Homeಅಂಕಣಗಳುಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್...

ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ...

- Advertisement -
- Advertisement -

ಪೂರ್ಣಾವಧಿ ಸೋಶಿಯಲ್ ಮೀಡಿಯಾ ಸ್ಟಾರ್, ಅಲ್ಪಾವಧಿ ಲೋಕಸಭಾ ಸದಸ್ಯರಾಗಿರುವ ತೇಜಸ್ವಿ ಸೂರ್ಯ ನಾರಾಯಣರಾವು ಅವರು ಮೊನ್ನೆ ಬೆಂಗಳೂರು ಎಂಬೋ ಮಾಯಾನಗರಿಯೊಳಗ ಒಂದು ಕಾಲ್ ಸೆಂಟರ್‌ದೊಳಗಿನ 17 ಮಂದಿ ಮುಸ್ಲಿಂ ಕೆಲಸಗಾರರ ಹೆಸರು ಓದಿ, ಮರುದಿವಸ ಒಂಬತ್ತು ಮಂದಿ ಗೈರು ಮುಸ್ಲಿಂರ ದಸ್ತಗಿರಿ ಮಾಡಿಸಿದ್ದು ನಮಗ ಗೊತ್ತು.

ಇಲ್ಲೇ ಪ್ರಶ್ನೆ ಏನು ಅಂದ್ರ ಒಬ್ಬ ಎಂಪಿ ಕೆಲಸ ಏನು? ಪತ್ತೇದಾರಿ ವರದಿಗಾರರಂತೆ ಹಗರಣ ಹೊರಗೆ ತೆಗೆಯೋದೋ ಅಥವಾ ಸರ್ಕಾರದ ಕೆಲ್ಸಗಳು ಸರಿಯಾಗಿ ನಡಿಯೋ ಹಂಗ ಮಾಡೋದೋ?

ತೇಜಸ್ವಿ ಅವ್ರು ಮಾಡಿದ್ದೇ ಸರಿ. ಅವ್ರು ಈ ಹುಳುಕು ಹೊರಗೆ ತೆಗೆಯದೇ ಇದ್ದರೆ ಯಾರು ತೆಗೆಯಬೇಕಿತ್ತು? ಅಂತ ಅವರನ್ನು ಹೊಗಳುವ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿಕ್ಕೆಬಿಟ್ಟರು ಅಂತ ಖುಷಿಯಿಂದ ಕುಣಿಯುತ್ತಿರುವ ಜನರಿಗೆ ಏನೂ ಕಮ್ಮಿ ಇಲ್ಲಾ.

ಈ ಜನರ ಭಾವನೆ ಸರಿ. ಅದನ್ನು ನಾನು ಮೈಸೂರು ತೇರು ಮೈದಾನದಿಂದ ಬೇಕಾದರೂ ಹೇಳಬಲ್ಲೆ ಅಂತ ಇನ್ನೊಬ್ಬ ಯುವ ಸಂಸದ ಪ್ರತಾಪ್ ಸಿಂಹ ಅವ್ರು ಹೇಳಿಬಿಟ್ಟಾರ. ಅವ್ರು ಇಂಥ ಕೆಲ್ಸಾ ಮಾಡಿಯೇ ಮುಂದೆ ಬಂದಾರ. ಎರಡು ವರ್ಷದ ಹಿಂದೆ ಕೊಡಗು ಜಿಲ್ಲೆಯೊಳಗ ಪ್ರವಾಹ ಬಂದಾಗ ಅವ್ರು ಒಂದು ಕೆಂಪು ಅಂಗಿ ಬಿಳೆ ಬೂಟು ಹಾಕಿಕೊಂಡು ಕರೆಂಟ್ ಕಂಬಾ ಭೂಮಿಯೊಳಗ ನೆಡುವ ಪ್ರಯತ್ನ ಮಾಡಿದ್ದ ಫೋಟೋ ಸೋಶಿಯಲ್ ಮೀಡಿಯಾದಾಗ ಓಡಾಡಲಿಕ್ಕೆ ಹತ್ತಿತ್ತು. ಆವಾಗ ಅವರ ಸಹೋದ್ಯೋಗಿಯಾಗಿದ್ದ ಹಿರಿಯ ಪತ್ರಕರ್ತರು ಒಬ್ಬರು “ನಾವು ಈ ಯುವ ಸಂಸದರನ್ನು ದೆಹಲಿಗೆ ಕಳಿಸಿದ್ದು ಯಾಕೆ ಅಂದ್ರೆ ಅವರು ಪ್ರಧಾನಿ ಹಾಗೂ ಇತರ ಮಂತ್ರಿಗಳ ಜೊತೆ ಸೇರಿ ಕರ್ನಾಟಕಕ್ಕೆ ಹೆಚ್ಚಿನ ನೆರವು ಕೊಡಿಸಲಿ ಅಂತ. ಹಸಿ ಮಣ್ಣಿನ ನೆಲದಲ್ಲಿ ಕರೆಂಟ್ ಕಂಬ ನೆಡಲಿ ಅಂತ ಅಲ್ಲಾ” ಅಂತ ಕಾಮೆಂಟ್ ಮಾಡಿದ್ರು. ಇದು ದೊಡ್ಡ ಸುದ್ದಿಯಾಗಿತ್ತು.

ಇದೆ ಮಾದರಿಯಲ್ಲಿ ಹಿರಿಯ ಭಾರತೀಯ ಪೊಲೀಸು ಸೇವೆ ಅಧಿಕಾರಿ ರೂಪ ದಿವಾಕರ್ ಅವ್ರು ತಾವು ಜೈಲಿನಲ್ಲಿ ಡಿಐಜಿ ಇದ್ದಾಗ ಅಲ್ಲಿನ ಆಡಳಿತದಲ್ಲಿನ ತಪ್ಪುಗಳನ್ನು ಸರಿ ಮಾಡುವುದನ್ನು ಬಿಟ್ಟು ಥೇಟು ಎನ್‌ಜಿಓ ಶೈಲಿಯಲ್ಲಿ ಒಂದು ದೊಡ್ಡ ರಿಪೋರ್ಟ್ ಬರೆದರು.

ಅವರು ನಾನು ನಿಗರಾಣಿ ಅಧಿಕಾರಿಯಾಗಿರುವ ಈ ಜೈಲಿನಲ್ಲಿ, ನನ್ನ ಕೆಳಗೆ ಹಾಗು ಮೇಲೆ ಇರುವ ಅಧಿಕಾರಿಗಳು ಇಂತಹ ತಪ್ಪುಗಳನ್ನು ಮಾಡಿದ್ದಾರೆ, ಮಾಡುತ್ತಾ ಇದ್ದಾರೆ, ಮುಂದೆಯೂ ಮಾಡುವ ಸಾಧ್ಯತೆ ಇದೆ ಅಂತ ಹೇಳಿ ಒಂದು ವರದಿ ಕೊಟ್ಟರು. ಅದನ್ನು ಮಾಧ್ಯಮದವರು ದೇವವಾಣಿಯಂತೆ ಕಂಡು ಪೂಜೆ ಮಾಡಿದ್ರು. ಅದನ್ನು ಬರೆದ ಅಧಿಕಾರಿಯನ್ನು ಪ್ರಮಥರಂತೆ ನೋಡಿದರು. ನಿಮ್ಮನ್ನು ಭಾ.ಪೋ.ಸೇ.ಗೆ ಸೇರಿಸಿ, ತೆರಿಗೆದಾರರ ಹಣದಿಂದ ನಿಮಗೆ ತಿಂಗಳು ತಿಂಗಳು ಸಂಬಳ ಕೊಟ್ಟಿದ್ದು ಯಾಕೆ? ಅಲ್ಲಿನ ಸಮಸ್ಯೆಗಳನ್ನು ಪರಿಹಾರ ಮಾಡಲಿಕ್ಕೋ ಅಥವಾ ಇದು ನನ್ನ ಕಣ್ಣಿಗೆ ಬಿದ್ದಿದೆ ಆದರೆ ನಾನು ಅದರ ಬಗ್ಗೆ ಏನೂ ಮಾಡಲಾರೆ ಅಂತ ಅಸಹಾಯಕತೆ ವ್ಯಕ್ತಪಡಿಸಲಿಕ್ಕೋ ಅಂತ ಯಾವ ಟಿವಿ ಚಾನೆಲ್‌ನ ಹಿಡಿಗೂಟಗಳೂ ಕೇಳಲಿಲ್ಲ.

ಇವತ್ತಿಗೂ ನಮ್ಮ ಜನರಿಗೆ ಯಾರ ಹತ್ತಿರ ಗೋಳು ಹೇಳಿಕೊಳ್ಳಬೇಕು ಅನ್ನುವುದು ಗೊತ್ತಿಲ್ಲ. ಸುಂಕ ವಸೂಲಾತಿಗೆ ಬಂದ ಕಂದಾಯ ಅಧಿಕಾರಿಯ ಮುಂದೆ ಯಪ್ಪಾ ನಮ್ಮ ಹತ್ತಿರ ಉಣ್ಣಾಕ್ ರೊಕ್ಕಾ ಇಲ್ಲ ಅಂದ್ರೆ ಬಿಡುತ್ತಾನೆಯೇ? ವಿಧಾನಸಭೆ – ಸಂಸತ್ತು ಸಭೆಗಳಲ್ಲಿ ಹೋಗಿ ನಮ್ಮ ಪರವಾಗಿ, ನಮ್ಮ ಸುಂಕ ಕಮ್ಮಿ ಮಾಡಬೇಕು ಅಂತ ಮಾತು ಆಡಬೇಕಾದವರು ಆಡೋದಿಲ್ಲ. ಅವ್ರ ಕುತ್ತಿಗೆ ಪಟ್ಟಿ ಹಿಡದು ನಾವು ಕೇಳೋದಿಲ್ಲಾ. ನಮ್ಮ ಮನಿಗೆ ನೀರು ಬರಲಿಲ್ಲ ಅಂದರ ಜಿಲ್ಲಾಧಿಕಾರಿಯ ಕಚೇರಿಗೆ ಹೋಗ್ತೆವಿ, ಹೊರತು, ನಮ್ಮ ನಗರಸಭೆ ಸದಸ್ಯರ ಮನಿಯ ಮುಂದ ಹೋಗಿ ಕೂಡೋದಿಲ್ಲಾ.

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ, ಸರಕಾರೀ ಆಸ್ಪತ್ರೆ ಒಳಗ ಹಾಸಿಗೆ ಸಿಗಲಿಲ್ಲಾ, ರೋಗಿಗಳಿಗೆ ಆಮ್ಲಜನಕ ಸಿಗಲಿಲ್ಲ, ರೆಮೆಡಿಸಿವಿರ್ ಇಂಜಕ್ಷನ್ ಕೊಡಲಿಲ್ಲ ಅಂತ ಹೇಳಿ ನಾವು ದೂರು ಕೊಡಲಿಕ್ಕೆ ಬರೋದಿಲ್ಲಾ.

ಕಾಶ್ಮೀರದಾಗಿನ ಸೇಬುಹಣ್ಣಿನ ಬಣ್ಣದ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕ ಜೀವನದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ. ಏನರ ಹೋಲಿಕೆ ಅದ ಏನು ಹೇಳ್ರಿ?


ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...