Homeಕರ್ನಾಟಕಇದು ಖುಷಿಯ ವಿಚಾರ; ಆತಂಕದ್ದೂ ಕೂಡ.... ಹನುಮಂತನ ಕತೆಯ ಸಿನಿಮಾಗೆ ಆತನೇ ಹೀರೋ!

ಇದು ಖುಷಿಯ ವಿಚಾರ; ಆತಂಕದ್ದೂ ಕೂಡ…. ಹನುಮಂತನ ಕತೆಯ ಸಿನಿಮಾಗೆ ಆತನೇ ಹೀರೋ!

- Advertisement -
- Advertisement -

ಯಾವುದೇ ಕಲೆಯ ತರಬೇತಿ ಇಲ್ಲದ, ಅಂತಹ ಯಾವ ಹಿನ್ನಲೆ ಅಥವಾ ಪರಿಸರದಲ್ಲಿ ಬೆಳೆಯದೇ ಇರುವ, ಗಾಂಧಿನಗರದಿಂದ 500 ಕಿ.ಮೀ. ದೂರದ ಉತ್ತರ ಕರ್ನಾಟಕದ ಒಂದು ಪುಟ್ಟ ಗ್ರಾಮದ ಶ್ರಮಜೀವಿ ಯುವಕನೊಬ್ಬನಿಗೆ ಸಿನಿಮಾ ಹೀರೊ ಆಗುವ ಅವಕಾಶ ಸಿಕ್ಕಿದೆ. ಇದು ಖುಷಿಯ ವಿಷಯ. ಇಲ್ಲಿ ಆತಂಕಕ್ಕೆ ಕಾರಣವೆಂದರೆ ಹಿಂದಿನ ಇಂತಹ ಪ್ರಸಂಗಗಳನ್ನೆ ನೆನೆದರೆ ಇಂತಹ ಹುಡುಗರು ಸಿನಿಮಾ ಮಂದಿಯ ತೆವಲು ಮತ್ತು ಸ್ವಾರ್ಥಕ್ಕೆ ಬಲಿಯಾಗಿ ತಮ್ಮ ಬದುಕನ್ನೆ ನಾಶ ಮಾಡಿಕೊಂಡ ದುರಂತ ನಮ್ಮ ಮುಂದೆ ಇದೆ.

ಈಗ ಸ ರಿ ಗ ಮ ಪ ಖ್ಯಾತಿಯ ಹನುಮಂತನನ್ನು ಹೀರೋ ಮಾಡಲು ಹೊರಟ ಯುವಕ ಉಡುಪಿ ಜಿಲ್ಲೆಯ ಕುಂದಾಪುರದ ಸಂದೇಶ ಶೆಟ್ಟಿ ಅಜ್ರಿ. ಸಿನಿಮಾ ನುಡಿಕಟ್ಟು ಮತ್ತು ತಂತ್ರಜ್ಞಾನ ಕೌಶಲ್ಯಗಳ ಮೇಲೆ ಈಗ ತಾನೇ ಹಿಡಿತ ಸಾಧಿಸುತ್ತಿರುವ ಈ ಯುವಕ ಗಾಂಧಿನಗರದ ವ್ಯವಹಾರದ ದೃಷ್ಟಿಯಲ್ಲಿ ನೋಡುವುದಾದರೆ ಒಂದರ್ಥದಲ್ಲೇ ಮುಗ್ಧನೇ. ಗಾಂಧಿನಗರ, ಕನಿಷ್ಕಾ ಇತ್ಯಾದಿ ಸಂಕೀರ್ಣ ‘ಸಿನಿ ಸಂತೆ’ಯಿಂದ ದೂರ ಇರುವಾತನೇ.

ನಿರ್ದೇಶಕ ಸಂದೇಶ್

ಮುಂಬೈಯಲ್ಲಿ ಹವ್ಯಾಸಿಯಾಗಿ ಸಿನಿಮಾ ಕೌಶಲ್ಯ ಕಲಿತ ಸಂದೇಶ್ ಈಗಾಗಲೇ ‘ಕತ್ತಲ ಕೋಣೆ’ ಎಂಬ ಸಿನಿಮಾವನ್ನು ನಿರ್ದೇಶಿಸಿ ಕೈಸುಟ್ಟುಕೊಂಡಿದ್ದಾರೆ. ಆ ಕತೆಯಲ್ಲಿ ಕರಾವಳಿಯಲ್ಲಿನ ಗಾಂಜಾ ಮಾಫಿಯಾದ ಚಿತ್ರಣವನ್ನು, ಆ ಮಾಫಿಯಾದ ಸದಸ್ಯರು ನಿಗೂಢವಾಗಿದ್ದರೂ, ಅವರು ಸಾರ್ವಜನಿಕ ಜೀವಮದಲ್ಲಿ ಸಭ್ಯ ಗಣ್ಯರಂತೆ ನಟಿಸುವುದನ್ನು ತೋರಿಸುತ್ತಲೇ, ಯುವಶಕ್ತಿಯ ಚೈತನ್ಯವನ್ನು ಹಿಂಡಿ ಹಾಕುತ್ತಿರುವ ಗಾಂಜಾ ದಂಧೆಯ ಬಗ್ಗೆ ಪೊಲೀಸ್ ವ್ಯವಸ್ಥೆ ಜಾಣಕುರುಡನ್ನು ಪ್ರದರ್ಶಿಸುವುದನ್ನು ತೋರಿಸಲು ಯತ್ನಿಸಿದ್ದಾರಂತೆ. ಅಂದಂತೆ ಈ ಚಿತ್ರದಲ್ಲಿ ಗಾಂಜಾ ಮಾಫಿಯದ ಡಾನ್ ಪತ್ರಿಕೆಯೊಂದನ್ನು ನಡೆಸುತ್ತಿರುತ್ತಾನೆ, ಆತನ ಸಂಸ್ಥೆಯಲ್ಲಿರುವ ಪತ್ರಕರ್ತರಿಗೂ ಇದರ ಅರಿವಿರುವುದಿಲ್ಲವಂತೆ. ಕೊಡಗಿನಲ್ಲಿ ಪ್ರವಾಹ ಸಂಭವಿಸಿದ ಕಾರಣಕ್ಕೆ ಆ ಭಾಗದಲ್ಲಿ ಚಿತ್ರಕ್ಕೆ ಹಿನ್ನಡೆ ಆಯಿತು ಎಂಬುದು ಸಂದೇಶ ಅಂಬೋಣ. ಆದರೆ ಈ ಚಿತ್ರವನ್ನು ಮಾರ್ಕೆಟ್ ಮಾಡುವುದರಲ್ಲಿ ಅವರು ಸಂಪೂರ್ಣ ಸೋತಿದ್ದಾರೆ.

ಈಗ ಅದರಿಂದ ಪಾಠ ಕಲಿತಿರುವೆ ಅಂದಿರುವ ಅವರು, ಈಗಾಗಲೇ ಹಲವು ಹೊಸ ನಿರ್ಮಾಪಕರನ್ನು ಸಂಪರ್ಕಿಸಿದ್ದಾರಂತೆ. ಹಾಡುಹಕ್ಕಿ ಹನುಮಂತನ ಮನೆಗೂ ಹೋಗಿ ಅವರ ಕುಟುಂಬದವರಿಗೆ ಭರವಸೆ ನೀಡಿ ಹನುಮಂತನನ್ನು ಸಿನಿಮಾಕ್ಕೆ ಒಪ್ಪಿಸಿದ್ದಾರೆ.

‘ಹನುಮಂತನಲ್ಲಿ ಮುಗ್ಧತೆ ಇರುವುದು ನಿಜವಾದರೂ ಅದು ಪೂರ್ತಿ ಸತ್ಯವಲ್ಲ. ಬಣ್ಣದ ಜಗತ್ತಿನ ಯಾಮಾರಿಸುವ ಕಲೆಯನ್ನು ಅರ್ಥ ಮಾಡಿಕೊಳ್ಳಬಲ್ಲ ಆತ ಅದನ್ನು ನೇರವಾಗಿ ಹೇಳುವುದಿಲ್ಲ, ಅದನ್ನು ತನ್ನ ಆಡುಭಾಷೆಯಲ್ಲಿ ವಂಗ್ಯದೊಂದಿಗೆ ಅಭಿವ್ಯಕ್ತಿಸುತ್ತಾನೆ. ಇನ್ನೊಂದು ವಿಷಯವೆಂದರೆ ಹನುಮಂತನಿಗೆ ದಿಢೀರ್ ಖ್ಯಾತಿಯ ಯಾವ ಗೀಳೂ ಇಲ್ಲ. ಈಗ ಆತ ಬೇರೆ ಬೇರೆ ಊರುಗಳಲ್ಲಿ ಸ್ಟೇಜ್ ಶೋಗಳಲ್ಲಿ ಭಾಗವಹಿಸಿ ಅವರು ಕೊಟ್ಟ ಗೌರವಧನ ಪಡೆಯುತ್ತಿದ್ದಾನೆ. ಜನರಿಂದ ಸಿಗುವ ಪ್ರೀತಿಯೇ ಆತನಿಗೆ ಸಂಪತ್ತಾಗಿದೆ. ಆದರೆ ಲೌಕಿಕ ಬದುಕಿಗೆ ಅದೆಲ್ಲ ಸಾಕಾಗುವುದಿಲ್ಲವಲ್ಲ. ನಮ್ಮ ಸಿನಿಮಾದ ಮೂಲಕ ಆತನ ಗಾಯನ ಕಲೆ ಮತ್ತು ಆತನಲ್ಲಿರುವ ನಟನೆಯನ್ನು ಜನರು ಎದುರು ಇಡುವ ಪ್ರಾಮಾಣಿಕ ಯತ್ನವನ್ನು ಮಾಡುತ್ತೇವೆ’ ಎನ್ನುತ್ತಾರೆ ಸಂದೇಶ್.

ಝೀ ಟಿವಿಯಲ್ಲಿ ಈ ಹಿಂದೆ ಶಿರಹಟ್ಟಿ ಕಡೆಯ ಹನುಮಂತನ ಹೆಸರಿನ ಇನ್ನೊಬ್ಬ ತಳಸಮುದಾದಯದ ಯುವಕ ಪ್ರಶಸ್ತಿ ಪಡೆದ ನಂತರ ಸಿನಿಮಾದಲ್ಲಿ ಹಾಡಲು ಅವಕಾಶ ಎಂದೆಲ್ಲ ಪ್ರಚಾರವಾಯಿತಾದರೂ ಈಗ ಆತನ ಹೆಸರೇ ಇಲ್ಲ. ‘ಜಂಗ್ಲಿ ಜಾಕಿ’ ಹೆಸರಿನ ಸಿನಿಮಾ ಎಂಬ ಎಂಬ ವಂಚಕ ಜಾಲದಲ್ಲಿ ಸಿಕ್ಕ ಆದಿವಾಸಿ ಯುವಕ ರಾಜೇಶ್ ಮಾನಸಿಕ ಅಸ್ವಸ್ಥನಾಗಿ ಆತ್ಮಹತ್ಯೆಯನ್ನು ಮಾಡಿಕೊಂಡ ದುರಂತ ನಮ್ಮ ಮುಂದೆ ಇದೆ.

ಇದರ ಬಗ್ಗೆ ಸ್ಪಷ್ಟ ಅರಿವಿರುವ ಸಂದೇಶ್, ಈ ಸಿನಿಮಾ ಕತೆಯಲ್ಲಿ ಇಂತಹ ವಂಚನೆಯ ವಿಷಯವೂ ಮತ್ತು ಹಳ್ಳುಗಾಡಿನ ಪ್ರತಿಭೆಗಳಿಗೆ ಅವಕಾಶ ಕೊಡುತ್ತಲೇ ಅವರ ಸಹಜ ಸ್ವಭಾವವನ್ನು ಟಿಆರ್ಪಿಗೆಂದು ಬಳಸಿಕೊಳ್ಳುವ ಆತುರದಲ್ಲಿ ಅವರನ್ನ ಬಫುನ್‍ಗಳನ್ನಂತೆ ಮಾಡುವ ಕ್ರೌರ್ಯವನ್ನು ಸೂಕ್ಷ್ಮವಾಗಿ ತೋರಿಸುತ್ತಿದ್ದೇವೆ. ಹನುಮಂತನ ಬದುಕಿನ ಚಿತ್ರಣದ ವಿವರಗಳು ಮನೋಜ್ಞವಾಗಿ ಮೂಡಿ ಬರಲಿವೆ ಎಂದರು ಸಂದೇಶ್.

ಹಾಡು ಮತ್ತು ಗಾಯನ ಕಲೆ ಹಿಂದಿರುವ ಸಾಂಸ್ಕೃತಿಕ ರಾಜಕಾರಣ, ಆ ಕಾರಣಕ್ಕಾಗಿ ಸಮುದಾಯವೊಂದರ ಹಿಡಿತದಲ್ಲಿ ಈ ಕಲೆಗಳು ಬಂಧಿಯಾಗಿದ್ದ ಇತುಹಾಸವನ್ನೂ ಸಂದೇಶ್ ನಮ್ಮ ಮುಂದಿಡಲಿದ್ದಾರಂತೆ. ಹನುಮಂತ ಮತ್ತು ಸಂದೇಶ ಇಬ್ಬರಿಗೂ ಒಳ್ಳೆಯದಾಗಲಿ. ನಮ್ಮಲ್ಲಿರುವ ಆತಂಕವನ್ನು ಸಂದೇಶ್ ದೂರ ಮಾಡಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಧನ್ಯವಾದ ಸರ್ ಕಲಾವಿದರು ನಿಮ್ಮಂತಹ ಪತ್ರಕರ್ತರ ಬರಹಗಳಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯ,

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...