Homeಕರ್ನಾಟಕಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಈ ಎಲ್ಲಾ ಸಮಸ್ಯೆಗಳಿಗೂ ವ್ಯವಸ್ಥೆಯೇ ಕಾರಣ. ಒಂದಲ್ಲ ಒಂದು ದಿನ ಜನ ತಿರುಗಿ ಬೀಳ್ತಾರೆ. ಆ ದಿನಕ್ಕೆ ತುಂಬಾ ದೂರವಿಲ್ಲ. ಕೊರೊನಾ ಸಮಯದಲ್ಲಿ ಜನ ಹೆಚ್ಚು ಮಾತಾನಾಡುತ್ತಿದ್ದಾರೆ.

- Advertisement -
- Advertisement -

ನಾವು ಮನುಷ್ಯರಾಗಿ ಬದುಕುವುದು ಯಾವಾಗ…? ಮನುಷ್ಯ ಮನುಷ್ಯನನ್ನು ಯಾವ ಜಾತಿ, ಊರು ಎಂದು ಪ್ರಶ್ನಿಸದೇ ಮನುಷ್ಯ ಎಂದು ನೋಡಿ ಬದುಕುವುದು ಯಾವಾಗ..? ಎಲ್ಲ ಸರಿ ಇದೆ ಎಂದುಕೊಂಡೆ ಬದುಕಬೇಕೆ…? ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ…? ಮಾತನಾಡಬಾರದೇ…? ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿರುವುದು ಕನ್ನಡದ ಖ್ಯಾತ ನಟ ಸತೀಶ್ ನಿನಾಸಂ.

ಖಾಸಗಿ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರ ಸ್ನೇಹಿತ, ದಿವಂಗತ ನಟ ಸಂಚಾರಿ ವಿಜಯ್ ಬಗ್ಗೆ ಮಾತನಾಡುತ್ತಾ, ಸಮಾಜದಲ್ಲಿನ ಜಾತಿ ವ್ಯವಸ್ಥೆಯ ಬಗ್ಗೆ ಕಿಡಿಕಾರಿದ್ದಾರೆ. ಜಾತಿ ವ್ಯವಸ್ಥೆಯಿಂದ ಮನುಷ್ಯ ಅನುಭವಿಸುವ ನೋವು, ಅವಮಾನಗಳ ಕುರಿತು ಮಾತನಾಡುತ್ತಾ ‘ಇದೇ ಸಮಾಜ ಮಾಡಿದ ಅವಮಾನ, ನೋವಿನಿಂದ ನಟ ಸಂಚಾರಿ ವಿಜಯ್ ಯಾತನೆ ಅನುಭವಿಸಬೇಕಾಯಿತು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಸಮಾಜದಲ್ಲಿ ಶಿಕ್ಷಣ ಪಡೆದರೂ ಮನುಷ್ಯನಲ್ಲಿ ಯಾವ ಬದಲಾವಣೆಯಾಗಿದೆ? ಪ್ರಾಣಿಗಳಲ್ಲಿ ಆಗಿರುವ ಬೆಳವಣಿಗೆ ಮನುಷ್ಯನಲ್ಲಿಲ್ಲ. ಸಮಾಜ ಯಾವಾಗ ಬದಲಾಗುತ್ತದೆ…? ಎಲ್ಲ ಸರಿಯಿದೆ ಎಂದು ಮುಚ್ಚಿಟ್ಟುಕೊಳ್ಳುವುದು ಸರಿಯಲ್ಲ. ಈಗ ವಿಜಿಯನ್ನು ಕರ್ನಾಟಕದ ಹೆಮ್ಮೆ ಎನ್ನುವಾಗ, ಆತನಿಗೆ ನಾವು ಕೊಟ್ಟ ಅವಮಾನಗಳನ್ನು, ನೋವನ್ನು ನೆನಪಿಸಿಕೊಳ್ಳಬೇಕು. ಇವತ್ತು ಅವರಿಲ್ಲ ಎಂದು ಕಣ್ಣೀರಿಡುವಾಗ ಅದಕ್ಕೆ ನಾವು ಕೂಡ ಕಾರಣ ಎಂಬುದನ್ನು ತಿಳಿಯಬೇಕು. ಈ ಸಮಾಜ, ವ್ಯವಸ್ಥೆ ಕಾರಣ ಕೂಡ ಆತನಿಲ್ಲದಕ್ಕೆ ಕಾರಣ’ ಎಂದು ನಟ ಸತೀಶ್ ನಿನಾಸಂ ಹೇಳಿದ್ದಾರೆ.

ಇದನ್ನೂ ಓದಿ: 10 ರಲ್ಲಿ8 ಭಾರತೀಯ ಅಮೆರಿಕನ್ನರು ಮೇಲ್ಜಾತಿ ಅಥವಾ ಸಾಮಾನ್ಯ ಜಾತಿಯೊಂದಿಗೆ ಗುರುತಿಸಿಕೊಳ್ಳಲು ಬಯಸುತ್ತಾರೆ – ಸಮೀಕ್ಷೆ

’ನಾವು ಮನುಷ್ಯರಾಗಿ ಬದುಕುವುದು ಯಾವಾಗ…? ಮನುಷ್ಯ ಮನುಷ್ಯನನ್ನು ಯಾವ ಜಾತಿ, ಊರು ಎಂದು ಪ್ರಶ್ನಿಸದೇ ಮನುಷ್ಯ ಎಂದು ನೋಡಿ ಬದುಕುವುದು ಯಾವಾಗ..? ಎಲ್ಲ ಸರಿ ಇದೆ ಎಂದುಕೊಂಡೆ  ಬದುಕುವುದು ಎಷ್ಟು ದಿನ….? ನನ್ನಿಂದ ತಪ್ಪಾಗಿದೆ..ನಿಮ್ಮಿಂದ ತಪ್ಪಾಗಿದೆ. ಸರಿ ಪಡಿಸಿಕೊಳ್ಳೋಣ’ ಎಂದಿದ್ದಾರೆ.

’ಸಮಾಜದಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕಾ…? ಮಾತನಾಡಬಾರದ…? ನಾವು 21ನೇ ಶತಮಾನದಲ್ಲಿ, ಈ ಕಾಲದಲ್ಲಿಯೂ ಎಲ್ಲಾ ರೀತಿಯಲ್ಲಿ ಶೈಕ್ಷಣಿಕವಾಗಿ, ವೈಜ್ಞಾನಿಕವಾಗಿ ಮುಂದುವರೆದರೂ ಮನುಷ್ಯತ್ವದ ವಿಚಾರದಲ್ಲಿ ಪ್ರಾಣಿಗಳಿಗಿಂತ  ಹಿಂದಿದ್ದೇವೆ. ಮನುಷ್ಯನಲ್ಲಿ ಕೆಟ್ಟ, ಕೊಳಕು, ವಿಷ ತುಂಬಿದ ಮನಸ್ಸು ಇದೆ’ ಎಂದು ಜಾತಿ ವ್ಯವಸ್ಥೆಯ ಬಗ್ಗೆ ಕಿಡಿಕಾರಿದ್ದಾರೆ.

’ಜಾತಿ ವಿಷಯದಲ್ಲಿ ಸಂಚಾರಿ ವಿಜಯ್ ತುಂಬಾ ನೋವುಗಳನ್ನು ಅನುಭವಿಸಿದ್ದಾರೆ. ಇದರಲ್ಲಿ ಸುಳ್ಳು ಇಲ್ಲ. ಈ ಬಗ್ಗೆ ವೇದಿಕೆ, ಸಮಯ ಸಿಗಲಿ ಎಳೆ ಎಳೆಯಾಗಿ ಆತನಿಗಾದ ನೋವು, ಅವಮಾನಗಳನ್ನು ತಿಳಿಸುತ್ತೇನೆ. ಆತ ಮಾತನಾಡಲು ಹೆದರುತ್ತಿದ್ದ. ಏಕೆಂದರೆ ಸಮಾಜದಲ್ಲಿ ಅಂತಹ ಪರಿಸ್ಥತಿ ಇದೆ. ಆದರೆ, ನಾನು ಮಾತನಾಡುತ್ತೇನೆ. ಏನಾದರೂ ಆಗಲಿ ಎದುರಿಸುತ್ತೇನೆ’ ಎಂದಿದ್ದಾರೆ.

’ನಮ್ಮ ಸಮಸ್ಯೆಳ ಬಗ್ಗೆ, ನಮಗಾಗಿರುವ ನೋವುಗಳ ಬಗ್ಗೆ ಮಾತನಾಡಿದರೆ, ಒಂದು ವರ್ಗಕ್ಕೆ ನಮ್ಮನ್ನು ಸೀಮಿತಗೊಳಿಸುವುದು, ಇದೊಂದು ಬೇರೆ ವರ್ಗ ಅಂತ ಪಕ್ಕಕ್ಕೆ ಇಡುವುದು ಮಾಡ್ತಾರೆ. ಆತನ ಸಿನಿಮಾಗಳನ್ನು ನೋಡಬೇಡಿ, ಅವನು ಸರಿಯಿಲ್ಲ. ಅವನು ಹೀಗೆಯೇ ಎಂದು ಹೇಳುತ್ತಾರೆ. ನನ್ನ ವಿರುದ್ಧ ಮಾತಾಡುವವರನ್ನು ಮತ್ತೊಂದು ಕೆಟಗರಿ ಮಾಡುತ್ತಾರೆ. ಆದರೆ, ಇವರು ಯಾಕೆ ಮಾತನಾಡುತ್ತಿದ್ದಾರೆ ಎಂಬುದನ್ನು ವಿಚಾರ ಮಾಡುವುದಿಲ್ಲ’ ಎಂದು ಸಮಸ್ಯೆಗಳ ಬಗ್ಗೆ ಮಾತನಾಡುವವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಮನಸ್ಥಿತಿ ಕುರಿತು ಟೀಕಿಸಿದ್ದಾರೆ.

ಇದನ್ನೂ ಓದಿ: ಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ಅಮಾವೀಯ ಘಟನೆ

’ಮನುಷ್ಯ ತಾನೇ ಶ್ರೇಷ್ಠ ಎಂಬುದನ್ನು ಎಲ್ಲಿಯವರೆಗೆ ಬಿಡುವುದಿಲ್ಲವೂ ಅಲ್ಲಿಯವರೆಗೆ ಮನುಷ್ಯ ಉದ್ದಾರ ಆಗುವುದಿಲ್ಲ. ಮನುಷ್ಯನ ಕೊಳಕು ಮನಸ್ಥಿತಿ ಬದಲಾಗಲ್ಲ. ಭೂಮಿ ನಾಶವಾಗುತ್ತಿರುವುದು ಮನುಷ್ಯನಿಂದಲೇ, ಮನುಷ್ಯ ನಾಶವಾಗುತ್ತಿರುವುದು ಮನುಷ್ಯನಿಂದಲೇ. ಪ್ರಕೃತಿ, ಪ್ರಾಣಿಗಳಿಂದ ಅಲ್ಲ’ ಎಂದು ಒತ್ತಿ ಹೇಳಿದ್ದಾರೆ.

’ಈ ಎಲ್ಲಾ ಸಮಸ್ಯೆಗಳಿಗೂ ವ್ಯವಸ್ಥೆಯೇ ಕಾರಣ. ಒಂದಲ್ಲ ಒಂದು ದಿನ ಜನ ತಿರುಗಿ ಬೀಳ್ತಾರೆ. ಆ ದಿನಕ್ಕೆ ತುಂಬಾ ದೂರವಿಲ್ಲ. ಕೊರೊನಾ ಸಮಯದಲ್ಲಿ ಜನ ಹೆಚ್ಚು ಮಾತಾನಾಡುತ್ತಿದ್ದಾರೆ. ಈಗಾಗಲೇ ಜನ ತಿರುಗಿ ಬಿದ್ದಿದ್ದಾರೆ. ನಮ್ಮ ಸಮಸ್ಯೆಗಳ ಬಗ್ಗೆ ಮಾತನಾಡಿದರೇ ನನ್ನನ್ನು ನಾಳೆ ಸಾಯಿಸಬಹುದು. ನಿಮ್ಮನ್ನು ನಾಡಿದ್ದು, ಆದರೆ ಮಾತನಾಡುವುದನ್ನು ಮಾತನಾಡಬೇಕು’ ಎಂದು ಸತೀಶ್ ನಿನಾಸಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸತೀಶ್ ನಿನಾಸಂ ಅವರ ಹೇಳಿಕೆಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನಿನಾಸಂ ಅವರ ಅಭಿಪ್ರಾಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನನ್ನನ್ನು 4 ಗಂಟೆಗಳ ಕಾಲ ಪ್ರಶ್ನಿಸಲಾಯಿತು, ಹೋರಾಟ ಮುಂದುವರಿಯುತ್ತದೆ: ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಜಾತಿ ವ್ಯವಸ್ಥೆ ಒಂದು ಸಮಾಜಕ್ಕೆ ಅಂಟಿಕೊಂಡ ರೋಗ. ನನ್ನ ಜಾತಿಗೆ ಅವಮಾನ ನಿನ್ನ ಜಾತಿಗೆ ಅವಮಾನ ಮತ್ತೊಂದು ಜಾತಿಯ ವ್ಯಕ್ತಿ ಮಾತುಗಳು ಅಡಿದಾಗ ಕೆಲವು ಜನರು ವಿರೊದ ಮಾತುಗಳು ಅಡುತ್ತಾರೆ. ಆದರೆ ತನ್ನ ಜಾತಿಯ ಜನರು ಮತ್ತೊಂದು ಜಾತಿಯ ವ್ಯಕ್ತಿ ಬಗ್ಗೆ ಕೆಟ್ಟ ರೀತಿಯಲ್ಲಿ ನಡೆದುಕೊಳ್ಳುವ ಬಗ್ಗೆ ಮಾತುಗಳು ಅಡುತ್ತಿಲ್ಲಾ. ಯಾವುದೇ ಜಾತಿಯ ವ್ಯಕ್ತಿ ಜಾತಿವಾದಿ ಮಾಡಿದರು ಅವನು ಕೊಳಕು ಮನಸ್ಸಿನ ವ್ಯಕ್ತಿ . ಆಗುತ್ತಾನೆ ಭಾರತೀಯ ಜಾತಿ ವ್ಯವಸ್ಥೆ ಹೊಗದ ಹೊರತು ಭಾರತ ಎಷ್ಟೇ ಅಭಿವೃದ್ಧಿ ಆದರು ಅದು ವ್ಯರ್ಥ ಅನಿಸುತ್ತದೆ. ದಯವಿಟ್ಟು ಸಮ ಸಮಾಜ ಕಲ್ಯಾಣ ಸಮಾಜ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕೈ ಜೊಡಿಸೊಣ

  2. ಭಾರತದ ಅಭಿವೃದ್ಧಿ ಅಂದರೆ ಸಮ ಸಮಾಜದ ನಿರ್ಮಾಣ.
    ಬಸವಾದಿ ಶರಣರ ಬಯಸಿದ ಸಮಾಜ.
    ಬುದ್ಧ ಬಯಸಿದ ಸಮಾಜ.
    ಪೆರಿಯಾರ್ ಬಯಸಿದ ಸಮಾಜ.
    ನಾನು ಮಾತ್ರ ಶೈಕ್ಷಣಿಕ ಭಾರತ ಬಯಸುತ್ತೆನೆ.
    ಮಾನವೀಯ ಮೌಲ್ಯಗಳನ್ನು ಹೊಂದಿರುವ ಭಾರತ ಬಯಸುತ್ತೇನೆ.
    ಪ್ರತಿ ವ್ಯಕ್ತಿ ಜಾತಿಯ ಮುಕ್ತಿ ಪಡೆಯಲು ಪ್ರಯತ್ನ ಮಾಡಬೇಕು.
    ಇವನಾರವ ಇವ ನಮ್ಮವ ಅನ್ನುವ ಸಮಾಜ ನಿರ್ಮಾಣ ಮಾಡಬೇಕು.
    ಪ್ರತಿಯೊಂದು ವಿದ್ಯಾವಂತ ವ್ಯಕ್ತಿ ಸಮಾಜದ ಜಾತಿ ವ್ಯವಸ್ಥೆ ನಾಶಕ್ಕೆ ಪ್ರಯತ್ನ ಮಾಡಬೇಕು

  3. ನೀನಾಸಂ ಸತೀಶ್ ರವರ ನಿಲುವು ಸ್ವಾಗತಾರ್ಹ. ನಾವು ಕೊಚ್ಚೆಗುಂಡಿಯಲ್ಲಿ ಬದುಕುತ್ತಿದ್ದರೂ, “ಇದೇ ಸ್ವರ್ಗ” ಎಂದು ಸುಳ್ಳು ಹೇಳಿಕೊಂಡು ಎಷ್ಟು ದಿನ ತಾನೇ ಬದುಕಲು ಸಾದ್ಯ? ಸತ್ಯವನ್ನು ಒಂದಲ್ಲಾ ಒಂದು ದಿನ ಹೇಳಬೇಕಾಗಿದೆ.

  4. ಹನ್ನೆರಡನೇ ಶತಮಾನದಲ್ಲಿ ಜಾತಿ ವ್ಯವಸ್ಥೆ ಯಾವ ರೀತಿ ಇತ್ತೊ ಇವತ್ತಿಗೂ ಅದೇ ರೀತಿ ಇದೆ. ಯಾವುದೇ ಬದಲಾವಣೆ ಆಗಿಲ್ಲ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...