Homeಮುಖಪುಟಸರ್ದಾರ್ ಉದಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ಸರ್ದಾರ್ ಉದಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ಭಾರತವೆಂದರೇನು? ಭಾರತೀಯರೆಂದರೆ ಯಾರು ಎನ್ನುವ ಸಂಕೀರ್ಣತೆ ಎಲ್ಲಿಯೂ ಇತಿಹಾಸವಾಗದಂತೆ ಎಚ್ಚರ ವಹಿಸಿರುವ ಶೂಜಿತ್ ನಿಜಕ್ಕೂ ಅತ್ಯಂತ ಮಹತ್ವದ ಸಿನಿಮಾ ಕೊಟ್ಟಿದ್ದಾನೆ.

- Advertisement -
- Advertisement -

(ಈ ಲೇಖನ ಹೊಸ ಬರಹದಲ್ಲಿದೆ. ಮಹಾಪ್ರಾಣಗಳನ್ನು ನಿಯಮಿತವಾಗಿ ಬಳಸಲಾಗಿದೆ)

‘ಮದ್ರಾಸ್ ಕೆಫೆ’ಯಲ್ಲಿ ಸೋತಿದ್ದ ಶೂಜಿತ್ ಸರ್ಕಾರ್ ‘ಸರ್ದಾರ್ ಉದಮ್’ ನಲ್ಲಿ ಗೆದ್ದಿದ್ದಾನೆ.
ವಿಕಿ ಡೋನರ್, ಪಿಕು ನಂತಹ ಪಕ್ಕಾ ಮಧ್ಯಮವರ್ಗದ, ನಗರ ಪ್ರಜ್ಞೆಯ ಸಿನಿಮಾಗಳಲ್ಲಿ ತೇಲುತ್ತಿದ್ದ ಶೂಜಿತ್ ನಿಂದ ಇಂತಹ ರಾಜಕೀಯ ಸಿನಿಮಾ ಮಾಡುತ್ತಾನೆ ಎನ್ನುವ ನಿರೀಕ್ಷೆ ಇರಲಿಲ್ಲ.

ಮತ್ತು ‘ಉರಿ’ ಸಿನಿಮಾದ ಮೂಲಕ ಎಲ್ಲೋ ಒಂದೆಡೆ ಬಲಪಂಥೀಯನಂತೆ ವರ್ತಿಸುತ್ತಿದ್ದ ನಟ ವಿಕಿ ಕೌಸಲ್ ಇದರ ಪ್ರೊಟಗಾನಿಸ್ಟ್ ಆಗಿರುವುದೂ ಸಹ ನನಗೆ ಈ ಸಿನಿಮಾ ಅಂತಹ ಉತ್ಸಾಹ ಮೂಡಿಸಿರಲಿಲ್ಲ. ಆದರೆ ‘ಉದಮ್’ ಸಿನಿಮಾ ಚೆನ್ನಾಗಿದೆ.

ಚಿತ್ರಕತೆ ಬರೆದ ರಿತೇಶ್ ಶಾ ಮತ್ತು ಶುಬೇಂದು ಭಟ್ಟಾಚಾರ್ಯ ಈ ಸಿನಿಮಾದ ಗೆಲುವಿನ ಮುಖ್ಯ ರೂವಾರಿಗಳು. ಚಾರಿತ್ರಿಕ ಸಿನಿಮಾಗಳಿಗೆ ಒಂದು ಫಾರ್ಮ್, ನಿರಂತರ ಹರಿವು, ಕತೆಯ ಲಹರಿ ಮತ್ತು ಬಿಗಿಯಾದ ಬಂಧವನ್ನು ಕಟ್ಟಿಕೊಡಲು non – linear ಚಿತ್ರಕತೆ ಅಗತ್ಯ.

‘ಉದಮ್’ ನ ಆ non – linear ಚಿತ್ರಕತೆ ಇಡೀ ಸಿನಿಮಾವನ್ನು ಎಲ್ಲಿಯೂ ಜಾಳು ಜಾಳಾಗದಂತೆ ಪಾರು ಮಾಡಿದೆ. ಮತ್ತು ಈ ಸಿನಿಮಾದ ಬಹುಮುಖ್ಯ ಘಟ್ಟ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ದೃಶ್ಯಕ್ಕಾಗಿ ಪ್ರೇಕ್ಷಕ ಕಾತರಿಸುತ್ತಿದ್ದಾಗ ಅದನ್ನು ಕ್ಲೈಮ್ಯಾಕ್ಸ್ ನಲ್ಲಿ ತಂದು ದೀರ್ಘವಾದ ಶಾಟ್ ನ ಮೂಲಕ ಭಾವುಕತೆಯನ್ನು (ಚಾರಿತ್ರಿಕ ಸಿನಿಮಾಗಳಿಗೆ ಇದರಿಂದ ಮುಕ್ತಿಯಿಲ್ಲ) ತುಂಬಿರುವುದು ಸಹ ಚಿತ್ರಕತೆಯ ಯಶಸ್ಸು.

ಎರಡೂವರೆ ಗಂಟೆ ಗಾಢವಾದ ವಿಶಾದ ಮತ್ತು ನಿರ್ವಾತವನ್ನು ಮೀರುವ ತುಡಿತವನ್ನು ಉಂಟುಮಾಡುವ ಹಿನ್ನೆಲೆ ಸಂಗೀತ ಇಲ್ಲಿನ ಮುಖ್ಯ ಅಂಶ ಮತ್ತು ಬೆನ್ನೆಲುಬು.

ಮುಖ್ಯವಾಗಿ ಸ್ವಾತಂತ್ರ್ಯ ಹೋರಾಟಗಾರರನ್ನು, ಕ್ರಾಂತಿಕಾರಿಗಳನ್ನು ಮನುಶ್ಯರಂತೆ ನಿರೂಪಿಸದೆ ಬದಲಿಗೆ ಅತ್ಯುನ್ನತ ಹೀರೋ ಎನ್ನುವ ವೈಬವೀಕರಣದ ಮೂಲಕ ಒಂದು ಬಲಪಂಥೀಯ ಸಂಕೇತವನ್ನು ನಿರ್ಮಿಸಿ ಬಿಡುವ ಅಪಾಯದಿಂದ ‘ಉದಮ್’ ಸಿನಿಮಾ ಪಾರಾಗಿದೆ. ಇದು ಶೂಜಿತ್ ನ ಗೆಲುವು ಮತ್ತು ಆ ಮೂಲಕ ಪ್ರಜಾಪ್ರಬುತ್ವದ ಗೆಲುವು.

ತೋಳ್ಬಲದ ದೇಶಪ್ರೇಮದ ಮೂಲಕ ಹೀರೋನನ್ನು ವಿಜೃಂಬಿಸಿ ಮಧ್ಯಮವರ್ಗದ ಆ ದ್ವೇಶದ ತೃಶೆಯನ್ನು ಹಿಂಗಿಸುವ ನಿರೂಪಣೆಯನ್ನು ಶೂಜಿತ್ ತಿರಸ್ಕರಿಸಿ ಉದಮ್ ಎನ್ನುವ ವ್ಯಕ್ತಿ ಮತ್ತು ಆ ಕಾಲಘಟ್ಟದ ಯಥಾವತ್ತಾದ ನಿರ್ಲಿಪ್ತ ನಿರೂಪಣೆ ಈ ಸಿನಿಮಾವು ಮತ್ತೊಂದು ಎದೆತಟ್ಚಿಕೊಳ್ಳುವ ಹುಸಿ ದೇಶಪ್ರೇಮಿಗಳ ಸಿನಿಮಾವಾಗುವುದರಿಂದ ಬಚಾವ್ ಮಾಡಿದೆ. ಇಂದಿನ ಫ್ಯಾಸಿಸಂ ಸಂದರ್ಬದಲ್ಲಿ ಜನಪರ ಸಿನಿಮಾದ ನಿಜ ಮಾದರಿಯನ್ನು ತೋರಿಸಿಕೊಟ್ಟಿದೆ.
ಕ್ರಾಂತಿಕಾರಿ ಮತ್ತು ಅವನ /ಅವಳ ಸಿದ್ದಾಂತ, ಅವರ ಸಂಗಾತಿಗಳು, ಅವರ ಖಾಸಗಿ ಬದುಕು ಎಲ್ಲವನ್ನೂ ಒಂದು ಸ್ಥಿತಪ್ರಜ್ಞತೆಯಲ್ಲಿ ನಿರೂಪಿತವಾಗಿದೆ.

ಭಾವುಕತೆಯೂ ಹುಸಿಯಾಗದಂತೆ ಮತ್ತು ಮುಖ್ಯವಾಗಿ ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ ಎನ್ನುವ ತಾತ್ವಿಕತೆಗೆ ಬದ್ದರಾಗಿ non – linear ಚಿತ್ರಕತೆ ಬರೆದ ಶಾ ಮತ್ತು ಶುಬೇಂದು ಇಬ್ಬರಿಗೆ ಶರಣು. They done the job. ಮತ್ತು ಮುಖ್ಯವಾಗಿ ಇತಿಹಾಸದ ಗ್ರಹಿಕೆ, ನಿರ್ವಹಣೆ ಎರಡೂ ಹಳಿ ತಪ್ಪದಿರುವುದು ಈ ಸಿನಿಮಾದ ಶಕ್ತಿ.

ರೇಮಂಡ್ ವಿಲಿಯಮ್ ‘ವಿಚಾರಗಳಿಗೆ ಇತಿಹಾಸವಿದೆ ಎನ್ನುವುದು ಅಶ್ಟು ಸತ್ಯವಲ್ಲ. ಸಮಾಜಗಳಿಗೆ ಇತಿಹಾಸವಿದೆ. ಆಗ ವಿರುದ್ಧವಾಗಿರುವ ವಿಚಾರಗಳು ಕೊನೆಗೆ ಒಂದೇ ಸಾಮಾಜಿಕ ಪ್ರಕ್ರಿಯೆಯ ಬಾಗವಾಗುತ್ತವೆ’ ಎಂದು ಹೇಳುತ್ತಾನೆ. ‘ಉದಮ್’ ಸಿನಿಮಾದ ವಿಶಯದಲ್ಲಿಯೂ ಇದು ನಿಜವಾಗಿದೆ ಮತ್ತು ಇದು ಸಮಾಧಾನಕರ ಅಂಶ.

ಕ್ರಾಂತಿ ಎಂಬುದು ಅಂಹಿಸೆಯೂ ಅಥವಾ ಹಿಂಸೆಯೋ? ವೈರುದ್ಯಗಳಿವೆ. ಆದರೆ ಆ ವಿಚಾರಗಳು ಎಂದಿಗೂ ಇತಿಹಾಸವಲ್ಲ. ಭಗತ್ ಸಿಂಗ್, ಉದಮ್, ಗಾಂಧಿ, ನೆಹರೂ ಮುಂತಾದವರ ಆ ಸ್ವಾತಂತ್ರ್ಯ ಹೋರಾಟದ ಎಲ್ಲಾ ಪ್ರಕ್ರಿಯೆಗಳು ಮಾತ್ರ ಇತಿಹಾಸ. ಅವರ ವಿಚಾರಗಳಲ್ಲ.
ಆದರೆ ಬಲಪಂಥೀಯ ಮತಾಂದರು ವಿಚಾರಗಳನ್ನು ಇತಿಹಾಸ ಎಂದು ಬಿಂಬಿಸುವ ಆ ವಿನಾಶಕಾರಿ ಧೋರಣೆಯನ್ನು ತಬ್ಬಿಕೊಂಡಿದ್ದ ಬಾಲಿವುಡ್ ಸಿನಿಮಾಗಳಿಗಿಂತ ಸಂಪೂರ್ಣವಾಗಿ ಬಿನ್ನವಾಗಿ ನಿಲ್ಲುವ ‘ಸರ್ದಾರ್ ಉದಮ್’ ಈ ಕಾರಣಕ್ಕಾಗಿ ಮಹತ್ವದ ಸಿನಿಮಾ.

ಇತಿಹಾಸವನ್ನು ವ್ಯಕ್ತಿಯ ಮೂಲಕ ನೋಡದೆ ವ್ಯಕ್ತಿ ಮತ್ತು ಘಟನೆಗಳ ಕೊಲಾಜ್ ಮೂಲಕ ಗ್ರಹಿಸಿ ಶೂಜಿತ್ ನಮಗೆ ದೊಡ್ಡ ಉಪಕಾರ ಮಾಡಿದ್ದಾನೆ.

ವ್ಯಕ್ತಿಯನ್ನು iconicಗೊಳಿಸುವ, ದೇಶಪ್ರೇಮ ಭಾವುಕವಾಗುವ ದೃಶ್ಯಗಳಲ್ಲಿ ‘ಬ್ರೆಕ್ಟೇರಿಯನ್’ ತಂತ್ರ ಹೆಣೆದ ಶೂಜಿತ್ ಆ ಮೂಲಕ ಇಡೀ ಸಿನಿಮಾವನ್ನು ಎಲ್ಲರೂ ಒಂದಾಗಿ ಬಾಳುವ ದಡಕ್ಕೆ ತಂದಿದ್ದಾನೆ. ಇದೂ ಸಹ ಮುಖ್ಯ.

ಉದಾಹರಣೆಗೆ ಸ್ವಾತಂತ್ರ್ಯ ಬಂದ ನಂತರ ನೀನು ಏನು ಮಾಡುತ್ತೀ ಎಂದು ಪ್ರಶ್ನಿಸಿದಾಗ ಭಗತ್ ಸಿಂಗ್ ‘ನಾನು ಮೊದಲು ಚಾರ್ಲಿ ಚಾಪ್ಲಿನ್ ಸಿನಿಮಾ ನೋಡತೀನಿ, ವೈನ್ ಕುಡೀತೀನಿ, ಉಣತೀನಿ, ಮಲಗತೀನಿ’ ಅಂತಾನೆ. ಇದು ಬ್ರೆಕ್ಟೇರಿಯನ್ ತಂತ್ರ. ಒಬ್ಬ ಕ್ರಾಂತಿಕಾರಿ ನಮ್ಮಂತಿದ್ದಾನಲ್ಲ ಎನ್ನುವುದೇ ನಮಗೆ ಹೃದಯಂಗಮವಾಗಿ ತಟ್ಟುತ್ತದೆ. ಈ ಸಿನಿಮಾದಲ್ಲಿ ಇಂತಹ ಹಲವು ಬ್ರೆಕ್ಟೇರಿಯನ್ ದೃಶ್ಯಗಳಿವೆ.

ಇತಿಹಾಸವನ್ನು ಸಿನಿಮಾ ಚೌಕಟ್ಟಿಗೆ ಒಗ್ಗಿಸುವಾಗ ಅದರ ಸಂಕೀರ್ಣತೆ, ವೈರುದ್ಯಗಳು, ಮತ್ತು ಸಾಂದರ್ಭಿಕ ಸನ್ನಿವೇಶಗಳನ್ನು ವಸ್ತುನಿಶ್ಟವಾಗಿ ನಿರೂಪಿಸಿರುವ ಶೂಜಿತ್ ಅನೇಕ ಮಿತಿಗಳ ನಡುವೆಯೂ ಗೆದ್ದಿದ್ದಾನೆ. ಮತ್ತು ಬಲಪಂಥೀಯರಿಗೆ ಎದೆ ತಟ್ಟಿಕೊಳ್ಳುವ ಅಥವಾ ದಾಳಿ ಮಾಡುವ ಎರಡೂ ಅವಕಾಶಗಳನ್ನು ಕೊಟ್ಟಿಲ್ಲ. ಇದೇನು ಕಡಿಮೆ ಸಾದನೆಯಲ್ಲ.

ಭಾರತವೆಂದರೇನು? ಭಾರತೀಯರೆಂದರೆ ಯಾರು ಎನ್ನುವ ಸಂಕೀರ್ಣತೆ ಎಲ್ಲಿಯೂ ಇತಿಹಾಸವಾಗದಂತೆ ಎಚ್ಚರ ವಹಿಸಿರುವ ಶೂಜಿತ್ ನಿಜಕ್ಕೂ ಅತ್ಯಂತ ಮಹತ್ವದ ಸಿನಿಮಾ ಕೊಟ್ಟಿದ್ದಾನೆ. ಅವನಿಗೆ ಥ್ಯಾಂಕ್ಸ್.

(ಈ ಚಿತ್ರ ಅಮೆಜಾನ್ ಪ್ರೈಮ್ ನಲ್ಲಿದೆ)


ಇದನ್ನೂ ಓದಿ: ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...