Homeಕರ್ನಾಟಕಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ಯಡಿಯೂರಪ್ಪನವರೆ, ಕರ್ನಾಟಕದ ಶೇ.75 ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಿ. ಸರೋಜಿನಿ ಮಹಿಷಿ ವರದಿ ಸಂಪೂರ್ಣ ಅನುಷ್ಠಾನ ಮಾಡಿ ಎಂದು ಮೊಹಮ್ಮದ್ ಹನೀಫ್ ಎಂಬುವವರು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಸರೋಜಿನಿ ಮಹಿಷಿ ವರದಿ ಸಂಪೂರ್ಣ ಅನುಷ್ಠಾನವಾಗಬೇಕು ಮತ್ತು ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ ಸಿಗಲಿ ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಕರ್ನಾಟಕ ಜನಾಧಿಕಾರ ಪಕ್ಷ ಮತ್ತು ಕರ್ನಾಟಕ ರಣಧೀರ ಪಡೆಯಿಂದ ಇಂದು ಟ್ವಿಟರ್ ಅಭಿಯಾನ ನಡೆಸಲಾಯಿತು.

“ಕರುನಾಡು ನಮ್ಮದು, ನಾವು ಕನ್ನಡಿಗರು ನಮ್ಮ ನೆಲ, ನಮ್ಮ ಜಲ, ನಮ್ಮ ಗಾಳಿ ಅಂತೆಯೇ ಉದ್ಯೋಗವೂ ನಮ್ಮದೇ. ಕರ್ನಾಟಕಕ್ಕೆ ಭದ್ರ ಬುನಾದಿಯೊಂದು ಬೇಕಿದೆ ಅದು ಕನ್ನಡಿಗರಿಗೆ ಉದ್ಯೋಗದ ಮೂಲಕವೇ ಆಗಬೇಕಿದೆ. ಕನ್ನಡದ ಅಸ್ಮಿತೆಗಾಗಿ ಹೋರಾಡುವ ನಾವು ಕನ್ನಡದ ಉದ್ಯೋಗಕ್ಕೂ ಹೋರಾಡುವ. ಕ್ರಾಂತಿಯ ಕಿಡಿ ಆರದಿರಲಿ. ಕನ್ನಡಿಗರ ವೀರ ಧ್ವನಿ ಗಟ್ಟಿಯಾಗಲಿ” ಎಂಬ ಘೋಷಣೆಗಳೊಂದಿಗೆ ಹತ್ತಾರು ಸಾವಿರ ಟ್ವೀಟ್‌ಗಳು ದಾಖಲಾಗಿದ್ದು, ಉದ್ಯೋಗಕ್ಕಾಗಿ ದೊಡ್ಡ ದನಿ ಕೇಳಿಬಂದಿದೆ.

“ಅನ್ನ ಕೊಡುವ ಚಿನ್ನದ ನಾಡಿದು ಕರ್ನಾಟಕ, ಇಲ್ಲಿ ಉದಯಿಸಿವ ಪ್ರತೀ ಉದ್ಯೋಗಗಳೂ ಕನ್ನಡಿಗರಿಗಾಗೇ ಮೀಸಲು, ಗಟ್ಟಿ ದನಿಯಲ್ಲಿ ಹೇಳಿ ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ” ಎಂದು ಕರ್ನಾಟಕ ರಣಧೀರರ ಪಡೆಯ ರಾಜ್ಯಾಧ್ಯಕ್ಷ ಹರೀಶ್ ಕುಮಾರ್ ಬಿ ಟ್ವೀಟ್ ಮಾಡಿದ್ದಾರೆ.

ನಮ್ಮ ಉದ್ದೇಶ ಇಷ್ಟೇ ಯಾವ ಕಂಪನಿ ಬ್ಯಾಂಕ್ ಗಳಿಗೆ ಹೋದ್ರು ಕನ್ನಡ ಬಿಟ್ಟು ಮಿಕ್ಕೆಲ್ಲಾ ಭಾಷೆಗಳನ್ನು ಕೇಳುತ್ತಿದ್ದೇವೆ. ಇನ್ಮೇಲೆ ಎಂತಹ ದೊಡ್ಡ ಕಂಪನಿಗಳಿಗೆ ಹೋದ್ರು ಬರೀ ಕನ್ನಡವೇ ಕೇಳಿಸಬೇಕು ರಾಜ್ಯೋತ್ಸವ ದೊಡ್ಡದಾಗಿ ಆಚರಣೆ ಆಗಬೇಕು.. ಎಲ್ಲೆಡೆ ಕನ್ನಡಿಗರೇ ಕಾಣಬೇಕು ಎಂದು ರೂಪೇಶ್ ರಾಜಣ್ಣನವರು ಟ್ವೀಟ್ ಮಾಡಿದ್ದಾರೆ.

ಯಡಿಯೂರಪ್ಪನವರೆ, ಕರ್ನಾಟಕದ ಶೇ.75 ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಿ. ಸರೋಜಿನಿ ಮಹಿಷಿ ವರದಿ ಸಂಪೂರ್ಣ ಅನುಷ್ಠಾನ ಮಾಡಿ ಎಂದು ಮೊಹಮ್ಮದ್ ಹನೀಫ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳಲ್ಲೊಂದಾಗಿದೆ. ಭಾರತದ ಇತರ ರಾಜ್ಯಗಳಿಗೆ ಉದ್ಯೋಗ ಒದಗಿಸಿದೆ. ಆದರೆ ಎಲ್ಲಾ ಸರ್ಕಾರಗಳು ಮತ್ತು ಖಾಸಗಿ ಕಂಪನಿಗಳಿಂದ ಕನ್ನಡಿಗರು ನಿರಂತರವಾಗಿ ನಿರ್ಲಕ್ಷ್ಯಕ್ಕೊಳಗಾಗಿದ್ದಾರೆ ಎಂದು ಸಿದ್ದೇಶ್ ಎಚ್ ಟ್ವೀಟ್ ಮಾಡಿದ್ದಾರೆ.

ಈ ವರದಿ ಪ್ರಕಟವಾಗುವ ಹೊತ್ತಿಗೆ 18 ಸಾವಿರ ಕನ್ನಡಿಗರು ಸಮರ್ಪಕ ಉದ್ಯೋಗ ನೀತಿಗಾಗಿ ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ. ಕೆಲವು ಇಲ್ಲಿವೆ.


ಇದನ್ನೂ ಓದಿ: “ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಲಿ”: ಸ್ವಾತಂತ್ರ್ಯ ದಿನಾಚರಣೆಯಂದು ದಿಟ್ಟ ಹೋರಾಟ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡದ ನಿರುದ್ಯೋಗಿ ಯುವಕರ ಕಣ್ಣೀರು ಒರೆಸುವವರು ಯಾರು……? ???? ಅದಕ್ಕಾಗಿ ಎಲ್ಲರೂ ಒಂದಾಗೋಣ…. ಮುಂದೆ ಯಾದರೂ ಕನ್ನಡಕ್ಕಾಗಿ ಭಾಳೋಣ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...