Homeಮುಖಪುಟಹಿಂದುಳಿದ ವರ್ಗದ ನೈತಿಕ ಸಿಟ್ಟಾಗಿದ್ದ ಸಾರೆಕೊಪ್ಪ ಬಂಗಾರಪ್ಪ

ಹಿಂದುಳಿದ ವರ್ಗದ ನೈತಿಕ ಸಿಟ್ಟಾಗಿದ್ದ ಸಾರೆಕೊಪ್ಪ ಬಂಗಾರಪ್ಪ

ಬಂಗಾರಪ್ಪನವರು ಯಾವ್ಯಾವುದೋ ಸರಕಾರ ಕೆಡವಿದರು; ಯಾವ್ಯಾವುದೋ ಸರಕಾರ ಸ್ಥಾಪನೆಗೆ ಕಾರಣವಾದರು. ತಾನು ಸ್ಪರ್ಧಿಸಿದ್ದ ಕ್ಷೇತ್ರ ಸೊರಬಕ್ಕೆ ಚುನಾವಣೆ ಮುಗಿವವರೆಗೆ ಕಾಲಿಡದೆ ರಾಜ್ಯದ ಉದ್ದಗಲದಲ್ಲಿ ಪ್ರಚಾರಮಾಡಿ ಯಾರ‍್ಯಾರನ್ನೋ ಎಮ್ಮೆಲ್ಲೆ-ಎಂಪಿ ಮಾಡಿದರು.

- Advertisement -
- Advertisement -

ಇಂದು ಈ ನಾಡು ಕಂಡ ಛಲಗಾರ, ಹಿಂದುಳಿದ ವರ್ಗದ ನಾಯಕ ಮಾಜಿ ಮುಖ್ಯ ಮಂತ್ರಿ ಸಾರೆಕೊಪ್ಪ ಬಂಗಾರಪ್ಪನವವರ ಜನ್ಮದಿನ. ರಾಜ್ಯದ ಲಕ್ಷಾಂತರ ಜನರ ರೋಮಾಂಚನಕ್ಕೆ ಹೆಸರಾಗಿದ್ದ ‘ಬಂಗಾರಪ್ಪ’ ಈ ನಾಡು ಮರೆಯದ-ಮರೆಯಲಾಗದ ವರ್ಣರಂಜಿತ ರಾಜಕಾರಣಿ; ಪಟ್ಟಭದ್ರರ ಮತ್ತು ಮೇಲ್ವರ್ಗದ ಶೋಷಣೆ ವಿರುದ್ಧ ಹಿಂದುಳಿದ ಸಮುದಾಯದಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸುವ ರಾಜಕಾರಣ ಮಾಡುತಿದ್ದ ಬಂಗಾರಪ್ಪರನ್ನು ನೆನೆಯುವುದೆಂದರೆ ಬಹುತೇಕ ಸುದ್ದಿಮನೆ ಮಂದಿಗೆ ಅದೊಂಥರಾ ಅಲವರಿಕೆ. ಆದರೆ ಗೇಣಿದಾರ ರೈತರ ಗೆಳೆಯನಾಗಿ ರಾಜಕೀಯ ಶುರುಮಾಡಿ ನಾಲ್ಕು ದಶಕಗಳ ಕಾಲ ಚಿರ ಬಂಡಾಯಗಾರನಾಗಿ ಕಂಗೊಳಿಸಿ, ಮಾಜಿ ಮುಖ್ಯಮಂತ್ರಿ ಎನಿಸಿಕೊಂಡು ನಿರ್ಗಮಿಸಿದ ಬಂಗಾರಪ್ಪ ಅಂದಾಕ್ಷಣ ನಾಡಿನ ಜನ ಮಾತ್ರ ಇವತ್ತಿಗೂ ಕಣ್ಣು-ಕಿವಿ ಅಗಲಿಸಿ ನಿಲ್ಲುತ್ತಾರೆ!

ಮಲೆನಾಡಿನ ಸೆರಗಿನ ಶಿವಮೊಗ್ಗ ಜಿಲ್ಲೆಯ ಸೊರಬದ ಹಿಂದುಳಿದ ದೀವರ ಹಟ್ಟಿಯಲ್ಲಿ ಹುಟ್ಟಿದ ಬಂಗಾರಪ್ಪ ಕಾಲೇಜು ಕಲಿತು-ಕಾನೂನು ಪದವೀಧರನಾಗಿ ರಾಜ್ಯದ ಸರಕಾರಗಳ ಕಟ್ಟುವ-ಕೆಡಹುವ ಪ್ರಚಂಡ ರಾಜಕೀಯ ಮುಂದಾಳಾಗಿ ಅವತರಿಸಿದ ಬಗೆಯೆ ಒಂದು ದಂತಕಥೆಯಂತಿದೆ. 1950-60ರ ದಶಕದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಕಾಗೋಡು ಚಳುವಳಿಯ ಬೈ ಪ್ರಾಡಕ್ಟ್ ಈ ಬಂಗಾರಪ್ಪ. ಮೇಲ್ವರ್ಗದ ಭೂಮಾಲೀಕರಿಂದ ಶೋಷಣೆಗೆ ಒಳಗಾಗಿದ್ದ ದೀವರು-ಮಡಿವಾಳರು ಮುಂತಾದ ಹಿಂದುಳಿದ ವರ್ಗದ ಮಂದಿಯಲ್ಲಿ ಶೋಷಕ ಒಡೆಯನ ವಿರುದ್ಧ ಬಂಡೇಳುವ ನೈತಿಕ ಧೈರ್ಯ ತಂಬಿದ ಹೋರಾಟಗಾರರಲ್ಲಿ ಬಂಗಾರಪ್ಪ ಎದ್ದುಕಾಣುತ್ತಾರೆ. ಗೇಣಿದಾರರ ಪರವಾಗಿ ಹೋರಾಟ ಕಟ್ಟಿದ್ದ ಶಾಂತವೇರಿ ಗೋಪಾಲ ಗೌಡ-ರಾಮಮನೋಹರ ಲೋಹಿಯಾರಂತ ಸಮಾಜವಾದಿ ದಿಗ್ಗಜರಿಂದ ‘ದೀಕ್ಷೆ’ ಪಡೆದಿದ್ದ ಬಂಗಾರಪ್ಪ ಆ ನಂತರದ ತಮ್ಮ ರೆಬೆಲ್ ರಾಜಕಾರಣದಲ್ಲೂ ಆ ಸಿಟ್ಟು-ತಿರುಗಿ ಬೀಳುವ ಮೊಂಡುತನ ಉಳಿಸಿಕೊಂಡಿದ್ದರು. ಆ ಬಂಡುಕೋರ ಪ್ರವೃತ್ತಿಯೇ ಬಂಗಾರಪ್ಪರನ್ನು ಹಿಂದುಳಿದ ವರ್ಗದ ಛಾಂಪಿಯನ್ ಮಾಡಿತೆನ್ನಲಾಗುತ್ತಿದೆ.

1967ರಲ್ಲಿ ಸಮಾಜವಾದಿ ಪಾರ್ಟಿಯ ಶಾಸಕರಾಗಿ ಅಸೆಂಬ್ಲಿ ಪ್ರವೇಶಿಸಿದ ಬಂಗಾರಪ್ಪ ಆ ಬಳಿಕ ಕಾಂಗ್ರೆಸ್-ಜನತಾ ರಂಗ-ಬಿಜೆಪಿ ಎಂದೆಲ್ಲ ಸುತ್ತುಹಾಕಿದರು; ತಮ್ಮದೆ ಕೆಸಿಪಿ, ಕೆವಿಪಿ ಎಂಬ ಎರಡು ಪಕ್ಷ ಕಟ್ಟಿದರು; ಶೇ.8ರಷ್ಟು ಮತ ಪಡೆದು ಹಳೆಯ ಪಕ್ಷ ಕಾಂಗ್ರೆಸ್‌ಅನ್ನು ಇಂದಿರಾ ಗಾಂಧಿ ಸಮ್ಮುಖದಲ್ಲಿಯೇ ಮಕಾಡೆ ಮಲಗಿಸಿದರು. ಯಾವ್ಯಾವುದೋ ಸರಕಾರ ಕೆಡವಿದರು; ಯಾವ್ಯಾವುದೋ ಸರಕಾರ ಸ್ಥಾಪನೆಗೆ ಕಾರಣವಾದರು. ತಾನು ಸ್ಪರ್ಧಿಸಿದ್ದ ಕ್ಷೇತ್ರ ಸೊರಬಕ್ಕೆ ಚುನಾವಣೆ ಮುಗಿವವರೆಗೆ ಕಾಲಿಡದೆ ರಾಜ್ಯದ ಉದ್ದಗಲದಲ್ಲಿ ಪ್ರಚಾರಮಾಡಿ ಯಾರ‍್ಯಾರನ್ನೋ ಎಮ್ಮೆಲ್ಲೆ-ಮಂತ್ರಿ-ಎಂಪಿ ಮಾಡಿದರು. ಇವತ್ತು ಭಸ್ಮಾಸುರನಂತೆ ಬೆಳೆದು ನಿಂತಿರುವ ಮತೀಯ ಅಜೆಂಡಾದ ಸೂತ್ರದಾರ ಬಿಜೆಪಿ ಬೆಳವಣಿಗೆಗೆ ಕೂಡ ಕಾರಣವಾದರು; ಬಂಗಾರಪ್ಪ 2004ರಲ್ಲಿ ಆ ಪಕ್ಷಕ್ಕೆ ಕುಡಿಸಿದ ಬೂಸ್ಟ್ ಕಾರಣವೆಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ. ಮಂತ್ರಿ-ಮುಖ್ಯ ಮಂತ್ರಿ-ಸಂಸದ ಆದರು; ಆದರೆ ಯಾವಾಗಲೂ ಕಿಂಗ್ ಮೇಕರ್ ಆಗುತ್ತಿದ್ದ ಈ ಆಂಟಿ ಹಿರೋ ತಾವು ಅನುಭವಿಸಿದ ಅಧಿಕಾರ ಅವಧಿ ಮಾತ್ರ ತೀರಾ ಚಿಕ್ಕದು!

ಮನುಷ್ಯ ಸಂಬಂಧಗಳನ್ನು ಕಟ್ಟಿಕೊಳ್ಳುತ್ತಿದ್ದ ಬಂಗಾರಪ್ಪ ರಾಜ್ಯ ಕಂಡ ಮಾಸ್ ಲೀಡರ್. ಸ್ವಜಾತಿ ಈಡಿಗರಿಗಷ್ಟೆ ಬಂಗಾರಪ್ಪ ನಾಯಕರಗಿರಲಿಲ್ಲ. ಇಡೀ ರಾಜ್ಯದಲ್ಲಿ ಎಲ್ಲ ಜಾತಿ-ಧರ್ಮದವರನ್ನು ಸೆಳೆಯುವ ಚುಂಬಕ ಇಮೇಜ್ ಹೊಂದಿದ್ದರು; ಹೆಗಡೆ-ಯಡಿಯೂರಪ್ಪ-ದೇವೇಗೌಡ ಮಾಸ್ ಲೀಡರ್‌ಗಳಾದರು ಬಂಗಾರಪ್ಪರಂತೆ ಇಡೀ ರಾಜ್ಯದಲ್ಲಿ ಪ್ರಭಾವ ಬೀರಲಾಗಿಲ್ಲ ಎಂಬ ತರ್ಕ ರಾಜಕೀಯ ಪಡಸಾಲೆಯಲ್ಲಿದೆ. ತೀರಾ ದಯನೀಯ ಸ್ಥಿತಿಯಲ್ಲಿದ್ದ ಮಲೆನಾಡಿನ-ಕರಾವಳಿಯ ದೀವರು-ನಾಮಧಾರಿಗಳು-ಬಿಲ್ಲವರಾಗಲಿ-ಮೀನುಗಾರಗಾಗಲಿ-ಇತರ ಮೈಕ್ರೋಸ್ಕೋಪಿಕ್ ಮೈನಾರಿಟಿ ಮಂದಿಯಾಗಲಿ ಇವತ್ತು ಸವರ್ಣೀಯರ ಸರಿಸಮಕ್ಕೆ ಎದೆಸೆಟೆಸಿ ನಿಲ್ಲುವಂತಾಗಿದ್ದರೆ ಅದು ಬಂಗಾರಪ್ಪನವರ ಹಿಂದುಳಿದ ವರ್ಗದ ಪರವಾದದ ಬದ್ಧತೆಯ ರಾಜಕಾರಣದ ಕೊಡುಗೆ ಎನ್ನಲಾಗುತ್ತಿದೆ.

ಹಾಗಂತ ಬಂಗಾರಪ್ಪ ಹಿಂದುಳಿದವರ ಮೇಲೆತ್ತುವ ಭರದಲ್ಲಿ ಮೇಲ್ವರ್ಗದ ಮನುಷ್ಯ ವಿರೋಧಿಯಾಗಿರಲಿಲ್ಲ. ಎಲ್ಲ ಜಾತಿ-ಧರ್ಮದದವರಿಗೆ ಸ್ಪಂದಿಸುವ ಹೃದಯವಂತ ಮುಂದಾಳಾಗಿದ್ದರು. ಆದರೂ ಬಂಗಾರಪ್ಪರನ್ನು ಬ್ರಾಹ್ಮಣ-ಲಿಂಗಾಯತ ವಿರೋಧಿ ಎಂದಬ ಹಣೆಪಟ್ಟಿ ಕಟ್ಟುವ ಕೆಲಸ ಹಿಂದುಳಿದವರ ಮೇಲೆ ಸವಾರಿ ಮಾಡುತ್ತ ಬಂದಿದ್ದ ‘ಶಿಷ್ಠ’ರೆನಿಸಿಕೊಂಡವರಿಂದ ನಡೆಯಿತೆನ್ನಲಾಗುತ್ತಿದೆ. ಪ್ರಾತಿನಿಧ್ಯದ ಕಾರಣಕ್ಕಾಗಿ ಬಂಗಾರಪ್ಪ ಹಿಂದುಳಿದವರ ಬಗ್ಗೆ ಕಳಕಳಿ ವ್ಯಕ್ತ ಪಡಿಸಿದರಷ್ಟೇ; ಆದರೆ ಎಂದಿಗೂ ಜಾತಿ ಆಧಾರದಲ್ಲಿ ಎಂದೂ ಅಸಾಯಕರು-ಅರ್ಹರನ್ನು ದಮನಿಸಿದ ಉದಾಹರಣೆಗಳಿಲ್ಲ. ಕಷ್ಟ ಹೇಳಿಕೊಂಡು ಬರುತ್ತಿದ್ದವರಿಗೆ ಸ್ಪಂದಿಸಿ ಹೋಗುವಾಗ ಬಸ್ ಚಾರ್ಜ್ ಕೊಟ್ಟು ಕಳಿಸುತ್ತಿದ್ದರು. ಬಂಗಾರಪ್ಪರಿಂದ ಮೇಲುವರ್ಗದವರೂ ರಾಜಕೀಯ ಸ್ಥಾನ-ಮಾನ ಪಡೆದ ಸಾಕಷ್ಟು ನಿದರ್ಶನಗಳಿವೆ.

ಬಂಗಾರಪ್ಪ ಜಾತಿ-ಧರ್ಮ ನೋಡದೆ ನೊಂದವರಿಗೆ ನೆರವಾಗುತ್ತಿದ್ದರು ಎಂಬುದಕ್ಕೆ ಇಲ್ಲೊಂದು ಕತೆಯಿದೆ. ಕೇಶ ಮುಂಡನ ಮಾಡಿಸಿಕೊಂಡಿದ್ದ ಕೆಂಪು ಸೀರೆಯುಟ್ಟ ಬ್ರಾಹ್ಮಣ ವಯೋವೃದ್ಧೆಯಬ್ಬರು ಬಂಗಾರಪ್ಪ ಮುಖ್ಯ ಮಂತ್ರಿಯಗಿದ್ದಾಗ ಜನತಾ ದರ್ಶನಕ್ಕೆಂದು ಬೆಂಗಳೂರಿಗೆ ಹೋಗಿದ್ದರು. ಹೊನ್ನಾವರದ ಹಳದಿಪುರದಿಂದ ಹೋಗಿದ್ದ ಈ ಹವ್ಯಕರ ಅಜ್ಜಿಯ ಮೊಮ್ಮೊಗ ತಾಯಿನ್ನು ಕಳೆದುಕೊಂಡು ತಬ್ಬಲಿಯಾಗಿದ್ದ; ತಂದೆ ಮರು ಮದುವೆಯಾಗಿದ್ದ. ಟಿಸಿಎಚ್ ಮುಗಿಸಿದ್ದ ಮೊಮ್ಮಗನಿಗೆ ಎಲ್ಲಾದರೂ ಮಾಸ್ತರಿಕೆ ಸಿಕ್ಕರೆ ಬದುಕಿಕೊಳ್ಳುತ್ತಾನೆಂಬ ಆಸೆ ಅಜ್ಜಿಯದು; ಬಂಗಾರಪ್ಪನವರಲ್ಲಿ ತನ್ನ ಮೊಮ್ಮಗನಿಗೆ ನೌಕರಿ ಕೊಡಿಸುವಂತೆ ಅಜ್ಜಿ ಕೇಳಿಕೊಳ್ಳುತ್ತಾಳೆ; ಬಂಗಾರಪ್ಪ ತಕ್ಷಣ ಸಂಬಂಧಿಸಿದ ಅಧಿಕಾರಿಗಳ ಕರೆಸಿ ಆ ಮೊಮ್ಮಗನಿಗೆ ಉದ್ಯೋಗ ಬೇಗ ಸಿಗುವಂತೆ ಮಾಡುತ್ತಾರೆ. ಅಜ್ಜಿಯ ಕೈಗೆ ಬಸ್ ಚಾರ್ಜ್ ಹಣ ಕೊಟ್ಟು ಅಧಿಕಾರಿಗಳಿಗೆ ಹೊನ್ನಾವರ ಬಸ್ ಹತ್ತಿಸಿ ಕಳಿಸುವಂತೆ ಹೇಳುತ್ತಾರೆ! ಅಜ್ಜಿ ಊರು ತಲುಪಿದ ಒಂದೇ ವಾರದಲ್ಲಿ ಮೊಮ್ಮಗ ಮಾಸ್ತರ್ ಆಗುತ್ತಾನೆ. ಇದು ಬಂಗಾರಪ್ಪನವರ ಅಸಲಿ ವ್ಯಕ್ತಿತ್ವವಾಗಿತ್ತು.

ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸೂರಿಲ್ಲದವರಿಗೆ ನೆರಳು ನೀಡುವ, ಆಶ್ರಯ ಇಲ್ಲದವರಿಗೆ ಅನ್ನ ನೀಡುವ ಅಕ್ಷಯ, ಗ್ರಾಮೀಣ ಪ್ರದೇಶದ ಶಿಕ್ಷಣಾರ್ಥಿ-ಉದ್ಯೋಗಾರ್ಥಿಗಳಿಗೆ ಕೃಪಾಂಕ ಕೊಟ್ಟು ಮೇಲೆತ್ತುವ ಮೀಸಲಾತಿ, ಧಾರ್ಮಿಕ ಸ್ಥಳಗಳ ಅಭಿವೃದ್ದಿಗೆ ಅನುದಾನ ನೀಡುವ ಆರಾಧನಾ, ಗುಡಿ ಕೈಗಾರಿಕೆಗೆ ಪ್ರೋತ್ಸಾಹ ನೀಡುವ ಪ್ರಮುಖ ಯೋಜನೆಗಳನ್ನು ಜಾರಿಗೆ ತಂದರು; ಆ ಬಳಿಕ ಅಧಿಕಾರಕ್ಕೆ ಬಂದವರಾರೂ ಈ ಯೋಜನೆಗಳ ತಂಟೆಗೆ ಹೋಗದೆ ಮುಂದುವರಿಸಿಕೊಂಡು ಹೋಗುವಂತಾಗಿರುವುದು ಬಂಗಾರಪ್ಪನವರ ದೂರದೃಷ್ಟಿಗೆ ನಿದರ್ಶನದಂತಿದೆ ಎನ್ನಲಾಗಿದೆ. ಸಾತ್ವಿಕ ಸಿಟ್ಟಿನ ರಾಜಕಾರಣದಲ್ಲಿ ಬಂಗಾರಪ್ಪ ಎಡವಿರಬಹುದು. ಆದರೆ ದೇವರಾಜ ಅರಸರ ನಂತರ ಬಂಗಾರಪ್ಪ ಹಿಂದುಳಿದ ವರ್ಗದ ಧೀಮಂತ ನಾಯಕರೆಂಬುದರಲ್ಲಿ ಎರಡು ಮಾತೇ ಇಲ್ಲ ಎಂಬುದು ಇತಿಹಾಸ ಪುಟದಲ್ಲಿ ದಾಖಲಾಗಿಹೋಗಿದೆ.

ಇದನ್ನೂ ಓದಿ: ಎಸ್.ಬಂಗಾರಪ್ಪನವರ 87ನೇ ಜನ್ಮದಿನ: ಆತ್ಮವಿಶ್ವಾಸದ ಪ್ರತೀಕ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...