Homeಮುಖಪುಟಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷಕ್ಕೆ ಉಡುಪಿ ಆಯ್ದುಕೊಂಡು ತಪ್ಪು ಮಾಡಿದರು: ಸಸಿಕಾಂತ್ ಸೆಂಥಿಲ್

ಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷಕ್ಕೆ ಉಡುಪಿ ಆಯ್ದುಕೊಂಡು ತಪ್ಪು ಮಾಡಿದರು: ಸಸಿಕಾಂತ್ ಸೆಂಥಿಲ್

ನೀವು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದೀರಿ. ಅವರಿಗಾಗಿ ಆಸ್ತಿ ಮಾಡುತ್ತಿದ್ದೀರಿ. ಆದರೆ ಸಮಾಜದಲ್ಲಿ ಉತ್ತಮ ಸೌಹಾರ್ದ ವಾತವಾರಣ ಇಲ್ಲದೆ ಇದ್ದರೆ ಏನು ಪ್ರಯೋಜನ? ದ್ವೇಷಮಯ ಸಮಾಜದಲ್ಲಿ ಅವರು ಹೇಗೆ ಬದುಕಬೇಕು? ಸೆಂಥಿಲ್ ಪ್ರಶ್ನೆ

- Advertisement -
- Advertisement -

ನೀವು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದೀರಿ. ಅವರಿಗಾಗಿ ಆಸ್ತಿ ಮಾಡುತ್ತಿದ್ದೀರಿ. ಆದರೆ ಸಮಾಜದಲ್ಲಿ ಉತ್ತಮ ಸೌಹಾರ್ದ ವಾತವಾರಣ ಇಲ್ಲದೆ ಇದ್ದರೆ ಏನು ಪ್ರಯೋಜನ? ದ್ವೇಷಮಯ ಸಮಾಜದಲ್ಲಿ ಅವರು ಹೇಗೆ ಬದುಕಬೇಕು? ಹಾಗಾಗಿ ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದನಿಯೆತ್ತಿ ಮಾತನಾಡಿ. ನಿಮಗೆ ಮಾತನಾಡದೆ ಬೇರೆ ಆಯ್ಕೆಯೇ ಇಲ್ಲ. ಅವರ ಬದುಕನ್ನು ಸುಂದರಗೊಳಿಸಲು ಸಹೋದರತ್ವವನ್ನು, ಭಾರತೀಯತೆಯನ್ನು ಆಚರಿಸಿ ಎಂದು ಮಾಜಿ ಐಎಸ್‌ಐ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಕರೆ ನೀಡಿದರು.

ಉಡುಪಿಯ ಕ್ರಿಶ್ಚಿಯನ್ ಶಾಲೆ ಮೈದಾನದಲ್ಲಿ ನಡೆದ ಸಹಬಾಳ್ವೆ ಸಮಾವೇಶದ ಅಧ್ಯಕ್ಷೀಯ ಮಾತುಗಳನ್ನಾಡಿದ ಅವರು, “ಇಂದು ನಡೆಯುತ್ತಿರುವುದು ಧರ್ಮಗಳ ಸಮಸ್ಯೆಯಲ್ಲ. ಇದು ಹಿಂದೂ ಮುಸ್ಲಿಂ ಸಮಸ್ಯೆಯೂ ಅಲ್ಲ. ಆದರೆ ಇದು ಎರಡು ಮನಸ್ಥಿತಿಗಳ ನಡುವಿನ ಸಮಸ್ಯೆಯಾಗಿದ್ದು, ಭಾರತದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ತಾವು ಎಲ್ಲರಿಗಿಂತ ಮೇಲೆಂಬ ಮನಸ್ಥಿತಿಯೊಂದಿದೆ. ಅದು ಸಮಾಜ ಎಂದರೆ ಮೇಲು ಕೀಳು ಇರಬೇಕೆಂದು ಬಯಸುತ್ತದೆ. ಅದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಭಯ, ದ್ವೇಷ ಹುಟ್ಟುಹಾಕುತ್ತದೆ. ಅವರು ದೇಶವನ್ನು ತಮ್ಮ ಆಸ್ತಿಯಾಗಿ ಆಗಿ ನೋಡುತ್ತಾರೆ. ಈ ಮನಸ್ಥಿತಿಯು ಭಾರತೀಯತೆಗೆ ವಿರುದ್ಧವಾಗಿದೆ. ಈ ಸಮಸ್ಯೆಯು ಭಾರತವನ್ನು ನಂಬದೆ ಇರುವವರಿಂದ ಹುಟ್ಟಿದೆ” ಎಂದು ವಿಶ್ಲೇಷಿಸಿದರು.

ಇನ್ನೊಂದು ಮನಸ್ಥಿತಿ ಇದೆ. ಅದು ನಮ್ಮ ನಮ್ಮ ಮನಸ್ಥಿತಿ. ತಾರತಮ್ಯವಿಲ್ಲದ ಸಮಾನತೆಯ ಕನಸು ಹೊತ್ತಿರುವ ಮನಸ್ಥಿತಿ. ಅಂದರೆ ದೇಶವನ್ನು ನಂಬುವ ಭಾರತೀಯ ಎಂಬ ಚಿಂತನೆಯನ್ನು ಆಧರಿಸಿರುವ ಮನಸ್ಥಿತಿ. ದೇಶವೆಂದರೆ ಅಲ್ಲಿನ ಜನರು ಎಂದು ನಂಬಿ ಭಾರತದ ಜನತೆಗೆ ಜಯವಾಗಲಿ ಎಂದು ಕೂಗುತ್ತೇವೆ. ಈ ಎರಡು ಮನಸ್ಥಿತಿಗಳ ನಡುವೆ ಹೋರಾಟ ನಡೆಯುತ್ತಿದೆ. ಹಾಗಾಗಿ ಇದನ್ನು ಭಾರತವನ್ನು ನಂಬದ ಅವರ ಮತ್ತು ಭಾರತವನ್ನು ನಂಬುವ ನಮ್ಮ ಮನಸ್ಥಿತಿಗಳ ನಡುವಿನ ಹೋರಾಟವನ್ನಾಗಿ ನೋಡಬೇಕು ಎಂದರು.

“ನಮ್ಮ ಸಮಸ್ಯೆ ಎಂದರೆ ಭಾರತೀಯತೆ ಎಂಬ ಚಿಂತನೆಯನ್ನು ಆಚರಿಸುವುದನ್ನು ಮರೆತುಬಿಟ್ಟಿದ್ದೇವೆ. 50 ವರ್ಷಗಳಿಂದ ನಿಜವಾದ ಭಾರತವನ್ನು ಆಚರಣೆ ಮಾಡುವುದನ್ನು ನಾವು ಮರೆತಿದ್ದೇವೆ. ನಾವು ಇನ್ನು ಮುಂದೆ ಆಚರಣೆ ಮಾಡಬೇಕಾಗಿದೆ. ಈ ಆಚರಣೆ ಇಲ್ಲಿಂದ ಶುರುವಾಗಬೇಕಿದೆ ಅದಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಎಲ್ಲಾ ಕಡೆ ಈ ಸಹೋದರತ್ವ, ಬಂಧುತ್ವವನ್ನು ಆಚರಿಸಬೇಕಿದೆ” ಎಂದು ತಿಳಿಸಿದರು.

ಭಾರತವನ್ನು ನಂಬದೆ ಇರುವವರು ಕೇವಲ ಶೇ. 10-15 ಮಾತ್ರ ಇದ್ದಾರೆ. ಆದರೆ ನಾವು ಶೇ. 85% ಕ್ಕಿಂತ ಹೆಚ್ಚಿದ್ದರೂ ಸುಮ್ಮನಿದ್ದೇವೆ. ಇಂದು ’ದ್ವೇಷ‘ ಹರಡುತ್ತಿರುವುದು ಸಮಸ್ಯೆಯಲ್ಲ. ಆದರೆ ಅದನ್ನು ನೋಡಿಕೊಂಡು ಸುಮ್ಮನಿರುವುದು ಸಮಸ್ಯೆಯಾಗಿದೆ. ಎಲ್ಲರೂ ಒಳ್ಳೆಯವರೇ ಆದರೆ ಅವರು ಮಾತನಾಡುತ್ತಿಲ್ಲ. ನಮ್ಮನ್ನು ಎಲ್ಲಿ ಸಿಕ್ಕಿ ಹಾಕಿಸುತ್ತಾರೊ ಎಂಬ ಭಯ ಅವರದು. ಎಚ್.ಎಸ್ ದೊರೆಸ್ವಾಮಿಯವರು ಯಾರಿಗೆ ಸಮಸ್ಯೆಯಾದರೂ ನಾವು ಅವರ ಜೊತೆ ನಿಲ್ಲಬೇಕೆಂದು ಹೇಳುತ್ತಿದ್ದರು ಮತ್ತು ಹೋರಾಡುತ್ತಿದ್ದರು. ಅವರು ನಮಗೆ ಮಾದರಿಯಾಗಬೇಕು. ದಲಿತರಿಗೆ, ಅಲ್ಪಸಂಖ್ಯಾತರಿಗೆ ಯಾರಿಗೆ ಸಮಸ್ಯೆಯಾದರೂ ನಾವು ಅವರ ಜೊತೆ ನಿಲ್ಲಬೇಕೆಂದು ಸೆಂಥಿಲ್ ಹೇಳಿದರು.

ನಾವು ಸಮಾಜದ ಸಮಸ್ಯೆಗಳನ್ನು ಹಿಂದೂ ಮುಸ್ಲಿಂ ಸಮಸ್ಯೆ ಎಂದು ಪರಿಗಣಿಸಬಾರದು. ಇದು ಧರ್ಮದ ಒಳಗಿನ ಜಗಳವಲ್ಲ. ಭಾರತೀಯರು ಮತ್ತು ಭಾರತವನ್ನು ಒಪ್ಪದೆ ಇರುವವರ ಸಮಸ್ಯೆ ಎಂದು ಮಾತನಾಡಬೇಕು, ಅದರನ್ನು ಸರಿಪಡಿಸಲು ಹೋರಾಡಬೇಕು. ನಮ್ಮಲ್ಲಿರುವ ಸಹೋದರತ್ವ, ಪ್ರೀತಿಯನ್ನು ಆಚರಿಸೋಣ, ಹಂಚೋಣ. ಅದೇ ಸರಿಯಾದ ಉತ್ತರವಾಗಿರುತ್ತದೆ. ಆಗ ಮಾತ್ರ ಭಾರತದ ಆತ್ಮವನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು.

ಇದನ್ನೂ ಓದಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷ ಹರಡಲು ಉಡುಪಿ ಆಯ್ದುಕೊಂಡು ತಪ್ಪು ಮಾಡಿದ್ದಾರೆ. ಅದಕ್ಕೆ ಈಗ ಭಾರತೀಯ ಜನರಿಂದಲೇ ದೊಡ್ಡ ಪ್ರತಿಕ್ರಿಯೆ ಬರುತ್ತಿದೆ. ಈ ಸಮಾವೇಶ ಸಂಪೂರ್ಣ ಯಶಸ್ವಿಯಾಗಿದೆ. ಈ ಯಶಸ್ಸನ್ನು ಎಲ್ಲಾ ಜಿಲ್ಲೆಗಳಿಗೂ ತೆಗೆದುಕೊಂಡು ಹೋಗಬೇಕು. ಇಲ್ಲಿನ ಆಶಯವನ್ನು ಹಳ್ಳಿಹಳ್ಳಿಗೆ ತಲುಪಿಸಬೇಕು. ಅದಕ್ಕೆ ಯುವಶಕ್ತಿ ಸಜ್ಜುಗೊಳ್ಳಬೇಕು ಎಂದರು.

ತಾವು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ಸಮಯವನ್ನು ಸ್ಮರಿಸಿಕೊಂಡ ಅವರು, ಆಗ ನಾನು ಅತಿ ಹೆಚ್ಚಿನ ಮಳೆಯಿಂದಾಗಿ ಶಾಲಾ ಮಕ್ಕಳಿಗೆ 13 ದಿನ ರಜೆ ಕೊಟ್ಟಿದೆ. ನನ್ನ ಮಕ್ಕಳ ಸುರಕ್ಷತೆಯ ಬಗ್ಗೆ ನನಗೆ ಭಯ ಇತ್ತು. ಅದಕ್ಕಾಗಿ ಇಂದಿಗೂ ಮಕ್ಕಳು ನನ್ನನ್ನು ನೆನೆಸಿಕೊಳ್ಳುತ್ತಾರೆ. ಆ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ನಾವು ಮಾತನಾಡಬೇಕಿದೆ. ವಯಕ್ತಿಕ ನೆಲೆಯಲ್ಲಾದರೂ ನೀವು ಮಾತನಾಡಿ, ಫೇಸ್‌ಬುಕ್‌ನಲ್ಲಿ ಸಹಬಾಳ್ವೆಯ ಸ್ಟೇಟಸ್ ಹಾಕಿ, ಹಾಡು ಹಾಡಿ ಮತ್ತು ಭಾರತೀಯತೆಯನ್ನು ಆಚರಿಸಿ ಎಂದು ಸೆಂಥಿಲ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...