Homeಕರ್ನಾಟಕಇದು ಖುಷಿಯ ವಿಚಾರ; ಆತಂಕದ್ದೂ ಕೂಡ.... ಹನುಮಂತನ ಕತೆಯ ಸಿನಿಮಾಗೆ ಆತನೇ ಹೀರೋ!

ಇದು ಖುಷಿಯ ವಿಚಾರ; ಆತಂಕದ್ದೂ ಕೂಡ…. ಹನುಮಂತನ ಕತೆಯ ಸಿನಿಮಾಗೆ ಆತನೇ ಹೀರೋ!

- Advertisement -
- Advertisement -

ಯಾವುದೇ ಕಲೆಯ ತರಬೇತಿ ಇಲ್ಲದ, ಅಂತಹ ಯಾವ ಹಿನ್ನಲೆ ಅಥವಾ ಪರಿಸರದಲ್ಲಿ ಬೆಳೆಯದೇ ಇರುವ, ಗಾಂಧಿನಗರದಿಂದ 500 ಕಿ.ಮೀ. ದೂರದ ಉತ್ತರ ಕರ್ನಾಟಕದ ಒಂದು ಪುಟ್ಟ ಗ್ರಾಮದ ಶ್ರಮಜೀವಿ ಯುವಕನೊಬ್ಬನಿಗೆ ಸಿನಿಮಾ ಹೀರೊ ಆಗುವ ಅವಕಾಶ ಸಿಕ್ಕಿದೆ. ಇದು ಖುಷಿಯ ವಿಷಯ. ಇಲ್ಲಿ ಆತಂಕಕ್ಕೆ ಕಾರಣವೆಂದರೆ ಹಿಂದಿನ ಇಂತಹ ಪ್ರಸಂಗಗಳನ್ನೆ ನೆನೆದರೆ ಇಂತಹ ಹುಡುಗರು ಸಿನಿಮಾ ಮಂದಿಯ ತೆವಲು ಮತ್ತು ಸ್ವಾರ್ಥಕ್ಕೆ ಬಲಿಯಾಗಿ ತಮ್ಮ ಬದುಕನ್ನೆ ನಾಶ ಮಾಡಿಕೊಂಡ ದುರಂತ ನಮ್ಮ ಮುಂದೆ ಇದೆ.

ಈಗ ಸ ರಿ ಗ ಮ ಪ ಖ್ಯಾತಿಯ ಹನುಮಂತನನ್ನು ಹೀರೋ ಮಾಡಲು ಹೊರಟ ಯುವಕ ಉಡುಪಿ ಜಿಲ್ಲೆಯ ಕುಂದಾಪುರದ ಸಂದೇಶ ಶೆಟ್ಟಿ ಅಜ್ರಿ. ಸಿನಿಮಾ ನುಡಿಕಟ್ಟು ಮತ್ತು ತಂತ್ರಜ್ಞಾನ ಕೌಶಲ್ಯಗಳ ಮೇಲೆ ಈಗ ತಾನೇ ಹಿಡಿತ ಸಾಧಿಸುತ್ತಿರುವ ಈ ಯುವಕ ಗಾಂಧಿನಗರದ ವ್ಯವಹಾರದ ದೃಷ್ಟಿಯಲ್ಲಿ ನೋಡುವುದಾದರೆ ಒಂದರ್ಥದಲ್ಲೇ ಮುಗ್ಧನೇ. ಗಾಂಧಿನಗರ, ಕನಿಷ್ಕಾ ಇತ್ಯಾದಿ ಸಂಕೀರ್ಣ ‘ಸಿನಿ ಸಂತೆ’ಯಿಂದ ದೂರ ಇರುವಾತನೇ.

ನಿರ್ದೇಶಕ ಸಂದೇಶ್

ಮುಂಬೈಯಲ್ಲಿ ಹವ್ಯಾಸಿಯಾಗಿ ಸಿನಿಮಾ ಕೌಶಲ್ಯ ಕಲಿತ ಸಂದೇಶ್ ಈಗಾಗಲೇ ‘ಕತ್ತಲ ಕೋಣೆ’ ಎಂಬ ಸಿನಿಮಾವನ್ನು ನಿರ್ದೇಶಿಸಿ ಕೈಸುಟ್ಟುಕೊಂಡಿದ್ದಾರೆ. ಆ ಕತೆಯಲ್ಲಿ ಕರಾವಳಿಯಲ್ಲಿನ ಗಾಂಜಾ ಮಾಫಿಯಾದ ಚಿತ್ರಣವನ್ನು, ಆ ಮಾಫಿಯಾದ ಸದಸ್ಯರು ನಿಗೂಢವಾಗಿದ್ದರೂ, ಅವರು ಸಾರ್ವಜನಿಕ ಜೀವಮದಲ್ಲಿ ಸಭ್ಯ ಗಣ್ಯರಂತೆ ನಟಿಸುವುದನ್ನು ತೋರಿಸುತ್ತಲೇ, ಯುವಶಕ್ತಿಯ ಚೈತನ್ಯವನ್ನು ಹಿಂಡಿ ಹಾಕುತ್ತಿರುವ ಗಾಂಜಾ ದಂಧೆಯ ಬಗ್ಗೆ ಪೊಲೀಸ್ ವ್ಯವಸ್ಥೆ ಜಾಣಕುರುಡನ್ನು ಪ್ರದರ್ಶಿಸುವುದನ್ನು ತೋರಿಸಲು ಯತ್ನಿಸಿದ್ದಾರಂತೆ. ಅಂದಂತೆ ಈ ಚಿತ್ರದಲ್ಲಿ ಗಾಂಜಾ ಮಾಫಿಯದ ಡಾನ್ ಪತ್ರಿಕೆಯೊಂದನ್ನು ನಡೆಸುತ್ತಿರುತ್ತಾನೆ, ಆತನ ಸಂಸ್ಥೆಯಲ್ಲಿರುವ ಪತ್ರಕರ್ತರಿಗೂ ಇದರ ಅರಿವಿರುವುದಿಲ್ಲವಂತೆ. ಕೊಡಗಿನಲ್ಲಿ ಪ್ರವಾಹ ಸಂಭವಿಸಿದ ಕಾರಣಕ್ಕೆ ಆ ಭಾಗದಲ್ಲಿ ಚಿತ್ರಕ್ಕೆ ಹಿನ್ನಡೆ ಆಯಿತು ಎಂಬುದು ಸಂದೇಶ ಅಂಬೋಣ. ಆದರೆ ಈ ಚಿತ್ರವನ್ನು ಮಾರ್ಕೆಟ್ ಮಾಡುವುದರಲ್ಲಿ ಅವರು ಸಂಪೂರ್ಣ ಸೋತಿದ್ದಾರೆ.

ಈಗ ಅದರಿಂದ ಪಾಠ ಕಲಿತಿರುವೆ ಅಂದಿರುವ ಅವರು, ಈಗಾಗಲೇ ಹಲವು ಹೊಸ ನಿರ್ಮಾಪಕರನ್ನು ಸಂಪರ್ಕಿಸಿದ್ದಾರಂತೆ. ಹಾಡುಹಕ್ಕಿ ಹನುಮಂತನ ಮನೆಗೂ ಹೋಗಿ ಅವರ ಕುಟುಂಬದವರಿಗೆ ಭರವಸೆ ನೀಡಿ ಹನುಮಂತನನ್ನು ಸಿನಿಮಾಕ್ಕೆ ಒಪ್ಪಿಸಿದ್ದಾರೆ.

‘ಹನುಮಂತನಲ್ಲಿ ಮುಗ್ಧತೆ ಇರುವುದು ನಿಜವಾದರೂ ಅದು ಪೂರ್ತಿ ಸತ್ಯವಲ್ಲ. ಬಣ್ಣದ ಜಗತ್ತಿನ ಯಾಮಾರಿಸುವ ಕಲೆಯನ್ನು ಅರ್ಥ ಮಾಡಿಕೊಳ್ಳಬಲ್ಲ ಆತ ಅದನ್ನು ನೇರವಾಗಿ ಹೇಳುವುದಿಲ್ಲ, ಅದನ್ನು ತನ್ನ ಆಡುಭಾಷೆಯಲ್ಲಿ ವಂಗ್ಯದೊಂದಿಗೆ ಅಭಿವ್ಯಕ್ತಿಸುತ್ತಾನೆ. ಇನ್ನೊಂದು ವಿಷಯವೆಂದರೆ ಹನುಮಂತನಿಗೆ ದಿಢೀರ್ ಖ್ಯಾತಿಯ ಯಾವ ಗೀಳೂ ಇಲ್ಲ. ಈಗ ಆತ ಬೇರೆ ಬೇರೆ ಊರುಗಳಲ್ಲಿ ಸ್ಟೇಜ್ ಶೋಗಳಲ್ಲಿ ಭಾಗವಹಿಸಿ ಅವರು ಕೊಟ್ಟ ಗೌರವಧನ ಪಡೆಯುತ್ತಿದ್ದಾನೆ. ಜನರಿಂದ ಸಿಗುವ ಪ್ರೀತಿಯೇ ಆತನಿಗೆ ಸಂಪತ್ತಾಗಿದೆ. ಆದರೆ ಲೌಕಿಕ ಬದುಕಿಗೆ ಅದೆಲ್ಲ ಸಾಕಾಗುವುದಿಲ್ಲವಲ್ಲ. ನಮ್ಮ ಸಿನಿಮಾದ ಮೂಲಕ ಆತನ ಗಾಯನ ಕಲೆ ಮತ್ತು ಆತನಲ್ಲಿರುವ ನಟನೆಯನ್ನು ಜನರು ಎದುರು ಇಡುವ ಪ್ರಾಮಾಣಿಕ ಯತ್ನವನ್ನು ಮಾಡುತ್ತೇವೆ’ ಎನ್ನುತ್ತಾರೆ ಸಂದೇಶ್.

ಝೀ ಟಿವಿಯಲ್ಲಿ ಈ ಹಿಂದೆ ಶಿರಹಟ್ಟಿ ಕಡೆಯ ಹನುಮಂತನ ಹೆಸರಿನ ಇನ್ನೊಬ್ಬ ತಳಸಮುದಾದಯದ ಯುವಕ ಪ್ರಶಸ್ತಿ ಪಡೆದ ನಂತರ ಸಿನಿಮಾದಲ್ಲಿ ಹಾಡಲು ಅವಕಾಶ ಎಂದೆಲ್ಲ ಪ್ರಚಾರವಾಯಿತಾದರೂ ಈಗ ಆತನ ಹೆಸರೇ ಇಲ್ಲ. ‘ಜಂಗ್ಲಿ ಜಾಕಿ’ ಹೆಸರಿನ ಸಿನಿಮಾ ಎಂಬ ಎಂಬ ವಂಚಕ ಜಾಲದಲ್ಲಿ ಸಿಕ್ಕ ಆದಿವಾಸಿ ಯುವಕ ರಾಜೇಶ್ ಮಾನಸಿಕ ಅಸ್ವಸ್ಥನಾಗಿ ಆತ್ಮಹತ್ಯೆಯನ್ನು ಮಾಡಿಕೊಂಡ ದುರಂತ ನಮ್ಮ ಮುಂದೆ ಇದೆ.

ಇದರ ಬಗ್ಗೆ ಸ್ಪಷ್ಟ ಅರಿವಿರುವ ಸಂದೇಶ್, ಈ ಸಿನಿಮಾ ಕತೆಯಲ್ಲಿ ಇಂತಹ ವಂಚನೆಯ ವಿಷಯವೂ ಮತ್ತು ಹಳ್ಳುಗಾಡಿನ ಪ್ರತಿಭೆಗಳಿಗೆ ಅವಕಾಶ ಕೊಡುತ್ತಲೇ ಅವರ ಸಹಜ ಸ್ವಭಾವವನ್ನು ಟಿಆರ್ಪಿಗೆಂದು ಬಳಸಿಕೊಳ್ಳುವ ಆತುರದಲ್ಲಿ ಅವರನ್ನ ಬಫುನ್‍ಗಳನ್ನಂತೆ ಮಾಡುವ ಕ್ರೌರ್ಯವನ್ನು ಸೂಕ್ಷ್ಮವಾಗಿ ತೋರಿಸುತ್ತಿದ್ದೇವೆ. ಹನುಮಂತನ ಬದುಕಿನ ಚಿತ್ರಣದ ವಿವರಗಳು ಮನೋಜ್ಞವಾಗಿ ಮೂಡಿ ಬರಲಿವೆ ಎಂದರು ಸಂದೇಶ್.

ಹಾಡು ಮತ್ತು ಗಾಯನ ಕಲೆ ಹಿಂದಿರುವ ಸಾಂಸ್ಕೃತಿಕ ರಾಜಕಾರಣ, ಆ ಕಾರಣಕ್ಕಾಗಿ ಸಮುದಾಯವೊಂದರ ಹಿಡಿತದಲ್ಲಿ ಈ ಕಲೆಗಳು ಬಂಧಿಯಾಗಿದ್ದ ಇತುಹಾಸವನ್ನೂ ಸಂದೇಶ್ ನಮ್ಮ ಮುಂದಿಡಲಿದ್ದಾರಂತೆ. ಹನುಮಂತ ಮತ್ತು ಸಂದೇಶ ಇಬ್ಬರಿಗೂ ಒಳ್ಳೆಯದಾಗಲಿ. ನಮ್ಮಲ್ಲಿರುವ ಆತಂಕವನ್ನು ಸಂದೇಶ್ ದೂರ ಮಾಡಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಧನ್ಯವಾದ ಸರ್ ಕಲಾವಿದರು ನಿಮ್ಮಂತಹ ಪತ್ರಕರ್ತರ ಬರಹಗಳಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯ,

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...