Homeಕರ್ನಾಟಕಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ಯಡಿಯೂರಪ್ಪನವರೆ, ಕರ್ನಾಟಕದ ಶೇ.75 ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಿ. ಸರೋಜಿನಿ ಮಹಿಷಿ ವರದಿ ಸಂಪೂರ್ಣ ಅನುಷ್ಠಾನ ಮಾಡಿ ಎಂದು ಮೊಹಮ್ಮದ್ ಹನೀಫ್ ಎಂಬುವವರು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಸರೋಜಿನಿ ಮಹಿಷಿ ವರದಿ ಸಂಪೂರ್ಣ ಅನುಷ್ಠಾನವಾಗಬೇಕು ಮತ್ತು ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ ಸಿಗಲಿ ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಕರ್ನಾಟಕ ಜನಾಧಿಕಾರ ಪಕ್ಷ ಮತ್ತು ಕರ್ನಾಟಕ ರಣಧೀರ ಪಡೆಯಿಂದ ಇಂದು ಟ್ವಿಟರ್ ಅಭಿಯಾನ ನಡೆಸಲಾಯಿತು.

“ಕರುನಾಡು ನಮ್ಮದು, ನಾವು ಕನ್ನಡಿಗರು ನಮ್ಮ ನೆಲ, ನಮ್ಮ ಜಲ, ನಮ್ಮ ಗಾಳಿ ಅಂತೆಯೇ ಉದ್ಯೋಗವೂ ನಮ್ಮದೇ. ಕರ್ನಾಟಕಕ್ಕೆ ಭದ್ರ ಬುನಾದಿಯೊಂದು ಬೇಕಿದೆ ಅದು ಕನ್ನಡಿಗರಿಗೆ ಉದ್ಯೋಗದ ಮೂಲಕವೇ ಆಗಬೇಕಿದೆ. ಕನ್ನಡದ ಅಸ್ಮಿತೆಗಾಗಿ ಹೋರಾಡುವ ನಾವು ಕನ್ನಡದ ಉದ್ಯೋಗಕ್ಕೂ ಹೋರಾಡುವ. ಕ್ರಾಂತಿಯ ಕಿಡಿ ಆರದಿರಲಿ. ಕನ್ನಡಿಗರ ವೀರ ಧ್ವನಿ ಗಟ್ಟಿಯಾಗಲಿ” ಎಂಬ ಘೋಷಣೆಗಳೊಂದಿಗೆ ಹತ್ತಾರು ಸಾವಿರ ಟ್ವೀಟ್‌ಗಳು ದಾಖಲಾಗಿದ್ದು, ಉದ್ಯೋಗಕ್ಕಾಗಿ ದೊಡ್ಡ ದನಿ ಕೇಳಿಬಂದಿದೆ.

“ಅನ್ನ ಕೊಡುವ ಚಿನ್ನದ ನಾಡಿದು ಕರ್ನಾಟಕ, ಇಲ್ಲಿ ಉದಯಿಸಿವ ಪ್ರತೀ ಉದ್ಯೋಗಗಳೂ ಕನ್ನಡಿಗರಿಗಾಗೇ ಮೀಸಲು, ಗಟ್ಟಿ ದನಿಯಲ್ಲಿ ಹೇಳಿ ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ” ಎಂದು ಕರ್ನಾಟಕ ರಣಧೀರರ ಪಡೆಯ ರಾಜ್ಯಾಧ್ಯಕ್ಷ ಹರೀಶ್ ಕುಮಾರ್ ಬಿ ಟ್ವೀಟ್ ಮಾಡಿದ್ದಾರೆ.

ನಮ್ಮ ಉದ್ದೇಶ ಇಷ್ಟೇ ಯಾವ ಕಂಪನಿ ಬ್ಯಾಂಕ್ ಗಳಿಗೆ ಹೋದ್ರು ಕನ್ನಡ ಬಿಟ್ಟು ಮಿಕ್ಕೆಲ್ಲಾ ಭಾಷೆಗಳನ್ನು ಕೇಳುತ್ತಿದ್ದೇವೆ. ಇನ್ಮೇಲೆ ಎಂತಹ ದೊಡ್ಡ ಕಂಪನಿಗಳಿಗೆ ಹೋದ್ರು ಬರೀ ಕನ್ನಡವೇ ಕೇಳಿಸಬೇಕು ರಾಜ್ಯೋತ್ಸವ ದೊಡ್ಡದಾಗಿ ಆಚರಣೆ ಆಗಬೇಕು.. ಎಲ್ಲೆಡೆ ಕನ್ನಡಿಗರೇ ಕಾಣಬೇಕು ಎಂದು ರೂಪೇಶ್ ರಾಜಣ್ಣನವರು ಟ್ವೀಟ್ ಮಾಡಿದ್ದಾರೆ.

ಯಡಿಯೂರಪ್ಪನವರೆ, ಕರ್ನಾಟಕದ ಶೇ.75 ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಿ. ಸರೋಜಿನಿ ಮಹಿಷಿ ವರದಿ ಸಂಪೂರ್ಣ ಅನುಷ್ಠಾನ ಮಾಡಿ ಎಂದು ಮೊಹಮ್ಮದ್ ಹನೀಫ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳಲ್ಲೊಂದಾಗಿದೆ. ಭಾರತದ ಇತರ ರಾಜ್ಯಗಳಿಗೆ ಉದ್ಯೋಗ ಒದಗಿಸಿದೆ. ಆದರೆ ಎಲ್ಲಾ ಸರ್ಕಾರಗಳು ಮತ್ತು ಖಾಸಗಿ ಕಂಪನಿಗಳಿಂದ ಕನ್ನಡಿಗರು ನಿರಂತರವಾಗಿ ನಿರ್ಲಕ್ಷ್ಯಕ್ಕೊಳಗಾಗಿದ್ದಾರೆ ಎಂದು ಸಿದ್ದೇಶ್ ಎಚ್ ಟ್ವೀಟ್ ಮಾಡಿದ್ದಾರೆ.

ಈ ವರದಿ ಪ್ರಕಟವಾಗುವ ಹೊತ್ತಿಗೆ 18 ಸಾವಿರ ಕನ್ನಡಿಗರು ಸಮರ್ಪಕ ಉದ್ಯೋಗ ನೀತಿಗಾಗಿ ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ. ಕೆಲವು ಇಲ್ಲಿವೆ.


ಇದನ್ನೂ ಓದಿ: “ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಲಿ”: ಸ್ವಾತಂತ್ರ್ಯ ದಿನಾಚರಣೆಯಂದು ದಿಟ್ಟ ಹೋರಾಟ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡದ ನಿರುದ್ಯೋಗಿ ಯುವಕರ ಕಣ್ಣೀರು ಒರೆಸುವವರು ಯಾರು……? ???? ಅದಕ್ಕಾಗಿ ಎಲ್ಲರೂ ಒಂದಾಗೋಣ…. ಮುಂದೆ ಯಾದರೂ ಕನ್ನಡಕ್ಕಾಗಿ ಭಾಳೋಣ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...