Homeಮುಖಪುಟಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷಕ್ಕೆ ಉಡುಪಿ ಆಯ್ದುಕೊಂಡು ತಪ್ಪು ಮಾಡಿದರು: ಸಸಿಕಾಂತ್ ಸೆಂಥಿಲ್

ಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷಕ್ಕೆ ಉಡುಪಿ ಆಯ್ದುಕೊಂಡು ತಪ್ಪು ಮಾಡಿದರು: ಸಸಿಕಾಂತ್ ಸೆಂಥಿಲ್

ನೀವು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದೀರಿ. ಅವರಿಗಾಗಿ ಆಸ್ತಿ ಮಾಡುತ್ತಿದ್ದೀರಿ. ಆದರೆ ಸಮಾಜದಲ್ಲಿ ಉತ್ತಮ ಸೌಹಾರ್ದ ವಾತವಾರಣ ಇಲ್ಲದೆ ಇದ್ದರೆ ಏನು ಪ್ರಯೋಜನ? ದ್ವೇಷಮಯ ಸಮಾಜದಲ್ಲಿ ಅವರು ಹೇಗೆ ಬದುಕಬೇಕು? ಸೆಂಥಿಲ್ ಪ್ರಶ್ನೆ

- Advertisement -
- Advertisement -

ನೀವು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದೀರಿ. ಅವರಿಗಾಗಿ ಆಸ್ತಿ ಮಾಡುತ್ತಿದ್ದೀರಿ. ಆದರೆ ಸಮಾಜದಲ್ಲಿ ಉತ್ತಮ ಸೌಹಾರ್ದ ವಾತವಾರಣ ಇಲ್ಲದೆ ಇದ್ದರೆ ಏನು ಪ್ರಯೋಜನ? ದ್ವೇಷಮಯ ಸಮಾಜದಲ್ಲಿ ಅವರು ಹೇಗೆ ಬದುಕಬೇಕು? ಹಾಗಾಗಿ ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದನಿಯೆತ್ತಿ ಮಾತನಾಡಿ. ನಿಮಗೆ ಮಾತನಾಡದೆ ಬೇರೆ ಆಯ್ಕೆಯೇ ಇಲ್ಲ. ಅವರ ಬದುಕನ್ನು ಸುಂದರಗೊಳಿಸಲು ಸಹೋದರತ್ವವನ್ನು, ಭಾರತೀಯತೆಯನ್ನು ಆಚರಿಸಿ ಎಂದು ಮಾಜಿ ಐಎಸ್‌ಐ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಕರೆ ನೀಡಿದರು.

ಉಡುಪಿಯ ಕ್ರಿಶ್ಚಿಯನ್ ಶಾಲೆ ಮೈದಾನದಲ್ಲಿ ನಡೆದ ಸಹಬಾಳ್ವೆ ಸಮಾವೇಶದ ಅಧ್ಯಕ್ಷೀಯ ಮಾತುಗಳನ್ನಾಡಿದ ಅವರು, “ಇಂದು ನಡೆಯುತ್ತಿರುವುದು ಧರ್ಮಗಳ ಸಮಸ್ಯೆಯಲ್ಲ. ಇದು ಹಿಂದೂ ಮುಸ್ಲಿಂ ಸಮಸ್ಯೆಯೂ ಅಲ್ಲ. ಆದರೆ ಇದು ಎರಡು ಮನಸ್ಥಿತಿಗಳ ನಡುವಿನ ಸಮಸ್ಯೆಯಾಗಿದ್ದು, ಭಾರತದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ತಾವು ಎಲ್ಲರಿಗಿಂತ ಮೇಲೆಂಬ ಮನಸ್ಥಿತಿಯೊಂದಿದೆ. ಅದು ಸಮಾಜ ಎಂದರೆ ಮೇಲು ಕೀಳು ಇರಬೇಕೆಂದು ಬಯಸುತ್ತದೆ. ಅದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಭಯ, ದ್ವೇಷ ಹುಟ್ಟುಹಾಕುತ್ತದೆ. ಅವರು ದೇಶವನ್ನು ತಮ್ಮ ಆಸ್ತಿಯಾಗಿ ಆಗಿ ನೋಡುತ್ತಾರೆ. ಈ ಮನಸ್ಥಿತಿಯು ಭಾರತೀಯತೆಗೆ ವಿರುದ್ಧವಾಗಿದೆ. ಈ ಸಮಸ್ಯೆಯು ಭಾರತವನ್ನು ನಂಬದೆ ಇರುವವರಿಂದ ಹುಟ್ಟಿದೆ” ಎಂದು ವಿಶ್ಲೇಷಿಸಿದರು.

ಇನ್ನೊಂದು ಮನಸ್ಥಿತಿ ಇದೆ. ಅದು ನಮ್ಮ ನಮ್ಮ ಮನಸ್ಥಿತಿ. ತಾರತಮ್ಯವಿಲ್ಲದ ಸಮಾನತೆಯ ಕನಸು ಹೊತ್ತಿರುವ ಮನಸ್ಥಿತಿ. ಅಂದರೆ ದೇಶವನ್ನು ನಂಬುವ ಭಾರತೀಯ ಎಂಬ ಚಿಂತನೆಯನ್ನು ಆಧರಿಸಿರುವ ಮನಸ್ಥಿತಿ. ದೇಶವೆಂದರೆ ಅಲ್ಲಿನ ಜನರು ಎಂದು ನಂಬಿ ಭಾರತದ ಜನತೆಗೆ ಜಯವಾಗಲಿ ಎಂದು ಕೂಗುತ್ತೇವೆ. ಈ ಎರಡು ಮನಸ್ಥಿತಿಗಳ ನಡುವೆ ಹೋರಾಟ ನಡೆಯುತ್ತಿದೆ. ಹಾಗಾಗಿ ಇದನ್ನು ಭಾರತವನ್ನು ನಂಬದ ಅವರ ಮತ್ತು ಭಾರತವನ್ನು ನಂಬುವ ನಮ್ಮ ಮನಸ್ಥಿತಿಗಳ ನಡುವಿನ ಹೋರಾಟವನ್ನಾಗಿ ನೋಡಬೇಕು ಎಂದರು.

“ನಮ್ಮ ಸಮಸ್ಯೆ ಎಂದರೆ ಭಾರತೀಯತೆ ಎಂಬ ಚಿಂತನೆಯನ್ನು ಆಚರಿಸುವುದನ್ನು ಮರೆತುಬಿಟ್ಟಿದ್ದೇವೆ. 50 ವರ್ಷಗಳಿಂದ ನಿಜವಾದ ಭಾರತವನ್ನು ಆಚರಣೆ ಮಾಡುವುದನ್ನು ನಾವು ಮರೆತಿದ್ದೇವೆ. ನಾವು ಇನ್ನು ಮುಂದೆ ಆಚರಣೆ ಮಾಡಬೇಕಾಗಿದೆ. ಈ ಆಚರಣೆ ಇಲ್ಲಿಂದ ಶುರುವಾಗಬೇಕಿದೆ ಅದಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಎಲ್ಲಾ ಕಡೆ ಈ ಸಹೋದರತ್ವ, ಬಂಧುತ್ವವನ್ನು ಆಚರಿಸಬೇಕಿದೆ” ಎಂದು ತಿಳಿಸಿದರು.

ಭಾರತವನ್ನು ನಂಬದೆ ಇರುವವರು ಕೇವಲ ಶೇ. 10-15 ಮಾತ್ರ ಇದ್ದಾರೆ. ಆದರೆ ನಾವು ಶೇ. 85% ಕ್ಕಿಂತ ಹೆಚ್ಚಿದ್ದರೂ ಸುಮ್ಮನಿದ್ದೇವೆ. ಇಂದು ’ದ್ವೇಷ‘ ಹರಡುತ್ತಿರುವುದು ಸಮಸ್ಯೆಯಲ್ಲ. ಆದರೆ ಅದನ್ನು ನೋಡಿಕೊಂಡು ಸುಮ್ಮನಿರುವುದು ಸಮಸ್ಯೆಯಾಗಿದೆ. ಎಲ್ಲರೂ ಒಳ್ಳೆಯವರೇ ಆದರೆ ಅವರು ಮಾತನಾಡುತ್ತಿಲ್ಲ. ನಮ್ಮನ್ನು ಎಲ್ಲಿ ಸಿಕ್ಕಿ ಹಾಕಿಸುತ್ತಾರೊ ಎಂಬ ಭಯ ಅವರದು. ಎಚ್.ಎಸ್ ದೊರೆಸ್ವಾಮಿಯವರು ಯಾರಿಗೆ ಸಮಸ್ಯೆಯಾದರೂ ನಾವು ಅವರ ಜೊತೆ ನಿಲ್ಲಬೇಕೆಂದು ಹೇಳುತ್ತಿದ್ದರು ಮತ್ತು ಹೋರಾಡುತ್ತಿದ್ದರು. ಅವರು ನಮಗೆ ಮಾದರಿಯಾಗಬೇಕು. ದಲಿತರಿಗೆ, ಅಲ್ಪಸಂಖ್ಯಾತರಿಗೆ ಯಾರಿಗೆ ಸಮಸ್ಯೆಯಾದರೂ ನಾವು ಅವರ ಜೊತೆ ನಿಲ್ಲಬೇಕೆಂದು ಸೆಂಥಿಲ್ ಹೇಳಿದರು.

ನಾವು ಸಮಾಜದ ಸಮಸ್ಯೆಗಳನ್ನು ಹಿಂದೂ ಮುಸ್ಲಿಂ ಸಮಸ್ಯೆ ಎಂದು ಪರಿಗಣಿಸಬಾರದು. ಇದು ಧರ್ಮದ ಒಳಗಿನ ಜಗಳವಲ್ಲ. ಭಾರತೀಯರು ಮತ್ತು ಭಾರತವನ್ನು ಒಪ್ಪದೆ ಇರುವವರ ಸಮಸ್ಯೆ ಎಂದು ಮಾತನಾಡಬೇಕು, ಅದರನ್ನು ಸರಿಪಡಿಸಲು ಹೋರಾಡಬೇಕು. ನಮ್ಮಲ್ಲಿರುವ ಸಹೋದರತ್ವ, ಪ್ರೀತಿಯನ್ನು ಆಚರಿಸೋಣ, ಹಂಚೋಣ. ಅದೇ ಸರಿಯಾದ ಉತ್ತರವಾಗಿರುತ್ತದೆ. ಆಗ ಮಾತ್ರ ಭಾರತದ ಆತ್ಮವನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು.

ಇದನ್ನೂ ಓದಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷ ಹರಡಲು ಉಡುಪಿ ಆಯ್ದುಕೊಂಡು ತಪ್ಪು ಮಾಡಿದ್ದಾರೆ. ಅದಕ್ಕೆ ಈಗ ಭಾರತೀಯ ಜನರಿಂದಲೇ ದೊಡ್ಡ ಪ್ರತಿಕ್ರಿಯೆ ಬರುತ್ತಿದೆ. ಈ ಸಮಾವೇಶ ಸಂಪೂರ್ಣ ಯಶಸ್ವಿಯಾಗಿದೆ. ಈ ಯಶಸ್ಸನ್ನು ಎಲ್ಲಾ ಜಿಲ್ಲೆಗಳಿಗೂ ತೆಗೆದುಕೊಂಡು ಹೋಗಬೇಕು. ಇಲ್ಲಿನ ಆಶಯವನ್ನು ಹಳ್ಳಿಹಳ್ಳಿಗೆ ತಲುಪಿಸಬೇಕು. ಅದಕ್ಕೆ ಯುವಶಕ್ತಿ ಸಜ್ಜುಗೊಳ್ಳಬೇಕು ಎಂದರು.

ತಾವು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ಸಮಯವನ್ನು ಸ್ಮರಿಸಿಕೊಂಡ ಅವರು, ಆಗ ನಾನು ಅತಿ ಹೆಚ್ಚಿನ ಮಳೆಯಿಂದಾಗಿ ಶಾಲಾ ಮಕ್ಕಳಿಗೆ 13 ದಿನ ರಜೆ ಕೊಟ್ಟಿದೆ. ನನ್ನ ಮಕ್ಕಳ ಸುರಕ್ಷತೆಯ ಬಗ್ಗೆ ನನಗೆ ಭಯ ಇತ್ತು. ಅದಕ್ಕಾಗಿ ಇಂದಿಗೂ ಮಕ್ಕಳು ನನ್ನನ್ನು ನೆನೆಸಿಕೊಳ್ಳುತ್ತಾರೆ. ಆ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ನಾವು ಮಾತನಾಡಬೇಕಿದೆ. ವಯಕ್ತಿಕ ನೆಲೆಯಲ್ಲಾದರೂ ನೀವು ಮಾತನಾಡಿ, ಫೇಸ್‌ಬುಕ್‌ನಲ್ಲಿ ಸಹಬಾಳ್ವೆಯ ಸ್ಟೇಟಸ್ ಹಾಕಿ, ಹಾಡು ಹಾಡಿ ಮತ್ತು ಭಾರತೀಯತೆಯನ್ನು ಆಚರಿಸಿ ಎಂದು ಸೆಂಥಿಲ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...