Homeಕರ್ನಾಟಕಇದು ಖುಷಿಯ ವಿಚಾರ; ಆತಂಕದ್ದೂ ಕೂಡ.... ಹನುಮಂತನ ಕತೆಯ ಸಿನಿಮಾಗೆ ಆತನೇ ಹೀರೋ!

ಇದು ಖುಷಿಯ ವಿಚಾರ; ಆತಂಕದ್ದೂ ಕೂಡ…. ಹನುಮಂತನ ಕತೆಯ ಸಿನಿಮಾಗೆ ಆತನೇ ಹೀರೋ!

- Advertisement -
- Advertisement -

ಯಾವುದೇ ಕಲೆಯ ತರಬೇತಿ ಇಲ್ಲದ, ಅಂತಹ ಯಾವ ಹಿನ್ನಲೆ ಅಥವಾ ಪರಿಸರದಲ್ಲಿ ಬೆಳೆಯದೇ ಇರುವ, ಗಾಂಧಿನಗರದಿಂದ 500 ಕಿ.ಮೀ. ದೂರದ ಉತ್ತರ ಕರ್ನಾಟಕದ ಒಂದು ಪುಟ್ಟ ಗ್ರಾಮದ ಶ್ರಮಜೀವಿ ಯುವಕನೊಬ್ಬನಿಗೆ ಸಿನಿಮಾ ಹೀರೊ ಆಗುವ ಅವಕಾಶ ಸಿಕ್ಕಿದೆ. ಇದು ಖುಷಿಯ ವಿಷಯ. ಇಲ್ಲಿ ಆತಂಕಕ್ಕೆ ಕಾರಣವೆಂದರೆ ಹಿಂದಿನ ಇಂತಹ ಪ್ರಸಂಗಗಳನ್ನೆ ನೆನೆದರೆ ಇಂತಹ ಹುಡುಗರು ಸಿನಿಮಾ ಮಂದಿಯ ತೆವಲು ಮತ್ತು ಸ್ವಾರ್ಥಕ್ಕೆ ಬಲಿಯಾಗಿ ತಮ್ಮ ಬದುಕನ್ನೆ ನಾಶ ಮಾಡಿಕೊಂಡ ದುರಂತ ನಮ್ಮ ಮುಂದೆ ಇದೆ.

ಈಗ ಸ ರಿ ಗ ಮ ಪ ಖ್ಯಾತಿಯ ಹನುಮಂತನನ್ನು ಹೀರೋ ಮಾಡಲು ಹೊರಟ ಯುವಕ ಉಡುಪಿ ಜಿಲ್ಲೆಯ ಕುಂದಾಪುರದ ಸಂದೇಶ ಶೆಟ್ಟಿ ಅಜ್ರಿ. ಸಿನಿಮಾ ನುಡಿಕಟ್ಟು ಮತ್ತು ತಂತ್ರಜ್ಞಾನ ಕೌಶಲ್ಯಗಳ ಮೇಲೆ ಈಗ ತಾನೇ ಹಿಡಿತ ಸಾಧಿಸುತ್ತಿರುವ ಈ ಯುವಕ ಗಾಂಧಿನಗರದ ವ್ಯವಹಾರದ ದೃಷ್ಟಿಯಲ್ಲಿ ನೋಡುವುದಾದರೆ ಒಂದರ್ಥದಲ್ಲೇ ಮುಗ್ಧನೇ. ಗಾಂಧಿನಗರ, ಕನಿಷ್ಕಾ ಇತ್ಯಾದಿ ಸಂಕೀರ್ಣ ‘ಸಿನಿ ಸಂತೆ’ಯಿಂದ ದೂರ ಇರುವಾತನೇ.

ನಿರ್ದೇಶಕ ಸಂದೇಶ್

ಮುಂಬೈಯಲ್ಲಿ ಹವ್ಯಾಸಿಯಾಗಿ ಸಿನಿಮಾ ಕೌಶಲ್ಯ ಕಲಿತ ಸಂದೇಶ್ ಈಗಾಗಲೇ ‘ಕತ್ತಲ ಕೋಣೆ’ ಎಂಬ ಸಿನಿಮಾವನ್ನು ನಿರ್ದೇಶಿಸಿ ಕೈಸುಟ್ಟುಕೊಂಡಿದ್ದಾರೆ. ಆ ಕತೆಯಲ್ಲಿ ಕರಾವಳಿಯಲ್ಲಿನ ಗಾಂಜಾ ಮಾಫಿಯಾದ ಚಿತ್ರಣವನ್ನು, ಆ ಮಾಫಿಯಾದ ಸದಸ್ಯರು ನಿಗೂಢವಾಗಿದ್ದರೂ, ಅವರು ಸಾರ್ವಜನಿಕ ಜೀವಮದಲ್ಲಿ ಸಭ್ಯ ಗಣ್ಯರಂತೆ ನಟಿಸುವುದನ್ನು ತೋರಿಸುತ್ತಲೇ, ಯುವಶಕ್ತಿಯ ಚೈತನ್ಯವನ್ನು ಹಿಂಡಿ ಹಾಕುತ್ತಿರುವ ಗಾಂಜಾ ದಂಧೆಯ ಬಗ್ಗೆ ಪೊಲೀಸ್ ವ್ಯವಸ್ಥೆ ಜಾಣಕುರುಡನ್ನು ಪ್ರದರ್ಶಿಸುವುದನ್ನು ತೋರಿಸಲು ಯತ್ನಿಸಿದ್ದಾರಂತೆ. ಅಂದಂತೆ ಈ ಚಿತ್ರದಲ್ಲಿ ಗಾಂಜಾ ಮಾಫಿಯದ ಡಾನ್ ಪತ್ರಿಕೆಯೊಂದನ್ನು ನಡೆಸುತ್ತಿರುತ್ತಾನೆ, ಆತನ ಸಂಸ್ಥೆಯಲ್ಲಿರುವ ಪತ್ರಕರ್ತರಿಗೂ ಇದರ ಅರಿವಿರುವುದಿಲ್ಲವಂತೆ. ಕೊಡಗಿನಲ್ಲಿ ಪ್ರವಾಹ ಸಂಭವಿಸಿದ ಕಾರಣಕ್ಕೆ ಆ ಭಾಗದಲ್ಲಿ ಚಿತ್ರಕ್ಕೆ ಹಿನ್ನಡೆ ಆಯಿತು ಎಂಬುದು ಸಂದೇಶ ಅಂಬೋಣ. ಆದರೆ ಈ ಚಿತ್ರವನ್ನು ಮಾರ್ಕೆಟ್ ಮಾಡುವುದರಲ್ಲಿ ಅವರು ಸಂಪೂರ್ಣ ಸೋತಿದ್ದಾರೆ.

ಈಗ ಅದರಿಂದ ಪಾಠ ಕಲಿತಿರುವೆ ಅಂದಿರುವ ಅವರು, ಈಗಾಗಲೇ ಹಲವು ಹೊಸ ನಿರ್ಮಾಪಕರನ್ನು ಸಂಪರ್ಕಿಸಿದ್ದಾರಂತೆ. ಹಾಡುಹಕ್ಕಿ ಹನುಮಂತನ ಮನೆಗೂ ಹೋಗಿ ಅವರ ಕುಟುಂಬದವರಿಗೆ ಭರವಸೆ ನೀಡಿ ಹನುಮಂತನನ್ನು ಸಿನಿಮಾಕ್ಕೆ ಒಪ್ಪಿಸಿದ್ದಾರೆ.

‘ಹನುಮಂತನಲ್ಲಿ ಮುಗ್ಧತೆ ಇರುವುದು ನಿಜವಾದರೂ ಅದು ಪೂರ್ತಿ ಸತ್ಯವಲ್ಲ. ಬಣ್ಣದ ಜಗತ್ತಿನ ಯಾಮಾರಿಸುವ ಕಲೆಯನ್ನು ಅರ್ಥ ಮಾಡಿಕೊಳ್ಳಬಲ್ಲ ಆತ ಅದನ್ನು ನೇರವಾಗಿ ಹೇಳುವುದಿಲ್ಲ, ಅದನ್ನು ತನ್ನ ಆಡುಭಾಷೆಯಲ್ಲಿ ವಂಗ್ಯದೊಂದಿಗೆ ಅಭಿವ್ಯಕ್ತಿಸುತ್ತಾನೆ. ಇನ್ನೊಂದು ವಿಷಯವೆಂದರೆ ಹನುಮಂತನಿಗೆ ದಿಢೀರ್ ಖ್ಯಾತಿಯ ಯಾವ ಗೀಳೂ ಇಲ್ಲ. ಈಗ ಆತ ಬೇರೆ ಬೇರೆ ಊರುಗಳಲ್ಲಿ ಸ್ಟೇಜ್ ಶೋಗಳಲ್ಲಿ ಭಾಗವಹಿಸಿ ಅವರು ಕೊಟ್ಟ ಗೌರವಧನ ಪಡೆಯುತ್ತಿದ್ದಾನೆ. ಜನರಿಂದ ಸಿಗುವ ಪ್ರೀತಿಯೇ ಆತನಿಗೆ ಸಂಪತ್ತಾಗಿದೆ. ಆದರೆ ಲೌಕಿಕ ಬದುಕಿಗೆ ಅದೆಲ್ಲ ಸಾಕಾಗುವುದಿಲ್ಲವಲ್ಲ. ನಮ್ಮ ಸಿನಿಮಾದ ಮೂಲಕ ಆತನ ಗಾಯನ ಕಲೆ ಮತ್ತು ಆತನಲ್ಲಿರುವ ನಟನೆಯನ್ನು ಜನರು ಎದುರು ಇಡುವ ಪ್ರಾಮಾಣಿಕ ಯತ್ನವನ್ನು ಮಾಡುತ್ತೇವೆ’ ಎನ್ನುತ್ತಾರೆ ಸಂದೇಶ್.

ಝೀ ಟಿವಿಯಲ್ಲಿ ಈ ಹಿಂದೆ ಶಿರಹಟ್ಟಿ ಕಡೆಯ ಹನುಮಂತನ ಹೆಸರಿನ ಇನ್ನೊಬ್ಬ ತಳಸಮುದಾದಯದ ಯುವಕ ಪ್ರಶಸ್ತಿ ಪಡೆದ ನಂತರ ಸಿನಿಮಾದಲ್ಲಿ ಹಾಡಲು ಅವಕಾಶ ಎಂದೆಲ್ಲ ಪ್ರಚಾರವಾಯಿತಾದರೂ ಈಗ ಆತನ ಹೆಸರೇ ಇಲ್ಲ. ‘ಜಂಗ್ಲಿ ಜಾಕಿ’ ಹೆಸರಿನ ಸಿನಿಮಾ ಎಂಬ ಎಂಬ ವಂಚಕ ಜಾಲದಲ್ಲಿ ಸಿಕ್ಕ ಆದಿವಾಸಿ ಯುವಕ ರಾಜೇಶ್ ಮಾನಸಿಕ ಅಸ್ವಸ್ಥನಾಗಿ ಆತ್ಮಹತ್ಯೆಯನ್ನು ಮಾಡಿಕೊಂಡ ದುರಂತ ನಮ್ಮ ಮುಂದೆ ಇದೆ.

ಇದರ ಬಗ್ಗೆ ಸ್ಪಷ್ಟ ಅರಿವಿರುವ ಸಂದೇಶ್, ಈ ಸಿನಿಮಾ ಕತೆಯಲ್ಲಿ ಇಂತಹ ವಂಚನೆಯ ವಿಷಯವೂ ಮತ್ತು ಹಳ್ಳುಗಾಡಿನ ಪ್ರತಿಭೆಗಳಿಗೆ ಅವಕಾಶ ಕೊಡುತ್ತಲೇ ಅವರ ಸಹಜ ಸ್ವಭಾವವನ್ನು ಟಿಆರ್ಪಿಗೆಂದು ಬಳಸಿಕೊಳ್ಳುವ ಆತುರದಲ್ಲಿ ಅವರನ್ನ ಬಫುನ್‍ಗಳನ್ನಂತೆ ಮಾಡುವ ಕ್ರೌರ್ಯವನ್ನು ಸೂಕ್ಷ್ಮವಾಗಿ ತೋರಿಸುತ್ತಿದ್ದೇವೆ. ಹನುಮಂತನ ಬದುಕಿನ ಚಿತ್ರಣದ ವಿವರಗಳು ಮನೋಜ್ಞವಾಗಿ ಮೂಡಿ ಬರಲಿವೆ ಎಂದರು ಸಂದೇಶ್.

ಹಾಡು ಮತ್ತು ಗಾಯನ ಕಲೆ ಹಿಂದಿರುವ ಸಾಂಸ್ಕೃತಿಕ ರಾಜಕಾರಣ, ಆ ಕಾರಣಕ್ಕಾಗಿ ಸಮುದಾಯವೊಂದರ ಹಿಡಿತದಲ್ಲಿ ಈ ಕಲೆಗಳು ಬಂಧಿಯಾಗಿದ್ದ ಇತುಹಾಸವನ್ನೂ ಸಂದೇಶ್ ನಮ್ಮ ಮುಂದಿಡಲಿದ್ದಾರಂತೆ. ಹನುಮಂತ ಮತ್ತು ಸಂದೇಶ ಇಬ್ಬರಿಗೂ ಒಳ್ಳೆಯದಾಗಲಿ. ನಮ್ಮಲ್ಲಿರುವ ಆತಂಕವನ್ನು ಸಂದೇಶ್ ದೂರ ಮಾಡಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಧನ್ಯವಾದ ಸರ್ ಕಲಾವಿದರು ನಿಮ್ಮಂತಹ ಪತ್ರಕರ್ತರ ಬರಹಗಳಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯ,

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...