Homeಮುಖಪುಟಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷಕ್ಕೆ ಉಡುಪಿ ಆಯ್ದುಕೊಂಡು ತಪ್ಪು ಮಾಡಿದರು: ಸಸಿಕಾಂತ್ ಸೆಂಥಿಲ್

ಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷಕ್ಕೆ ಉಡುಪಿ ಆಯ್ದುಕೊಂಡು ತಪ್ಪು ಮಾಡಿದರು: ಸಸಿಕಾಂತ್ ಸೆಂಥಿಲ್

ನೀವು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದೀರಿ. ಅವರಿಗಾಗಿ ಆಸ್ತಿ ಮಾಡುತ್ತಿದ್ದೀರಿ. ಆದರೆ ಸಮಾಜದಲ್ಲಿ ಉತ್ತಮ ಸೌಹಾರ್ದ ವಾತವಾರಣ ಇಲ್ಲದೆ ಇದ್ದರೆ ಏನು ಪ್ರಯೋಜನ? ದ್ವೇಷಮಯ ಸಮಾಜದಲ್ಲಿ ಅವರು ಹೇಗೆ ಬದುಕಬೇಕು? ಸೆಂಥಿಲ್ ಪ್ರಶ್ನೆ

- Advertisement -
- Advertisement -

ನೀವು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದೀರಿ. ಅವರಿಗಾಗಿ ಆಸ್ತಿ ಮಾಡುತ್ತಿದ್ದೀರಿ. ಆದರೆ ಸಮಾಜದಲ್ಲಿ ಉತ್ತಮ ಸೌಹಾರ್ದ ವಾತವಾರಣ ಇಲ್ಲದೆ ಇದ್ದರೆ ಏನು ಪ್ರಯೋಜನ? ದ್ವೇಷಮಯ ಸಮಾಜದಲ್ಲಿ ಅವರು ಹೇಗೆ ಬದುಕಬೇಕು? ಹಾಗಾಗಿ ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದನಿಯೆತ್ತಿ ಮಾತನಾಡಿ. ನಿಮಗೆ ಮಾತನಾಡದೆ ಬೇರೆ ಆಯ್ಕೆಯೇ ಇಲ್ಲ. ಅವರ ಬದುಕನ್ನು ಸುಂದರಗೊಳಿಸಲು ಸಹೋದರತ್ವವನ್ನು, ಭಾರತೀಯತೆಯನ್ನು ಆಚರಿಸಿ ಎಂದು ಮಾಜಿ ಐಎಸ್‌ಐ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಕರೆ ನೀಡಿದರು.

ಉಡುಪಿಯ ಕ್ರಿಶ್ಚಿಯನ್ ಶಾಲೆ ಮೈದಾನದಲ್ಲಿ ನಡೆದ ಸಹಬಾಳ್ವೆ ಸಮಾವೇಶದ ಅಧ್ಯಕ್ಷೀಯ ಮಾತುಗಳನ್ನಾಡಿದ ಅವರು, “ಇಂದು ನಡೆಯುತ್ತಿರುವುದು ಧರ್ಮಗಳ ಸಮಸ್ಯೆಯಲ್ಲ. ಇದು ಹಿಂದೂ ಮುಸ್ಲಿಂ ಸಮಸ್ಯೆಯೂ ಅಲ್ಲ. ಆದರೆ ಇದು ಎರಡು ಮನಸ್ಥಿತಿಗಳ ನಡುವಿನ ಸಮಸ್ಯೆಯಾಗಿದ್ದು, ಭಾರತದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ತಾವು ಎಲ್ಲರಿಗಿಂತ ಮೇಲೆಂಬ ಮನಸ್ಥಿತಿಯೊಂದಿದೆ. ಅದು ಸಮಾಜ ಎಂದರೆ ಮೇಲು ಕೀಳು ಇರಬೇಕೆಂದು ಬಯಸುತ್ತದೆ. ಅದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಭಯ, ದ್ವೇಷ ಹುಟ್ಟುಹಾಕುತ್ತದೆ. ಅವರು ದೇಶವನ್ನು ತಮ್ಮ ಆಸ್ತಿಯಾಗಿ ಆಗಿ ನೋಡುತ್ತಾರೆ. ಈ ಮನಸ್ಥಿತಿಯು ಭಾರತೀಯತೆಗೆ ವಿರುದ್ಧವಾಗಿದೆ. ಈ ಸಮಸ್ಯೆಯು ಭಾರತವನ್ನು ನಂಬದೆ ಇರುವವರಿಂದ ಹುಟ್ಟಿದೆ” ಎಂದು ವಿಶ್ಲೇಷಿಸಿದರು.

ಇನ್ನೊಂದು ಮನಸ್ಥಿತಿ ಇದೆ. ಅದು ನಮ್ಮ ನಮ್ಮ ಮನಸ್ಥಿತಿ. ತಾರತಮ್ಯವಿಲ್ಲದ ಸಮಾನತೆಯ ಕನಸು ಹೊತ್ತಿರುವ ಮನಸ್ಥಿತಿ. ಅಂದರೆ ದೇಶವನ್ನು ನಂಬುವ ಭಾರತೀಯ ಎಂಬ ಚಿಂತನೆಯನ್ನು ಆಧರಿಸಿರುವ ಮನಸ್ಥಿತಿ. ದೇಶವೆಂದರೆ ಅಲ್ಲಿನ ಜನರು ಎಂದು ನಂಬಿ ಭಾರತದ ಜನತೆಗೆ ಜಯವಾಗಲಿ ಎಂದು ಕೂಗುತ್ತೇವೆ. ಈ ಎರಡು ಮನಸ್ಥಿತಿಗಳ ನಡುವೆ ಹೋರಾಟ ನಡೆಯುತ್ತಿದೆ. ಹಾಗಾಗಿ ಇದನ್ನು ಭಾರತವನ್ನು ನಂಬದ ಅವರ ಮತ್ತು ಭಾರತವನ್ನು ನಂಬುವ ನಮ್ಮ ಮನಸ್ಥಿತಿಗಳ ನಡುವಿನ ಹೋರಾಟವನ್ನಾಗಿ ನೋಡಬೇಕು ಎಂದರು.

“ನಮ್ಮ ಸಮಸ್ಯೆ ಎಂದರೆ ಭಾರತೀಯತೆ ಎಂಬ ಚಿಂತನೆಯನ್ನು ಆಚರಿಸುವುದನ್ನು ಮರೆತುಬಿಟ್ಟಿದ್ದೇವೆ. 50 ವರ್ಷಗಳಿಂದ ನಿಜವಾದ ಭಾರತವನ್ನು ಆಚರಣೆ ಮಾಡುವುದನ್ನು ನಾವು ಮರೆತಿದ್ದೇವೆ. ನಾವು ಇನ್ನು ಮುಂದೆ ಆಚರಣೆ ಮಾಡಬೇಕಾಗಿದೆ. ಈ ಆಚರಣೆ ಇಲ್ಲಿಂದ ಶುರುವಾಗಬೇಕಿದೆ ಅದಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಎಲ್ಲಾ ಕಡೆ ಈ ಸಹೋದರತ್ವ, ಬಂಧುತ್ವವನ್ನು ಆಚರಿಸಬೇಕಿದೆ” ಎಂದು ತಿಳಿಸಿದರು.

ಭಾರತವನ್ನು ನಂಬದೆ ಇರುವವರು ಕೇವಲ ಶೇ. 10-15 ಮಾತ್ರ ಇದ್ದಾರೆ. ಆದರೆ ನಾವು ಶೇ. 85% ಕ್ಕಿಂತ ಹೆಚ್ಚಿದ್ದರೂ ಸುಮ್ಮನಿದ್ದೇವೆ. ಇಂದು ’ದ್ವೇಷ‘ ಹರಡುತ್ತಿರುವುದು ಸಮಸ್ಯೆಯಲ್ಲ. ಆದರೆ ಅದನ್ನು ನೋಡಿಕೊಂಡು ಸುಮ್ಮನಿರುವುದು ಸಮಸ್ಯೆಯಾಗಿದೆ. ಎಲ್ಲರೂ ಒಳ್ಳೆಯವರೇ ಆದರೆ ಅವರು ಮಾತನಾಡುತ್ತಿಲ್ಲ. ನಮ್ಮನ್ನು ಎಲ್ಲಿ ಸಿಕ್ಕಿ ಹಾಕಿಸುತ್ತಾರೊ ಎಂಬ ಭಯ ಅವರದು. ಎಚ್.ಎಸ್ ದೊರೆಸ್ವಾಮಿಯವರು ಯಾರಿಗೆ ಸಮಸ್ಯೆಯಾದರೂ ನಾವು ಅವರ ಜೊತೆ ನಿಲ್ಲಬೇಕೆಂದು ಹೇಳುತ್ತಿದ್ದರು ಮತ್ತು ಹೋರಾಡುತ್ತಿದ್ದರು. ಅವರು ನಮಗೆ ಮಾದರಿಯಾಗಬೇಕು. ದಲಿತರಿಗೆ, ಅಲ್ಪಸಂಖ್ಯಾತರಿಗೆ ಯಾರಿಗೆ ಸಮಸ್ಯೆಯಾದರೂ ನಾವು ಅವರ ಜೊತೆ ನಿಲ್ಲಬೇಕೆಂದು ಸೆಂಥಿಲ್ ಹೇಳಿದರು.

ನಾವು ಸಮಾಜದ ಸಮಸ್ಯೆಗಳನ್ನು ಹಿಂದೂ ಮುಸ್ಲಿಂ ಸಮಸ್ಯೆ ಎಂದು ಪರಿಗಣಿಸಬಾರದು. ಇದು ಧರ್ಮದ ಒಳಗಿನ ಜಗಳವಲ್ಲ. ಭಾರತೀಯರು ಮತ್ತು ಭಾರತವನ್ನು ಒಪ್ಪದೆ ಇರುವವರ ಸಮಸ್ಯೆ ಎಂದು ಮಾತನಾಡಬೇಕು, ಅದರನ್ನು ಸರಿಪಡಿಸಲು ಹೋರಾಡಬೇಕು. ನಮ್ಮಲ್ಲಿರುವ ಸಹೋದರತ್ವ, ಪ್ರೀತಿಯನ್ನು ಆಚರಿಸೋಣ, ಹಂಚೋಣ. ಅದೇ ಸರಿಯಾದ ಉತ್ತರವಾಗಿರುತ್ತದೆ. ಆಗ ಮಾತ್ರ ಭಾರತದ ಆತ್ಮವನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು.

ಇದನ್ನೂ ಓದಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷ ಹರಡಲು ಉಡುಪಿ ಆಯ್ದುಕೊಂಡು ತಪ್ಪು ಮಾಡಿದ್ದಾರೆ. ಅದಕ್ಕೆ ಈಗ ಭಾರತೀಯ ಜನರಿಂದಲೇ ದೊಡ್ಡ ಪ್ರತಿಕ್ರಿಯೆ ಬರುತ್ತಿದೆ. ಈ ಸಮಾವೇಶ ಸಂಪೂರ್ಣ ಯಶಸ್ವಿಯಾಗಿದೆ. ಈ ಯಶಸ್ಸನ್ನು ಎಲ್ಲಾ ಜಿಲ್ಲೆಗಳಿಗೂ ತೆಗೆದುಕೊಂಡು ಹೋಗಬೇಕು. ಇಲ್ಲಿನ ಆಶಯವನ್ನು ಹಳ್ಳಿಹಳ್ಳಿಗೆ ತಲುಪಿಸಬೇಕು. ಅದಕ್ಕೆ ಯುವಶಕ್ತಿ ಸಜ್ಜುಗೊಳ್ಳಬೇಕು ಎಂದರು.

ತಾವು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ಸಮಯವನ್ನು ಸ್ಮರಿಸಿಕೊಂಡ ಅವರು, ಆಗ ನಾನು ಅತಿ ಹೆಚ್ಚಿನ ಮಳೆಯಿಂದಾಗಿ ಶಾಲಾ ಮಕ್ಕಳಿಗೆ 13 ದಿನ ರಜೆ ಕೊಟ್ಟಿದೆ. ನನ್ನ ಮಕ್ಕಳ ಸುರಕ್ಷತೆಯ ಬಗ್ಗೆ ನನಗೆ ಭಯ ಇತ್ತು. ಅದಕ್ಕಾಗಿ ಇಂದಿಗೂ ಮಕ್ಕಳು ನನ್ನನ್ನು ನೆನೆಸಿಕೊಳ್ಳುತ್ತಾರೆ. ಆ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ನಾವು ಮಾತನಾಡಬೇಕಿದೆ. ವಯಕ್ತಿಕ ನೆಲೆಯಲ್ಲಾದರೂ ನೀವು ಮಾತನಾಡಿ, ಫೇಸ್‌ಬುಕ್‌ನಲ್ಲಿ ಸಹಬಾಳ್ವೆಯ ಸ್ಟೇಟಸ್ ಹಾಕಿ, ಹಾಡು ಹಾಡಿ ಮತ್ತು ಭಾರತೀಯತೆಯನ್ನು ಆಚರಿಸಿ ಎಂದು ಸೆಂಥಿಲ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...