Homeಅಂಕಣಗಳುಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್...

ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ...

- Advertisement -
- Advertisement -

ಪೂರ್ಣಾವಧಿ ಸೋಶಿಯಲ್ ಮೀಡಿಯಾ ಸ್ಟಾರ್, ಅಲ್ಪಾವಧಿ ಲೋಕಸಭಾ ಸದಸ್ಯರಾಗಿರುವ ತೇಜಸ್ವಿ ಸೂರ್ಯ ನಾರಾಯಣರಾವು ಅವರು ಮೊನ್ನೆ ಬೆಂಗಳೂರು ಎಂಬೋ ಮಾಯಾನಗರಿಯೊಳಗ ಒಂದು ಕಾಲ್ ಸೆಂಟರ್‌ದೊಳಗಿನ 17 ಮಂದಿ ಮುಸ್ಲಿಂ ಕೆಲಸಗಾರರ ಹೆಸರು ಓದಿ, ಮರುದಿವಸ ಒಂಬತ್ತು ಮಂದಿ ಗೈರು ಮುಸ್ಲಿಂರ ದಸ್ತಗಿರಿ ಮಾಡಿಸಿದ್ದು ನಮಗ ಗೊತ್ತು.

ಇಲ್ಲೇ ಪ್ರಶ್ನೆ ಏನು ಅಂದ್ರ ಒಬ್ಬ ಎಂಪಿ ಕೆಲಸ ಏನು? ಪತ್ತೇದಾರಿ ವರದಿಗಾರರಂತೆ ಹಗರಣ ಹೊರಗೆ ತೆಗೆಯೋದೋ ಅಥವಾ ಸರ್ಕಾರದ ಕೆಲ್ಸಗಳು ಸರಿಯಾಗಿ ನಡಿಯೋ ಹಂಗ ಮಾಡೋದೋ?

ತೇಜಸ್ವಿ ಅವ್ರು ಮಾಡಿದ್ದೇ ಸರಿ. ಅವ್ರು ಈ ಹುಳುಕು ಹೊರಗೆ ತೆಗೆಯದೇ ಇದ್ದರೆ ಯಾರು ತೆಗೆಯಬೇಕಿತ್ತು? ಅಂತ ಅವರನ್ನು ಹೊಗಳುವ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿಕ್ಕೆಬಿಟ್ಟರು ಅಂತ ಖುಷಿಯಿಂದ ಕುಣಿಯುತ್ತಿರುವ ಜನರಿಗೆ ಏನೂ ಕಮ್ಮಿ ಇಲ್ಲಾ.

ಈ ಜನರ ಭಾವನೆ ಸರಿ. ಅದನ್ನು ನಾನು ಮೈಸೂರು ತೇರು ಮೈದಾನದಿಂದ ಬೇಕಾದರೂ ಹೇಳಬಲ್ಲೆ ಅಂತ ಇನ್ನೊಬ್ಬ ಯುವ ಸಂಸದ ಪ್ರತಾಪ್ ಸಿಂಹ ಅವ್ರು ಹೇಳಿಬಿಟ್ಟಾರ. ಅವ್ರು ಇಂಥ ಕೆಲ್ಸಾ ಮಾಡಿಯೇ ಮುಂದೆ ಬಂದಾರ. ಎರಡು ವರ್ಷದ ಹಿಂದೆ ಕೊಡಗು ಜಿಲ್ಲೆಯೊಳಗ ಪ್ರವಾಹ ಬಂದಾಗ ಅವ್ರು ಒಂದು ಕೆಂಪು ಅಂಗಿ ಬಿಳೆ ಬೂಟು ಹಾಕಿಕೊಂಡು ಕರೆಂಟ್ ಕಂಬಾ ಭೂಮಿಯೊಳಗ ನೆಡುವ ಪ್ರಯತ್ನ ಮಾಡಿದ್ದ ಫೋಟೋ ಸೋಶಿಯಲ್ ಮೀಡಿಯಾದಾಗ ಓಡಾಡಲಿಕ್ಕೆ ಹತ್ತಿತ್ತು. ಆವಾಗ ಅವರ ಸಹೋದ್ಯೋಗಿಯಾಗಿದ್ದ ಹಿರಿಯ ಪತ್ರಕರ್ತರು ಒಬ್ಬರು “ನಾವು ಈ ಯುವ ಸಂಸದರನ್ನು ದೆಹಲಿಗೆ ಕಳಿಸಿದ್ದು ಯಾಕೆ ಅಂದ್ರೆ ಅವರು ಪ್ರಧಾನಿ ಹಾಗೂ ಇತರ ಮಂತ್ರಿಗಳ ಜೊತೆ ಸೇರಿ ಕರ್ನಾಟಕಕ್ಕೆ ಹೆಚ್ಚಿನ ನೆರವು ಕೊಡಿಸಲಿ ಅಂತ. ಹಸಿ ಮಣ್ಣಿನ ನೆಲದಲ್ಲಿ ಕರೆಂಟ್ ಕಂಬ ನೆಡಲಿ ಅಂತ ಅಲ್ಲಾ” ಅಂತ ಕಾಮೆಂಟ್ ಮಾಡಿದ್ರು. ಇದು ದೊಡ್ಡ ಸುದ್ದಿಯಾಗಿತ್ತು.

ಇದೆ ಮಾದರಿಯಲ್ಲಿ ಹಿರಿಯ ಭಾರತೀಯ ಪೊಲೀಸು ಸೇವೆ ಅಧಿಕಾರಿ ರೂಪ ದಿವಾಕರ್ ಅವ್ರು ತಾವು ಜೈಲಿನಲ್ಲಿ ಡಿಐಜಿ ಇದ್ದಾಗ ಅಲ್ಲಿನ ಆಡಳಿತದಲ್ಲಿನ ತಪ್ಪುಗಳನ್ನು ಸರಿ ಮಾಡುವುದನ್ನು ಬಿಟ್ಟು ಥೇಟು ಎನ್‌ಜಿಓ ಶೈಲಿಯಲ್ಲಿ ಒಂದು ದೊಡ್ಡ ರಿಪೋರ್ಟ್ ಬರೆದರು.

ಅವರು ನಾನು ನಿಗರಾಣಿ ಅಧಿಕಾರಿಯಾಗಿರುವ ಈ ಜೈಲಿನಲ್ಲಿ, ನನ್ನ ಕೆಳಗೆ ಹಾಗು ಮೇಲೆ ಇರುವ ಅಧಿಕಾರಿಗಳು ಇಂತಹ ತಪ್ಪುಗಳನ್ನು ಮಾಡಿದ್ದಾರೆ, ಮಾಡುತ್ತಾ ಇದ್ದಾರೆ, ಮುಂದೆಯೂ ಮಾಡುವ ಸಾಧ್ಯತೆ ಇದೆ ಅಂತ ಹೇಳಿ ಒಂದು ವರದಿ ಕೊಟ್ಟರು. ಅದನ್ನು ಮಾಧ್ಯಮದವರು ದೇವವಾಣಿಯಂತೆ ಕಂಡು ಪೂಜೆ ಮಾಡಿದ್ರು. ಅದನ್ನು ಬರೆದ ಅಧಿಕಾರಿಯನ್ನು ಪ್ರಮಥರಂತೆ ನೋಡಿದರು. ನಿಮ್ಮನ್ನು ಭಾ.ಪೋ.ಸೇ.ಗೆ ಸೇರಿಸಿ, ತೆರಿಗೆದಾರರ ಹಣದಿಂದ ನಿಮಗೆ ತಿಂಗಳು ತಿಂಗಳು ಸಂಬಳ ಕೊಟ್ಟಿದ್ದು ಯಾಕೆ? ಅಲ್ಲಿನ ಸಮಸ್ಯೆಗಳನ್ನು ಪರಿಹಾರ ಮಾಡಲಿಕ್ಕೋ ಅಥವಾ ಇದು ನನ್ನ ಕಣ್ಣಿಗೆ ಬಿದ್ದಿದೆ ಆದರೆ ನಾನು ಅದರ ಬಗ್ಗೆ ಏನೂ ಮಾಡಲಾರೆ ಅಂತ ಅಸಹಾಯಕತೆ ವ್ಯಕ್ತಪಡಿಸಲಿಕ್ಕೋ ಅಂತ ಯಾವ ಟಿವಿ ಚಾನೆಲ್‌ನ ಹಿಡಿಗೂಟಗಳೂ ಕೇಳಲಿಲ್ಲ.

ಇವತ್ತಿಗೂ ನಮ್ಮ ಜನರಿಗೆ ಯಾರ ಹತ್ತಿರ ಗೋಳು ಹೇಳಿಕೊಳ್ಳಬೇಕು ಅನ್ನುವುದು ಗೊತ್ತಿಲ್ಲ. ಸುಂಕ ವಸೂಲಾತಿಗೆ ಬಂದ ಕಂದಾಯ ಅಧಿಕಾರಿಯ ಮುಂದೆ ಯಪ್ಪಾ ನಮ್ಮ ಹತ್ತಿರ ಉಣ್ಣಾಕ್ ರೊಕ್ಕಾ ಇಲ್ಲ ಅಂದ್ರೆ ಬಿಡುತ್ತಾನೆಯೇ? ವಿಧಾನಸಭೆ – ಸಂಸತ್ತು ಸಭೆಗಳಲ್ಲಿ ಹೋಗಿ ನಮ್ಮ ಪರವಾಗಿ, ನಮ್ಮ ಸುಂಕ ಕಮ್ಮಿ ಮಾಡಬೇಕು ಅಂತ ಮಾತು ಆಡಬೇಕಾದವರು ಆಡೋದಿಲ್ಲ. ಅವ್ರ ಕುತ್ತಿಗೆ ಪಟ್ಟಿ ಹಿಡದು ನಾವು ಕೇಳೋದಿಲ್ಲಾ. ನಮ್ಮ ಮನಿಗೆ ನೀರು ಬರಲಿಲ್ಲ ಅಂದರ ಜಿಲ್ಲಾಧಿಕಾರಿಯ ಕಚೇರಿಗೆ ಹೋಗ್ತೆವಿ, ಹೊರತು, ನಮ್ಮ ನಗರಸಭೆ ಸದಸ್ಯರ ಮನಿಯ ಮುಂದ ಹೋಗಿ ಕೂಡೋದಿಲ್ಲಾ.

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ, ಸರಕಾರೀ ಆಸ್ಪತ್ರೆ ಒಳಗ ಹಾಸಿಗೆ ಸಿಗಲಿಲ್ಲಾ, ರೋಗಿಗಳಿಗೆ ಆಮ್ಲಜನಕ ಸಿಗಲಿಲ್ಲ, ರೆಮೆಡಿಸಿವಿರ್ ಇಂಜಕ್ಷನ್ ಕೊಡಲಿಲ್ಲ ಅಂತ ಹೇಳಿ ನಾವು ದೂರು ಕೊಡಲಿಕ್ಕೆ ಬರೋದಿಲ್ಲಾ.

ಕಾಶ್ಮೀರದಾಗಿನ ಸೇಬುಹಣ್ಣಿನ ಬಣ್ಣದ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕ ಜೀವನದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ. ಏನರ ಹೋಲಿಕೆ ಅದ ಏನು ಹೇಳ್ರಿ?


ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....