Homeಮುಖಪುಟಸಸಿಕಾಂತ್ ಸೆಂಥಿಲ್ ಸೇರ್ಪಡೆ ನಮಗೆ & ದೇಶಕ್ಕೆ ಶಕ್ತಿ-ಸ್ಪೂರ್ತಿ ತಂದಿದೆ: ದಿನೇಶ್‌ ಗುಂಡೂರಾವ್

ಸಸಿಕಾಂತ್ ಸೆಂಥಿಲ್ ಸೇರ್ಪಡೆ ನಮಗೆ & ದೇಶಕ್ಕೆ ಶಕ್ತಿ-ಸ್ಪೂರ್ತಿ ತಂದಿದೆ: ದಿನೇಶ್‌ ಗುಂಡೂರಾವ್

ತಮಿಳುನಾಡಿನ ಕಾಂಗ್ರೆಸ್ ಪಕ್ಷದ ಉಸ್ತುವಾರಿ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಸಿಕಾಂತ್ ಸೆಂಥಿಲ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು

- Advertisement -
- Advertisement -

ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರಿದ ಕೆಲವೇ ತಿಂಗಳುಗಳಲ್ಲಿ ಮತ್ತೊರ್ವ ಐಎಎಸ್ ಅಧಿಕಾರಿ ತಮಿಳುನಾಡು ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ತಮಿಳುನಾಡು ಮೂಲದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಇಂದು ಕಾಂಗ್ರೆಸ್ ಸೇರಿದ್ದಾರೆ.

ತಮಿಳುನಾಡಿನ ಕಾಂಗ್ರೆಸ್ ಪಕ್ಷದ ಉಸ್ತುವಾರಿ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಈ ಬಗ್ಗೆ ದಿನೇಶ್ ಗುಂಡೂರಾವ್ ಟ್ವಿಟ್ಟರ್‌ನಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಜ್ವಾಲಾಮುಖಿಯ ಕಂಪನ : ಸಸಿಕಾಂತ್ ಸೆಂಥಿಲ್‌ರವರ ಮೊದಲ ಬರಹ…

“ಕಾಂಗ್ರೆಸ್ ಕುಟುಂಬಕ್ಕೆ ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್ ಸೆಂಥಿಲ್ ಸರ್‌ಗೆ ಸ್ವಾಗತ. ನಿಮ್ಮ ಸೇರ್ಪಡೆ ತಮಿಳುನಾಡಿನಲ್ಲಿ ಮಾತ್ರವಲ್ಲದೆ ನಮಗೆ ಮತ್ತು ಇಡೀ ದೇಶಕ್ಕೆ ದೊಡ್ಡ ಶಕ್ತಿ ಮತ್ತು ಸ್ಪೂರ್ತಿ ತಂದಿದೆ” ಎಂದು ಬರೆದುಕೊಂಡಿದ್ದಾರೆ.

ಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ಇದನ್ನೂ ಓದಿ: ಸತ್ಯ ಹರಡಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳೋಣ: ಸಸಿಕಾಂತ್ ಸೆಂಥಿಲ್

ತನ್ನ ದಕ್ಷತೆ, ಸೂಕ್ಷ್ಮ ಸಂವೇದನೆಗಳ ಕಾರಣಕ್ಕೆ ಜನರ ಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಸಸಿಕಾಂತ್, ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ತಮ್ಮ ಉದ್ಯೋಗಕ್ಕೆ ರಾಜೀನಾಮೆ ಕೊಟ್ಟರು. ಇವರು “ದೇಶದ ಇಂದಿನ ಪರಿಸ್ಥಿತಿಯಲ್ಲಿ ತಾನು ಐಎಎಸ್ ಅಧಿಕಾರಿಯಾಗಿದ್ದು, ದೇಶವನ್ನು ಕಾಡುತ್ತಿರುವ ಅಪಾಯದ ವಿರುದ್ಧ ಹೋರಾಡಲಾಗದು” ಎಂಬ ಹೇಳಿಕೆಯಿಂದ ಜನರಲ್ಲಿ ಅಚ್ಚರಿ ಉಂಟುಮಾಡಿದ್ದರು. ಜೊತೆಗೆ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಟ್ವಿಟರ್‌ನಲ್ಲಿ ತಮ್ಮ ನಿಲುವನ್ನು ಪೋಸ್ಟ್ ಮಾಡಿರುವ ಸಸಿಕಾಂತ್ ’ಹೋರಾಟವನ್ನು ಮುಂದುವರೆಸುವ ನನ್ನ ಪ್ರಯತ್ನದಲ್ಲಿ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದೇನೆ ಎಂದು ನಾನು ಎಲ್ಲರಿಗೂ ತಿಳಿಸಲು ಬಯಸುತ್ತೇನೆ’ ಎಂದಿದ್ದರು.

ಈ ವ್ಯವಸ್ಥೆಯ ವಿರುದ್ಧ ತಳಮಟ್ಟದಲ್ಲಿ ಕೆಲಸ ಮಾಡುವವರ ಜೊತೆಗೆ ಕೈಜೋಡಿಸುತ್ತೇನೆ. ಈ ಕೆಲಸವನ್ನು ಸರ್ವೀಸ್‍ನಲ್ಲಿ ಇದ್ದು ಮಾಡಲು ಆಗುತ್ತಿಲ್ಲ. ಹಾಗಾಗಿ ನಾನು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೇನೆ

’ನಾನು ಎಲ್ಲಿದ್ದರೂ ನನ್ನ ಜೀವನದುದ್ದಕ್ಕೂ ನಿರ್ಲಕ್ಷ್ಯಕ್ಕೆ ಒಳಗಾದವರಿಗೆ ಧ್ವನಿಯಾಗಲು ಪ್ರಯತ್ನಿಸುತ್ತಿರುವ ಕಾರ್ಯಕರ್ತನಾಗಿದ್ದೇನೆ ಮತ್ತು ನನ್ನ ಕೊನೆಯ ಉಸಿರಿರುವವರೆಗೂ ಅದೇ ರೀತಿ ಮುಂದುವರಿಯುತ್ತೇನೆ’ ಎಂಬ ಭರವಸೆ ನೀಡಿದ್ದರು.

ತಮಿಳುನಾಡಿನ ಎಐಸಿಸಿ ಉಸ್ತುವಾರಿ ಮತ್ತು ಕರ್ನಾಟಕ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರು ಸಸಿಕಾಂತ್‌ ಅವರನ್ನು ಪಕ್ಷಕ್ಕೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇದು ಬದಲಾಗುತ್ತದೆಂಬ ವಿಶ್ವಾಸ ನನಗಿದೆ -ಸಸಿಕಾಂತ್ ಸೆಂಥಿಲ್ ಸಂದರ್ಶನ..

ಅಧಿಕಾರಿ ಸಸಿಕಾಂತ್ 2009ರ ಬ್ಯಾಚ್​​ನ ಕರ್ನಾಟಕ ಕೇಡರ್​ ಐಎಎಸ್​ ಅಧಿಕಾರಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ, ಕಳೆದ ವರ್ಷದ ಸೆಪ್ಟೆಂಬರ್ 6 ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ತಮ್ಮ ದಕ್ಷತೆ ಮತ್ತು ಸೂಕ್ಷ್ಮ ಸಂವೇದನೆಗಳ ಕಾರಣಕ್ಕೆ ಜನರ ಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದರು. ಕೇಂದ್ರ ಸರ್ಕಾರದ ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆಗಳನ್ನ ಅವರು ವಿರೋಧಿಸಿದ್ದರು.

ನಾಗರಿಕ ಸೇವೆಗಳಿಗೆ ರಾಜೀನಾಮೆ ನೀಡಿದ ನಂತರ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಸೆಂಥಿಲ್ ಟೀಕಿಸಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆಯ ಕುರಿತು ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಪ್ರತಿಭಟನೆ, ಅಭಿಯಾನಗಳಲ್ಲಿ ಭಾಗಿಯಾಗಿದ್ದರು.

ಸಸಿಕಾಂತ್ ಸೆಂಥಿಲ್ ಅವರ ಕಿರಿಯ ಸಹೋದ್ಯೋಗಿ ಮತ್ತು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಬಿಜೆಪಿಗೆ ಸೇರುವ ಮೂಲಕ ತಮಿಳುನಾಡಿನಲ್ಲಿ ರಾಜಕೀಯ ಧುಮುಕಿದ್ದಾರೆ. ಪ್ರಸ್ತುತ ಅಣ್ಣಾಮಲೈ ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದಾರೆ.


ಇದನ್ನೂ ಓದಿ: ವೈರಲ್ ಆದ ಐಎಎಸ್ ಅಧಿಕಾರಿ ಸೆಂಥಿಲ್ ಕುರಿತ ಬರಹ: ‘ನಾನು ಕಂಡ ಸಸಿಕಾಂತ್ ಸೆಂಥಿಲ್’ ಬರಹಕ್ಕೆ ನೆಟ್ಟಿಗರು ಥ್ರಿಲ್…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...