Homeಮುಖಪುಟಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷಕ್ಕೆ ಉಡುಪಿ ಆಯ್ದುಕೊಂಡು ತಪ್ಪು ಮಾಡಿದರು: ಸಸಿಕಾಂತ್ ಸೆಂಥಿಲ್

ಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷಕ್ಕೆ ಉಡುಪಿ ಆಯ್ದುಕೊಂಡು ತಪ್ಪು ಮಾಡಿದರು: ಸಸಿಕಾಂತ್ ಸೆಂಥಿಲ್

ನೀವು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದೀರಿ. ಅವರಿಗಾಗಿ ಆಸ್ತಿ ಮಾಡುತ್ತಿದ್ದೀರಿ. ಆದರೆ ಸಮಾಜದಲ್ಲಿ ಉತ್ತಮ ಸೌಹಾರ್ದ ವಾತವಾರಣ ಇಲ್ಲದೆ ಇದ್ದರೆ ಏನು ಪ್ರಯೋಜನ? ದ್ವೇಷಮಯ ಸಮಾಜದಲ್ಲಿ ಅವರು ಹೇಗೆ ಬದುಕಬೇಕು? ಸೆಂಥಿಲ್ ಪ್ರಶ್ನೆ

- Advertisement -
- Advertisement -

ನೀವು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದೀರಿ. ಅವರಿಗಾಗಿ ಆಸ್ತಿ ಮಾಡುತ್ತಿದ್ದೀರಿ. ಆದರೆ ಸಮಾಜದಲ್ಲಿ ಉತ್ತಮ ಸೌಹಾರ್ದ ವಾತವಾರಣ ಇಲ್ಲದೆ ಇದ್ದರೆ ಏನು ಪ್ರಯೋಜನ? ದ್ವೇಷಮಯ ಸಮಾಜದಲ್ಲಿ ಅವರು ಹೇಗೆ ಬದುಕಬೇಕು? ಹಾಗಾಗಿ ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದನಿಯೆತ್ತಿ ಮಾತನಾಡಿ. ನಿಮಗೆ ಮಾತನಾಡದೆ ಬೇರೆ ಆಯ್ಕೆಯೇ ಇಲ್ಲ. ಅವರ ಬದುಕನ್ನು ಸುಂದರಗೊಳಿಸಲು ಸಹೋದರತ್ವವನ್ನು, ಭಾರತೀಯತೆಯನ್ನು ಆಚರಿಸಿ ಎಂದು ಮಾಜಿ ಐಎಸ್‌ಐ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಕರೆ ನೀಡಿದರು.

ಉಡುಪಿಯ ಕ್ರಿಶ್ಚಿಯನ್ ಶಾಲೆ ಮೈದಾನದಲ್ಲಿ ನಡೆದ ಸಹಬಾಳ್ವೆ ಸಮಾವೇಶದ ಅಧ್ಯಕ್ಷೀಯ ಮಾತುಗಳನ್ನಾಡಿದ ಅವರು, “ಇಂದು ನಡೆಯುತ್ತಿರುವುದು ಧರ್ಮಗಳ ಸಮಸ್ಯೆಯಲ್ಲ. ಇದು ಹಿಂದೂ ಮುಸ್ಲಿಂ ಸಮಸ್ಯೆಯೂ ಅಲ್ಲ. ಆದರೆ ಇದು ಎರಡು ಮನಸ್ಥಿತಿಗಳ ನಡುವಿನ ಸಮಸ್ಯೆಯಾಗಿದ್ದು, ಭಾರತದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ತಾವು ಎಲ್ಲರಿಗಿಂತ ಮೇಲೆಂಬ ಮನಸ್ಥಿತಿಯೊಂದಿದೆ. ಅದು ಸಮಾಜ ಎಂದರೆ ಮೇಲು ಕೀಳು ಇರಬೇಕೆಂದು ಬಯಸುತ್ತದೆ. ಅದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಭಯ, ದ್ವೇಷ ಹುಟ್ಟುಹಾಕುತ್ತದೆ. ಅವರು ದೇಶವನ್ನು ತಮ್ಮ ಆಸ್ತಿಯಾಗಿ ಆಗಿ ನೋಡುತ್ತಾರೆ. ಈ ಮನಸ್ಥಿತಿಯು ಭಾರತೀಯತೆಗೆ ವಿರುದ್ಧವಾಗಿದೆ. ಈ ಸಮಸ್ಯೆಯು ಭಾರತವನ್ನು ನಂಬದೆ ಇರುವವರಿಂದ ಹುಟ್ಟಿದೆ” ಎಂದು ವಿಶ್ಲೇಷಿಸಿದರು.

ಇನ್ನೊಂದು ಮನಸ್ಥಿತಿ ಇದೆ. ಅದು ನಮ್ಮ ನಮ್ಮ ಮನಸ್ಥಿತಿ. ತಾರತಮ್ಯವಿಲ್ಲದ ಸಮಾನತೆಯ ಕನಸು ಹೊತ್ತಿರುವ ಮನಸ್ಥಿತಿ. ಅಂದರೆ ದೇಶವನ್ನು ನಂಬುವ ಭಾರತೀಯ ಎಂಬ ಚಿಂತನೆಯನ್ನು ಆಧರಿಸಿರುವ ಮನಸ್ಥಿತಿ. ದೇಶವೆಂದರೆ ಅಲ್ಲಿನ ಜನರು ಎಂದು ನಂಬಿ ಭಾರತದ ಜನತೆಗೆ ಜಯವಾಗಲಿ ಎಂದು ಕೂಗುತ್ತೇವೆ. ಈ ಎರಡು ಮನಸ್ಥಿತಿಗಳ ನಡುವೆ ಹೋರಾಟ ನಡೆಯುತ್ತಿದೆ. ಹಾಗಾಗಿ ಇದನ್ನು ಭಾರತವನ್ನು ನಂಬದ ಅವರ ಮತ್ತು ಭಾರತವನ್ನು ನಂಬುವ ನಮ್ಮ ಮನಸ್ಥಿತಿಗಳ ನಡುವಿನ ಹೋರಾಟವನ್ನಾಗಿ ನೋಡಬೇಕು ಎಂದರು.

“ನಮ್ಮ ಸಮಸ್ಯೆ ಎಂದರೆ ಭಾರತೀಯತೆ ಎಂಬ ಚಿಂತನೆಯನ್ನು ಆಚರಿಸುವುದನ್ನು ಮರೆತುಬಿಟ್ಟಿದ್ದೇವೆ. 50 ವರ್ಷಗಳಿಂದ ನಿಜವಾದ ಭಾರತವನ್ನು ಆಚರಣೆ ಮಾಡುವುದನ್ನು ನಾವು ಮರೆತಿದ್ದೇವೆ. ನಾವು ಇನ್ನು ಮುಂದೆ ಆಚರಣೆ ಮಾಡಬೇಕಾಗಿದೆ. ಈ ಆಚರಣೆ ಇಲ್ಲಿಂದ ಶುರುವಾಗಬೇಕಿದೆ ಅದಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಎಲ್ಲಾ ಕಡೆ ಈ ಸಹೋದರತ್ವ, ಬಂಧುತ್ವವನ್ನು ಆಚರಿಸಬೇಕಿದೆ” ಎಂದು ತಿಳಿಸಿದರು.

ಭಾರತವನ್ನು ನಂಬದೆ ಇರುವವರು ಕೇವಲ ಶೇ. 10-15 ಮಾತ್ರ ಇದ್ದಾರೆ. ಆದರೆ ನಾವು ಶೇ. 85% ಕ್ಕಿಂತ ಹೆಚ್ಚಿದ್ದರೂ ಸುಮ್ಮನಿದ್ದೇವೆ. ಇಂದು ’ದ್ವೇಷ‘ ಹರಡುತ್ತಿರುವುದು ಸಮಸ್ಯೆಯಲ್ಲ. ಆದರೆ ಅದನ್ನು ನೋಡಿಕೊಂಡು ಸುಮ್ಮನಿರುವುದು ಸಮಸ್ಯೆಯಾಗಿದೆ. ಎಲ್ಲರೂ ಒಳ್ಳೆಯವರೇ ಆದರೆ ಅವರು ಮಾತನಾಡುತ್ತಿಲ್ಲ. ನಮ್ಮನ್ನು ಎಲ್ಲಿ ಸಿಕ್ಕಿ ಹಾಕಿಸುತ್ತಾರೊ ಎಂಬ ಭಯ ಅವರದು. ಎಚ್.ಎಸ್ ದೊರೆಸ್ವಾಮಿಯವರು ಯಾರಿಗೆ ಸಮಸ್ಯೆಯಾದರೂ ನಾವು ಅವರ ಜೊತೆ ನಿಲ್ಲಬೇಕೆಂದು ಹೇಳುತ್ತಿದ್ದರು ಮತ್ತು ಹೋರಾಡುತ್ತಿದ್ದರು. ಅವರು ನಮಗೆ ಮಾದರಿಯಾಗಬೇಕು. ದಲಿತರಿಗೆ, ಅಲ್ಪಸಂಖ್ಯಾತರಿಗೆ ಯಾರಿಗೆ ಸಮಸ್ಯೆಯಾದರೂ ನಾವು ಅವರ ಜೊತೆ ನಿಲ್ಲಬೇಕೆಂದು ಸೆಂಥಿಲ್ ಹೇಳಿದರು.

ನಾವು ಸಮಾಜದ ಸಮಸ್ಯೆಗಳನ್ನು ಹಿಂದೂ ಮುಸ್ಲಿಂ ಸಮಸ್ಯೆ ಎಂದು ಪರಿಗಣಿಸಬಾರದು. ಇದು ಧರ್ಮದ ಒಳಗಿನ ಜಗಳವಲ್ಲ. ಭಾರತೀಯರು ಮತ್ತು ಭಾರತವನ್ನು ಒಪ್ಪದೆ ಇರುವವರ ಸಮಸ್ಯೆ ಎಂದು ಮಾತನಾಡಬೇಕು, ಅದರನ್ನು ಸರಿಪಡಿಸಲು ಹೋರಾಡಬೇಕು. ನಮ್ಮಲ್ಲಿರುವ ಸಹೋದರತ್ವ, ಪ್ರೀತಿಯನ್ನು ಆಚರಿಸೋಣ, ಹಂಚೋಣ. ಅದೇ ಸರಿಯಾದ ಉತ್ತರವಾಗಿರುತ್ತದೆ. ಆಗ ಮಾತ್ರ ಭಾರತದ ಆತ್ಮವನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು.

ಇದನ್ನೂ ಓದಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷ ಹರಡಲು ಉಡುಪಿ ಆಯ್ದುಕೊಂಡು ತಪ್ಪು ಮಾಡಿದ್ದಾರೆ. ಅದಕ್ಕೆ ಈಗ ಭಾರತೀಯ ಜನರಿಂದಲೇ ದೊಡ್ಡ ಪ್ರತಿಕ್ರಿಯೆ ಬರುತ್ತಿದೆ. ಈ ಸಮಾವೇಶ ಸಂಪೂರ್ಣ ಯಶಸ್ವಿಯಾಗಿದೆ. ಈ ಯಶಸ್ಸನ್ನು ಎಲ್ಲಾ ಜಿಲ್ಲೆಗಳಿಗೂ ತೆಗೆದುಕೊಂಡು ಹೋಗಬೇಕು. ಇಲ್ಲಿನ ಆಶಯವನ್ನು ಹಳ್ಳಿಹಳ್ಳಿಗೆ ತಲುಪಿಸಬೇಕು. ಅದಕ್ಕೆ ಯುವಶಕ್ತಿ ಸಜ್ಜುಗೊಳ್ಳಬೇಕು ಎಂದರು.

ತಾವು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ಸಮಯವನ್ನು ಸ್ಮರಿಸಿಕೊಂಡ ಅವರು, ಆಗ ನಾನು ಅತಿ ಹೆಚ್ಚಿನ ಮಳೆಯಿಂದಾಗಿ ಶಾಲಾ ಮಕ್ಕಳಿಗೆ 13 ದಿನ ರಜೆ ಕೊಟ್ಟಿದೆ. ನನ್ನ ಮಕ್ಕಳ ಸುರಕ್ಷತೆಯ ಬಗ್ಗೆ ನನಗೆ ಭಯ ಇತ್ತು. ಅದಕ್ಕಾಗಿ ಇಂದಿಗೂ ಮಕ್ಕಳು ನನ್ನನ್ನು ನೆನೆಸಿಕೊಳ್ಳುತ್ತಾರೆ. ಆ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ನಾವು ಮಾತನಾಡಬೇಕಿದೆ. ವಯಕ್ತಿಕ ನೆಲೆಯಲ್ಲಾದರೂ ನೀವು ಮಾತನಾಡಿ, ಫೇಸ್‌ಬುಕ್‌ನಲ್ಲಿ ಸಹಬಾಳ್ವೆಯ ಸ್ಟೇಟಸ್ ಹಾಕಿ, ಹಾಡು ಹಾಡಿ ಮತ್ತು ಭಾರತೀಯತೆಯನ್ನು ಆಚರಿಸಿ ಎಂದು ಸೆಂಥಿಲ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...