Homeಮುಖಪುಟತಮಿಳುನಾಡು: ರಾಜಕೀಯ ನಿವೃತ್ತಿ ಘೋಷಿಸಿದ ಶಶಿಕಲಾ ನಟರಾಜನ್!

ತಮಿಳುನಾಡು: ರಾಜಕೀಯ ನಿವೃತ್ತಿ ಘೋಷಿಸಿದ ಶಶಿಕಲಾ ನಟರಾಜನ್!

ಎಐಎಡಿಎಂಕೆ ಪಕ್ಷದಲ್ಲಿ ತನಗೇ ಉನ್ನತ ಸ್ಥಾನ ಸಿಗಬೇಕೆಂದು ಪಟ್ಟು ಹಿಡಿದಿದ್ದ ಶಶಿಕಲಾ ಅವರ ಈ ನಡೆ ಕೊಂಚ ಸಂದೇಹವನ್ನು ಉಳಿಸಿದೆ

- Advertisement -
- Advertisement -

ತಮಿಳುನಾಡಿನ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದ ಶಶಿಕಲಾ ನಟರಾಜನ್ ನಿನ್ನೆ (ಮಾ.3) ರಾಜಕೀಯ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಇತ್ತೀಚೆಗಷ್ಟೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತ ಅವರ ಅಪ್ತೆ ಶಶಿಕಲಾ ರಾಜಕೀಯದಿಂದ ವಿಶ್ರಾಂತಿ ಪಡೆಯುವುದಾಗಿ ಹೇಳಿದ್ದಾರೆ.

ಶಶಿಕಲಾ ಈ ಮಹತ್ದದ ವಿಚಾರವನ್ನು ಮಾಧ್ಯಮ ಪ್ರಕಟಣೆಯ ಮೂಲಕ ಘೋಷಿಸಿದ್ದಾರೆ. “ನಾನು ಎಂದಿಗೂ ಅಧಿಕಾರ ಅಥವಾ ಸ್ಥಾನವನ್ನು ಗುರಿಯಾಗಿಸಿಕೊಂಡಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: AIDMK ಪಕ್ಷದ ಉನ್ನತ ಹುದ್ದೆಗಾಗಿ ಕೋರ್ಟ್ ಮೆಟ್ಟಿಲೇರಿದ ವಿ.ಕೆ ಶಶಿಕಲಾ

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಒಂದು ತಿಂಗಳು ಬಾಕಿ ಇರುವಾಗ ಶಶಿಕಲಾ ಈ ನಿರ್ಧಾರ ಪ್ರಕಟಸಿದ್ದಾರೆ. ಶಶಿಕಲಾ ಜೈಲಿನಿಂದ ಬಿಡುಗಡೆಯಾದ ನಂತರ ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ಪಕ್ಷದಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದರೆ ಈಗ ಶಶಿಕಲಾ ಅವರ ಈ ನಿರ್ಧಾರವು ಆಡಳಿತಾರೂಢ ಎಐಎಡಿಎಂಕೆ ನಾಯಕರಲ್ಲಿ ಮತ್ತು ಕಾರ್ಯಕರ್ತರಲ್ಲಿ ಕೊಂಚ ನಿರಾಳವನ್ನುಂಟುಮಾಡಿದೆ.

ಆದರೆ, ಕಳೆದ ಫೆಬ್ರವರಿ ತಿಂಗಳಿನಲ್ಲಿ, ಎಐಎಡಿಎಂಕೆ ಪಕ್ಷದಿಂದ ತನ್ನನ್ನು ಉಚ್ಚಾಟನೆ ಮಾಡಿದ್ದನ್ನು ಕೋರ್ಟ್‌ನಲ್ಲಿ ಪ್ರಶ್ನಿಸಿ ಮರು ಅರ್ಜಿ ಸಲ್ಲಿಸಿದ್ದ ಶಶಿಕಲಾ, ಈಗ ದಿಢೀರ್ ಎಂದು ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಎಐಎಡಿಎಂಕೆ ಪಕ್ಷದಲ್ಲಿ ತನಗೇ ಉನ್ನತ ಸ್ಥಾನ ಸಿಗಬೇಕೆಂದು ಪಟ್ಟು ಹಿಡಿದಿದ್ದ ಶಶಿಕಲಾ ಅವರ ಈ ನಡೆ ಕೊಂಚ ಸಂದೇಹವನ್ನು ಉಳಿಸಿದೆ. ಈಗ ಅವರ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ: ತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...