Homeಮುಖಪುಟಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷಕ್ಕೆ ಉಡುಪಿ ಆಯ್ದುಕೊಂಡು ತಪ್ಪು ಮಾಡಿದರು: ಸಸಿಕಾಂತ್ ಸೆಂಥಿಲ್

ಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷಕ್ಕೆ ಉಡುಪಿ ಆಯ್ದುಕೊಂಡು ತಪ್ಪು ಮಾಡಿದರು: ಸಸಿಕಾಂತ್ ಸೆಂಥಿಲ್

ನೀವು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದೀರಿ. ಅವರಿಗಾಗಿ ಆಸ್ತಿ ಮಾಡುತ್ತಿದ್ದೀರಿ. ಆದರೆ ಸಮಾಜದಲ್ಲಿ ಉತ್ತಮ ಸೌಹಾರ್ದ ವಾತವಾರಣ ಇಲ್ಲದೆ ಇದ್ದರೆ ಏನು ಪ್ರಯೋಜನ? ದ್ವೇಷಮಯ ಸಮಾಜದಲ್ಲಿ ಅವರು ಹೇಗೆ ಬದುಕಬೇಕು? ಸೆಂಥಿಲ್ ಪ್ರಶ್ನೆ

- Advertisement -
- Advertisement -

ನೀವು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದೀರಿ. ಅವರಿಗಾಗಿ ಆಸ್ತಿ ಮಾಡುತ್ತಿದ್ದೀರಿ. ಆದರೆ ಸಮಾಜದಲ್ಲಿ ಉತ್ತಮ ಸೌಹಾರ್ದ ವಾತವಾರಣ ಇಲ್ಲದೆ ಇದ್ದರೆ ಏನು ಪ್ರಯೋಜನ? ದ್ವೇಷಮಯ ಸಮಾಜದಲ್ಲಿ ಅವರು ಹೇಗೆ ಬದುಕಬೇಕು? ಹಾಗಾಗಿ ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದನಿಯೆತ್ತಿ ಮಾತನಾಡಿ. ನಿಮಗೆ ಮಾತನಾಡದೆ ಬೇರೆ ಆಯ್ಕೆಯೇ ಇಲ್ಲ. ಅವರ ಬದುಕನ್ನು ಸುಂದರಗೊಳಿಸಲು ಸಹೋದರತ್ವವನ್ನು, ಭಾರತೀಯತೆಯನ್ನು ಆಚರಿಸಿ ಎಂದು ಮಾಜಿ ಐಎಸ್‌ಐ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಕರೆ ನೀಡಿದರು.

ಉಡುಪಿಯ ಕ್ರಿಶ್ಚಿಯನ್ ಶಾಲೆ ಮೈದಾನದಲ್ಲಿ ನಡೆದ ಸಹಬಾಳ್ವೆ ಸಮಾವೇಶದ ಅಧ್ಯಕ್ಷೀಯ ಮಾತುಗಳನ್ನಾಡಿದ ಅವರು, “ಇಂದು ನಡೆಯುತ್ತಿರುವುದು ಧರ್ಮಗಳ ಸಮಸ್ಯೆಯಲ್ಲ. ಇದು ಹಿಂದೂ ಮುಸ್ಲಿಂ ಸಮಸ್ಯೆಯೂ ಅಲ್ಲ. ಆದರೆ ಇದು ಎರಡು ಮನಸ್ಥಿತಿಗಳ ನಡುವಿನ ಸಮಸ್ಯೆಯಾಗಿದ್ದು, ಭಾರತದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ತಾವು ಎಲ್ಲರಿಗಿಂತ ಮೇಲೆಂಬ ಮನಸ್ಥಿತಿಯೊಂದಿದೆ. ಅದು ಸಮಾಜ ಎಂದರೆ ಮೇಲು ಕೀಳು ಇರಬೇಕೆಂದು ಬಯಸುತ್ತದೆ. ಅದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಭಯ, ದ್ವೇಷ ಹುಟ್ಟುಹಾಕುತ್ತದೆ. ಅವರು ದೇಶವನ್ನು ತಮ್ಮ ಆಸ್ತಿಯಾಗಿ ಆಗಿ ನೋಡುತ್ತಾರೆ. ಈ ಮನಸ್ಥಿತಿಯು ಭಾರತೀಯತೆಗೆ ವಿರುದ್ಧವಾಗಿದೆ. ಈ ಸಮಸ್ಯೆಯು ಭಾರತವನ್ನು ನಂಬದೆ ಇರುವವರಿಂದ ಹುಟ್ಟಿದೆ” ಎಂದು ವಿಶ್ಲೇಷಿಸಿದರು.

ಇನ್ನೊಂದು ಮನಸ್ಥಿತಿ ಇದೆ. ಅದು ನಮ್ಮ ನಮ್ಮ ಮನಸ್ಥಿತಿ. ತಾರತಮ್ಯವಿಲ್ಲದ ಸಮಾನತೆಯ ಕನಸು ಹೊತ್ತಿರುವ ಮನಸ್ಥಿತಿ. ಅಂದರೆ ದೇಶವನ್ನು ನಂಬುವ ಭಾರತೀಯ ಎಂಬ ಚಿಂತನೆಯನ್ನು ಆಧರಿಸಿರುವ ಮನಸ್ಥಿತಿ. ದೇಶವೆಂದರೆ ಅಲ್ಲಿನ ಜನರು ಎಂದು ನಂಬಿ ಭಾರತದ ಜನತೆಗೆ ಜಯವಾಗಲಿ ಎಂದು ಕೂಗುತ್ತೇವೆ. ಈ ಎರಡು ಮನಸ್ಥಿತಿಗಳ ನಡುವೆ ಹೋರಾಟ ನಡೆಯುತ್ತಿದೆ. ಹಾಗಾಗಿ ಇದನ್ನು ಭಾರತವನ್ನು ನಂಬದ ಅವರ ಮತ್ತು ಭಾರತವನ್ನು ನಂಬುವ ನಮ್ಮ ಮನಸ್ಥಿತಿಗಳ ನಡುವಿನ ಹೋರಾಟವನ್ನಾಗಿ ನೋಡಬೇಕು ಎಂದರು.

“ನಮ್ಮ ಸಮಸ್ಯೆ ಎಂದರೆ ಭಾರತೀಯತೆ ಎಂಬ ಚಿಂತನೆಯನ್ನು ಆಚರಿಸುವುದನ್ನು ಮರೆತುಬಿಟ್ಟಿದ್ದೇವೆ. 50 ವರ್ಷಗಳಿಂದ ನಿಜವಾದ ಭಾರತವನ್ನು ಆಚರಣೆ ಮಾಡುವುದನ್ನು ನಾವು ಮರೆತಿದ್ದೇವೆ. ನಾವು ಇನ್ನು ಮುಂದೆ ಆಚರಣೆ ಮಾಡಬೇಕಾಗಿದೆ. ಈ ಆಚರಣೆ ಇಲ್ಲಿಂದ ಶುರುವಾಗಬೇಕಿದೆ ಅದಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಎಲ್ಲಾ ಕಡೆ ಈ ಸಹೋದರತ್ವ, ಬಂಧುತ್ವವನ್ನು ಆಚರಿಸಬೇಕಿದೆ” ಎಂದು ತಿಳಿಸಿದರು.

ಭಾರತವನ್ನು ನಂಬದೆ ಇರುವವರು ಕೇವಲ ಶೇ. 10-15 ಮಾತ್ರ ಇದ್ದಾರೆ. ಆದರೆ ನಾವು ಶೇ. 85% ಕ್ಕಿಂತ ಹೆಚ್ಚಿದ್ದರೂ ಸುಮ್ಮನಿದ್ದೇವೆ. ಇಂದು ’ದ್ವೇಷ‘ ಹರಡುತ್ತಿರುವುದು ಸಮಸ್ಯೆಯಲ್ಲ. ಆದರೆ ಅದನ್ನು ನೋಡಿಕೊಂಡು ಸುಮ್ಮನಿರುವುದು ಸಮಸ್ಯೆಯಾಗಿದೆ. ಎಲ್ಲರೂ ಒಳ್ಳೆಯವರೇ ಆದರೆ ಅವರು ಮಾತನಾಡುತ್ತಿಲ್ಲ. ನಮ್ಮನ್ನು ಎಲ್ಲಿ ಸಿಕ್ಕಿ ಹಾಕಿಸುತ್ತಾರೊ ಎಂಬ ಭಯ ಅವರದು. ಎಚ್.ಎಸ್ ದೊರೆಸ್ವಾಮಿಯವರು ಯಾರಿಗೆ ಸಮಸ್ಯೆಯಾದರೂ ನಾವು ಅವರ ಜೊತೆ ನಿಲ್ಲಬೇಕೆಂದು ಹೇಳುತ್ತಿದ್ದರು ಮತ್ತು ಹೋರಾಡುತ್ತಿದ್ದರು. ಅವರು ನಮಗೆ ಮಾದರಿಯಾಗಬೇಕು. ದಲಿತರಿಗೆ, ಅಲ್ಪಸಂಖ್ಯಾತರಿಗೆ ಯಾರಿಗೆ ಸಮಸ್ಯೆಯಾದರೂ ನಾವು ಅವರ ಜೊತೆ ನಿಲ್ಲಬೇಕೆಂದು ಸೆಂಥಿಲ್ ಹೇಳಿದರು.

ನಾವು ಸಮಾಜದ ಸಮಸ್ಯೆಗಳನ್ನು ಹಿಂದೂ ಮುಸ್ಲಿಂ ಸಮಸ್ಯೆ ಎಂದು ಪರಿಗಣಿಸಬಾರದು. ಇದು ಧರ್ಮದ ಒಳಗಿನ ಜಗಳವಲ್ಲ. ಭಾರತೀಯರು ಮತ್ತು ಭಾರತವನ್ನು ಒಪ್ಪದೆ ಇರುವವರ ಸಮಸ್ಯೆ ಎಂದು ಮಾತನಾಡಬೇಕು, ಅದರನ್ನು ಸರಿಪಡಿಸಲು ಹೋರಾಡಬೇಕು. ನಮ್ಮಲ್ಲಿರುವ ಸಹೋದರತ್ವ, ಪ್ರೀತಿಯನ್ನು ಆಚರಿಸೋಣ, ಹಂಚೋಣ. ಅದೇ ಸರಿಯಾದ ಉತ್ತರವಾಗಿರುತ್ತದೆ. ಆಗ ಮಾತ್ರ ಭಾರತದ ಆತ್ಮವನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು.

ಇದನ್ನೂ ಓದಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷ ಹರಡಲು ಉಡುಪಿ ಆಯ್ದುಕೊಂಡು ತಪ್ಪು ಮಾಡಿದ್ದಾರೆ. ಅದಕ್ಕೆ ಈಗ ಭಾರತೀಯ ಜನರಿಂದಲೇ ದೊಡ್ಡ ಪ್ರತಿಕ್ರಿಯೆ ಬರುತ್ತಿದೆ. ಈ ಸಮಾವೇಶ ಸಂಪೂರ್ಣ ಯಶಸ್ವಿಯಾಗಿದೆ. ಈ ಯಶಸ್ಸನ್ನು ಎಲ್ಲಾ ಜಿಲ್ಲೆಗಳಿಗೂ ತೆಗೆದುಕೊಂಡು ಹೋಗಬೇಕು. ಇಲ್ಲಿನ ಆಶಯವನ್ನು ಹಳ್ಳಿಹಳ್ಳಿಗೆ ತಲುಪಿಸಬೇಕು. ಅದಕ್ಕೆ ಯುವಶಕ್ತಿ ಸಜ್ಜುಗೊಳ್ಳಬೇಕು ಎಂದರು.

ತಾವು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ಸಮಯವನ್ನು ಸ್ಮರಿಸಿಕೊಂಡ ಅವರು, ಆಗ ನಾನು ಅತಿ ಹೆಚ್ಚಿನ ಮಳೆಯಿಂದಾಗಿ ಶಾಲಾ ಮಕ್ಕಳಿಗೆ 13 ದಿನ ರಜೆ ಕೊಟ್ಟಿದೆ. ನನ್ನ ಮಕ್ಕಳ ಸುರಕ್ಷತೆಯ ಬಗ್ಗೆ ನನಗೆ ಭಯ ಇತ್ತು. ಅದಕ್ಕಾಗಿ ಇಂದಿಗೂ ಮಕ್ಕಳು ನನ್ನನ್ನು ನೆನೆಸಿಕೊಳ್ಳುತ್ತಾರೆ. ಆ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ನಾವು ಮಾತನಾಡಬೇಕಿದೆ. ವಯಕ್ತಿಕ ನೆಲೆಯಲ್ಲಾದರೂ ನೀವು ಮಾತನಾಡಿ, ಫೇಸ್‌ಬುಕ್‌ನಲ್ಲಿ ಸಹಬಾಳ್ವೆಯ ಸ್ಟೇಟಸ್ ಹಾಕಿ, ಹಾಡು ಹಾಡಿ ಮತ್ತು ಭಾರತೀಯತೆಯನ್ನು ಆಚರಿಸಿ ಎಂದು ಸೆಂಥಿಲ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...