಿಸುತ್ತಿದ್ದ ನಟ ವಿಕಿ ಕೌಸಲ್ ಇದರ ಪ್ರೊಟಗಾನಿಸ್ಟ್ ಆಗಿರುವುದೂ ಸಹ ನನಗೆ ಈ ಸಿನಿಮಾ ಅಂತಹ ಉತ್ಸಾಹ ಮೂಡಿಸಿರಲಿಲ್ಲ. ಆದರೆ ‘ಉದಮ್’ ಸಿನಿಮಾ ಚೆನ್ನಾಗಿದೆ.

ಚಿತ್ರಕತೆ ಬರೆದ ರಿತೇಶ್ ಶಾ ಮತ್ತು ಶುಬೇಂದು ಭಟ್ಟಾಚಾರ್ಯ ಈ ಸಿನಿಮಾದ ಗೆಲುವಿನ ಮುಖ್ಯ ರೂವಾರಿಗಳು. ಚಾರಿತ್ರಿಕ ಸಿನಿಮಾಗಳಿಗೆ ಒಂದು ಫಾರ್ಮ್, ನಿರಂತರ ಹರಿವು, ಕತೆಯ ಲಹರಿ ಮತ್ತು ಬಿಗಿಯಾದ ಬಂಧವನ್ನು ಕಟ್ಟಿಕೊಡಲು non – linear ಚಿತ್ರಕತೆ ಅಗತ್ಯ.

‘ಉದಮ್’ ನ ಆ non – linear ಚಿತ್ರಕತೆ ಇಡೀ ಸಿನಿಮಾವನ್ನು ಎಲ್ಲಿಯೂ ಜಾಳು ಜಾಳಾಗದಂತೆ ಪಾರು ಮಾಡಿದೆ. ಮತ್ತು ಈ ಸಿನಿಮಾದ ಬಹುಮುಖ್ಯ ಘಟ್ಟ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ದೃಶ್ಯಕ್ಕಾಗಿ ಪ್ರೇಕ್ಷಕ ಕಾತರಿಸುತ್ತಿದ್ದಾಗ ಅದನ್ನು ಕ್ಲೈಮ್ಯಾಕ್ಸ್ ನಲ್ಲಿ ತಂದು ದೀರ್ಘವಾದ ಶಾಟ್ ನ ಮೂಲಕ ಭಾವುಕತೆಯನ್ನು (ಚಾರಿತ್ರಿಕ ಸಿನಿಮಾಗಳಿಗೆ ಇದರಿಂದ ಮುಕ್ತಿಯಿಲ್ಲ) ತುಂಬಿರುವುದು ಸಹ ಚಿತ್ರಕತೆಯ ಯಶಸ್ಸು.

ಎರಡೂವರೆ ಗಂಟೆ ಗಾಢವಾದ ವಿಶಾದ ಮತ್ತು ನಿರ್ವಾತವನ್ನು ಮೀರುವ ತುಡಿತವನ್ನು ಉಂಟುಮಾಡುವ ಹಿನ್ನೆಲೆ ಸಂಗೀತ ಇಲ್ಲಿನ ಮುಖ್ಯ ಅಂಶ ಮತ್ತು ಬೆನ್ನೆಲುಬು.

ಮುಖ್ಯವಾಗಿ ಸ್ವಾತಂತ್ರ್ಯ ಹೋರಾಟಗಾರರನ್ನು, ಕ್ರಾಂತಿಕಾರಿಗಳನ್ನು ಮನುಶ್ಯರಂತೆ ನಿರೂಪಿಸದೆ ಬದಲಿಗೆ ಅತ್ಯುನ್ನತ ಹೀರೋ ಎನ್ನುವ ವೈಬವೀಕರಣದ ಮೂಲಕ ಒಂದು ಬಲಪಂಥೀಯ ಸಂಕೇತವನ್ನು ನಿರ್ಮಿಸಿ ಬಿಡುವ ಅಪಾಯದಿಂದ ‘ಉದಮ್’ ಸಿನಿಮಾ ಪಾರಾಗಿದೆ. ಇದು ಶೂಜಿತ್ ನ ಗೆಲುವು ಮತ್ತು ಆ ಮೂಲಕ ಪ್ರಜಾಪ್ರಬುತ್ವದ ಗೆಲುವು.

ತೋಳ್ಬಲದ ದೇಶಪ್ರೇಮದ ಮೂಲಕ ಹೀರೋನನ್ನು ವಿಜೃಂಬಿಸಿ ಮಧ್ಯಮವರ್ಗದ ಆ ದ್ವೇಶದ ತೃಶೆಯನ್ನು ಹಿಂಗಿಸುವ ನಿರೂಪಣೆಯನ್ನು ಶೂಜಿತ್ ತಿರಸ್ಕರಿಸಿ ಉದಮ್ ಎನ್ನುವ ವ್ಯಕ್ತಿ ಮತ್ತು ಆ ಕಾಲಘಟ್ಟದ ಯಥಾವತ್ತಾದ ನಿರ್ಲಿಪ್ತ ನಿರೂಪಣೆ ಈ ಸಿನಿಮಾವು ಮತ್ತೊಂದು ಎದೆತಟ್ಚಿಕೊಳ್ಳುವ ಹುಸಿ ದೇಶಪ್ರೇಮಿಗಳ ಸಿನಿಮಾವಾಗುವುದರಿಂದ ಬಚಾವ್ ಮಾಡಿದೆ. ಇಂದಿನ ಫ್ಯಾಸಿಸಂ ಸಂದರ್ಬದಲ್ಲಿ ಜನಪರ ಸಿನಿಮಾದ ನಿಜ ಮಾದರಿಯನ್ನು ತೋರಿಸಿಕೊಟ್ಟಿದೆ.
ಕ್ರಾಂತಿಕಾರಿ ಮತ್ತು ಅವನ /ಅವಳ ಸಿದ್ದಾಂತ, ಅವರ ಸಂಗಾತಿಗಳು, ಅವರ ಖಾಸಗಿ ಬದುಕು ಎಲ್ಲವನ್ನೂ ಒಂದು ಸ್ಥಿತಪ್ರಜ್ಞತೆಯಲ್ಲಿ ನಿರೂಪಿತವಾಗಿದೆ.

ಭಾವುಕತೆಯೂ ಹುಸಿಯಾಗದಂತೆ ಮತ್ತು ಮುಖ್ಯವಾಗಿ ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ ಎನ್ನುವ ತಾತ್ವಿಕತೆಗೆ ಬದ್ದರಾಗಿ non – linear ಚಿತ್ರಕತೆ ಬರೆದ ಶಾ ಮತ್ತು ಶುಬೇಂದು ಇಬ್ಬರಿಗೆ ಶರಣು. They done the job. ಮತ್ತು ಮುಖ್ಯವಾಗಿ ಇತಿಹಾಸದ ಗ್ರಹಿಕೆ, ನಿರ್ವಹಣೆ ಎರಡೂ ಹಳಿ ತಪ್ಪದಿರುವುದು ಈ ಸಿನಿಮಾದ ಶಕ್ತಿ.

ರೇಮಂಡ್ ವಿಲಿಯಮ್ ‘ವಿಚಾರಗಳಿಗೆ ಇತಿಹಾಸವಿದೆ ಎನ್ನುವುದು ಅಶ್ಟು ಸತ್ಯವಲ್ಲ. ಸಮಾಜಗಳಿಗೆ ಇತಿಹಾಸವಿದೆ. ಆಗ ವಿರುದ್ಧವಾಗಿರುವ ವಿಚಾರಗಳು ಕೊನೆಗೆ ಒಂದೇ ಸಾಮಾಜಿಕ ಪ್ರಕ್ರಿಯೆಯ ಬಾಗವಾಗುತ್ತವೆ’ ಎಂದು ಹೇಳುತ್ತಾನೆ. ‘ಉದಮ್’ ಸಿನಿಮಾದ ವಿಶಯದಲ್ಲಿಯೂ ಇದು ನಿಜವಾಗಿದೆ ಮತ್ತು ಇದು ಸಮಾಧಾನಕರ ಅಂಶ.

ಕ್ರಾಂತಿ ಎಂಬುದು ಅಂಹಿಸೆಯೂ ಅಥವಾ ಹಿಂಸೆಯೋ? ವೈರುದ್ಯಗಳಿವೆ. ಆದರೆ ಆ ವಿಚಾರಗಳು ಎಂದಿಗೂ ಇತಿಹಾಸವಲ್ಲ. ಭಗತ್ ಸಿಂಗ್, ಉದಮ್, ಗಾಂಧಿ, ನೆಹರೂ ಮುಂತಾದವರ ಆ ಸ್ವಾತಂತ್ರ್ಯ ಹೋರಾಟದ ಎಲ್ಲಾ ಪ್ರಕ್ರಿಯೆಗಳು ಮಾತ್ರ ಇತಿಹಾಸ. ಅವರ ವಿಚಾರಗಳಲ್ಲ.
ಆದರೆ ಬಲಪಂಥೀಯ ಮತಾಂದರು ವಿಚಾರಗಳನ್ನು ಇತಿಹಾಸ ಎಂದು ಬಿಂಬಿಸುವ ಆ ವಿನಾಶಕಾರಿ ಧೋರಣೆಯನ್ನು ತಬ್ಬಿಕೊಂಡಿದ್ದ ಬಾಲಿವುಡ್ ಸಿನಿಮಾಗಳಿಗಿಂತ ಸಂಪೂರ್ಣವಾಗಿ ಬಿನ್ನವಾಗಿ ನಿಲ್ಲುವ ‘ಸರ್ದಾರ್ ಉದಮ್’ ಈ ಕಾರಣಕ್ಕಾಗಿ ಮಹತ್ವದ ಸಿನಿಮಾ.

ಇತಿಹಾಸವನ್ನು ವ್ಯಕ್ತಿಯ ಮೂಲಕ ನೋಡದೆ ವ್ಯಕ್ತಿ ಮತ್ತು ಘಟನೆಗಳ ಕೊಲಾಜ್ ಮೂಲಕ ಗ್ರಹಿಸಿ ಶೂಜಿತ್ ನಮಗೆ ದೊಡ್ಡ ಉಪಕಾರ ಮಾಡಿದ್ದಾನೆ.

ವ್ಯಕ್ತಿಯನ್ನು iconicಗೊಳಿಸುವ, ದೇಶಪ್ರೇಮ ಭಾವುಕವಾಗುವ ದೃಶ್ಯಗಳಲ್ಲಿ ‘ಬ್ರೆಕ್ಟೇರಿಯನ್’ ತಂತ್ರ ಹೆಣೆದ ಶೂಜಿತ್ ಆ ಮೂಲಕ ಇಡೀ ಸಿನಿಮಾವನ್ನು ಎಲ್ಲರೂ ಒಂದಾಗಿ ಬಾಳುವ ದಡಕ್ಕೆ ತಂದಿದ್ದಾನೆ. ಇದೂ ಸಹ ಮುಖ್ಯ.

ಉದಾಹರಣೆಗೆ ಸ್ವಾತಂತ್ರ್ಯ ಬಂದ ನಂತರ ನೀನು ಏನು ಮಾಡುತ್ತೀ ಎಂದು ಪ್ರಶ್ನಿಸಿದಾಗ ಭಗತ್ ಸಿಂಗ್ ‘ನಾನು ಮೊದಲು ಚಾರ್ಲಿ ಚಾಪ್ಲಿನ್ ಸಿನಿಮಾ ನೋಡತೀನಿ, ವೈನ್ ಕುಡೀತೀನಿ, ಉಣತೀನಿ, ಮಲಗತೀನಿ’ ಅಂತಾನೆ. ಇದು ಬ್ರೆಕ್ಟೇರಿಯನ್ ತಂತ್ರ. ಒಬ್ಬ ಕ್ರಾಂತಿಕಾರಿ ನಮ್ಮಂತಿದ್ದಾನಲ್ಲ ಎನ್ನುವುದೇ ನಮಗೆ ಹೃದಯಂಗಮವಾಗಿ ತಟ್ಟುತ್ತದೆ. ಈ ಸಿನಿಮಾದಲ್ಲಿ ಇಂತಹ ಹಲವು ಬ್ರೆಕ್ಟೇರಿಯನ್ ದೃಶ್ಯಗಳಿವೆ.

ಇತಿಹಾಸವನ್ನು ಸಿನಿಮಾ ಚೌಕಟ್ಟಿಗೆ ಒಗ್ಗಿಸುವಾಗ ಅದರ ಸಂಕೀರ್ಣತೆ, ವೈರುದ್ಯಗಳು, ಮತ್ತು ಸಾಂದರ್ಭಿಕ ಸನ್ನಿವೇಶಗಳನ್ನು ವಸ್ತುನಿಶ್ಟವಾಗಿ ನಿರೂಪಿಸಿರುವ ಶೂಜಿತ್ ಅನೇಕ ಮಿತಿಗಳ ನಡುವೆಯೂ ಗೆದ್ದಿದ್ದಾನೆ. ಮತ್ತು ಬಲಪಂಥೀಯರಿಗೆ ಎದೆ ತಟ್ಟಿಕೊಳ್ಳುವ ಅಥವಾ ದಾಳಿ ಮಾಡುವ ಎರಡೂ ಅವಕಾಶಗಳನ್ನು ಕೊಟ್ಟಿಲ್ಲ. ಇದೇನು ಕಡಿಮೆ ಸಾದನೆಯಲ್ಲ.

ಭಾರತವೆಂದರೇನು? ಭಾರತೀಯರೆಂದರೆ ಯಾರು ಎನ್ನುವ ಸಂಕೀರ್ಣತೆ ಎಲ್ಲಿಯೂ ಇತಿಹಾಸವಾಗದಂತೆ ಎಚ್ಚರ ವಹಿಸಿರುವ ಶೂಜಿತ್ ನಿಜಕ್ಕೂ ಅತ್ಯಂತ ಮಹತ್ವದ ಸಿನಿಮಾ ಕೊಟ್ಟಿದ್ದಾನೆ. ಅವನಿಗೆ ಥ್ಯಾಂಕ್ಸ್.

(ಈ ಚಿತ್ರ ಅಮೆಜಾನ್ ಪ್ರೈಮ್ ನಲ್ಲಿದೆ)


ಇದನ್ನೂ ಓದಿ: ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...