Homeಮುಖಪುಟಸರ್ದಾರ್ ಉದಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ಸರ್ದಾರ್ ಉದಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ಭಾರತವೆಂದರೇನು? ಭಾರತೀಯರೆಂದರೆ ಯಾರು ಎನ್ನುವ ಸಂಕೀರ್ಣತೆ ಎಲ್ಲಿಯೂ ಇತಿಹಾಸವಾಗದಂತೆ ಎಚ್ಚರ ವಹಿಸಿರುವ ಶೂಜಿತ್ ನಿಜಕ್ಕೂ ಅತ್ಯಂತ ಮಹತ್ವದ ಸಿನಿಮಾ ಕೊಟ್ಟಿದ್ದಾನೆ.

- Advertisement -
- Advertisement -

(ಈ ಲೇಖನ ಹೊಸ ಬರಹದಲ್ಲಿದೆ. ಮಹಾಪ್ರಾಣಗಳನ್ನು ನಿಯಮಿತವಾಗಿ ಬಳಸಲಾಗಿದೆ)

‘ಮದ್ರಾಸ್ ಕೆಫೆ’ಯಲ್ಲಿ ಸೋತಿದ್ದ ಶೂಜಿತ್ ಸರ್ಕಾರ್ ‘ಸರ್ದಾರ್ ಉದಮ್’ ನಲ್ಲಿ ಗೆದ್ದಿದ್ದಾನೆ.
ವಿಕಿ ಡೋನರ್, ಪಿಕು ನಂತಹ ಪಕ್ಕಾ ಮಧ್ಯಮವರ್ಗದ, ನಗರ ಪ್ರಜ್ಞೆಯ ಸಿನಿಮಾಗಳಲ್ಲಿ ತೇಲುತ್ತಿದ್ದ ಶೂಜಿತ್ ನಿಂದ ಇಂತಹ ರಾಜಕೀಯ ಸಿನಿಮಾ ಮಾಡುತ್ತಾನೆ ಎನ್ನುವ ನಿರೀಕ್ಷೆ ಇರಲಿಲ್ಲ.

ಮತ್ತು ‘ಉರಿ’ ಸಿನಿಮಾದ ಮೂಲಕ ಎಲ್ಲೋ ಒಂದೆಡೆ ಬಲಪಂಥೀಯನಂತೆ ವರ್ತಿಸುತ್ತಿದ್ದ ನಟ ವಿಕಿ ಕೌಸಲ್ ಇದರ ಪ್ರೊಟಗಾನಿಸ್ಟ್ ಆಗಿರುವುದೂ ಸಹ ನನಗೆ ಈ ಸಿನಿಮಾ ಅಂತಹ ಉತ್ಸಾಹ ಮೂಡಿಸಿರಲಿಲ್ಲ. ಆದರೆ ‘ಉದಮ್’ ಸಿನಿಮಾ ಚೆನ್ನಾಗಿದೆ.

ಚಿತ್ರಕತೆ ಬರೆದ ರಿತೇಶ್ ಶಾ ಮತ್ತು ಶುಬೇಂದು ಭಟ್ಟಾಚಾರ್ಯ ಈ ಸಿನಿಮಾದ ಗೆಲುವಿನ ಮುಖ್ಯ ರೂವಾರಿಗಳು. ಚಾರಿತ್ರಿಕ ಸಿನಿಮಾಗಳಿಗೆ ಒಂದು ಫಾರ್ಮ್, ನಿರಂತರ ಹರಿವು, ಕತೆಯ ಲಹರಿ ಮತ್ತು ಬಿಗಿಯಾದ ಬಂಧವನ್ನು ಕಟ್ಟಿಕೊಡಲು non – linear ಚಿತ್ರಕತೆ ಅಗತ್ಯ.

‘ಉದಮ್’ ನ ಆ non – linear ಚಿತ್ರಕತೆ ಇಡೀ ಸಿನಿಮಾವನ್ನು ಎಲ್ಲಿಯೂ ಜಾಳು ಜಾಳಾಗದಂತೆ ಪಾರು ಮಾಡಿದೆ. ಮತ್ತು ಈ ಸಿನಿಮಾದ ಬಹುಮುಖ್ಯ ಘಟ್ಟ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ದೃಶ್ಯಕ್ಕಾಗಿ ಪ್ರೇಕ್ಷಕ ಕಾತರಿಸುತ್ತಿದ್ದಾಗ ಅದನ್ನು ಕ್ಲೈಮ್ಯಾಕ್ಸ್ ನಲ್ಲಿ ತಂದು ದೀರ್ಘವಾದ ಶಾಟ್ ನ ಮೂಲಕ ಭಾವುಕತೆಯನ್ನು (ಚಾರಿತ್ರಿಕ ಸಿನಿಮಾಗಳಿಗೆ ಇದರಿಂದ ಮುಕ್ತಿಯಿಲ್ಲ) ತುಂಬಿರುವುದು ಸಹ ಚಿತ್ರಕತೆಯ ಯಶಸ್ಸು.

ಎರಡೂವರೆ ಗಂಟೆ ಗಾಢವಾದ ವಿಶಾದ ಮತ್ತು ನಿರ್ವಾತವನ್ನು ಮೀರುವ ತುಡಿತವನ್ನು ಉಂಟುಮಾಡುವ ಹಿನ್ನೆಲೆ ಸಂಗೀತ ಇಲ್ಲಿನ ಮುಖ್ಯ ಅಂಶ ಮತ್ತು ಬೆನ್ನೆಲುಬು.

ಮುಖ್ಯವಾಗಿ ಸ್ವಾತಂತ್ರ್ಯ ಹೋರಾಟಗಾರರನ್ನು, ಕ್ರಾಂತಿಕಾರಿಗಳನ್ನು ಮನುಶ್ಯರಂತೆ ನಿರೂಪಿಸದೆ ಬದಲಿಗೆ ಅತ್ಯುನ್ನತ ಹೀರೋ ಎನ್ನುವ ವೈಬವೀಕರಣದ ಮೂಲಕ ಒಂದು ಬಲಪಂಥೀಯ ಸಂಕೇತವನ್ನು ನಿರ್ಮಿಸಿ ಬಿಡುವ ಅಪಾಯದಿಂದ ‘ಉದಮ್’ ಸಿನಿಮಾ ಪಾರಾಗಿದೆ. ಇದು ಶೂಜಿತ್ ನ ಗೆಲುವು ಮತ್ತು ಆ ಮೂಲಕ ಪ್ರಜಾಪ್ರಬುತ್ವದ ಗೆಲುವು.

ತೋಳ್ಬಲದ ದೇಶಪ್ರೇಮದ ಮೂಲಕ ಹೀರೋನನ್ನು ವಿಜೃಂಬಿಸಿ ಮಧ್ಯಮವರ್ಗದ ಆ ದ್ವೇಶದ ತೃಶೆಯನ್ನು ಹಿಂಗಿಸುವ ನಿರೂಪಣೆಯನ್ನು ಶೂಜಿತ್ ತಿರಸ್ಕರಿಸಿ ಉದಮ್ ಎನ್ನುವ ವ್ಯಕ್ತಿ ಮತ್ತು ಆ ಕಾಲಘಟ್ಟದ ಯಥಾವತ್ತಾದ ನಿರ್ಲಿಪ್ತ ನಿರೂಪಣೆ ಈ ಸಿನಿಮಾವು ಮತ್ತೊಂದು ಎದೆತಟ್ಚಿಕೊಳ್ಳುವ ಹುಸಿ ದೇಶಪ್ರೇಮಿಗಳ ಸಿನಿಮಾವಾಗುವುದರಿಂದ ಬಚಾವ್ ಮಾಡಿದೆ. ಇಂದಿನ ಫ್ಯಾಸಿಸಂ ಸಂದರ್ಬದಲ್ಲಿ ಜನಪರ ಸಿನಿಮಾದ ನಿಜ ಮಾದರಿಯನ್ನು ತೋರಿಸಿಕೊಟ್ಟಿದೆ.
ಕ್ರಾಂತಿಕಾರಿ ಮತ್ತು ಅವನ /ಅವಳ ಸಿದ್ದಾಂತ, ಅವರ ಸಂಗಾತಿಗಳು, ಅವರ ಖಾಸಗಿ ಬದುಕು ಎಲ್ಲವನ್ನೂ ಒಂದು ಸ್ಥಿತಪ್ರಜ್ಞತೆಯಲ್ಲಿ ನಿರೂಪಿತವಾಗಿದೆ.

ಭಾವುಕತೆಯೂ ಹುಸಿಯಾಗದಂತೆ ಮತ್ತು ಮುಖ್ಯವಾಗಿ ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ ಎನ್ನುವ ತಾತ್ವಿಕತೆಗೆ ಬದ್ದರಾಗಿ non – linear ಚಿತ್ರಕತೆ ಬರೆದ ಶಾ ಮತ್ತು ಶುಬೇಂದು ಇಬ್ಬರಿಗೆ ಶರಣು. They done the job. ಮತ್ತು ಮುಖ್ಯವಾಗಿ ಇತಿಹಾಸದ ಗ್ರಹಿಕೆ, ನಿರ್ವಹಣೆ ಎರಡೂ ಹಳಿ ತಪ್ಪದಿರುವುದು ಈ ಸಿನಿಮಾದ ಶಕ್ತಿ.

ರೇಮಂಡ್ ವಿಲಿಯಮ್ ‘ವಿಚಾರಗಳಿಗೆ ಇತಿಹಾಸವಿದೆ ಎನ್ನುವುದು ಅಶ್ಟು ಸತ್ಯವಲ್ಲ. ಸಮಾಜಗಳಿಗೆ ಇತಿಹಾಸವಿದೆ. ಆಗ ವಿರುದ್ಧವಾಗಿರುವ ವಿಚಾರಗಳು ಕೊನೆಗೆ ಒಂದೇ ಸಾಮಾಜಿಕ ಪ್ರಕ್ರಿಯೆಯ ಬಾಗವಾಗುತ್ತವೆ’ ಎಂದು ಹೇಳುತ್ತಾನೆ. ‘ಉದಮ್’ ಸಿನಿಮಾದ ವಿಶಯದಲ್ಲಿಯೂ ಇದು ನಿಜವಾಗಿದೆ ಮತ್ತು ಇದು ಸಮಾಧಾನಕರ ಅಂಶ.

ಕ್ರಾಂತಿ ಎಂಬುದು ಅಂಹಿಸೆಯೂ ಅಥವಾ ಹಿಂಸೆಯೋ? ವೈರುದ್ಯಗಳಿವೆ. ಆದರೆ ಆ ವಿಚಾರಗಳು ಎಂದಿಗೂ ಇತಿಹಾಸವಲ್ಲ. ಭಗತ್ ಸಿಂಗ್, ಉದಮ್, ಗಾಂಧಿ, ನೆಹರೂ ಮುಂತಾದವರ ಆ ಸ್ವಾತಂತ್ರ್ಯ ಹೋರಾಟದ ಎಲ್ಲಾ ಪ್ರಕ್ರಿಯೆಗಳು ಮಾತ್ರ ಇತಿಹಾಸ. ಅವರ ವಿಚಾರಗಳಲ್ಲ.
ಆದರೆ ಬಲಪಂಥೀಯ ಮತಾಂದರು ವಿಚಾರಗಳನ್ನು ಇತಿಹಾಸ ಎಂದು ಬಿಂಬಿಸುವ ಆ ವಿನಾಶಕಾರಿ ಧೋರಣೆಯನ್ನು ತಬ್ಬಿಕೊಂಡಿದ್ದ ಬಾಲಿವುಡ್ ಸಿನಿಮಾಗಳಿಗಿಂತ ಸಂಪೂರ್ಣವಾಗಿ ಬಿನ್ನವಾಗಿ ನಿಲ್ಲುವ ‘ಸರ್ದಾರ್ ಉದಮ್’ ಈ ಕಾರಣಕ್ಕಾಗಿ ಮಹತ್ವದ ಸಿನಿಮಾ.

ಇತಿಹಾಸವನ್ನು ವ್ಯಕ್ತಿಯ ಮೂಲಕ ನೋಡದೆ ವ್ಯಕ್ತಿ ಮತ್ತು ಘಟನೆಗಳ ಕೊಲಾಜ್ ಮೂಲಕ ಗ್ರಹಿಸಿ ಶೂಜಿತ್ ನಮಗೆ ದೊಡ್ಡ ಉಪಕಾರ ಮಾಡಿದ್ದಾನೆ.

ವ್ಯಕ್ತಿಯನ್ನು iconicಗೊಳಿಸುವ, ದೇಶಪ್ರೇಮ ಭಾವುಕವಾಗುವ ದೃಶ್ಯಗಳಲ್ಲಿ ‘ಬ್ರೆಕ್ಟೇರಿಯನ್’ ತಂತ್ರ ಹೆಣೆದ ಶೂಜಿತ್ ಆ ಮೂಲಕ ಇಡೀ ಸಿನಿಮಾವನ್ನು ಎಲ್ಲರೂ ಒಂದಾಗಿ ಬಾಳುವ ದಡಕ್ಕೆ ತಂದಿದ್ದಾನೆ. ಇದೂ ಸಹ ಮುಖ್ಯ.

ಉದಾಹರಣೆಗೆ ಸ್ವಾತಂತ್ರ್ಯ ಬಂದ ನಂತರ ನೀನು ಏನು ಮಾಡುತ್ತೀ ಎಂದು ಪ್ರಶ್ನಿಸಿದಾಗ ಭಗತ್ ಸಿಂಗ್ ‘ನಾನು ಮೊದಲು ಚಾರ್ಲಿ ಚಾಪ್ಲಿನ್ ಸಿನಿಮಾ ನೋಡತೀನಿ, ವೈನ್ ಕುಡೀತೀನಿ, ಉಣತೀನಿ, ಮಲಗತೀನಿ’ ಅಂತಾನೆ. ಇದು ಬ್ರೆಕ್ಟೇರಿಯನ್ ತಂತ್ರ. ಒಬ್ಬ ಕ್ರಾಂತಿಕಾರಿ ನಮ್ಮಂತಿದ್ದಾನಲ್ಲ ಎನ್ನುವುದೇ ನಮಗೆ ಹೃದಯಂಗಮವಾಗಿ ತಟ್ಟುತ್ತದೆ. ಈ ಸಿನಿಮಾದಲ್ಲಿ ಇಂತಹ ಹಲವು ಬ್ರೆಕ್ಟೇರಿಯನ್ ದೃಶ್ಯಗಳಿವೆ.

ಇತಿಹಾಸವನ್ನು ಸಿನಿಮಾ ಚೌಕಟ್ಟಿಗೆ ಒಗ್ಗಿಸುವಾಗ ಅದರ ಸಂಕೀರ್ಣತೆ, ವೈರುದ್ಯಗಳು, ಮತ್ತು ಸಾಂದರ್ಭಿಕ ಸನ್ನಿವೇಶಗಳನ್ನು ವಸ್ತುನಿಶ್ಟವಾಗಿ ನಿರೂಪಿಸಿರುವ ಶೂಜಿತ್ ಅನೇಕ ಮಿತಿಗಳ ನಡುವೆಯೂ ಗೆದ್ದಿದ್ದಾನೆ. ಮತ್ತು ಬಲಪಂಥೀಯರಿಗೆ ಎದೆ ತಟ್ಟಿಕೊಳ್ಳುವ ಅಥವಾ ದಾಳಿ ಮಾಡುವ ಎರಡೂ ಅವಕಾಶಗಳನ್ನು ಕೊಟ್ಟಿಲ್ಲ. ಇದೇನು ಕಡಿಮೆ ಸಾದನೆಯಲ್ಲ.

ಭಾರತವೆಂದರೇನು? ಭಾರತೀಯರೆಂದರೆ ಯಾರು ಎನ್ನುವ ಸಂಕೀರ್ಣತೆ ಎಲ್ಲಿಯೂ ಇತಿಹಾಸವಾಗದಂತೆ ಎಚ್ಚರ ವಹಿಸಿರುವ ಶೂಜಿತ್ ನಿಜಕ್ಕೂ ಅತ್ಯಂತ ಮಹತ್ವದ ಸಿನಿಮಾ ಕೊಟ್ಟಿದ್ದಾನೆ. ಅವನಿಗೆ ಥ್ಯಾಂಕ್ಸ್.

(ಈ ಚಿತ್ರ ಅಮೆಜಾನ್ ಪ್ರೈಮ್ ನಲ್ಲಿದೆ)


ಇದನ್ನೂ ಓದಿ: ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...