Homeಮುಖಪುಟಸರಪಂಚ್ ಹತ್ಯೆಯಲ್ಲಿ ಸಚಿವ ಮುಂಡೆ ನಂಟು ಕಂಡುಬಂದರೆ ರಾಜೀನಾಮೆ ಕೇಳುತ್ತೇವೆ - ಮಹಾರಾಷ್ಟ್ರ ಸಚಿವ...

ಸರಪಂಚ್ ಹತ್ಯೆಯಲ್ಲಿ ಸಚಿವ ಮುಂಡೆ ನಂಟು ಕಂಡುಬಂದರೆ ರಾಜೀನಾಮೆ ಕೇಳುತ್ತೇವೆ – ಮಹಾರಾಷ್ಟ್ರ ಸಚಿವ ಪಾಟೀಲ್

ಸಚಿವ ಮುಂಡೆ ಅವರು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಪ್ರಭಾವಿ ನಾಯಕರೂ ಆಗಿದ್ದಾರೆ

- Advertisement -
- Advertisement -

ಸರಪಂಚ್ ಸಂತೋಷ್ ದೇಶಮುಖ್ ಹತ್ಯೆಯಲ್ಲಿ ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ಅವರ ಕೈವಾಡ ಇರುವ ಬಗ್ಗೆ ಯಾವುದೇ ಪುರಾವೆಗಳು ಕಂಡುಬಂದರೆ ಅವರನ್ನು ರಾಜೀನಾಮೆ ನೀಡುವಂತೆ ಕೇಳಿಕೊಳ್ಳಲಿದ್ದೇನೆ ಎಂದು ಅವರ ಸಂಪುಟ ಸಹೋದ್ಯೋಗಿ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ. ದೇಶಮುಖ್ ಹತ್ಯೆಯ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಬಿಜೆಪಿ ನಾಯಕ ಪಾಟೀಲ್ ಭಾನುವಾರ ಸಾಂಗ್ಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸರಪಂಚ್ ಹತ್ಯೆಗೆ ಸಂಬಂಧಿಸಿದ ಸುಲಿಗೆ ಪ್ರಕರಣದಲ್ಲಿ ಸಚಿವ ಮುಂಡೆ ಅವರ ಸಹಚರ ವಾಲ್ಮಿಕ್ ಕರಡ್ ಅವರನ್ನು ಬಂಧಿಸಲಾಗಿದೆ. ಸಚಿವ ಮುಂಡೆ ಅವರು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಪ್ರಭಾವಿ ನಾಯಕರೂ ಆಗಿದ್ದಾರೆ. ಎನ್‌ಸಿಪಿಯು ಮಹಾರಾಷ್ಟ್ರದ ಆಡಳಿತರೂಢ ಮಹಾಯುತಿ ಮೈತ್ರಿಯ ಪಕ್ಷವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೀಡ್ ಜಿಲ್ಲೆಯ ಮಸಾಜೋಗ್ ಗ್ರಾಮದ ಸರಪಂಚ್ ದೇಶಮುಖ್ ಅವರನ್ನು ಡಿಸೆಂಬರ್ 9 ರಂದು ಅಲ್ಲಿ ವಿಂಡ್‌ಮಿಲ್ ಯೋಜನೆಯನ್ನು ನಿರ್ವಹಿಸುತ್ತಿರುವ ಇಂಧನ ಸಂಸ್ಥೆಯ ವಿರುದ್ಧ ಸುಲಿಗೆ ಪ್ರಯತ್ನವನ್ನು ತಡೆಯಲು ಪ್ರಯತ್ನಿಸಿದ್ದಕ್ಕಾಗಿ ಅಪಹರಿಸಿ, ಚಿತ್ರಹಿಂಸೆ ನೀಡಿ ಕೊಲ್ಲಲಾಯಿತ್ತು.

ಬೀಡ್ ಜಿಲ್ಲೆಯ ಪಾರ್ಲಿಯ ಎನ್‌ಸಿಪಿ ಶಾಸಕ ಮುಂಡೆ ಅವರನ್ನು ಕರಾದ್ ಅವರೊಂದಿಗಿನ ಸಂಪರ್ಕದ ಬಗ್ಗೆ ಆಡಳಿತ ಮೈತ್ರಿಕೂಟದ ಕೆಲವು ಸಹೋದ್ಯೋಗಿಗಳು ಮತ್ತು ವಿರೋಧ ಪಕ್ಷಗಳು ಟೀಕಿಸುತ್ತಿವೆ.

“ಸಂತೋಷ್ ದೇಶಮುಖ್ ಹತ್ಯೆಯ ತನಿಖೆ ನಡೆಯುತ್ತಿದೆ. ಪ್ರತಿಯೊಂದು ವಿಷಯವೂ ವಿಭಿನ್ನವಾಗಿದೆ. ಸರ್ಕಾರದ ಮುಖ್ಯಸ್ಥರಾಗಿ ದೇವೇಂದ್ರ ಫಡ್ನವೀಸ್ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಪೂರ್ಣ ಸಾಮರ್ಥ್ಯ ಹೊಂದಿದ್ದಾರೆ. ಆರೋಪಗಳಲ್ಲಿ ಹುರುಳಿದೆ ಎಂದು ಅವರು ಭಾವಿಸಿದರೆ, ಅವರು ತಕ್ಷಣ ಕ್ರಮ ಕೈಗೊಂಡು ಮುಂಡೆ ಅವರನ್ನು ರಾಜೀನಾಮೆ ನೀಡುವಂತೆ ಕೇಳುತ್ತಾರೆ” ಎಂದು ಸಚಿವ ಪಾಟೀಲ್ ಹೇಳಿದ್ದಾರೆ.

“ಮಹಾರಾಷ್ಟ್ರ ಸರ್ಕಾರವು ಈಗಾಗಲೇ ಸರಪಂಚ್ ದೇಶಮುಖ್ ಹತ್ಯೆ ಪ್ರಕರಣದ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಕಠಿಣ ಆರೋಪಗಳನ್ನು ಹೊರಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ” ಎಂದು ಬಿಜೆಪಿ ನಾಯಕರೂ ಆಗಿರುವ ಪಾಟೀಲ್ ಹೇಳಿದ್ದಾರೆ. ಪೊಲೀಸ್ ಯಂತ್ರಾಂಗವೂ ಪ್ರಕರಣವನ್ನು ಸಕ್ರಿಯವಾಗಿ ತನಿಖೆ ನಡೆಸುತ್ತಿದೆ ಮತ್ತು ಅದರ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಅನ್ನು ಸಹ ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೆಚ್ಚುವರಿಯಾಗಿ, ತನಿಖೆಯ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಾಲ್ಮಿಕ್ ಕರಾದ್ ಮತ್ತು ಇತರ ಆರೋಪಿಗಳ ವಿರುದ್ಧ ಕಠಿಣ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ)ಯನ್ನು ಅನ್ವಯಿಸುವುದು ಸೇರಿದಂತೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪಾಟೀಲ್ ಹೇಳಿದ್ದಾರೆ. ಕರದ್ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...