Homeಕರ್ನಾಟಕಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಈ ಎಲ್ಲಾ ಸಮಸ್ಯೆಗಳಿಗೂ ವ್ಯವಸ್ಥೆಯೇ ಕಾರಣ. ಒಂದಲ್ಲ ಒಂದು ದಿನ ಜನ ತಿರುಗಿ ಬೀಳ್ತಾರೆ. ಆ ದಿನಕ್ಕೆ ತುಂಬಾ ದೂರವಿಲ್ಲ. ಕೊರೊನಾ ಸಮಯದಲ್ಲಿ ಜನ ಹೆಚ್ಚು ಮಾತಾನಾಡುತ್ತಿದ್ದಾರೆ.

- Advertisement -
- Advertisement -

ನಾವು ಮನುಷ್ಯರಾಗಿ ಬದುಕುವುದು ಯಾವಾಗ…? ಮನುಷ್ಯ ಮನುಷ್ಯನನ್ನು ಯಾವ ಜಾತಿ, ಊರು ಎಂದು ಪ್ರಶ್ನಿಸದೇ ಮನುಷ್ಯ ಎಂದು ನೋಡಿ ಬದುಕುವುದು ಯಾವಾಗ..? ಎಲ್ಲ ಸರಿ ಇದೆ ಎಂದುಕೊಂಡೆ ಬದುಕಬೇಕೆ…? ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ…? ಮಾತನಾಡಬಾರದೇ…? ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿರುವುದು ಕನ್ನಡದ ಖ್ಯಾತ ನಟ ಸತೀಶ್ ನಿನಾಸಂ.

ಖಾಸಗಿ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರ ಸ್ನೇಹಿತ, ದಿವಂಗತ ನಟ ಸಂಚಾರಿ ವಿಜಯ್ ಬಗ್ಗೆ ಮಾತನಾಡುತ್ತಾ, ಸಮಾಜದಲ್ಲಿನ ಜಾತಿ ವ್ಯವಸ್ಥೆಯ ಬಗ್ಗೆ ಕಿಡಿಕಾರಿದ್ದಾರೆ. ಜಾತಿ ವ್ಯವಸ್ಥೆಯಿಂದ ಮನುಷ್ಯ ಅನುಭವಿಸುವ ನೋವು, ಅವಮಾನಗಳ ಕುರಿತು ಮಾತನಾಡುತ್ತಾ ‘ಇದೇ ಸಮಾಜ ಮಾಡಿದ ಅವಮಾನ, ನೋವಿನಿಂದ ನಟ ಸಂಚಾರಿ ವಿಜಯ್ ಯಾತನೆ ಅನುಭವಿಸಬೇಕಾಯಿತು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಸಮಾಜದಲ್ಲಿ ಶಿಕ್ಷಣ ಪಡೆದರೂ ಮನುಷ್ಯನಲ್ಲಿ ಯಾವ ಬದಲಾವಣೆಯಾಗಿದೆ? ಪ್ರಾಣಿಗಳಲ್ಲಿ ಆಗಿರುವ ಬೆಳವಣಿಗೆ ಮನುಷ್ಯನಲ್ಲಿಲ್ಲ. ಸಮಾಜ ಯಾವಾಗ ಬದಲಾಗುತ್ತದೆ…? ಎಲ್ಲ ಸರಿಯಿದೆ ಎಂದು ಮುಚ್ಚಿಟ್ಟುಕೊಳ್ಳುವುದು ಸರಿಯಲ್ಲ. ಈಗ ವಿಜಿಯನ್ನು ಕರ್ನಾಟಕದ ಹೆಮ್ಮೆ ಎನ್ನುವಾಗ, ಆತನಿಗೆ ನಾವು ಕೊಟ್ಟ ಅವಮಾನಗಳನ್ನು, ನೋವನ್ನು ನೆನಪಿಸಿಕೊಳ್ಳಬೇಕು. ಇವತ್ತು ಅವರಿಲ್ಲ ಎಂದು ಕಣ್ಣೀರಿಡುವಾಗ ಅದಕ್ಕೆ ನಾವು ಕೂಡ ಕಾರಣ ಎಂಬುದನ್ನು ತಿಳಿಯಬೇಕು. ಈ ಸಮಾಜ, ವ್ಯವಸ್ಥೆ ಕಾರಣ ಕೂಡ ಆತನಿಲ್ಲದಕ್ಕೆ ಕಾರಣ’ ಎಂದು ನಟ ಸತೀಶ್ ನಿನಾಸಂ ಹೇಳಿದ್ದಾರೆ.

ಇದನ್ನೂ ಓದಿ: 10 ರಲ್ಲಿ8 ಭಾರತೀಯ ಅಮೆರಿಕನ್ನರು ಮೇಲ್ಜಾತಿ ಅಥವಾ ಸಾಮಾನ್ಯ ಜಾತಿಯೊಂದಿಗೆ ಗುರುತಿಸಿಕೊಳ್ಳಲು ಬಯಸುತ್ತಾರೆ – ಸಮೀಕ್ಷೆ

’ನಾವು ಮನುಷ್ಯರಾಗಿ ಬದುಕುವುದು ಯಾವಾಗ…? ಮನುಷ್ಯ ಮನುಷ್ಯನನ್ನು ಯಾವ ಜಾತಿ, ಊರು ಎಂದು ಪ್ರಶ್ನಿಸದೇ ಮನುಷ್ಯ ಎಂದು ನೋಡಿ ಬದುಕುವುದು ಯಾವಾಗ..? ಎಲ್ಲ ಸರಿ ಇದೆ ಎಂದುಕೊಂಡೆ  ಬದುಕುವುದು ಎಷ್ಟು ದಿನ….? ನನ್ನಿಂದ ತಪ್ಪಾಗಿದೆ..ನಿಮ್ಮಿಂದ ತಪ್ಪಾಗಿದೆ. ಸರಿ ಪಡಿಸಿಕೊಳ್ಳೋಣ’ ಎಂದಿದ್ದಾರೆ.

’ಸಮಾಜದಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕಾ…? ಮಾತನಾಡಬಾರದ…? ನಾವು 21ನೇ ಶತಮಾನದಲ್ಲಿ, ಈ ಕಾಲದಲ್ಲಿಯೂ ಎಲ್ಲಾ ರೀತಿಯಲ್ಲಿ ಶೈಕ್ಷಣಿಕವಾಗಿ, ವೈಜ್ಞಾನಿಕವಾಗಿ ಮುಂದುವರೆದರೂ ಮನುಷ್ಯತ್ವದ ವಿಚಾರದಲ್ಲಿ ಪ್ರಾಣಿಗಳಿಗಿಂತ  ಹಿಂದಿದ್ದೇವೆ. ಮನುಷ್ಯನಲ್ಲಿ ಕೆಟ್ಟ, ಕೊಳಕು, ವಿಷ ತುಂಬಿದ ಮನಸ್ಸು ಇದೆ’ ಎಂದು ಜಾತಿ ವ್ಯವಸ್ಥೆಯ ಬಗ್ಗೆ ಕಿಡಿಕಾರಿದ್ದಾರೆ.

’ಜಾತಿ ವಿಷಯದಲ್ಲಿ ಸಂಚಾರಿ ವಿಜಯ್ ತುಂಬಾ ನೋವುಗಳನ್ನು ಅನುಭವಿಸಿದ್ದಾರೆ. ಇದರಲ್ಲಿ ಸುಳ್ಳು ಇಲ್ಲ. ಈ ಬಗ್ಗೆ ವೇದಿಕೆ, ಸಮಯ ಸಿಗಲಿ ಎಳೆ ಎಳೆಯಾಗಿ ಆತನಿಗಾದ ನೋವು, ಅವಮಾನಗಳನ್ನು ತಿಳಿಸುತ್ತೇನೆ. ಆತ ಮಾತನಾಡಲು ಹೆದರುತ್ತಿದ್ದ. ಏಕೆಂದರೆ ಸಮಾಜದಲ್ಲಿ ಅಂತಹ ಪರಿಸ್ಥತಿ ಇದೆ. ಆದರೆ, ನಾನು ಮಾತನಾಡುತ್ತೇನೆ. ಏನಾದರೂ ಆಗಲಿ ಎದುರಿಸುತ್ತೇನೆ’ ಎಂದಿದ್ದಾರೆ.

’ನಮ್ಮ ಸಮಸ್ಯೆಳ ಬಗ್ಗೆ, ನಮಗಾಗಿರುವ ನೋವುಗಳ ಬಗ್ಗೆ ಮಾತನಾಡಿದರೆ, ಒಂದು ವರ್ಗಕ್ಕೆ ನಮ್ಮನ್ನು ಸೀಮಿತಗೊಳಿಸುವುದು, ಇದೊಂದು ಬೇರೆ ವರ್ಗ ಅಂತ ಪಕ್ಕಕ್ಕೆ ಇಡುವುದು ಮಾಡ್ತಾರೆ. ಆತನ ಸಿನಿಮಾಗಳನ್ನು ನೋಡಬೇಡಿ, ಅವನು ಸರಿಯಿಲ್ಲ. ಅವನು ಹೀಗೆಯೇ ಎಂದು ಹೇಳುತ್ತಾರೆ. ನನ್ನ ವಿರುದ್ಧ ಮಾತಾಡುವವರನ್ನು ಮತ್ತೊಂದು ಕೆಟಗರಿ ಮಾಡುತ್ತಾರೆ. ಆದರೆ, ಇವರು ಯಾಕೆ ಮಾತನಾಡುತ್ತಿದ್ದಾರೆ ಎಂಬುದನ್ನು ವಿಚಾರ ಮಾಡುವುದಿಲ್ಲ’ ಎಂದು ಸಮಸ್ಯೆಗಳ ಬಗ್ಗೆ ಮಾತನಾಡುವವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಮನಸ್ಥಿತಿ ಕುರಿತು ಟೀಕಿಸಿದ್ದಾರೆ.

ಇದನ್ನೂ ಓದಿ: ಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ಅಮಾವೀಯ ಘಟನೆ

’ಮನುಷ್ಯ ತಾನೇ ಶ್ರೇಷ್ಠ ಎಂಬುದನ್ನು ಎಲ್ಲಿಯವರೆಗೆ ಬಿಡುವುದಿಲ್ಲವೂ ಅಲ್ಲಿಯವರೆಗೆ ಮನುಷ್ಯ ಉದ್ದಾರ ಆಗುವುದಿಲ್ಲ. ಮನುಷ್ಯನ ಕೊಳಕು ಮನಸ್ಥಿತಿ ಬದಲಾಗಲ್ಲ. ಭೂಮಿ ನಾಶವಾಗುತ್ತಿರುವುದು ಮನುಷ್ಯನಿಂದಲೇ, ಮನುಷ್ಯ ನಾಶವಾಗುತ್ತಿರುವುದು ಮನುಷ್ಯನಿಂದಲೇ. ಪ್ರಕೃತಿ, ಪ್ರಾಣಿಗಳಿಂದ ಅಲ್ಲ’ ಎಂದು ಒತ್ತಿ ಹೇಳಿದ್ದಾರೆ.

’ಈ ಎಲ್ಲಾ ಸಮಸ್ಯೆಗಳಿಗೂ ವ್ಯವಸ್ಥೆಯೇ ಕಾರಣ. ಒಂದಲ್ಲ ಒಂದು ದಿನ ಜನ ತಿರುಗಿ ಬೀಳ್ತಾರೆ. ಆ ದಿನಕ್ಕೆ ತುಂಬಾ ದೂರವಿಲ್ಲ. ಕೊರೊನಾ ಸಮಯದಲ್ಲಿ ಜನ ಹೆಚ್ಚು ಮಾತಾನಾಡುತ್ತಿದ್ದಾರೆ. ಈಗಾಗಲೇ ಜನ ತಿರುಗಿ ಬಿದ್ದಿದ್ದಾರೆ. ನಮ್ಮ ಸಮಸ್ಯೆಗಳ ಬಗ್ಗೆ ಮಾತನಾಡಿದರೇ ನನ್ನನ್ನು ನಾಳೆ ಸಾಯಿಸಬಹುದು. ನಿಮ್ಮನ್ನು ನಾಡಿದ್ದು, ಆದರೆ ಮಾತನಾಡುವುದನ್ನು ಮಾತನಾಡಬೇಕು’ ಎಂದು ಸತೀಶ್ ನಿನಾಸಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸತೀಶ್ ನಿನಾಸಂ ಅವರ ಹೇಳಿಕೆಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನಿನಾಸಂ ಅವರ ಅಭಿಪ್ರಾಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನನ್ನನ್ನು 4 ಗಂಟೆಗಳ ಕಾಲ ಪ್ರಶ್ನಿಸಲಾಯಿತು, ಹೋರಾಟ ಮುಂದುವರಿಯುತ್ತದೆ: ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಜಾತಿ ವ್ಯವಸ್ಥೆ ಒಂದು ಸಮಾಜಕ್ಕೆ ಅಂಟಿಕೊಂಡ ರೋಗ. ನನ್ನ ಜಾತಿಗೆ ಅವಮಾನ ನಿನ್ನ ಜಾತಿಗೆ ಅವಮಾನ ಮತ್ತೊಂದು ಜಾತಿಯ ವ್ಯಕ್ತಿ ಮಾತುಗಳು ಅಡಿದಾಗ ಕೆಲವು ಜನರು ವಿರೊದ ಮಾತುಗಳು ಅಡುತ್ತಾರೆ. ಆದರೆ ತನ್ನ ಜಾತಿಯ ಜನರು ಮತ್ತೊಂದು ಜಾತಿಯ ವ್ಯಕ್ತಿ ಬಗ್ಗೆ ಕೆಟ್ಟ ರೀತಿಯಲ್ಲಿ ನಡೆದುಕೊಳ್ಳುವ ಬಗ್ಗೆ ಮಾತುಗಳು ಅಡುತ್ತಿಲ್ಲಾ. ಯಾವುದೇ ಜಾತಿಯ ವ್ಯಕ್ತಿ ಜಾತಿವಾದಿ ಮಾಡಿದರು ಅವನು ಕೊಳಕು ಮನಸ್ಸಿನ ವ್ಯಕ್ತಿ . ಆಗುತ್ತಾನೆ ಭಾರತೀಯ ಜಾತಿ ವ್ಯವಸ್ಥೆ ಹೊಗದ ಹೊರತು ಭಾರತ ಎಷ್ಟೇ ಅಭಿವೃದ್ಧಿ ಆದರು ಅದು ವ್ಯರ್ಥ ಅನಿಸುತ್ತದೆ. ದಯವಿಟ್ಟು ಸಮ ಸಮಾಜ ಕಲ್ಯಾಣ ಸಮಾಜ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕೈ ಜೊಡಿಸೊಣ

  2. ಭಾರತದ ಅಭಿವೃದ್ಧಿ ಅಂದರೆ ಸಮ ಸಮಾಜದ ನಿರ್ಮಾಣ.
    ಬಸವಾದಿ ಶರಣರ ಬಯಸಿದ ಸಮಾಜ.
    ಬುದ್ಧ ಬಯಸಿದ ಸಮಾಜ.
    ಪೆರಿಯಾರ್ ಬಯಸಿದ ಸಮಾಜ.
    ನಾನು ಮಾತ್ರ ಶೈಕ್ಷಣಿಕ ಭಾರತ ಬಯಸುತ್ತೆನೆ.
    ಮಾನವೀಯ ಮೌಲ್ಯಗಳನ್ನು ಹೊಂದಿರುವ ಭಾರತ ಬಯಸುತ್ತೇನೆ.
    ಪ್ರತಿ ವ್ಯಕ್ತಿ ಜಾತಿಯ ಮುಕ್ತಿ ಪಡೆಯಲು ಪ್ರಯತ್ನ ಮಾಡಬೇಕು.
    ಇವನಾರವ ಇವ ನಮ್ಮವ ಅನ್ನುವ ಸಮಾಜ ನಿರ್ಮಾಣ ಮಾಡಬೇಕು.
    ಪ್ರತಿಯೊಂದು ವಿದ್ಯಾವಂತ ವ್ಯಕ್ತಿ ಸಮಾಜದ ಜಾತಿ ವ್ಯವಸ್ಥೆ ನಾಶಕ್ಕೆ ಪ್ರಯತ್ನ ಮಾಡಬೇಕು

  3. ನೀನಾಸಂ ಸತೀಶ್ ರವರ ನಿಲುವು ಸ್ವಾಗತಾರ್ಹ. ನಾವು ಕೊಚ್ಚೆಗುಂಡಿಯಲ್ಲಿ ಬದುಕುತ್ತಿದ್ದರೂ, “ಇದೇ ಸ್ವರ್ಗ” ಎಂದು ಸುಳ್ಳು ಹೇಳಿಕೊಂಡು ಎಷ್ಟು ದಿನ ತಾನೇ ಬದುಕಲು ಸಾದ್ಯ? ಸತ್ಯವನ್ನು ಒಂದಲ್ಲಾ ಒಂದು ದಿನ ಹೇಳಬೇಕಾಗಿದೆ.

  4. ಹನ್ನೆರಡನೇ ಶತಮಾನದಲ್ಲಿ ಜಾತಿ ವ್ಯವಸ್ಥೆ ಯಾವ ರೀತಿ ಇತ್ತೊ ಇವತ್ತಿಗೂ ಅದೇ ರೀತಿ ಇದೆ. ಯಾವುದೇ ಬದಲಾವಣೆ ಆಗಿಲ್ಲ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...