Homeಮುಖಪುಟಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷಕ್ಕೆ ಉಡುಪಿ ಆಯ್ದುಕೊಂಡು ತಪ್ಪು ಮಾಡಿದರು: ಸಸಿಕಾಂತ್ ಸೆಂಥಿಲ್

ಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷಕ್ಕೆ ಉಡುಪಿ ಆಯ್ದುಕೊಂಡು ತಪ್ಪು ಮಾಡಿದರು: ಸಸಿಕಾಂತ್ ಸೆಂಥಿಲ್

ನೀವು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದೀರಿ. ಅವರಿಗಾಗಿ ಆಸ್ತಿ ಮಾಡುತ್ತಿದ್ದೀರಿ. ಆದರೆ ಸಮಾಜದಲ್ಲಿ ಉತ್ತಮ ಸೌಹಾರ್ದ ವಾತವಾರಣ ಇಲ್ಲದೆ ಇದ್ದರೆ ಏನು ಪ್ರಯೋಜನ? ದ್ವೇಷಮಯ ಸಮಾಜದಲ್ಲಿ ಅವರು ಹೇಗೆ ಬದುಕಬೇಕು? ಸೆಂಥಿಲ್ ಪ್ರಶ್ನೆ

- Advertisement -
- Advertisement -

ನೀವು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದೀರಿ. ಅವರಿಗಾಗಿ ಆಸ್ತಿ ಮಾಡುತ್ತಿದ್ದೀರಿ. ಆದರೆ ಸಮಾಜದಲ್ಲಿ ಉತ್ತಮ ಸೌಹಾರ್ದ ವಾತವಾರಣ ಇಲ್ಲದೆ ಇದ್ದರೆ ಏನು ಪ್ರಯೋಜನ? ದ್ವೇಷಮಯ ಸಮಾಜದಲ್ಲಿ ಅವರು ಹೇಗೆ ಬದುಕಬೇಕು? ಹಾಗಾಗಿ ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದನಿಯೆತ್ತಿ ಮಾತನಾಡಿ. ನಿಮಗೆ ಮಾತನಾಡದೆ ಬೇರೆ ಆಯ್ಕೆಯೇ ಇಲ್ಲ. ಅವರ ಬದುಕನ್ನು ಸುಂದರಗೊಳಿಸಲು ಸಹೋದರತ್ವವನ್ನು, ಭಾರತೀಯತೆಯನ್ನು ಆಚರಿಸಿ ಎಂದು ಮಾಜಿ ಐಎಸ್‌ಐ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಕರೆ ನೀಡಿದರು.

ಉಡುಪಿಯ ಕ್ರಿಶ್ಚಿಯನ್ ಶಾಲೆ ಮೈದಾನದಲ್ಲಿ ನಡೆದ ಸಹಬಾಳ್ವೆ ಸಮಾವೇಶದ ಅಧ್ಯಕ್ಷೀಯ ಮಾತುಗಳನ್ನಾಡಿದ ಅವರು, “ಇಂದು ನಡೆಯುತ್ತಿರುವುದು ಧರ್ಮಗಳ ಸಮಸ್ಯೆಯಲ್ಲ. ಇದು ಹಿಂದೂ ಮುಸ್ಲಿಂ ಸಮಸ್ಯೆಯೂ ಅಲ್ಲ. ಆದರೆ ಇದು ಎರಡು ಮನಸ್ಥಿತಿಗಳ ನಡುವಿನ ಸಮಸ್ಯೆಯಾಗಿದ್ದು, ಭಾರತದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ತಾವು ಎಲ್ಲರಿಗಿಂತ ಮೇಲೆಂಬ ಮನಸ್ಥಿತಿಯೊಂದಿದೆ. ಅದು ಸಮಾಜ ಎಂದರೆ ಮೇಲು ಕೀಳು ಇರಬೇಕೆಂದು ಬಯಸುತ್ತದೆ. ಅದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಭಯ, ದ್ವೇಷ ಹುಟ್ಟುಹಾಕುತ್ತದೆ. ಅವರು ದೇಶವನ್ನು ತಮ್ಮ ಆಸ್ತಿಯಾಗಿ ಆಗಿ ನೋಡುತ್ತಾರೆ. ಈ ಮನಸ್ಥಿತಿಯು ಭಾರತೀಯತೆಗೆ ವಿರುದ್ಧವಾಗಿದೆ. ಈ ಸಮಸ್ಯೆಯು ಭಾರತವನ್ನು ನಂಬದೆ ಇರುವವರಿಂದ ಹುಟ್ಟಿದೆ” ಎಂದು ವಿಶ್ಲೇಷಿಸಿದರು.

ಇನ್ನೊಂದು ಮನಸ್ಥಿತಿ ಇದೆ. ಅದು ನಮ್ಮ ನಮ್ಮ ಮನಸ್ಥಿತಿ. ತಾರತಮ್ಯವಿಲ್ಲದ ಸಮಾನತೆಯ ಕನಸು ಹೊತ್ತಿರುವ ಮನಸ್ಥಿತಿ. ಅಂದರೆ ದೇಶವನ್ನು ನಂಬುವ ಭಾರತೀಯ ಎಂಬ ಚಿಂತನೆಯನ್ನು ಆಧರಿಸಿರುವ ಮನಸ್ಥಿತಿ. ದೇಶವೆಂದರೆ ಅಲ್ಲಿನ ಜನರು ಎಂದು ನಂಬಿ ಭಾರತದ ಜನತೆಗೆ ಜಯವಾಗಲಿ ಎಂದು ಕೂಗುತ್ತೇವೆ. ಈ ಎರಡು ಮನಸ್ಥಿತಿಗಳ ನಡುವೆ ಹೋರಾಟ ನಡೆಯುತ್ತಿದೆ. ಹಾಗಾಗಿ ಇದನ್ನು ಭಾರತವನ್ನು ನಂಬದ ಅವರ ಮತ್ತು ಭಾರತವನ್ನು ನಂಬುವ ನಮ್ಮ ಮನಸ್ಥಿತಿಗಳ ನಡುವಿನ ಹೋರಾಟವನ್ನಾಗಿ ನೋಡಬೇಕು ಎಂದರು.

“ನಮ್ಮ ಸಮಸ್ಯೆ ಎಂದರೆ ಭಾರತೀಯತೆ ಎಂಬ ಚಿಂತನೆಯನ್ನು ಆಚರಿಸುವುದನ್ನು ಮರೆತುಬಿಟ್ಟಿದ್ದೇವೆ. 50 ವರ್ಷಗಳಿಂದ ನಿಜವಾದ ಭಾರತವನ್ನು ಆಚರಣೆ ಮಾಡುವುದನ್ನು ನಾವು ಮರೆತಿದ್ದೇವೆ. ನಾವು ಇನ್ನು ಮುಂದೆ ಆಚರಣೆ ಮಾಡಬೇಕಾಗಿದೆ. ಈ ಆಚರಣೆ ಇಲ್ಲಿಂದ ಶುರುವಾಗಬೇಕಿದೆ ಅದಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಎಲ್ಲಾ ಕಡೆ ಈ ಸಹೋದರತ್ವ, ಬಂಧುತ್ವವನ್ನು ಆಚರಿಸಬೇಕಿದೆ” ಎಂದು ತಿಳಿಸಿದರು.

ಭಾರತವನ್ನು ನಂಬದೆ ಇರುವವರು ಕೇವಲ ಶೇ. 10-15 ಮಾತ್ರ ಇದ್ದಾರೆ. ಆದರೆ ನಾವು ಶೇ. 85% ಕ್ಕಿಂತ ಹೆಚ್ಚಿದ್ದರೂ ಸುಮ್ಮನಿದ್ದೇವೆ. ಇಂದು ’ದ್ವೇಷ‘ ಹರಡುತ್ತಿರುವುದು ಸಮಸ್ಯೆಯಲ್ಲ. ಆದರೆ ಅದನ್ನು ನೋಡಿಕೊಂಡು ಸುಮ್ಮನಿರುವುದು ಸಮಸ್ಯೆಯಾಗಿದೆ. ಎಲ್ಲರೂ ಒಳ್ಳೆಯವರೇ ಆದರೆ ಅವರು ಮಾತನಾಡುತ್ತಿಲ್ಲ. ನಮ್ಮನ್ನು ಎಲ್ಲಿ ಸಿಕ್ಕಿ ಹಾಕಿಸುತ್ತಾರೊ ಎಂಬ ಭಯ ಅವರದು. ಎಚ್.ಎಸ್ ದೊರೆಸ್ವಾಮಿಯವರು ಯಾರಿಗೆ ಸಮಸ್ಯೆಯಾದರೂ ನಾವು ಅವರ ಜೊತೆ ನಿಲ್ಲಬೇಕೆಂದು ಹೇಳುತ್ತಿದ್ದರು ಮತ್ತು ಹೋರಾಡುತ್ತಿದ್ದರು. ಅವರು ನಮಗೆ ಮಾದರಿಯಾಗಬೇಕು. ದಲಿತರಿಗೆ, ಅಲ್ಪಸಂಖ್ಯಾತರಿಗೆ ಯಾರಿಗೆ ಸಮಸ್ಯೆಯಾದರೂ ನಾವು ಅವರ ಜೊತೆ ನಿಲ್ಲಬೇಕೆಂದು ಸೆಂಥಿಲ್ ಹೇಳಿದರು.

ನಾವು ಸಮಾಜದ ಸಮಸ್ಯೆಗಳನ್ನು ಹಿಂದೂ ಮುಸ್ಲಿಂ ಸಮಸ್ಯೆ ಎಂದು ಪರಿಗಣಿಸಬಾರದು. ಇದು ಧರ್ಮದ ಒಳಗಿನ ಜಗಳವಲ್ಲ. ಭಾರತೀಯರು ಮತ್ತು ಭಾರತವನ್ನು ಒಪ್ಪದೆ ಇರುವವರ ಸಮಸ್ಯೆ ಎಂದು ಮಾತನಾಡಬೇಕು, ಅದರನ್ನು ಸರಿಪಡಿಸಲು ಹೋರಾಡಬೇಕು. ನಮ್ಮಲ್ಲಿರುವ ಸಹೋದರತ್ವ, ಪ್ರೀತಿಯನ್ನು ಆಚರಿಸೋಣ, ಹಂಚೋಣ. ಅದೇ ಸರಿಯಾದ ಉತ್ತರವಾಗಿರುತ್ತದೆ. ಆಗ ಮಾತ್ರ ಭಾರತದ ಆತ್ಮವನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು.

ಇದನ್ನೂ ಓದಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ಭಾರತವನ್ನು ನಂಬದ ಮನಸ್ಥಿತಿಯವರು ತಮ್ಮ ದ್ವೇಷ ಹರಡಲು ಉಡುಪಿ ಆಯ್ದುಕೊಂಡು ತಪ್ಪು ಮಾಡಿದ್ದಾರೆ. ಅದಕ್ಕೆ ಈಗ ಭಾರತೀಯ ಜನರಿಂದಲೇ ದೊಡ್ಡ ಪ್ರತಿಕ್ರಿಯೆ ಬರುತ್ತಿದೆ. ಈ ಸಮಾವೇಶ ಸಂಪೂರ್ಣ ಯಶಸ್ವಿಯಾಗಿದೆ. ಈ ಯಶಸ್ಸನ್ನು ಎಲ್ಲಾ ಜಿಲ್ಲೆಗಳಿಗೂ ತೆಗೆದುಕೊಂಡು ಹೋಗಬೇಕು. ಇಲ್ಲಿನ ಆಶಯವನ್ನು ಹಳ್ಳಿಹಳ್ಳಿಗೆ ತಲುಪಿಸಬೇಕು. ಅದಕ್ಕೆ ಯುವಶಕ್ತಿ ಸಜ್ಜುಗೊಳ್ಳಬೇಕು ಎಂದರು.

ತಾವು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ಸಮಯವನ್ನು ಸ್ಮರಿಸಿಕೊಂಡ ಅವರು, ಆಗ ನಾನು ಅತಿ ಹೆಚ್ಚಿನ ಮಳೆಯಿಂದಾಗಿ ಶಾಲಾ ಮಕ್ಕಳಿಗೆ 13 ದಿನ ರಜೆ ಕೊಟ್ಟಿದೆ. ನನ್ನ ಮಕ್ಕಳ ಸುರಕ್ಷತೆಯ ಬಗ್ಗೆ ನನಗೆ ಭಯ ಇತ್ತು. ಅದಕ್ಕಾಗಿ ಇಂದಿಗೂ ಮಕ್ಕಳು ನನ್ನನ್ನು ನೆನೆಸಿಕೊಳ್ಳುತ್ತಾರೆ. ಆ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ನಾವು ಮಾತನಾಡಬೇಕಿದೆ. ವಯಕ್ತಿಕ ನೆಲೆಯಲ್ಲಾದರೂ ನೀವು ಮಾತನಾಡಿ, ಫೇಸ್‌ಬುಕ್‌ನಲ್ಲಿ ಸಹಬಾಳ್ವೆಯ ಸ್ಟೇಟಸ್ ಹಾಕಿ, ಹಾಡು ಹಾಡಿ ಮತ್ತು ಭಾರತೀಯತೆಯನ್ನು ಆಚರಿಸಿ ಎಂದು ಸೆಂಥಿಲ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...