Homeಕರ್ನಾಟಕಇದು ಖುಷಿಯ ವಿಚಾರ; ಆತಂಕದ್ದೂ ಕೂಡ.... ಹನುಮಂತನ ಕತೆಯ ಸಿನಿಮಾಗೆ ಆತನೇ ಹೀರೋ!

ಇದು ಖುಷಿಯ ವಿಚಾರ; ಆತಂಕದ್ದೂ ಕೂಡ…. ಹನುಮಂತನ ಕತೆಯ ಸಿನಿಮಾಗೆ ಆತನೇ ಹೀರೋ!

- Advertisement -
- Advertisement -

ಯಾವುದೇ ಕಲೆಯ ತರಬೇತಿ ಇಲ್ಲದ, ಅಂತಹ ಯಾವ ಹಿನ್ನಲೆ ಅಥವಾ ಪರಿಸರದಲ್ಲಿ ಬೆಳೆಯದೇ ಇರುವ, ಗಾಂಧಿನಗರದಿಂದ 500 ಕಿ.ಮೀ. ದೂರದ ಉತ್ತರ ಕರ್ನಾಟಕದ ಒಂದು ಪುಟ್ಟ ಗ್ರಾಮದ ಶ್ರಮಜೀವಿ ಯುವಕನೊಬ್ಬನಿಗೆ ಸಿನಿಮಾ ಹೀರೊ ಆಗುವ ಅವಕಾಶ ಸಿಕ್ಕಿದೆ. ಇದು ಖುಷಿಯ ವಿಷಯ. ಇಲ್ಲಿ ಆತಂಕಕ್ಕೆ ಕಾರಣವೆಂದರೆ ಹಿಂದಿನ ಇಂತಹ ಪ್ರಸಂಗಗಳನ್ನೆ ನೆನೆದರೆ ಇಂತಹ ಹುಡುಗರು ಸಿನಿಮಾ ಮಂದಿಯ ತೆವಲು ಮತ್ತು ಸ್ವಾರ್ಥಕ್ಕೆ ಬಲಿಯಾಗಿ ತಮ್ಮ ಬದುಕನ್ನೆ ನಾಶ ಮಾಡಿಕೊಂಡ ದುರಂತ ನಮ್ಮ ಮುಂದೆ ಇದೆ.

ಈಗ ಸ ರಿ ಗ ಮ ಪ ಖ್ಯಾತಿಯ ಹನುಮಂತನನ್ನು ಹೀರೋ ಮಾಡಲು ಹೊರಟ ಯುವಕ ಉಡುಪಿ ಜಿಲ್ಲೆಯ ಕುಂದಾಪುರದ ಸಂದೇಶ ಶೆಟ್ಟಿ ಅಜ್ರಿ. ಸಿನಿಮಾ ನುಡಿಕಟ್ಟು ಮತ್ತು ತಂತ್ರಜ್ಞಾನ ಕೌಶಲ್ಯಗಳ ಮೇಲೆ ಈಗ ತಾನೇ ಹಿಡಿತ ಸಾಧಿಸುತ್ತಿರುವ ಈ ಯುವಕ ಗಾಂಧಿನಗರದ ವ್ಯವಹಾರದ ದೃಷ್ಟಿಯಲ್ಲಿ ನೋಡುವುದಾದರೆ ಒಂದರ್ಥದಲ್ಲೇ ಮುಗ್ಧನೇ. ಗಾಂಧಿನಗರ, ಕನಿಷ್ಕಾ ಇತ್ಯಾದಿ ಸಂಕೀರ್ಣ ‘ಸಿನಿ ಸಂತೆ’ಯಿಂದ ದೂರ ಇರುವಾತನೇ.

ನಿರ್ದೇಶಕ ಸಂದೇಶ್

ಮುಂಬೈಯಲ್ಲಿ ಹವ್ಯಾಸಿಯಾಗಿ ಸಿನಿಮಾ ಕೌಶಲ್ಯ ಕಲಿತ ಸಂದೇಶ್ ಈಗಾಗಲೇ ‘ಕತ್ತಲ ಕೋಣೆ’ ಎಂಬ ಸಿನಿಮಾವನ್ನು ನಿರ್ದೇಶಿಸಿ ಕೈಸುಟ್ಟುಕೊಂಡಿದ್ದಾರೆ. ಆ ಕತೆಯಲ್ಲಿ ಕರಾವಳಿಯಲ್ಲಿನ ಗಾಂಜಾ ಮಾಫಿಯಾದ ಚಿತ್ರಣವನ್ನು, ಆ ಮಾಫಿಯಾದ ಸದಸ್ಯರು ನಿಗೂಢವಾಗಿದ್ದರೂ, ಅವರು ಸಾರ್ವಜನಿಕ ಜೀವಮದಲ್ಲಿ ಸಭ್ಯ ಗಣ್ಯರಂತೆ ನಟಿಸುವುದನ್ನು ತೋರಿಸುತ್ತಲೇ, ಯುವಶಕ್ತಿಯ ಚೈತನ್ಯವನ್ನು ಹಿಂಡಿ ಹಾಕುತ್ತಿರುವ ಗಾಂಜಾ ದಂಧೆಯ ಬಗ್ಗೆ ಪೊಲೀಸ್ ವ್ಯವಸ್ಥೆ ಜಾಣಕುರುಡನ್ನು ಪ್ರದರ್ಶಿಸುವುದನ್ನು ತೋರಿಸಲು ಯತ್ನಿಸಿದ್ದಾರಂತೆ. ಅಂದಂತೆ ಈ ಚಿತ್ರದಲ್ಲಿ ಗಾಂಜಾ ಮಾಫಿಯದ ಡಾನ್ ಪತ್ರಿಕೆಯೊಂದನ್ನು ನಡೆಸುತ್ತಿರುತ್ತಾನೆ, ಆತನ ಸಂಸ್ಥೆಯಲ್ಲಿರುವ ಪತ್ರಕರ್ತರಿಗೂ ಇದರ ಅರಿವಿರುವುದಿಲ್ಲವಂತೆ. ಕೊಡಗಿನಲ್ಲಿ ಪ್ರವಾಹ ಸಂಭವಿಸಿದ ಕಾರಣಕ್ಕೆ ಆ ಭಾಗದಲ್ಲಿ ಚಿತ್ರಕ್ಕೆ ಹಿನ್ನಡೆ ಆಯಿತು ಎಂಬುದು ಸಂದೇಶ ಅಂಬೋಣ. ಆದರೆ ಈ ಚಿತ್ರವನ್ನು ಮಾರ್ಕೆಟ್ ಮಾಡುವುದರಲ್ಲಿ ಅವರು ಸಂಪೂರ್ಣ ಸೋತಿದ್ದಾರೆ.

ಈಗ ಅದರಿಂದ ಪಾಠ ಕಲಿತಿರುವೆ ಅಂದಿರುವ ಅವರು, ಈಗಾಗಲೇ ಹಲವು ಹೊಸ ನಿರ್ಮಾಪಕರನ್ನು ಸಂಪರ್ಕಿಸಿದ್ದಾರಂತೆ. ಹಾಡುಹಕ್ಕಿ ಹನುಮಂತನ ಮನೆಗೂ ಹೋಗಿ ಅವರ ಕುಟುಂಬದವರಿಗೆ ಭರವಸೆ ನೀಡಿ ಹನುಮಂತನನ್ನು ಸಿನಿಮಾಕ್ಕೆ ಒಪ್ಪಿಸಿದ್ದಾರೆ.

‘ಹನುಮಂತನಲ್ಲಿ ಮುಗ್ಧತೆ ಇರುವುದು ನಿಜವಾದರೂ ಅದು ಪೂರ್ತಿ ಸತ್ಯವಲ್ಲ. ಬಣ್ಣದ ಜಗತ್ತಿನ ಯಾಮಾರಿಸುವ ಕಲೆಯನ್ನು ಅರ್ಥ ಮಾಡಿಕೊಳ್ಳಬಲ್ಲ ಆತ ಅದನ್ನು ನೇರವಾಗಿ ಹೇಳುವುದಿಲ್ಲ, ಅದನ್ನು ತನ್ನ ಆಡುಭಾಷೆಯಲ್ಲಿ ವಂಗ್ಯದೊಂದಿಗೆ ಅಭಿವ್ಯಕ್ತಿಸುತ್ತಾನೆ. ಇನ್ನೊಂದು ವಿಷಯವೆಂದರೆ ಹನುಮಂತನಿಗೆ ದಿಢೀರ್ ಖ್ಯಾತಿಯ ಯಾವ ಗೀಳೂ ಇಲ್ಲ. ಈಗ ಆತ ಬೇರೆ ಬೇರೆ ಊರುಗಳಲ್ಲಿ ಸ್ಟೇಜ್ ಶೋಗಳಲ್ಲಿ ಭಾಗವಹಿಸಿ ಅವರು ಕೊಟ್ಟ ಗೌರವಧನ ಪಡೆಯುತ್ತಿದ್ದಾನೆ. ಜನರಿಂದ ಸಿಗುವ ಪ್ರೀತಿಯೇ ಆತನಿಗೆ ಸಂಪತ್ತಾಗಿದೆ. ಆದರೆ ಲೌಕಿಕ ಬದುಕಿಗೆ ಅದೆಲ್ಲ ಸಾಕಾಗುವುದಿಲ್ಲವಲ್ಲ. ನಮ್ಮ ಸಿನಿಮಾದ ಮೂಲಕ ಆತನ ಗಾಯನ ಕಲೆ ಮತ್ತು ಆತನಲ್ಲಿರುವ ನಟನೆಯನ್ನು ಜನರು ಎದುರು ಇಡುವ ಪ್ರಾಮಾಣಿಕ ಯತ್ನವನ್ನು ಮಾಡುತ್ತೇವೆ’ ಎನ್ನುತ್ತಾರೆ ಸಂದೇಶ್.

ಝೀ ಟಿವಿಯಲ್ಲಿ ಈ ಹಿಂದೆ ಶಿರಹಟ್ಟಿ ಕಡೆಯ ಹನುಮಂತನ ಹೆಸರಿನ ಇನ್ನೊಬ್ಬ ತಳಸಮುದಾದಯದ ಯುವಕ ಪ್ರಶಸ್ತಿ ಪಡೆದ ನಂತರ ಸಿನಿಮಾದಲ್ಲಿ ಹಾಡಲು ಅವಕಾಶ ಎಂದೆಲ್ಲ ಪ್ರಚಾರವಾಯಿತಾದರೂ ಈಗ ಆತನ ಹೆಸರೇ ಇಲ್ಲ. ‘ಜಂಗ್ಲಿ ಜಾಕಿ’ ಹೆಸರಿನ ಸಿನಿಮಾ ಎಂಬ ಎಂಬ ವಂಚಕ ಜಾಲದಲ್ಲಿ ಸಿಕ್ಕ ಆದಿವಾಸಿ ಯುವಕ ರಾಜೇಶ್ ಮಾನಸಿಕ ಅಸ್ವಸ್ಥನಾಗಿ ಆತ್ಮಹತ್ಯೆಯನ್ನು ಮಾಡಿಕೊಂಡ ದುರಂತ ನಮ್ಮ ಮುಂದೆ ಇದೆ.

ಇದರ ಬಗ್ಗೆ ಸ್ಪಷ್ಟ ಅರಿವಿರುವ ಸಂದೇಶ್, ಈ ಸಿನಿಮಾ ಕತೆಯಲ್ಲಿ ಇಂತಹ ವಂಚನೆಯ ವಿಷಯವೂ ಮತ್ತು ಹಳ್ಳುಗಾಡಿನ ಪ್ರತಿಭೆಗಳಿಗೆ ಅವಕಾಶ ಕೊಡುತ್ತಲೇ ಅವರ ಸಹಜ ಸ್ವಭಾವವನ್ನು ಟಿಆರ್ಪಿಗೆಂದು ಬಳಸಿಕೊಳ್ಳುವ ಆತುರದಲ್ಲಿ ಅವರನ್ನ ಬಫುನ್‍ಗಳನ್ನಂತೆ ಮಾಡುವ ಕ್ರೌರ್ಯವನ್ನು ಸೂಕ್ಷ್ಮವಾಗಿ ತೋರಿಸುತ್ತಿದ್ದೇವೆ. ಹನುಮಂತನ ಬದುಕಿನ ಚಿತ್ರಣದ ವಿವರಗಳು ಮನೋಜ್ಞವಾಗಿ ಮೂಡಿ ಬರಲಿವೆ ಎಂದರು ಸಂದೇಶ್.

ಹಾಡು ಮತ್ತು ಗಾಯನ ಕಲೆ ಹಿಂದಿರುವ ಸಾಂಸ್ಕೃತಿಕ ರಾಜಕಾರಣ, ಆ ಕಾರಣಕ್ಕಾಗಿ ಸಮುದಾಯವೊಂದರ ಹಿಡಿತದಲ್ಲಿ ಈ ಕಲೆಗಳು ಬಂಧಿಯಾಗಿದ್ದ ಇತುಹಾಸವನ್ನೂ ಸಂದೇಶ್ ನಮ್ಮ ಮುಂದಿಡಲಿದ್ದಾರಂತೆ. ಹನುಮಂತ ಮತ್ತು ಸಂದೇಶ ಇಬ್ಬರಿಗೂ ಒಳ್ಳೆಯದಾಗಲಿ. ನಮ್ಮಲ್ಲಿರುವ ಆತಂಕವನ್ನು ಸಂದೇಶ್ ದೂರ ಮಾಡಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಧನ್ಯವಾದ ಸರ್ ಕಲಾವಿದರು ನಿಮ್ಮಂತಹ ಪತ್ರಕರ್ತರ ಬರಹಗಳಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯ,

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...