Homeಮುಖಪುಟನಭಕ್ಕೆ ಜಿಗಿದ ಮೋದಿ ಫೋಟೊ, ಭಗವದ್ಗೀತೆ ಕಾಪಿ: ಇಲ್ಲೇ ಉಳಿದ 'ಆನಂದ್' ಉಪಗ್ರಹ!

ನಭಕ್ಕೆ ಜಿಗಿದ ಮೋದಿ ಫೋಟೊ, ಭಗವದ್ಗೀತೆ ಕಾಪಿ: ಇಲ್ಲೇ ಉಳಿದ ‘ಆನಂದ್’ ಉಪಗ್ರಹ!

- Advertisement -
- Advertisement -

ಇಂದಿನ ಉಡಾವಣೆಯಲ್ಲಿ ಮೋದಿ ಚಿತ್ರ ಮತ್ತು ಭಗವದ್ಗೀತೆಯ ಇ-ಕಾಪಿಯೇನೋ ನಭಕ್ಕೆ ಜಿಗಿದವು. ಆದರೆ, ತುಂಬ ನಿರೀಕ್ಷಿತ ಭಾರತದ ಮೊದಲ ಖಾಸಗಿ ಉಪಗ್ರಹ ‘ಆನಂದ್’ ಮಾತ್ರ ಇಲ್ಲೆ ಉಳಿದಿದೆ.

ಪಿಎಸ್‌ಎಲ್‌ವಿ-ಸಿ 51 ಘೋಷಿಸಿದಾಗ, ಈ ಆನಂದ್ ಉಪಗ್ರಹದ ಬಗ್ಗೆ ಸಾಕಷ್ಟು ಪ್ರಶಂಸೆ ಕೇಳಿಬಂದಿತ್ತು. ಅದು ಅಂತಿಮವಾಗಿ ಇಂದು ಉಡಾವಣೆಯ ಭಾಗವಾಗಲು ಸಾಧ್ಯವಾಗಲಿಲ್ಲ. ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.

ಇಂದಿನ ಉಡಾವಣೆ ಬೆಂಗಳೂರು ಮೂಲದ ಪಿಕ್ಸೆಲ್ ಕಂಪನಿಯ ಉಪಗ್ರಹ ‘ಆನಂದ್’ ಅನ್ನು ಸಾಗಿಸಬೇಕಿತ್ತು. ಪಿಕ್ಸೆಲ್ ಖಾಸಗಿ ಕ್ಷೇತ್ರದ ಹೊಸ ಸ್ಟಾರ್ಟ್ ಅಪ್‌ಗಳಲ್ಲಿ ಒಂದಾಗಿದ್ದು, ಸ್ಪೇಸ್‌ಎಕ್ಸ್ ಅಥವಾ ಪ್ಲಾನೆಟ್ ಲ್ಯಾಬ್‌ಗಳಂತಹ ಕಂಪನಿಗಳು ಅಮೆರಿಕದಲ್ಲಿ ಏನು ಮಾಡುತ್ತಿವೆಯೋ ಅದನ್ನು ಮಾಡುತ್ತಿದೆ.

ಶನಿವಾರ ಎರಡು ವರ್ಷಗಳನ್ನು ಪೂರ್ಣಗೊಳಿಸಿದ ಬೆಂಗಳೂರು ಮೂಲದ ಪಿಕ್ಸೆಲ್ ಇಂಡಿಯಾ, ಜಗತ್ತಿನ ಪ್ರತಿಯೊಂದು ಭಾಗವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಹೆಚ್ಚಿನ ರೆಸಲ್ಯೂಶನ್ ಚಿತ್ರಣಗಳನ್ನು ಒದಗಿಸುವ ವ್ಯವಸ್ಥೆಯನ್ನು ಉಪಗ್ರಹದಲ್ಲಿ ಅಳವಡಿಸಿದೆ. ಹವಾಮಾನ ಬದಲಾವಣೆ, ಕೃಷಿ ಮತ್ತು ನಗರ ಯೋಜನೆಯಲ್ಲಿ ಈ ಅನ್ವಯಿಕೆಗಳನ್ನು ಬಳಸಿಕೊಳ್ಳಬಹುದು. ಆನಂದ್ ಎಂದು ಕರೆಯಲ್ಪಡುವ ಅದರ ಮೊದಲ ಉಪಗ್ರಹಗಳು ಇಂದು ಬೆಳಿಗ್ಗೆ ಶ್ರೀಹರಿಕೋಟ ಉಡಾವಣಾ ಶ್ರೇಣಿಯಿಂದ ಹೊರಟ ಈ ಪಿಎಸ್‌ಎಲ್‌ವಿ-ಸಿ 51 ರಾಕೆಟ್‌ನಲ್ಲಿ ಇರಬೇಕಿತ್ತು.

ಆದರೆ ಉಡಾವಣೆಗೆ ಒಂದು ವಾರಕ್ಕಿಂತಲೂ ಮೊದಲು, ಕಂಪನಿಯು, ‘ಪರೀಕ್ಷೆಯ ಸಮಯದಲ್ಲಿ “ಕೆಲವು ಸಾಫ್ಟ್‌ವೇರ್ ಸಮಸ್ಯೆಗಳ’ ಕಾರಣದಿಂದಾಗಿ, ಈ ಸಮಯದಲ್ಲಿ ಉಪಗ್ರಹವನ್ನು ಉಡಾಯಿಸುವುದಿಲ್ಲ ಎಂದು ಘೋಷಿಸಿತು. “ಉಪಗ್ರಹವನ್ನು ತಯಾರಿಸಲು ವ್ಯಯಿಸಿದ ಸಮಯ ಮತ್ತು ಶ್ರಮವನ್ನು ಗಮನಿಸಿದರೆ, ಉಪಗ್ರಹವನ್ನು ಉಡಾಯಿಸಲು ಮುಂದಾಗುವುದರಲ್ಲಿ ಅರ್ಥವಿಲ್ಲ, ಈ ಸಮಯದಲ್ಲಿ ನಮಗೆ ಸಂಪೂರ್ಣ ವಿಶ್ವಾಸವಿಲ್ಲ’ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿತ್ತು.

ಪಿಕ್ಸೆಲ್ ಉಪಗ್ರಹದಿಂದಾಗಿ ಪಿಎಸ್‌ಎಲ್‌ವಿ-ಸಿ 51 ಉಡಾವಣೆಯು “ವಿಶೇಷ” ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ಕೂಡ ಹೇಳಿದ್ದರು, ‘ಏಕೆಂದರೆ ಇದು ಹೊಸ ಯುಗದ ಆರಂಭದ ಪ್ರತೀಕವಾಗಿದ್ದು, ಖಾಸಗಿ ಕಂಪನಿಗಳು ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಸಮಾನ ಪಾಲುದಾರರಾಗುವ ಅಪೂರ್ವ ಸಂದರ್ಭ’ ಎಂದು ಅವರು ಡಿಸೆಂಬರ್‌ನಲ್ಲಿ ಹೇಳಿದ್ದರು.

‘ಭಾರತ ಸರ್ಕಾರವು ಸುಧಾರಣೆಗಳನ್ನು ಪ್ರಾರಂಭಿಸಿದ (ಖಾಸಗಿ ಕಂಪನಿಗಳ ಭಾಗವಹಿಸುವಿಕೆಗೆ ಅನುಕೂಲವಾಗುವಂತೆ ಬಾಹ್ಯಾಕಾಶ ಕ್ಷೇತ್ರವನ್ನು ತೆರೆದಿದ್ದು) ಎಂಟು ತಿಂಗಳಲ್ಲಿ, ಪಿಕ್ಸೆಲ್ ಇಂಡಿಯಾ ಎಂಬ ಸ್ಟಾರ್ಟ್ ಅಪ್‌ನಿಂದ ಆನಂದ್ ಎಂಬ ಮೊದಲ ಉಪಗ್ರಹವನ್ನು ಉಡಾವಣೆ ಮಾಡಲಾಗುವುದು, ” ಎಂದು ಶಿವನ್ ಹೆಮ್ಮೆ ಪಟ್ಟಿದ್ದರು.

ಉಡಾವಣೆಯು ಅಂತಿಮವಾಗಿ ಪಿಕ್ಸೆಲ್ ಇಂಡಿಯಾ ಉಪಗ್ರಹವಿಲ್ಲದೆ ಸಂಭವಿಸಿತು, ಇಂದು ಉಡಾಯಿಸಲ್ಪಟ್ಟ ದೇಸಿ ಉಪಗ್ರಹಗಳನ್ನು ವಿವಿಧ ಇಂಜಿನಿಯರಿಂಗ್ ಕಾಲೇಜುಗಳು ಸಹಯೋಗದಲ್ಲಿ ಅಭಿವೃದ್ಧಿಪಡಿಸಿವೆ.


ಇದನ್ನೂ ಓದಿ: SD ಕಾರ್ಡ್‌ನಲ್ಲಿನ ಭಗವದ್ಗೀತೆ ಹೊತ್ತೊಯ್ದ ಉಪಗ್ರಹ: ಲೈವ್ ವೀಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...