Homeಮುಖಪುಟನಭಕ್ಕೆ ಜಿಗಿದ ಮೋದಿ ಫೋಟೊ, ಭಗವದ್ಗೀತೆ ಕಾಪಿ: ಇಲ್ಲೇ ಉಳಿದ 'ಆನಂದ್' ಉಪಗ್ರಹ!

ನಭಕ್ಕೆ ಜಿಗಿದ ಮೋದಿ ಫೋಟೊ, ಭಗವದ್ಗೀತೆ ಕಾಪಿ: ಇಲ್ಲೇ ಉಳಿದ ‘ಆನಂದ್’ ಉಪಗ್ರಹ!

- Advertisement -
- Advertisement -

ಇಂದಿನ ಉಡಾವಣೆಯಲ್ಲಿ ಮೋದಿ ಚಿತ್ರ ಮತ್ತು ಭಗವದ್ಗೀತೆಯ ಇ-ಕಾಪಿಯೇನೋ ನಭಕ್ಕೆ ಜಿಗಿದವು. ಆದರೆ, ತುಂಬ ನಿರೀಕ್ಷಿತ ಭಾರತದ ಮೊದಲ ಖಾಸಗಿ ಉಪಗ್ರಹ ‘ಆನಂದ್’ ಮಾತ್ರ ಇಲ್ಲೆ ಉಳಿದಿದೆ.

ಪಿಎಸ್‌ಎಲ್‌ವಿ-ಸಿ 51 ಘೋಷಿಸಿದಾಗ, ಈ ಆನಂದ್ ಉಪಗ್ರಹದ ಬಗ್ಗೆ ಸಾಕಷ್ಟು ಪ್ರಶಂಸೆ ಕೇಳಿಬಂದಿತ್ತು. ಅದು ಅಂತಿಮವಾಗಿ ಇಂದು ಉಡಾವಣೆಯ ಭಾಗವಾಗಲು ಸಾಧ್ಯವಾಗಲಿಲ್ಲ. ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.

ಇಂದಿನ ಉಡಾವಣೆ ಬೆಂಗಳೂರು ಮೂಲದ ಪಿಕ್ಸೆಲ್ ಕಂಪನಿಯ ಉಪಗ್ರಹ ‘ಆನಂದ್’ ಅನ್ನು ಸಾಗಿಸಬೇಕಿತ್ತು. ಪಿಕ್ಸೆಲ್ ಖಾಸಗಿ ಕ್ಷೇತ್ರದ ಹೊಸ ಸ್ಟಾರ್ಟ್ ಅಪ್‌ಗಳಲ್ಲಿ ಒಂದಾಗಿದ್ದು, ಸ್ಪೇಸ್‌ಎಕ್ಸ್ ಅಥವಾ ಪ್ಲಾನೆಟ್ ಲ್ಯಾಬ್‌ಗಳಂತಹ ಕಂಪನಿಗಳು ಅಮೆರಿಕದಲ್ಲಿ ಏನು ಮಾಡುತ್ತಿವೆಯೋ ಅದನ್ನು ಮಾಡುತ್ತಿದೆ.

ಶನಿವಾರ ಎರಡು ವರ್ಷಗಳನ್ನು ಪೂರ್ಣಗೊಳಿಸಿದ ಬೆಂಗಳೂರು ಮೂಲದ ಪಿಕ್ಸೆಲ್ ಇಂಡಿಯಾ, ಜಗತ್ತಿನ ಪ್ರತಿಯೊಂದು ಭಾಗವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಹೆಚ್ಚಿನ ರೆಸಲ್ಯೂಶನ್ ಚಿತ್ರಣಗಳನ್ನು ಒದಗಿಸುವ ವ್ಯವಸ್ಥೆಯನ್ನು ಉಪಗ್ರಹದಲ್ಲಿ ಅಳವಡಿಸಿದೆ. ಹವಾಮಾನ ಬದಲಾವಣೆ, ಕೃಷಿ ಮತ್ತು ನಗರ ಯೋಜನೆಯಲ್ಲಿ ಈ ಅನ್ವಯಿಕೆಗಳನ್ನು ಬಳಸಿಕೊಳ್ಳಬಹುದು. ಆನಂದ್ ಎಂದು ಕರೆಯಲ್ಪಡುವ ಅದರ ಮೊದಲ ಉಪಗ್ರಹಗಳು ಇಂದು ಬೆಳಿಗ್ಗೆ ಶ್ರೀಹರಿಕೋಟ ಉಡಾವಣಾ ಶ್ರೇಣಿಯಿಂದ ಹೊರಟ ಈ ಪಿಎಸ್‌ಎಲ್‌ವಿ-ಸಿ 51 ರಾಕೆಟ್‌ನಲ್ಲಿ ಇರಬೇಕಿತ್ತು.

ಆದರೆ ಉಡಾವಣೆಗೆ ಒಂದು ವಾರಕ್ಕಿಂತಲೂ ಮೊದಲು, ಕಂಪನಿಯು, ‘ಪರೀಕ್ಷೆಯ ಸಮಯದಲ್ಲಿ “ಕೆಲವು ಸಾಫ್ಟ್‌ವೇರ್ ಸಮಸ್ಯೆಗಳ’ ಕಾರಣದಿಂದಾಗಿ, ಈ ಸಮಯದಲ್ಲಿ ಉಪಗ್ರಹವನ್ನು ಉಡಾಯಿಸುವುದಿಲ್ಲ ಎಂದು ಘೋಷಿಸಿತು. “ಉಪಗ್ರಹವನ್ನು ತಯಾರಿಸಲು ವ್ಯಯಿಸಿದ ಸಮಯ ಮತ್ತು ಶ್ರಮವನ್ನು ಗಮನಿಸಿದರೆ, ಉಪಗ್ರಹವನ್ನು ಉಡಾಯಿಸಲು ಮುಂದಾಗುವುದರಲ್ಲಿ ಅರ್ಥವಿಲ್ಲ, ಈ ಸಮಯದಲ್ಲಿ ನಮಗೆ ಸಂಪೂರ್ಣ ವಿಶ್ವಾಸವಿಲ್ಲ’ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿತ್ತು.

ಪಿಕ್ಸೆಲ್ ಉಪಗ್ರಹದಿಂದಾಗಿ ಪಿಎಸ್‌ಎಲ್‌ವಿ-ಸಿ 51 ಉಡಾವಣೆಯು “ವಿಶೇಷ” ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ಕೂಡ ಹೇಳಿದ್ದರು, ‘ಏಕೆಂದರೆ ಇದು ಹೊಸ ಯುಗದ ಆರಂಭದ ಪ್ರತೀಕವಾಗಿದ್ದು, ಖಾಸಗಿ ಕಂಪನಿಗಳು ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಸಮಾನ ಪಾಲುದಾರರಾಗುವ ಅಪೂರ್ವ ಸಂದರ್ಭ’ ಎಂದು ಅವರು ಡಿಸೆಂಬರ್‌ನಲ್ಲಿ ಹೇಳಿದ್ದರು.

‘ಭಾರತ ಸರ್ಕಾರವು ಸುಧಾರಣೆಗಳನ್ನು ಪ್ರಾರಂಭಿಸಿದ (ಖಾಸಗಿ ಕಂಪನಿಗಳ ಭಾಗವಹಿಸುವಿಕೆಗೆ ಅನುಕೂಲವಾಗುವಂತೆ ಬಾಹ್ಯಾಕಾಶ ಕ್ಷೇತ್ರವನ್ನು ತೆರೆದಿದ್ದು) ಎಂಟು ತಿಂಗಳಲ್ಲಿ, ಪಿಕ್ಸೆಲ್ ಇಂಡಿಯಾ ಎಂಬ ಸ್ಟಾರ್ಟ್ ಅಪ್‌ನಿಂದ ಆನಂದ್ ಎಂಬ ಮೊದಲ ಉಪಗ್ರಹವನ್ನು ಉಡಾವಣೆ ಮಾಡಲಾಗುವುದು, ” ಎಂದು ಶಿವನ್ ಹೆಮ್ಮೆ ಪಟ್ಟಿದ್ದರು.

ಉಡಾವಣೆಯು ಅಂತಿಮವಾಗಿ ಪಿಕ್ಸೆಲ್ ಇಂಡಿಯಾ ಉಪಗ್ರಹವಿಲ್ಲದೆ ಸಂಭವಿಸಿತು, ಇಂದು ಉಡಾಯಿಸಲ್ಪಟ್ಟ ದೇಸಿ ಉಪಗ್ರಹಗಳನ್ನು ವಿವಿಧ ಇಂಜಿನಿಯರಿಂಗ್ ಕಾಲೇಜುಗಳು ಸಹಯೋಗದಲ್ಲಿ ಅಭಿವೃದ್ಧಿಪಡಿಸಿವೆ.


ಇದನ್ನೂ ಓದಿ: SD ಕಾರ್ಡ್‌ನಲ್ಲಿನ ಭಗವದ್ಗೀತೆ ಹೊತ್ತೊಯ್ದ ಉಪಗ್ರಹ: ಲೈವ್ ವೀಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...