Homeಕರ್ನಾಟಕಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಈ ಎಲ್ಲಾ ಸಮಸ್ಯೆಗಳಿಗೂ ವ್ಯವಸ್ಥೆಯೇ ಕಾರಣ. ಒಂದಲ್ಲ ಒಂದು ದಿನ ಜನ ತಿರುಗಿ ಬೀಳ್ತಾರೆ. ಆ ದಿನಕ್ಕೆ ತುಂಬಾ ದೂರವಿಲ್ಲ. ಕೊರೊನಾ ಸಮಯದಲ್ಲಿ ಜನ ಹೆಚ್ಚು ಮಾತಾನಾಡುತ್ತಿದ್ದಾರೆ.

- Advertisement -
- Advertisement -

ನಾವು ಮನುಷ್ಯರಾಗಿ ಬದುಕುವುದು ಯಾವಾಗ…? ಮನುಷ್ಯ ಮನುಷ್ಯನನ್ನು ಯಾವ ಜಾತಿ, ಊರು ಎಂದು ಪ್ರಶ್ನಿಸದೇ ಮನುಷ್ಯ ಎಂದು ನೋಡಿ ಬದುಕುವುದು ಯಾವಾಗ..? ಎಲ್ಲ ಸರಿ ಇದೆ ಎಂದುಕೊಂಡೆ ಬದುಕಬೇಕೆ…? ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ…? ಮಾತನಾಡಬಾರದೇ…? ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿರುವುದು ಕನ್ನಡದ ಖ್ಯಾತ ನಟ ಸತೀಶ್ ನಿನಾಸಂ.

ಖಾಸಗಿ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರ ಸ್ನೇಹಿತ, ದಿವಂಗತ ನಟ ಸಂಚಾರಿ ವಿಜಯ್ ಬಗ್ಗೆ ಮಾತನಾಡುತ್ತಾ, ಸಮಾಜದಲ್ಲಿನ ಜಾತಿ ವ್ಯವಸ್ಥೆಯ ಬಗ್ಗೆ ಕಿಡಿಕಾರಿದ್ದಾರೆ. ಜಾತಿ ವ್ಯವಸ್ಥೆಯಿಂದ ಮನುಷ್ಯ ಅನುಭವಿಸುವ ನೋವು, ಅವಮಾನಗಳ ಕುರಿತು ಮಾತನಾಡುತ್ತಾ ‘ಇದೇ ಸಮಾಜ ಮಾಡಿದ ಅವಮಾನ, ನೋವಿನಿಂದ ನಟ ಸಂಚಾರಿ ವಿಜಯ್ ಯಾತನೆ ಅನುಭವಿಸಬೇಕಾಯಿತು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಸಮಾಜದಲ್ಲಿ ಶಿಕ್ಷಣ ಪಡೆದರೂ ಮನುಷ್ಯನಲ್ಲಿ ಯಾವ ಬದಲಾವಣೆಯಾಗಿದೆ? ಪ್ರಾಣಿಗಳಲ್ಲಿ ಆಗಿರುವ ಬೆಳವಣಿಗೆ ಮನುಷ್ಯನಲ್ಲಿಲ್ಲ. ಸಮಾಜ ಯಾವಾಗ ಬದಲಾಗುತ್ತದೆ…? ಎಲ್ಲ ಸರಿಯಿದೆ ಎಂದು ಮುಚ್ಚಿಟ್ಟುಕೊಳ್ಳುವುದು ಸರಿಯಲ್ಲ. ಈಗ ವಿಜಿಯನ್ನು ಕರ್ನಾಟಕದ ಹೆಮ್ಮೆ ಎನ್ನುವಾಗ, ಆತನಿಗೆ ನಾವು ಕೊಟ್ಟ ಅವಮಾನಗಳನ್ನು, ನೋವನ್ನು ನೆನಪಿಸಿಕೊಳ್ಳಬೇಕು. ಇವತ್ತು ಅವರಿಲ್ಲ ಎಂದು ಕಣ್ಣೀರಿಡುವಾಗ ಅದಕ್ಕೆ ನಾವು ಕೂಡ ಕಾರಣ ಎಂಬುದನ್ನು ತಿಳಿಯಬೇಕು. ಈ ಸಮಾಜ, ವ್ಯವಸ್ಥೆ ಕಾರಣ ಕೂಡ ಆತನಿಲ್ಲದಕ್ಕೆ ಕಾರಣ’ ಎಂದು ನಟ ಸತೀಶ್ ನಿನಾಸಂ ಹೇಳಿದ್ದಾರೆ.

ಇದನ್ನೂ ಓದಿ: 10 ರಲ್ಲಿ8 ಭಾರತೀಯ ಅಮೆರಿಕನ್ನರು ಮೇಲ್ಜಾತಿ ಅಥವಾ ಸಾಮಾನ್ಯ ಜಾತಿಯೊಂದಿಗೆ ಗುರುತಿಸಿಕೊಳ್ಳಲು ಬಯಸುತ್ತಾರೆ – ಸಮೀಕ್ಷೆ

’ನಾವು ಮನುಷ್ಯರಾಗಿ ಬದುಕುವುದು ಯಾವಾಗ…? ಮನುಷ್ಯ ಮನುಷ್ಯನನ್ನು ಯಾವ ಜಾತಿ, ಊರು ಎಂದು ಪ್ರಶ್ನಿಸದೇ ಮನುಷ್ಯ ಎಂದು ನೋಡಿ ಬದುಕುವುದು ಯಾವಾಗ..? ಎಲ್ಲ ಸರಿ ಇದೆ ಎಂದುಕೊಂಡೆ  ಬದುಕುವುದು ಎಷ್ಟು ದಿನ….? ನನ್ನಿಂದ ತಪ್ಪಾಗಿದೆ..ನಿಮ್ಮಿಂದ ತಪ್ಪಾಗಿದೆ. ಸರಿ ಪಡಿಸಿಕೊಳ್ಳೋಣ’ ಎಂದಿದ್ದಾರೆ.

’ಸಮಾಜದಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕಾ…? ಮಾತನಾಡಬಾರದ…? ನಾವು 21ನೇ ಶತಮಾನದಲ್ಲಿ, ಈ ಕಾಲದಲ್ಲಿಯೂ ಎಲ್ಲಾ ರೀತಿಯಲ್ಲಿ ಶೈಕ್ಷಣಿಕವಾಗಿ, ವೈಜ್ಞಾನಿಕವಾಗಿ ಮುಂದುವರೆದರೂ ಮನುಷ್ಯತ್ವದ ವಿಚಾರದಲ್ಲಿ ಪ್ರಾಣಿಗಳಿಗಿಂತ  ಹಿಂದಿದ್ದೇವೆ. ಮನುಷ್ಯನಲ್ಲಿ ಕೆಟ್ಟ, ಕೊಳಕು, ವಿಷ ತುಂಬಿದ ಮನಸ್ಸು ಇದೆ’ ಎಂದು ಜಾತಿ ವ್ಯವಸ್ಥೆಯ ಬಗ್ಗೆ ಕಿಡಿಕಾರಿದ್ದಾರೆ.

’ಜಾತಿ ವಿಷಯದಲ್ಲಿ ಸಂಚಾರಿ ವಿಜಯ್ ತುಂಬಾ ನೋವುಗಳನ್ನು ಅನುಭವಿಸಿದ್ದಾರೆ. ಇದರಲ್ಲಿ ಸುಳ್ಳು ಇಲ್ಲ. ಈ ಬಗ್ಗೆ ವೇದಿಕೆ, ಸಮಯ ಸಿಗಲಿ ಎಳೆ ಎಳೆಯಾಗಿ ಆತನಿಗಾದ ನೋವು, ಅವಮಾನಗಳನ್ನು ತಿಳಿಸುತ್ತೇನೆ. ಆತ ಮಾತನಾಡಲು ಹೆದರುತ್ತಿದ್ದ. ಏಕೆಂದರೆ ಸಮಾಜದಲ್ಲಿ ಅಂತಹ ಪರಿಸ್ಥತಿ ಇದೆ. ಆದರೆ, ನಾನು ಮಾತನಾಡುತ್ತೇನೆ. ಏನಾದರೂ ಆಗಲಿ ಎದುರಿಸುತ್ತೇನೆ’ ಎಂದಿದ್ದಾರೆ.

’ನಮ್ಮ ಸಮಸ್ಯೆಳ ಬಗ್ಗೆ, ನಮಗಾಗಿರುವ ನೋವುಗಳ ಬಗ್ಗೆ ಮಾತನಾಡಿದರೆ, ಒಂದು ವರ್ಗಕ್ಕೆ ನಮ್ಮನ್ನು ಸೀಮಿತಗೊಳಿಸುವುದು, ಇದೊಂದು ಬೇರೆ ವರ್ಗ ಅಂತ ಪಕ್ಕಕ್ಕೆ ಇಡುವುದು ಮಾಡ್ತಾರೆ. ಆತನ ಸಿನಿಮಾಗಳನ್ನು ನೋಡಬೇಡಿ, ಅವನು ಸರಿಯಿಲ್ಲ. ಅವನು ಹೀಗೆಯೇ ಎಂದು ಹೇಳುತ್ತಾರೆ. ನನ್ನ ವಿರುದ್ಧ ಮಾತಾಡುವವರನ್ನು ಮತ್ತೊಂದು ಕೆಟಗರಿ ಮಾಡುತ್ತಾರೆ. ಆದರೆ, ಇವರು ಯಾಕೆ ಮಾತನಾಡುತ್ತಿದ್ದಾರೆ ಎಂಬುದನ್ನು ವಿಚಾರ ಮಾಡುವುದಿಲ್ಲ’ ಎಂದು ಸಮಸ್ಯೆಗಳ ಬಗ್ಗೆ ಮಾತನಾಡುವವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಮನಸ್ಥಿತಿ ಕುರಿತು ಟೀಕಿಸಿದ್ದಾರೆ.

ಇದನ್ನೂ ಓದಿ: ಮೇಲ್ಜಾತಿ ಹುಡುಗಿಗೆ ಮೊಬೈಲ್‌ ನೀಡಿದ್ದಕ್ಕೆ ದಲಿತ ಯುವಕರ ತಲೆ ಬೋಳಿಸಿ, ಎಂಜಲು ತಿನ್ನಿಸಿದ ಅಮಾವೀಯ ಘಟನೆ

’ಮನುಷ್ಯ ತಾನೇ ಶ್ರೇಷ್ಠ ಎಂಬುದನ್ನು ಎಲ್ಲಿಯವರೆಗೆ ಬಿಡುವುದಿಲ್ಲವೂ ಅಲ್ಲಿಯವರೆಗೆ ಮನುಷ್ಯ ಉದ್ದಾರ ಆಗುವುದಿಲ್ಲ. ಮನುಷ್ಯನ ಕೊಳಕು ಮನಸ್ಥಿತಿ ಬದಲಾಗಲ್ಲ. ಭೂಮಿ ನಾಶವಾಗುತ್ತಿರುವುದು ಮನುಷ್ಯನಿಂದಲೇ, ಮನುಷ್ಯ ನಾಶವಾಗುತ್ತಿರುವುದು ಮನುಷ್ಯನಿಂದಲೇ. ಪ್ರಕೃತಿ, ಪ್ರಾಣಿಗಳಿಂದ ಅಲ್ಲ’ ಎಂದು ಒತ್ತಿ ಹೇಳಿದ್ದಾರೆ.

’ಈ ಎಲ್ಲಾ ಸಮಸ್ಯೆಗಳಿಗೂ ವ್ಯವಸ್ಥೆಯೇ ಕಾರಣ. ಒಂದಲ್ಲ ಒಂದು ದಿನ ಜನ ತಿರುಗಿ ಬೀಳ್ತಾರೆ. ಆ ದಿನಕ್ಕೆ ತುಂಬಾ ದೂರವಿಲ್ಲ. ಕೊರೊನಾ ಸಮಯದಲ್ಲಿ ಜನ ಹೆಚ್ಚು ಮಾತಾನಾಡುತ್ತಿದ್ದಾರೆ. ಈಗಾಗಲೇ ಜನ ತಿರುಗಿ ಬಿದ್ದಿದ್ದಾರೆ. ನಮ್ಮ ಸಮಸ್ಯೆಗಳ ಬಗ್ಗೆ ಮಾತನಾಡಿದರೇ ನನ್ನನ್ನು ನಾಳೆ ಸಾಯಿಸಬಹುದು. ನಿಮ್ಮನ್ನು ನಾಡಿದ್ದು, ಆದರೆ ಮಾತನಾಡುವುದನ್ನು ಮಾತನಾಡಬೇಕು’ ಎಂದು ಸತೀಶ್ ನಿನಾಸಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸತೀಶ್ ನಿನಾಸಂ ಅವರ ಹೇಳಿಕೆಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನಿನಾಸಂ ಅವರ ಅಭಿಪ್ರಾಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನನ್ನನ್ನು 4 ಗಂಟೆಗಳ ಕಾಲ ಪ್ರಶ್ನಿಸಲಾಯಿತು, ಹೋರಾಟ ಮುಂದುವರಿಯುತ್ತದೆ: ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಜಾತಿ ವ್ಯವಸ್ಥೆ ಒಂದು ಸಮಾಜಕ್ಕೆ ಅಂಟಿಕೊಂಡ ರೋಗ. ನನ್ನ ಜಾತಿಗೆ ಅವಮಾನ ನಿನ್ನ ಜಾತಿಗೆ ಅವಮಾನ ಮತ್ತೊಂದು ಜಾತಿಯ ವ್ಯಕ್ತಿ ಮಾತುಗಳು ಅಡಿದಾಗ ಕೆಲವು ಜನರು ವಿರೊದ ಮಾತುಗಳು ಅಡುತ್ತಾರೆ. ಆದರೆ ತನ್ನ ಜಾತಿಯ ಜನರು ಮತ್ತೊಂದು ಜಾತಿಯ ವ್ಯಕ್ತಿ ಬಗ್ಗೆ ಕೆಟ್ಟ ರೀತಿಯಲ್ಲಿ ನಡೆದುಕೊಳ್ಳುವ ಬಗ್ಗೆ ಮಾತುಗಳು ಅಡುತ್ತಿಲ್ಲಾ. ಯಾವುದೇ ಜಾತಿಯ ವ್ಯಕ್ತಿ ಜಾತಿವಾದಿ ಮಾಡಿದರು ಅವನು ಕೊಳಕು ಮನಸ್ಸಿನ ವ್ಯಕ್ತಿ . ಆಗುತ್ತಾನೆ ಭಾರತೀಯ ಜಾತಿ ವ್ಯವಸ್ಥೆ ಹೊಗದ ಹೊರತು ಭಾರತ ಎಷ್ಟೇ ಅಭಿವೃದ್ಧಿ ಆದರು ಅದು ವ್ಯರ್ಥ ಅನಿಸುತ್ತದೆ. ದಯವಿಟ್ಟು ಸಮ ಸಮಾಜ ಕಲ್ಯಾಣ ಸಮಾಜ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕೈ ಜೊಡಿಸೊಣ

  2. ಭಾರತದ ಅಭಿವೃದ್ಧಿ ಅಂದರೆ ಸಮ ಸಮಾಜದ ನಿರ್ಮಾಣ.
    ಬಸವಾದಿ ಶರಣರ ಬಯಸಿದ ಸಮಾಜ.
    ಬುದ್ಧ ಬಯಸಿದ ಸಮಾಜ.
    ಪೆರಿಯಾರ್ ಬಯಸಿದ ಸಮಾಜ.
    ನಾನು ಮಾತ್ರ ಶೈಕ್ಷಣಿಕ ಭಾರತ ಬಯಸುತ್ತೆನೆ.
    ಮಾನವೀಯ ಮೌಲ್ಯಗಳನ್ನು ಹೊಂದಿರುವ ಭಾರತ ಬಯಸುತ್ತೇನೆ.
    ಪ್ರತಿ ವ್ಯಕ್ತಿ ಜಾತಿಯ ಮುಕ್ತಿ ಪಡೆಯಲು ಪ್ರಯತ್ನ ಮಾಡಬೇಕು.
    ಇವನಾರವ ಇವ ನಮ್ಮವ ಅನ್ನುವ ಸಮಾಜ ನಿರ್ಮಾಣ ಮಾಡಬೇಕು.
    ಪ್ರತಿಯೊಂದು ವಿದ್ಯಾವಂತ ವ್ಯಕ್ತಿ ಸಮಾಜದ ಜಾತಿ ವ್ಯವಸ್ಥೆ ನಾಶಕ್ಕೆ ಪ್ರಯತ್ನ ಮಾಡಬೇಕು

  3. ನೀನಾಸಂ ಸತೀಶ್ ರವರ ನಿಲುವು ಸ್ವಾಗತಾರ್ಹ. ನಾವು ಕೊಚ್ಚೆಗುಂಡಿಯಲ್ಲಿ ಬದುಕುತ್ತಿದ್ದರೂ, “ಇದೇ ಸ್ವರ್ಗ” ಎಂದು ಸುಳ್ಳು ಹೇಳಿಕೊಂಡು ಎಷ್ಟು ದಿನ ತಾನೇ ಬದುಕಲು ಸಾದ್ಯ? ಸತ್ಯವನ್ನು ಒಂದಲ್ಲಾ ಒಂದು ದಿನ ಹೇಳಬೇಕಾಗಿದೆ.

  4. ಹನ್ನೆರಡನೇ ಶತಮಾನದಲ್ಲಿ ಜಾತಿ ವ್ಯವಸ್ಥೆ ಯಾವ ರೀತಿ ಇತ್ತೊ ಇವತ್ತಿಗೂ ಅದೇ ರೀತಿ ಇದೆ. ಯಾವುದೇ ಬದಲಾವಣೆ ಆಗಿಲ್ಲ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...