Homeಮುಖಪುಟಸರಪಂಚ್ ಹತ್ಯೆಯಲ್ಲಿ ಸಚಿವ ಮುಂಡೆ ನಂಟು ಕಂಡುಬಂದರೆ ರಾಜೀನಾಮೆ ಕೇಳುತ್ತೇವೆ - ಮಹಾರಾಷ್ಟ್ರ ಸಚಿವ...

ಸರಪಂಚ್ ಹತ್ಯೆಯಲ್ಲಿ ಸಚಿವ ಮುಂಡೆ ನಂಟು ಕಂಡುಬಂದರೆ ರಾಜೀನಾಮೆ ಕೇಳುತ್ತೇವೆ – ಮಹಾರಾಷ್ಟ್ರ ಸಚಿವ ಪಾಟೀಲ್

ಸಚಿವ ಮುಂಡೆ ಅವರು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಪ್ರಭಾವಿ ನಾಯಕರೂ ಆಗಿದ್ದಾರೆ

- Advertisement -
- Advertisement -

ಸರಪಂಚ್ ಸಂತೋಷ್ ದೇಶಮುಖ್ ಹತ್ಯೆಯಲ್ಲಿ ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ಅವರ ಕೈವಾಡ ಇರುವ ಬಗ್ಗೆ ಯಾವುದೇ ಪುರಾವೆಗಳು ಕಂಡುಬಂದರೆ ಅವರನ್ನು ರಾಜೀನಾಮೆ ನೀಡುವಂತೆ ಕೇಳಿಕೊಳ್ಳಲಿದ್ದೇನೆ ಎಂದು ಅವರ ಸಂಪುಟ ಸಹೋದ್ಯೋಗಿ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ. ದೇಶಮುಖ್ ಹತ್ಯೆಯ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಬಿಜೆಪಿ ನಾಯಕ ಪಾಟೀಲ್ ಭಾನುವಾರ ಸಾಂಗ್ಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸರಪಂಚ್ ಹತ್ಯೆಗೆ ಸಂಬಂಧಿಸಿದ ಸುಲಿಗೆ ಪ್ರಕರಣದಲ್ಲಿ ಸಚಿವ ಮುಂಡೆ ಅವರ ಸಹಚರ ವಾಲ್ಮಿಕ್ ಕರಡ್ ಅವರನ್ನು ಬಂಧಿಸಲಾಗಿದೆ. ಸಚಿವ ಮುಂಡೆ ಅವರು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಪ್ರಭಾವಿ ನಾಯಕರೂ ಆಗಿದ್ದಾರೆ. ಎನ್‌ಸಿಪಿಯು ಮಹಾರಾಷ್ಟ್ರದ ಆಡಳಿತರೂಢ ಮಹಾಯುತಿ ಮೈತ್ರಿಯ ಪಕ್ಷವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೀಡ್ ಜಿಲ್ಲೆಯ ಮಸಾಜೋಗ್ ಗ್ರಾಮದ ಸರಪಂಚ್ ದೇಶಮುಖ್ ಅವರನ್ನು ಡಿಸೆಂಬರ್ 9 ರಂದು ಅಲ್ಲಿ ವಿಂಡ್‌ಮಿಲ್ ಯೋಜನೆಯನ್ನು ನಿರ್ವಹಿಸುತ್ತಿರುವ ಇಂಧನ ಸಂಸ್ಥೆಯ ವಿರುದ್ಧ ಸುಲಿಗೆ ಪ್ರಯತ್ನವನ್ನು ತಡೆಯಲು ಪ್ರಯತ್ನಿಸಿದ್ದಕ್ಕಾಗಿ ಅಪಹರಿಸಿ, ಚಿತ್ರಹಿಂಸೆ ನೀಡಿ ಕೊಲ್ಲಲಾಯಿತ್ತು.

ಬೀಡ್ ಜಿಲ್ಲೆಯ ಪಾರ್ಲಿಯ ಎನ್‌ಸಿಪಿ ಶಾಸಕ ಮುಂಡೆ ಅವರನ್ನು ಕರಾದ್ ಅವರೊಂದಿಗಿನ ಸಂಪರ್ಕದ ಬಗ್ಗೆ ಆಡಳಿತ ಮೈತ್ರಿಕೂಟದ ಕೆಲವು ಸಹೋದ್ಯೋಗಿಗಳು ಮತ್ತು ವಿರೋಧ ಪಕ್ಷಗಳು ಟೀಕಿಸುತ್ತಿವೆ.

“ಸಂತೋಷ್ ದೇಶಮುಖ್ ಹತ್ಯೆಯ ತನಿಖೆ ನಡೆಯುತ್ತಿದೆ. ಪ್ರತಿಯೊಂದು ವಿಷಯವೂ ವಿಭಿನ್ನವಾಗಿದೆ. ಸರ್ಕಾರದ ಮುಖ್ಯಸ್ಥರಾಗಿ ದೇವೇಂದ್ರ ಫಡ್ನವೀಸ್ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಪೂರ್ಣ ಸಾಮರ್ಥ್ಯ ಹೊಂದಿದ್ದಾರೆ. ಆರೋಪಗಳಲ್ಲಿ ಹುರುಳಿದೆ ಎಂದು ಅವರು ಭಾವಿಸಿದರೆ, ಅವರು ತಕ್ಷಣ ಕ್ರಮ ಕೈಗೊಂಡು ಮುಂಡೆ ಅವರನ್ನು ರಾಜೀನಾಮೆ ನೀಡುವಂತೆ ಕೇಳುತ್ತಾರೆ” ಎಂದು ಸಚಿವ ಪಾಟೀಲ್ ಹೇಳಿದ್ದಾರೆ.

“ಮಹಾರಾಷ್ಟ್ರ ಸರ್ಕಾರವು ಈಗಾಗಲೇ ಸರಪಂಚ್ ದೇಶಮುಖ್ ಹತ್ಯೆ ಪ್ರಕರಣದ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಕಠಿಣ ಆರೋಪಗಳನ್ನು ಹೊರಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ” ಎಂದು ಬಿಜೆಪಿ ನಾಯಕರೂ ಆಗಿರುವ ಪಾಟೀಲ್ ಹೇಳಿದ್ದಾರೆ. ಪೊಲೀಸ್ ಯಂತ್ರಾಂಗವೂ ಪ್ರಕರಣವನ್ನು ಸಕ್ರಿಯವಾಗಿ ತನಿಖೆ ನಡೆಸುತ್ತಿದೆ ಮತ್ತು ಅದರ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಅನ್ನು ಸಹ ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೆಚ್ಚುವರಿಯಾಗಿ, ತನಿಖೆಯ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಾಲ್ಮಿಕ್ ಕರಾದ್ ಮತ್ತು ಇತರ ಆರೋಪಿಗಳ ವಿರುದ್ಧ ಕಠಿಣ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ)ಯನ್ನು ಅನ್ವಯಿಸುವುದು ಸೇರಿದಂತೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪಾಟೀಲ್ ಹೇಳಿದ್ದಾರೆ. ಕರದ್ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...