Homeಮುಖಪುಟಸಸಿಕಾಂತ್ ಸೆಂಥಿಲ್ ಸೇರ್ಪಡೆ ನಮಗೆ & ದೇಶಕ್ಕೆ ಶಕ್ತಿ-ಸ್ಪೂರ್ತಿ ತಂದಿದೆ: ದಿನೇಶ್‌ ಗುಂಡೂರಾವ್

ಸಸಿಕಾಂತ್ ಸೆಂಥಿಲ್ ಸೇರ್ಪಡೆ ನಮಗೆ & ದೇಶಕ್ಕೆ ಶಕ್ತಿ-ಸ್ಪೂರ್ತಿ ತಂದಿದೆ: ದಿನೇಶ್‌ ಗುಂಡೂರಾವ್

ತಮಿಳುನಾಡಿನ ಕಾಂಗ್ರೆಸ್ ಪಕ್ಷದ ಉಸ್ತುವಾರಿ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಸಿಕಾಂತ್ ಸೆಂಥಿಲ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು

- Advertisement -
- Advertisement -

ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರಿದ ಕೆಲವೇ ತಿಂಗಳುಗಳಲ್ಲಿ ಮತ್ತೊರ್ವ ಐಎಎಸ್ ಅಧಿಕಾರಿ ತಮಿಳುನಾಡು ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ತಮಿಳುನಾಡು ಮೂಲದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಇಂದು ಕಾಂಗ್ರೆಸ್ ಸೇರಿದ್ದಾರೆ.

ತಮಿಳುನಾಡಿನ ಕಾಂಗ್ರೆಸ್ ಪಕ್ಷದ ಉಸ್ತುವಾರಿ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಈ ಬಗ್ಗೆ ದಿನೇಶ್ ಗುಂಡೂರಾವ್ ಟ್ವಿಟ್ಟರ್‌ನಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಜ್ವಾಲಾಮುಖಿಯ ಕಂಪನ : ಸಸಿಕಾಂತ್ ಸೆಂಥಿಲ್‌ರವರ ಮೊದಲ ಬರಹ…

“ಕಾಂಗ್ರೆಸ್ ಕುಟುಂಬಕ್ಕೆ ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್ ಸೆಂಥಿಲ್ ಸರ್‌ಗೆ ಸ್ವಾಗತ. ನಿಮ್ಮ ಸೇರ್ಪಡೆ ತಮಿಳುನಾಡಿನಲ್ಲಿ ಮಾತ್ರವಲ್ಲದೆ ನಮಗೆ ಮತ್ತು ಇಡೀ ದೇಶಕ್ಕೆ ದೊಡ್ಡ ಶಕ್ತಿ ಮತ್ತು ಸ್ಪೂರ್ತಿ ತಂದಿದೆ” ಎಂದು ಬರೆದುಕೊಂಡಿದ್ದಾರೆ.

ಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ಇದನ್ನೂ ಓದಿ: ಸತ್ಯ ಹರಡಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳೋಣ: ಸಸಿಕಾಂತ್ ಸೆಂಥಿಲ್

ತನ್ನ ದಕ್ಷತೆ, ಸೂಕ್ಷ್ಮ ಸಂವೇದನೆಗಳ ಕಾರಣಕ್ಕೆ ಜನರ ಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಸಸಿಕಾಂತ್, ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ತಮ್ಮ ಉದ್ಯೋಗಕ್ಕೆ ರಾಜೀನಾಮೆ ಕೊಟ್ಟರು. ಇವರು “ದೇಶದ ಇಂದಿನ ಪರಿಸ್ಥಿತಿಯಲ್ಲಿ ತಾನು ಐಎಎಸ್ ಅಧಿಕಾರಿಯಾಗಿದ್ದು, ದೇಶವನ್ನು ಕಾಡುತ್ತಿರುವ ಅಪಾಯದ ವಿರುದ್ಧ ಹೋರಾಡಲಾಗದು” ಎಂಬ ಹೇಳಿಕೆಯಿಂದ ಜನರಲ್ಲಿ ಅಚ್ಚರಿ ಉಂಟುಮಾಡಿದ್ದರು. ಜೊತೆಗೆ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಟ್ವಿಟರ್‌ನಲ್ಲಿ ತಮ್ಮ ನಿಲುವನ್ನು ಪೋಸ್ಟ್ ಮಾಡಿರುವ ಸಸಿಕಾಂತ್ ’ಹೋರಾಟವನ್ನು ಮುಂದುವರೆಸುವ ನನ್ನ ಪ್ರಯತ್ನದಲ್ಲಿ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದೇನೆ ಎಂದು ನಾನು ಎಲ್ಲರಿಗೂ ತಿಳಿಸಲು ಬಯಸುತ್ತೇನೆ’ ಎಂದಿದ್ದರು.

ಈ ವ್ಯವಸ್ಥೆಯ ವಿರುದ್ಧ ತಳಮಟ್ಟದಲ್ಲಿ ಕೆಲಸ ಮಾಡುವವರ ಜೊತೆಗೆ ಕೈಜೋಡಿಸುತ್ತೇನೆ. ಈ ಕೆಲಸವನ್ನು ಸರ್ವೀಸ್‍ನಲ್ಲಿ ಇದ್ದು ಮಾಡಲು ಆಗುತ್ತಿಲ್ಲ. ಹಾಗಾಗಿ ನಾನು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೇನೆ

’ನಾನು ಎಲ್ಲಿದ್ದರೂ ನನ್ನ ಜೀವನದುದ್ದಕ್ಕೂ ನಿರ್ಲಕ್ಷ್ಯಕ್ಕೆ ಒಳಗಾದವರಿಗೆ ಧ್ವನಿಯಾಗಲು ಪ್ರಯತ್ನಿಸುತ್ತಿರುವ ಕಾರ್ಯಕರ್ತನಾಗಿದ್ದೇನೆ ಮತ್ತು ನನ್ನ ಕೊನೆಯ ಉಸಿರಿರುವವರೆಗೂ ಅದೇ ರೀತಿ ಮುಂದುವರಿಯುತ್ತೇನೆ’ ಎಂಬ ಭರವಸೆ ನೀಡಿದ್ದರು.

ತಮಿಳುನಾಡಿನ ಎಐಸಿಸಿ ಉಸ್ತುವಾರಿ ಮತ್ತು ಕರ್ನಾಟಕ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರು ಸಸಿಕಾಂತ್‌ ಅವರನ್ನು ಪಕ್ಷಕ್ಕೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇದು ಬದಲಾಗುತ್ತದೆಂಬ ವಿಶ್ವಾಸ ನನಗಿದೆ -ಸಸಿಕಾಂತ್ ಸೆಂಥಿಲ್ ಸಂದರ್ಶನ..

ಅಧಿಕಾರಿ ಸಸಿಕಾಂತ್ 2009ರ ಬ್ಯಾಚ್​​ನ ಕರ್ನಾಟಕ ಕೇಡರ್​ ಐಎಎಸ್​ ಅಧಿಕಾರಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ, ಕಳೆದ ವರ್ಷದ ಸೆಪ್ಟೆಂಬರ್ 6 ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ತಮ್ಮ ದಕ್ಷತೆ ಮತ್ತು ಸೂಕ್ಷ್ಮ ಸಂವೇದನೆಗಳ ಕಾರಣಕ್ಕೆ ಜನರ ಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದರು. ಕೇಂದ್ರ ಸರ್ಕಾರದ ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆಗಳನ್ನ ಅವರು ವಿರೋಧಿಸಿದ್ದರು.

ನಾಗರಿಕ ಸೇವೆಗಳಿಗೆ ರಾಜೀನಾಮೆ ನೀಡಿದ ನಂತರ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಸೆಂಥಿಲ್ ಟೀಕಿಸಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆಯ ಕುರಿತು ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಪ್ರತಿಭಟನೆ, ಅಭಿಯಾನಗಳಲ್ಲಿ ಭಾಗಿಯಾಗಿದ್ದರು.

ಸಸಿಕಾಂತ್ ಸೆಂಥಿಲ್ ಅವರ ಕಿರಿಯ ಸಹೋದ್ಯೋಗಿ ಮತ್ತು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಬಿಜೆಪಿಗೆ ಸೇರುವ ಮೂಲಕ ತಮಿಳುನಾಡಿನಲ್ಲಿ ರಾಜಕೀಯ ಧುಮುಕಿದ್ದಾರೆ. ಪ್ರಸ್ತುತ ಅಣ್ಣಾಮಲೈ ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದಾರೆ.


ಇದನ್ನೂ ಓದಿ: ವೈರಲ್ ಆದ ಐಎಎಸ್ ಅಧಿಕಾರಿ ಸೆಂಥಿಲ್ ಕುರಿತ ಬರಹ: ‘ನಾನು ಕಂಡ ಸಸಿಕಾಂತ್ ಸೆಂಥಿಲ್’ ಬರಹಕ್ಕೆ ನೆಟ್ಟಿಗರು ಥ್ರಿಲ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...