Homeಕರ್ನಾಟಕಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಈ ಎಲ್ಲಾ ಸಮಸ್ಯೆಗಳಿಗೂ ವ್ಯವಸ್ಥೆಯೇ ಕಾರಣ. ಒಂದಲ್ಲ ಒಂದು ದಿನ ಜನ ತಿರುಗಿ ಬೀಳ್ತಾರೆ. ಆ ದಿನಕ್ಕೆ ತುಂಬಾ ದೂರವಿಲ್ಲ. ಕೊರೊನಾ ಸಮಯದಲ್ಲಿ ಜನ ಹೆಚ್ಚು ಮಾತಾನಾಡುತ್ತಿದ್ದಾರೆ.

- Advertisement -
- Advertisement -

ನಾವು ಮನುಷ್ಯರಾಗಿ ಬದುಕುವುದು ಯಾವಾಗ…? ಮನುಷ್ಯ ಮನುಷ್ಯನನ್ನು ಯಾವ ಜಾತಿ, ಊರು ಎಂದು ಪ್ರಶ್ನಿಸದೇ ಮನುಷ್ಯ ಎಂದು ನೋಡಿ ಬದುಕುವುದು ಯಾವಾಗ..? ಎಲ್ಲ ಸರಿ ಇದೆ ಎಂದುಕೊಂಡೆ ಬದುಕಬೇಕೆ…? ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ…? ಮಾತನಾಡಬಾರದೇ…? ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿರುವುದು ಕನ್ನಡದ ಖ್ಯಾತ ನಟ ಸತೀಶ್ ನಿನಾಸಂ.

ಖಾಸಗಿ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರ ಸ್ನೇಹಿತ, ದಿವಂಗತ ನಟ ಸಂಚಾರಿ ವಿಜಯ್ ಬಗ್ಗೆ ಮಾತನಾಡುತ್ತಾ, ಸಮಾಜದಲ್ಲಿನ ಜಾತಿ ವ್ಯವಸ್ಥೆಯ ಬಗ್ಗೆ ಕಿಡಿಕಾರಿದ್ದಾರೆ. ಜಾತಿ ವ್ಯವಸ್ಥೆಯಿಂದ ಮನುಷ್ಯ ಅನುಭವಿಸುವ ನೋವು, ಅವಮಾನಗಳ ಕುರಿತು ಮಾತನಾಡುತ್ತಾ ‘ಇದೇ ಸಮಾಜ ಮಾಡಿದ ಅವಮಾನ, ನೋವಿನಿಂದ ನಟ ಸಂಚಾರಿ ವಿಜಯ್ ಯಾತನೆ ಅನುಭವಿಸಬೇಕಾಯಿತು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಸಮಾಜದಲ್ಲಿ ಶಿಕ್ಷಣ ಪಡೆದರೂ ಮನುಷ್ಯನಲ್ಲಿ ಯಾವ ಬದಲಾವಣೆಯಾಗಿದೆ? ಪ್ರಾಣಿಗಳಲ್ಲಿ ಆಗಿರುವ ಬೆಳವಣಿಗೆ ಮನುಷ್ಯನಲ್ಲಿಲ್ಲ. ಸಮಾಜ ಯಾವಾಗ ಬದಲಾಗುತ್ತದೆ…? ಎಲ್ಲ ಸರಿಯಿದೆ ಎಂದು ಮುಚ್ಚಿಟ್ಟುಕೊಳ್ಳುವುದು ಸರಿಯಲ್ಲ. ಈಗ ವಿಜಿಯನ್ನು ಕರ್ನಾಟಕದ ಹೆಮ್ಮೆ ಎನ್ನುವಾಗ, ಆತನಿಗೆ ನಾವು ಕೊಟ್ಟ ಅವಮಾನಗಳನ್ನು, ನೋವನ್ನು ನೆನಪಿಸಿಕೊಳ್ಳಬೇಕು. ಇವತ್ತು ಅವರಿಲ್ಲ ಎಂದು ಕಣ್ಣೀರಿಡುವಾಗ ಅದಕ್ಕೆ ನಾವು ಕೂಡ ಕಾರಣ ಎಂಬುದನ್ನು ತಿಳಿಯಬೇಕು. ಈ ಸಮಾಜ, ವ್ಯವಸ್ಥೆ ಕಾರಣ ಕೂಡ ಆತನಿಲ್ಲದಕ್ಕೆ ಕಾರಣ’ ಎಂದು ನಟ ಸತೀಶ್ ನಿನಾಸಂ ಹೇಳಿದ್ದಾರೆ.

ಇದನ್ನೂ ಓದಿ: 10 ರಲ್ಲಿ8 ಭಾರತೀಯ ಅಮೆರಿಕನ್ನರು ಮೇಲ್ಜಾತಿ ಅಥವಾ ಸಾಮಾನ್ಯ ಜಾತಿಯೊಂದಿಗೆ ಗುರುತಿಸಿಕೊಳ್ಳಲು ಬಯಸುತ್ತಾರೆ – ಸಮೀಕ್ಷೆ

’ನಾವು ಮನುಷ್ಯರಾಗಿ ಬದುಕುವುದು ಯಾವಾಗ…? ಮನುಷ್ಯ ಮನುಷ್ಯನನ್ನು ಯಾವ ಜಾತಿ, ಊರು ಎಂದು ಪ್ರಶ್ನಿಸದೇ ಮನುಷ್ಯ ಎಂದು ನೋಡಿ ಬದುಕುವುದು ಯಾವಾಗ..? ಎಲ್ಲ ಸರಿ ಇದೆ ಎಂದುಕೊಂಡೆ  ಬದುಕುವುದು ಎಷ್ಟು ದಿನ….? ನನ್ನಿಂದ ತಪ್ಪಾಗಿದೆ..ನಿಮ್ಮಿಂದ ತಪ್ಪಾಗಿದೆ. ಸರಿ ಪಡಿಸಿಕೊಳ್ಳೋಣ’ ಎಂದಿದ್ದಾರೆ.

’ಸಮಾಜದಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕಾ…? ಮಾತನಾಡಬಾರದ…? ನಾವು 21ನೇ ಶತಮಾನದಲ್ಲಿ, ಈ ಕಾಲದಲ್ಲಿಯೂ ಎಲ್ಲಾ ರೀತಿಯಲ್ಲಿ ಶೈಕ್ಷಣಿಕವಾಗಿ, ವೈಜ್ಞಾನಿಕವಾಗಿ ಮುಂದುವರೆದರೂ ಮನುಷ್ಯತ್ವದ ವಿಚಾರದಲ್ಲಿ ಪ್ರಾಣಿಗಳಿಗಿಂತ  ಹಿಂದಿದ್ದೇವೆ. ಮನುಷ್ಯನಲ್ಲಿ ಕೆಟ್ಟ, ಕೊಳಕು, ವಿಷ ತುಂಬಿದ ಮನಸ್ಸು ಇದೆ’ ಎಂದು ಜಾತಿ ವ್ಯವಸ್ಥೆಯ ಬಗ್ಗೆ ಕಿಡಿಕಾರಿದ್ದಾರೆ.

’ಜಾತಿ ವಿಷಯದಲ್ಲಿ ಸಂಚಾರಿ ವಿಜಯ್ ತುಂಬಾ ನೋವುಗಳನ್ನು ಅನುಭವಿಸಿದ್ದಾರೆ. ಇದರಲ್ಲಿ ಸುಳ್ಳು ಇಲ್ಲ. ಈ ಬಗ್ಗೆ ವೇದಿಕೆ, ಸಮಯ ಸಿಗಲಿ ಎಳೆ ಎಳೆಯಾಗಿ ಆತನಿಗಾದ ನೋವು, ಅವಮಾನಗಳನ್ನು ತಿಳಿಸುತ್ತೇನೆ. ಆತ ಮಾತನಾಡಲು ಹೆದರುತ್ತಿದ್ದ. ಏಕೆಂದರೆ ಸಮಾಜದಲ್ಲಿ ಅಂತಹ ಪರಿಸ್ಥತಿ ಇದೆ. ಆದರೆ, ನಾನು ಮಾತನಾಡುತ್ತೇನೆ. ಏನಾದರೂ ಆಗಲಿ ಎದುರಿಸುತ್ತೇನೆ’ ಎಂದಿದ್ದಾರೆ.

’ನಮ್ಮ ಸಮಸ್ಯೆಳ ಬಗ್ಗೆ, ನಮಗಾಗಿರುವ ನೋವುಗಳ ಬಗ್ಗೆ ಮಾತನಾಡಿದರೆ, ಒಂದು ವರ್ಗಕ್ಕೆ ನಮ್ಮನ್ನು ಸೀಮಿತಗೊಳಿಸುವುದು, ಇದೊಂದು ಬೇರೆ ವರ್ಗ ಅಂತ ಪಕ್ಕಕ್ಕೆ ಇಡುವುದು ಮಾಡ್ತಾರೆ. ಆತನ ಸಿನಿಮಾಗಳನ್ನು ನೋಡಬೇಡಿ, ಅವನು ಸರಿಯಿಲ್ಲ. ಅವನು ಹೀಗೆಯೇ ಎಂದು ಹೇಳುತ್ತಾರೆ. ನನ್ನ ವಿರುದ್ಧ ಮಾತಾಡುವವರನ್ನು ಮತ್ತೊಂದು ಕೆಟಗರಿ ಮಾಡುತ್ತಾರೆ. ಆದರೆ, ಇವರು ಯಾಕೆ ಮಾತನಾಡುತ್ತಿದ್ದಾರೆ ಎಂಬುದನ್ನು ವಿಚಾರ ಮಾಡುವುದಿಲ್ಲ’ ಎಂದು ಸಮಸ್ಯೆಗಳ ಬಗ್ಗೆ ಮಾತನಾಡುವವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಮನಸ್ಥಿತಿ ಕುರಿತು ಟೀಕಿಸಿದ್ದಾರೆ.

ಇದನ್ನೂ ಓದಿ: ಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ಅಮಾವೀಯ ಘಟನೆ

’ಮನುಷ್ಯ ತಾನೇ ಶ್ರೇಷ್ಠ ಎಂಬುದನ್ನು ಎಲ್ಲಿಯವರೆಗೆ ಬಿಡುವುದಿಲ್ಲವೂ ಅಲ್ಲಿಯವರೆಗೆ ಮನುಷ್ಯ ಉದ್ದಾರ ಆಗುವುದಿಲ್ಲ. ಮನುಷ್ಯನ ಕೊಳಕು ಮನಸ್ಥಿತಿ ಬದಲಾಗಲ್ಲ. ಭೂಮಿ ನಾಶವಾಗುತ್ತಿರುವುದು ಮನುಷ್ಯನಿಂದಲೇ, ಮನುಷ್ಯ ನಾಶವಾಗುತ್ತಿರುವುದು ಮನುಷ್ಯನಿಂದಲೇ. ಪ್ರಕೃತಿ, ಪ್ರಾಣಿಗಳಿಂದ ಅಲ್ಲ’ ಎಂದು ಒತ್ತಿ ಹೇಳಿದ್ದಾರೆ.

’ಈ ಎಲ್ಲಾ ಸಮಸ್ಯೆಗಳಿಗೂ ವ್ಯವಸ್ಥೆಯೇ ಕಾರಣ. ಒಂದಲ್ಲ ಒಂದು ದಿನ ಜನ ತಿರುಗಿ ಬೀಳ್ತಾರೆ. ಆ ದಿನಕ್ಕೆ ತುಂಬಾ ದೂರವಿಲ್ಲ. ಕೊರೊನಾ ಸಮಯದಲ್ಲಿ ಜನ ಹೆಚ್ಚು ಮಾತಾನಾಡುತ್ತಿದ್ದಾರೆ. ಈಗಾಗಲೇ ಜನ ತಿರುಗಿ ಬಿದ್ದಿದ್ದಾರೆ. ನಮ್ಮ ಸಮಸ್ಯೆಗಳ ಬಗ್ಗೆ ಮಾತನಾಡಿದರೇ ನನ್ನನ್ನು ನಾಳೆ ಸಾಯಿಸಬಹುದು. ನಿಮ್ಮನ್ನು ನಾಡಿದ್ದು, ಆದರೆ ಮಾತನಾಡುವುದನ್ನು ಮಾತನಾಡಬೇಕು’ ಎಂದು ಸತೀಶ್ ನಿನಾಸಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸತೀಶ್ ನಿನಾಸಂ ಅವರ ಹೇಳಿಕೆಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನಿನಾಸಂ ಅವರ ಅಭಿಪ್ರಾಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನನ್ನನ್ನು 4 ಗಂಟೆಗಳ ಕಾಲ ಪ್ರಶ್ನಿಸಲಾಯಿತು, ಹೋರಾಟ ಮುಂದುವರಿಯುತ್ತದೆ: ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಜಾತಿ ವ್ಯವಸ್ಥೆ ಒಂದು ಸಮಾಜಕ್ಕೆ ಅಂಟಿಕೊಂಡ ರೋಗ. ನನ್ನ ಜಾತಿಗೆ ಅವಮಾನ ನಿನ್ನ ಜಾತಿಗೆ ಅವಮಾನ ಮತ್ತೊಂದು ಜಾತಿಯ ವ್ಯಕ್ತಿ ಮಾತುಗಳು ಅಡಿದಾಗ ಕೆಲವು ಜನರು ವಿರೊದ ಮಾತುಗಳು ಅಡುತ್ತಾರೆ. ಆದರೆ ತನ್ನ ಜಾತಿಯ ಜನರು ಮತ್ತೊಂದು ಜಾತಿಯ ವ್ಯಕ್ತಿ ಬಗ್ಗೆ ಕೆಟ್ಟ ರೀತಿಯಲ್ಲಿ ನಡೆದುಕೊಳ್ಳುವ ಬಗ್ಗೆ ಮಾತುಗಳು ಅಡುತ್ತಿಲ್ಲಾ. ಯಾವುದೇ ಜಾತಿಯ ವ್ಯಕ್ತಿ ಜಾತಿವಾದಿ ಮಾಡಿದರು ಅವನು ಕೊಳಕು ಮನಸ್ಸಿನ ವ್ಯಕ್ತಿ . ಆಗುತ್ತಾನೆ ಭಾರತೀಯ ಜಾತಿ ವ್ಯವಸ್ಥೆ ಹೊಗದ ಹೊರತು ಭಾರತ ಎಷ್ಟೇ ಅಭಿವೃದ್ಧಿ ಆದರು ಅದು ವ್ಯರ್ಥ ಅನಿಸುತ್ತದೆ. ದಯವಿಟ್ಟು ಸಮ ಸಮಾಜ ಕಲ್ಯಾಣ ಸಮಾಜ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕೈ ಜೊಡಿಸೊಣ

  2. ಭಾರತದ ಅಭಿವೃದ್ಧಿ ಅಂದರೆ ಸಮ ಸಮಾಜದ ನಿರ್ಮಾಣ.
    ಬಸವಾದಿ ಶರಣರ ಬಯಸಿದ ಸಮಾಜ.
    ಬುದ್ಧ ಬಯಸಿದ ಸಮಾಜ.
    ಪೆರಿಯಾರ್ ಬಯಸಿದ ಸಮಾಜ.
    ನಾನು ಮಾತ್ರ ಶೈಕ್ಷಣಿಕ ಭಾರತ ಬಯಸುತ್ತೆನೆ.
    ಮಾನವೀಯ ಮೌಲ್ಯಗಳನ್ನು ಹೊಂದಿರುವ ಭಾರತ ಬಯಸುತ್ತೇನೆ.
    ಪ್ರತಿ ವ್ಯಕ್ತಿ ಜಾತಿಯ ಮುಕ್ತಿ ಪಡೆಯಲು ಪ್ರಯತ್ನ ಮಾಡಬೇಕು.
    ಇವನಾರವ ಇವ ನಮ್ಮವ ಅನ್ನುವ ಸಮಾಜ ನಿರ್ಮಾಣ ಮಾಡಬೇಕು.
    ಪ್ರತಿಯೊಂದು ವಿದ್ಯಾವಂತ ವ್ಯಕ್ತಿ ಸಮಾಜದ ಜಾತಿ ವ್ಯವಸ್ಥೆ ನಾಶಕ್ಕೆ ಪ್ರಯತ್ನ ಮಾಡಬೇಕು

  3. ನೀನಾಸಂ ಸತೀಶ್ ರವರ ನಿಲುವು ಸ್ವಾಗತಾರ್ಹ. ನಾವು ಕೊಚ್ಚೆಗುಂಡಿಯಲ್ಲಿ ಬದುಕುತ್ತಿದ್ದರೂ, “ಇದೇ ಸ್ವರ್ಗ” ಎಂದು ಸುಳ್ಳು ಹೇಳಿಕೊಂಡು ಎಷ್ಟು ದಿನ ತಾನೇ ಬದುಕಲು ಸಾದ್ಯ? ಸತ್ಯವನ್ನು ಒಂದಲ್ಲಾ ಒಂದು ದಿನ ಹೇಳಬೇಕಾಗಿದೆ.

  4. ಹನ್ನೆರಡನೇ ಶತಮಾನದಲ್ಲಿ ಜಾತಿ ವ್ಯವಸ್ಥೆ ಯಾವ ರೀತಿ ಇತ್ತೊ ಇವತ್ತಿಗೂ ಅದೇ ರೀತಿ ಇದೆ. ಯಾವುದೇ ಬದಲಾವಣೆ ಆಗಿಲ್ಲ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...